Homeಅಂತರಾಷ್ಟ್ರೀಯಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

ಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

- Advertisement -
- Advertisement -

ಜಗತ್ತಿನ ಆಕ್ಸಿಜನ್ ತೊಟ್ಟಿಲು ಎಂದು ಕರೆಯಲ್ಪಡುವ ದಕ್ಷಿಣ ಅಮೆರಿಕಾದ ಅಮೆಜಾನ್ ಕಾಡುಗಳು ಒತ್ತುವರಿಯಾಗುತ್ತಿವೆ, ನಾಶವಾಗುತ್ತಿವೆ ಎಂಬ ಕೂಗು ಕಳೆದ ಹಲವಾರು ವರ್ಷಗಳಿಂದ ಕೇಳಿಬರುತ್ತಿದೆ. ಅಮೆಜಾನ್ ಉಳಿಸಿ ಅಭಿಯಾನ ಕೂಡ ನಡೆಯುತ್ತಿದೆ. ವಿವಿಧ ಪರಿಸರ ಸಂಘಟನೆಗಳು ಅಮೆಜಾನ್ ಉಳಿಸುವ ಹೋರಾಟದಲ್ಲಿ ತೊಡಗಿಸಿಕೊಂಡಿವೆ. ಬ್ರೆಜಿಲ್ ಸರ್ಕಾರ ಮಾತ್ರ ಅಮೆಜಾನ್ ಉಳಿಸಲು ಇದುವರೆಗೆ ಹೆಚ್ಚಿನ ಪ್ರಯತ್ನ ಮಾಡಿರಲಿಲ್ಲ. ಬದಲಾಗಿ 2018 ರ ತಮ್ಮ ಚುನಾವಣಾ ಪ್ರಚಾರದಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸಾನೇರೋ ಅಮೆಜಾನ್ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದರು.

ಅಮೆರಿಕಾ ಮೂಲದ ಜಾಗತಿಕ ಕಂಪನಿಗಳು ಅಮೆಜಾನ್ ಅರಣ್ಯ ವಲಯದಲ್ಲಿ ಫಾರ್ಮಿಂಗ್, ಕೃಷಿ ಸೇರಿದಂತೆ ವಿವಿಧ ರೀತಿಯ ಉದ್ಯಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವು. ಬ್ರೆಜಿಲ್ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಾಗುವಂತಹ ಕಾನೂನುಗಳನ್ನು ಜಾರಿಗೆ ತಂದಿತ್ತು. ಜೊತೆಗೆ ಸ್ಥಳೀಯ ನಿವಾಸಿಗಳು ಕೂಡ ಕಾಡಿಗೆ ಬೆಂಕಿ ಹಚ್ಚಿ ತಮ್ಮ ಕೃಷಿ ಜಮೀನನ್ನು ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದೆಲ್ಲದರಿಂದ ಜಗತ್ತಿನ ಹಸಿರು ತೊಟ್ಟಿಲು ಅಮೆಜಾನ್ ಕಾಡಿಗೆ ಧಕ್ಕೆಯಾಗಿದೆ. ಈಗ ಬ್ರೆಜಿಲ್ ಸರ್ಕಾರ ಎಚ್ಚೆತ್ತುಕೊಂಡು ಅಮೆಜಾನ್ ಕಾಡುಗಳನ್ನು ಉಳಿಸುವ ಪ್ರಯತ್ನಕ್ಕೆ ಮುಂದಾಗಿದೆ.

ನಿನ್ನೆ ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಿಸಲು ಸೈನ್ಯವನ್ನು ಕಳುಹಿಸುವುದಾಗಿ ಗ್ಯಾಝೆಟ್ ನೋಟಿಫಿಕೇಶನ್ ಹೊರಡಿಸಿದ್ದು ಎಷ್ಟು ಪ್ರಮಾಣದ ಸೈನ್ಯವನ್ನು ಅಮೆಜಾನ್ ಕಾಡುಗಳಿಗೆ ಬ್ರೆಜಿಲ್ ಸರ್ಕಾರ ಕಳುಹಿಸಿಕೊಡಲಿದೆ ಎಂಬುದು ಇದುವರೆಗೆ ಸ್ಪಷ್ಟವಾಗಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಅಮೆಜಾನ್ ವಲಯದ ಪಾರಾ, ಅಮೆಜೊನಸ್, ಮಾಟೊ ಗ್ರೋಸೊ, ರೊಂಡೆನಿಯಾ ರಾಜ್ಯಗಳಿಗೆ ಆಗಸ್ಟ್ ಅಂತ್ಯದ ವೇಳೆಗೆ ಸೈನ್ಯವನ್ನು ಕಳುಹಿಸುವುದಾಗಿ ಬ್ರೆಜಿಲ್ ಸರ್ಕಾರ ಅಧಿಕೃತವಾಗಿ ಹೇಳಿದೆ.

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಒತ್ತಡದ ಕಾರಣದಿಂದ ಬ್ರೆಜಿಲ್ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. 2020ರಲ್ಲಿ ಬ್ರೆಜಿಲ್‌ನಲ್ಲಿ ವ್ಯಾಪಕವಾದ ಅರಣ್ಯ ನಾಶ ನಡೆದಿರುವ ಸುದ್ದಿ ಜಗತ್ತಿನಾದ್ಯಂತ ಹರಡಿತ್ತು. ಉಪಗ್ರಹ ಚಿತ್ರಗಳು ಕೂಡ ಅಮೆಜಾನ್ ಕಾಡುಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಿಕೆಗಳನ್ನು ಬಹಿರಂಗಗೊಳಿಸಿದ್ದವು. ಅಕ್ರಮ ಟಿಂಬರ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಆರೋಪವನ್ನು ಎದುರಿಸಿತ್ತಿದ್ದ ಜೂನ್ 23 ರಂದು ಬ್ರೆಜಿಲ್‌ನ ಪರಿಸರ ಮಂತ್ರಿ ರಿಕಾರ್ಡೋ ಸೆಲ್ಲಾಸ್ ಇದೇ ವಿಷಯಕ್ಕೆ ರಾಜೀನಾಮೆಯನ್ನು ನೀಡಿದ್ದರು. ಇದರಿಂದ ಬ್ರೆಜಿಲ್ ಮತ್ತು ಅಮೆಜಾನ್ ಕಾಡು ನಾಶದ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಮೆಜಾನ್ ಕಾಡುಗಳ ರಕ್ಷಣೆಗೆ ಸಂಬಂಧಿಸಿದಂತೆ ವ್ಯಾಪಕ ಕ್ರಮ ಕೈಗೊಳ್ಳಲು ತನ್ನ ಬಳಿ ಆರ್ಥಿಕ ಸಂಪನ್ಮೂಲಗಳು ಇಲ್ಲವೆಂದು ಬ್ರೆಜಿಲ್ ಹೇಳಿತ್ತು. ಬ್ರೆಜಿಲ್ ಅಮೆಜಾನ್ ರಕ್ಷಣೆಗೆ ಕ್ರಮ ಕೈಗೊಳ್ಳುವವರೆಗೆ ಯಾವುದೇ ಆರ್ಥಿಕ ಸಹಾಯ ಮಾಡುವುದಿಲ್ಲವೆಂದು ಅಮೆರಿಕಾ ಹೇಳಿದೆ. ಜಾಗತಿಕ ತಾಪಮಾನ ಏರಿಕೆ ಸಮಸ್ಯೆಗೆ ಅಮೆರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಅದು ಒತ್ತಡ ಹೇರುತ್ತಿದೆ. ಅಮೆರಿಕಾ ಒತ್ತಡದ ಪರಿಣಾಮವಾಗಿ ಬ್ರೆಜಿಲ್ ಸೈನ್ಯವನ್ನು ಕಳುಹಿಸಲು ಮುಂದಾಗಿದೆ ಎಂದು ಬ್ರೆಜಿಲ್‌ನ ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ನಾಶ ಮಾಡುವವರು ಮತ್ತು ಅಕ್ರಮ ಚಟುವಟಿಕೆ ನಡೆಸುವವರಿಗೆ ದಂಡ ವಿಧಿಸುವ ಕಾನೂನನ್ನು ರದ್ದುಗೊಳಿಸಿದೆ ಎಂದು ಪರಿಸರ ಹೋರಾಟಗಾರ ಮಾರ್ಸಿಯೋ ಆಸ್ಟಿನಿ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಸೈನ್ಯವನ್ನು ಕಳುಹಿಸಿಕೊಡುತ್ತಿರುವದು ಇದು 3 ನೇ ಬಾರಿ. ಇದುವರೆಗೆ ಅಲ್ಫಾವಧಿಗೆ ಸೈನ್ಯವನ್ನು ಕಳುಹಿಸಿ ಮತ್ತೆ ಮರಳಿ ಕರೆಸಿಕೊಂಡಿದೆ. ಬ್ರೆಜಿಲ್ ಸರ್ಕಾರದ ಕೈಗೊಂಡಿರುವ ಕ್ರಮಗಳು ಅಮೆಜಾನ್ ಅರಣ್ಯ ರಕ್ಷಣೆಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಜಗತ್ತಿನ ಹಸಿರಿನ ತೊಟ್ಟಿಲು ಅಮೆಜಾನ್ ಕಾಡುಗಳು ನಾಶವಾದಂತೆಲ್ಲ ಜಗತ್ತಿನಲ್ಲಿ ಪರಿಸರ ಸಮಸ್ಯೆಗಳು ತಲೆದೋರುತ್ತಿವೆ. ನೀರ್ಗಲ್ಲುಗಳು ಕರಗಿ ಸಮುದ್ರದ ಮಟ್ಟದಲ್ಲಿ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ  ಮುಂದೊಂದು  ದಿನ ನ್ಯೂಯಾರ್ಕ, ಲಂಡನ್, ಮುಂಬೈ ಸೇರಿದಂತೆ ಸಮುದ್ರದಂಚಿನ ನಗರಗಳು ನೀರಿನಲ್ಲಿ ಮುಳುಗಡೆಯಾಗುವ ದಿನಗಳು ದೂರದಲ್ಲಿಲ್ಲ.


ಇದನ್ನೂ ಓದಿ : ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...