Homeಮುಖಪುಟಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ರಾಜ್ಯಪಾಲ ಜಗದೀಪ್ ಧಂಕರ್ ಅವರ ಮೇಲೆ ವಾಗ್ದಾಳಿ ನಡೆಸಿದ್ದು, ಅವರನ್ನು “ಜೈನ ಹವಾಲಾ ಪ್ರಕರಣದ ಆರೋಪ ಪಟ್ಟಿಯಲ್ಲಿರುವ ಭ್ರಷ್ಟ ವ್ಯಕ್ತಿ” ಎಂದು ಕರೆದ್ದಾರೆ. ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್‌‌ ಧಂಕರ್‌ ಅವರನ್ನು ಅವರ ಸ್ಥಾನದಿಂದ ಕಿತ್ತುಹಾಕಲು ಮೂರು ಪತ್ರಗಳನ್ನು ಬರೆದಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳ ರಾಜ್ಯಪಾಲರನ್ನು ಅವರ ಸ್ಥಾನದಿಂದ ಕಿತ್ತು ಹಾಕಲು ನಾನು ಮೂರು ಪತ್ರಗಳನ್ನು ಬರೆದಿದ್ದೇನೆ. ಅವರು ಭ್ರಷ್ಟ ವ್ಯಕ್ತಿಯಾಗಿದ್ದು, ಅವರ ಹೆಸರು 1996 ರಲ್ಲಿ ಹವಾಲಾ ಜೈನ್ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿತ್ತು” ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ನಮ್ಮ ಸರ್ಕಾರವು ಭಾರಿ ಜನಾದೇಶವನ್ನು ಪಡೆದ ನಂತರವೂ ಅವರ ಆದೇಶ ಯಾಕೆ ಬೇಕು?” ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

ಜೈನ ಡೈರೀಸ್‌ ಪ್ರಕರಣ ಎಂದೂ ಕರೆಯಲ್ಪಡುವ ಹವಾಲಾ ಹಗರಣವು 1990 ರ ದಶಕದ ಹವಾಲಾ ಹಗರಣವಾಗಿದ್ದು, ರಾಜಕಾರಣಿಗಳು ನಾಲ್ಕು ಹವಾಲಾ ದಲ್ಲಾಳಿಗಳ ಮೂಲಕ, ಅಂದರೆ ಜೈನ ಸಹೋದರರ ಮೂಲಕ ಹವಾಲ ಹಣ ಕಳುಹಿಸಿದ ಆರೋಪಗಳನ್ನು ಒಳಗೊಂಡಿತ್ತು. ಇದು ದೇಶದ ಕೆಲವು ಪ್ರಮುಖ ರಾಜಕಾರಣಿಗಳನ್ನು ಒಳಗೊಂಡ 18 ಮಿಲಿಯನ್ ಡಾಲರ್‌‌ನ ಹಗರಣವಾಗಿದೆ.

ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮತ್ತು ರಾಜ್ಯಪಾಲ ಜಗದೀಪ್ ಧಂಕರ್ ನಡುವೆ ಸಂಘರ್ಷ ನಡೆಯುತ್ತಿದ್ದು, ರಾಜ್ಯಪಾಲರ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಟಿಎಂಸಿ ನಿರ್ಣಯ ಮಂಡಿಸಲು ಯೋಜಿಸುತ್ತಿದೆ ಎಂದು ಕಳೆದ ವಾರ ಮೂಲಗಳು ತಿಳಿಸಿತ್ತು. ಈ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿ ಬ್ಯಾನರ್ಜಿ ಅವರು ವಿಧಾನಸಭೆ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರೊಂದಿಗೆ ಚರ್ಚಿಸಿದ್ದಾರೆ. ಜುಲೈ 2 ರಿಂದ ರಾಜ್ಯದಲ್ಲಿ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಸ್ಪೀಕರ್ ಬಿಮಾನ್ ಬ್ಯಾನರ್ಜಿ ಅವರು ಕಳೆದ ವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದೀಯ ವಿಷಯಗಳಲ್ಲಿ ರಾಜ್ಯಪಾಲ ಧಂಕರ್ ಅವರ ಅತಿಯಾದ ಹಸ್ತಕ್ಷೇಪ ಮತ್ತು ಅವರ ವಿಧಾನಸಭೆಯ ಕಾರ್ಯವೈಖರಿಯ ಬಗ್ಗೆ ದೂರು ನೀಡಿದ್ದರು.

ಇದನ್ನೂ ಓದಿ: ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...