Homeಮುಖಪುಟಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಲಕ್ಷದ್ವೀಪದ ಮಿನಿಕಾಯ್ ದ್ವೀಪದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲು ಖಾಸಗಿ ಕಂಪನಿಗೆ 75 ವರ್ಷಗಳ ಅವಧಿಗೆ 15 ಹೆಕ್ಟೇರ್ ಭೂಮಿಯನ್ನು ಸರ್ಕಾರ ಗುತ್ತಿಗೆಗೆ ನೀಡಲಿದೆ.

- Advertisement -
- Advertisement -

ಜನರ ತೀವ್ರ ಆಕ್ರೋಶಗಳು ಮತ್ತು ಪ್ರತಿಭಟನೆಗಳ ನಡುವೆಯು ಲಕ್ಷದ್ವೀಪ ಆಡಳಿತ ತನ್ನ ವಿಧ್ವಂಸಕ ನೀತಿಯನ್ನು ಮುಂದುವರಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಇತ್ತೀಚೆಗೆ ಹೊರಡಿಸಲಾಗಿರುವ ಆದೇಶಗಳಲ್ಲಿ, ಸಮುದ್ರ ತೀರದಿಂದ 20 ಮೀಟರ್ ಒಳಗೆ ಇರುವ ನೂರು ಮನೆಗಳನ್ನು ಧ್ವಂಸ ಮಾಡಲು ಹೇಳಲಾಗಿದೆ. ಈ ಹೊಸ ಆದೇಶದಲ್ಲಿ ತೀರದಿಂದ 20 ಮೀಟರ್‌‌ ಒಳಗೆ ಇರುವ ಶೌಚಾಲಯಗಳು ಮತ್ತು ನಿರ್ಜನ ದ್ವೀಪಗಳಲ್ಲಿ ನಿರ್ಮಿಸಲಾದ ತಾತ್ಕಾಲಿಕ ಮೀನುಗಾರಿಕಾ ಶೆಡ್‌ಗಳನ್ನು ಸಹ ಧ್ವಂಸ ಮಾಡಲು ಹೇಳಿದೆ.

ಲಕ್ಷದ್ವೀಪದ ಆಡಳಿತ ಕೇಂದ್ರವಾಗಿರುವ ಕವರತ್ತಿಯ 102 ಮನೆಗಳಿಗೆ ನೋಟಿಸ್ ಪಡೆದಿವೆ. ಅಷ್ಟೇ ಅಲ್ಲದೆ ಇನ್ನೂ 52 ಮನೆಗಳಿಗೆ ಶೀಘ್ರದಲ್ಲೇ ನೋಟಿಸ್‌‌ ನೀಡಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೆರಿಯಮ್, ಸುಹೆಲಿ ಪಾರ್ ಮತ್ತು ಕಲ್ಪೇನಿ ದ್ವೀಪಗಳ ಅನೇಕರು ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳಿಂದ ಇದೀ ರೀತಿಯ ನೋಟಿಸ್ ಪಡೆದಿದ್ದಾರೆ ಎಂದು ‘ಮಾಧ್ಯಮಂ’ ವರದಿ ಮಾಡಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಮನೆಗಳಿಗೆ ನೀಡಲಾದ ನೋಟಿಸ್‌ಗೆ ಉತ್ತರಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ಒಂದು ವೇಳೆ ನೋಟಿಸ್‌ ನೀಡಿದ ಕಟ್ಟಡಗಳನ್ನು ಧ್ವಂಸ ಮಾಡಲು ವಿಫಲವಾದರೆ ಅದನ್ನು ಅಧಿಕಾರಿಗಳೇ ಧ್ವಂಸ ಮಾಡಲಿದ್ದು, ಅದಕ್ಕೆ ತಗುಲುವ ವೆಚ್ಚವನ್ನು ಕಟ್ಟಡದ ಮಾಲಿಕರು ನೀಡಬೇಕಾಗುತ್ತದೆ.

ಸಮುದ್ರ ತೀರದಿಂದ 50 ಮೀಟರ್ ದೂರವಿರುವ ಕಟ್ಟಡಗಳಿಗೂ ನೋಟಿಸ್‌ ಬಂದಿದೆ ಎಂದು ದ್ವೀಪವಾಸಿಗಳು ಹೇಳಿದ್ದಾರೆ. ನೋಟಿಸ್ ಪಡೆದ ಹಲವು ಕಟ್ಟಡಗಳು ತೀರದಿಂದ 50 ಮೀಟರ್ ದೂರದಲ್ಲೆ ನಿರ್ಮಿಸಲ್ಪಟ್ಟಿತ್ತಾದರೂ, ಸಮುದ್ರ ಕೊರೆತದಿಂದ ಅದರ ಅಂತರ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

“ಇಂಟಿಗ್ರೇಟೆಡ್ ಐಲ್ಯಾಂಡ್ ಮ್ಯಾನೇಜ್ಮೆಂಟ್ ಪ್ಲ್ಯಾನ್ ಅಡಿಯಲ್ಲಿ ಕಾನೂನುಬಾಹಿರವಾಗಿ ಕಟ್ಟಲ್ಪಟ್ಟ ಕಟ್ಟವೆಂದು ಕಂಡುಬಂದವರಿಗೆ ಮಾತ್ರ ನೋಟಿಸ್ ನೀಡಲಾಗುತ್ತದೆ. ಅಲ್ಲದೆ, ಶಿಥಿಲವಾದ ಮನೆಗಳು ಮತ್ತು ಶೌಚಾಲಯಗಳನ್ನು ಮಾತ್ರ ಉರುಳಿಸುತ್ತಿದ್ದು, ಯಾರೂ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಐದು ಸ್ಥಳಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಲು ಬೇಕಾಗಿ ಕಟ್ಟಡಗಳನ್ನು ತೆಗೆದುಹಾಕಲಾಗುತ್ತದೆ” ಎಂದು ಅಧಿಕಾರಿಗಳು ಹೇಳುತ್ತಾರೆ.

ಇದನ್ನೂ ಓದಿ: ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಈ ಮಧ್ಯೆ, ದ್ವೀಪವಾಸಿಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಕಳಪೆ ತ್ಯಾಜ್ಯ ನಿರ್ವಹಣೆಗೆ ದಂಡ ವಿಧಿಸಲಿರುವ ಹೊಸ ಆದೇಶಕ್ಕೆ ಆಕ್ರೋಶಗಳು ಹೆಚ್ಚಿವೆ. ತ್ಯಾಜ್ಯ ನಿರ್ವಹಣೆಗೆ ಯಾವುದೆ ಮೂಲಸೌಕರ್ಯಗಳೇ ಇಲ್ಲದೆ ಇರುವಾಗ ದಂಡ ವಿಧಿಸುವಂತಹ ಆದೇಶಗಳು ಹೇಗೆ ತಾರ್ಕಿಕವಾಗುತ್ತದೆ ಎಂದು ದ್ವೀಪವಾಸಿಗಳು ವಾದಿಸುತ್ತಿದ್ದಾರೆ.

ಈ ಮೊದಲು ಚೆರಿಯಮ್ ದ್ವೀಪದಲ್ಲಿ, ಕಡಲತೀರದ ಉದ್ದಕ್ಕೂ ಇರುವ ಮೀನುಗಾರರ ನಿರ್ಮಾಣಗಳನ್ನು ಏಳು ದಿನಗಳಲ್ಲಿ ತೆರವುಗೊಳಿಸಲು ಆಡಳಿತವು ಆದೇಶಿಸಿತ್ತು. ಮೀನುಗಾರರು ಅದನ್ನು ಸ್ವಇಚ್ಛೆಯಿಂದ ಮಾಡದಿದ್ದರೆ, ಕಂದಾಯ ಇಲಾಖೆಯು ಇದನ್ನು ಮಾಡುತ್ತದೆ ಎಂದು ಆದೇಶವು ಉಲ್ಲೇಖಿಸಿತ್ತು.

ಲಕ್ಷದ್ವೀಪ ಆಡಳಿತವು ಈ ಮೊದಲು ಕೂಡಾ ಮೀನುಗಾರರ ನಿರ್ಮಾಣಗಳನ್ನು ಇದೇ ಮಾದರಿಯಲ್ಲಿ ಕಿತ್ತುಹಾಕಿತ್ತು. ಇದು ದ್ವೀಪವಾಸಿಗಳು ಸೇರಿದಂತೆ ಭಾರತದಾದ್ಯಂತ ಭಾರಿ ಆಕ್ರೋಶವನ್ನು ಹುಟ್ಟಹಾಕಿತ್ತು. ಪ್ರಫುಲ್ ಪಟೇಲ್ ನೇತೃತ್ವದ ಹೊಸ ಲಕ್ಷದ್ವೀಪ ಆಡಳಿತವು ಪರಿಚಯಿಸಿದ ಅನೇಕ ಕಠಿಣ ಯೋಜನೆಗಳಲ್ಲಿ ಇದು ಒಂದಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಇದಕ್ಕೂ ಮುನ್ನ, ಶನಿವಾರದಂದು, ಪರಿಸರ ಕಾಳಜಿಗಳ ಬಗ್ಗೆ ತಜ್ಞರ ಎಚ್ಚರಿಕೆಗಳ ಹೊರತಾಗಿಯೂ, ಒಕ್ಕೂಟ ಸರ್ಕಾರವು ಲಕ್ಷದ್ವೀಪದಲ್ಲಿ ಪ್ರಮುಖ ಪ್ರವಾಸೋದ್ಯಮ ಯೋಜನೆಗೆ ಅನುಮೋದನೆ ನೀಡಿತ್ತು. ಲಕ್ಷದ್ವೀಪದ ಮಿನಿಕಾಯ್ ದ್ವೀಪದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲು ಖಾಸಗಿ ಕಂಪನಿಗೆ 75 ವರ್ಷಗಳ ಅವಧಿಗೆ 15 ಹೆಕ್ಟೇರ್ ಭೂಮಿಯನ್ನು ಸರ್ಕಾರ ಗುತ್ತಿಗೆಗೆ ನೀಡಲಿದೆ.

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಶಾಲೆಯ ಮಧ್ಯಾಹ್ನದ ಊಟದಲ್ಲಿ ಮಾಂಸವನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಪ್ರಫುಲ್ ಪಟೇಲ್‌ ನೀಡಿದ್ದ ಎರಡು ವಿವಾದಾತ್ಮಕ ಆದೇಶಗಳನ್ನು ಕೇರಳ ಹೈಕೋರ್ಟ್ ತಡೆಹಿಡಿದಿತ್ತು.

ಇದನ್ನೂ ಓದಿ: ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...