Homeಅಂತರಾಷ್ಟ್ರೀಯಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

ಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

- Advertisement -
- Advertisement -

ಜಗತ್ತಿನ ಆಕ್ಸಿಜನ್ ತೊಟ್ಟಿಲು ಎಂದು ಕರೆಯಲ್ಪಡುವ ದಕ್ಷಿಣ ಅಮೆರಿಕಾದ ಅಮೆಜಾನ್ ಕಾಡುಗಳು ಒತ್ತುವರಿಯಾಗುತ್ತಿವೆ, ನಾಶವಾಗುತ್ತಿವೆ ಎಂಬ ಕೂಗು ಕಳೆದ ಹಲವಾರು ವರ್ಷಗಳಿಂದ ಕೇಳಿಬರುತ್ತಿದೆ. ಅಮೆಜಾನ್ ಉಳಿಸಿ ಅಭಿಯಾನ ಕೂಡ ನಡೆಯುತ್ತಿದೆ. ವಿವಿಧ ಪರಿಸರ ಸಂಘಟನೆಗಳು ಅಮೆಜಾನ್ ಉಳಿಸುವ ಹೋರಾಟದಲ್ಲಿ ತೊಡಗಿಸಿಕೊಂಡಿವೆ. ಬ್ರೆಜಿಲ್ ಸರ್ಕಾರ ಮಾತ್ರ ಅಮೆಜಾನ್ ಉಳಿಸಲು ಇದುವರೆಗೆ ಹೆಚ್ಚಿನ ಪ್ರಯತ್ನ ಮಾಡಿರಲಿಲ್ಲ. ಬದಲಾಗಿ 2018 ರ ತಮ್ಮ ಚುನಾವಣಾ ಪ್ರಚಾರದಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸಾನೇರೋ ಅಮೆಜಾನ್ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದರು.

ಅಮೆರಿಕಾ ಮೂಲದ ಜಾಗತಿಕ ಕಂಪನಿಗಳು ಅಮೆಜಾನ್ ಅರಣ್ಯ ವಲಯದಲ್ಲಿ ಫಾರ್ಮಿಂಗ್, ಕೃಷಿ ಸೇರಿದಂತೆ ವಿವಿಧ ರೀತಿಯ ಉದ್ಯಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವು. ಬ್ರೆಜಿಲ್ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಾಗುವಂತಹ ಕಾನೂನುಗಳನ್ನು ಜಾರಿಗೆ ತಂದಿತ್ತು. ಜೊತೆಗೆ ಸ್ಥಳೀಯ ನಿವಾಸಿಗಳು ಕೂಡ ಕಾಡಿಗೆ ಬೆಂಕಿ ಹಚ್ಚಿ ತಮ್ಮ ಕೃಷಿ ಜಮೀನನ್ನು ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದೆಲ್ಲದರಿಂದ ಜಗತ್ತಿನ ಹಸಿರು ತೊಟ್ಟಿಲು ಅಮೆಜಾನ್ ಕಾಡಿಗೆ ಧಕ್ಕೆಯಾಗಿದೆ. ಈಗ ಬ್ರೆಜಿಲ್ ಸರ್ಕಾರ ಎಚ್ಚೆತ್ತುಕೊಂಡು ಅಮೆಜಾನ್ ಕಾಡುಗಳನ್ನು ಉಳಿಸುವ ಪ್ರಯತ್ನಕ್ಕೆ ಮುಂದಾಗಿದೆ.

ನಿನ್ನೆ ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಿಸಲು ಸೈನ್ಯವನ್ನು ಕಳುಹಿಸುವುದಾಗಿ ಗ್ಯಾಝೆಟ್ ನೋಟಿಫಿಕೇಶನ್ ಹೊರಡಿಸಿದ್ದು ಎಷ್ಟು ಪ್ರಮಾಣದ ಸೈನ್ಯವನ್ನು ಅಮೆಜಾನ್ ಕಾಡುಗಳಿಗೆ ಬ್ರೆಜಿಲ್ ಸರ್ಕಾರ ಕಳುಹಿಸಿಕೊಡಲಿದೆ ಎಂಬುದು ಇದುವರೆಗೆ ಸ್ಪಷ್ಟವಾಗಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಅಮೆಜಾನ್ ವಲಯದ ಪಾರಾ, ಅಮೆಜೊನಸ್, ಮಾಟೊ ಗ್ರೋಸೊ, ರೊಂಡೆನಿಯಾ ರಾಜ್ಯಗಳಿಗೆ ಆಗಸ್ಟ್ ಅಂತ್ಯದ ವೇಳೆಗೆ ಸೈನ್ಯವನ್ನು ಕಳುಹಿಸುವುದಾಗಿ ಬ್ರೆಜಿಲ್ ಸರ್ಕಾರ ಅಧಿಕೃತವಾಗಿ ಹೇಳಿದೆ.

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಒತ್ತಡದ ಕಾರಣದಿಂದ ಬ್ರೆಜಿಲ್ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. 2020ರಲ್ಲಿ ಬ್ರೆಜಿಲ್‌ನಲ್ಲಿ ವ್ಯಾಪಕವಾದ ಅರಣ್ಯ ನಾಶ ನಡೆದಿರುವ ಸುದ್ದಿ ಜಗತ್ತಿನಾದ್ಯಂತ ಹರಡಿತ್ತು. ಉಪಗ್ರಹ ಚಿತ್ರಗಳು ಕೂಡ ಅಮೆಜಾನ್ ಕಾಡುಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಿಕೆಗಳನ್ನು ಬಹಿರಂಗಗೊಳಿಸಿದ್ದವು. ಅಕ್ರಮ ಟಿಂಬರ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಆರೋಪವನ್ನು ಎದುರಿಸಿತ್ತಿದ್ದ ಜೂನ್ 23 ರಂದು ಬ್ರೆಜಿಲ್‌ನ ಪರಿಸರ ಮಂತ್ರಿ ರಿಕಾರ್ಡೋ ಸೆಲ್ಲಾಸ್ ಇದೇ ವಿಷಯಕ್ಕೆ ರಾಜೀನಾಮೆಯನ್ನು ನೀಡಿದ್ದರು. ಇದರಿಂದ ಬ್ರೆಜಿಲ್ ಮತ್ತು ಅಮೆಜಾನ್ ಕಾಡು ನಾಶದ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಮೆಜಾನ್ ಕಾಡುಗಳ ರಕ್ಷಣೆಗೆ ಸಂಬಂಧಿಸಿದಂತೆ ವ್ಯಾಪಕ ಕ್ರಮ ಕೈಗೊಳ್ಳಲು ತನ್ನ ಬಳಿ ಆರ್ಥಿಕ ಸಂಪನ್ಮೂಲಗಳು ಇಲ್ಲವೆಂದು ಬ್ರೆಜಿಲ್ ಹೇಳಿತ್ತು. ಬ್ರೆಜಿಲ್ ಅಮೆಜಾನ್ ರಕ್ಷಣೆಗೆ ಕ್ರಮ ಕೈಗೊಳ್ಳುವವರೆಗೆ ಯಾವುದೇ ಆರ್ಥಿಕ ಸಹಾಯ ಮಾಡುವುದಿಲ್ಲವೆಂದು ಅಮೆರಿಕಾ ಹೇಳಿದೆ. ಜಾಗತಿಕ ತಾಪಮಾನ ಏರಿಕೆ ಸಮಸ್ಯೆಗೆ ಅಮೆರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಅದು ಒತ್ತಡ ಹೇರುತ್ತಿದೆ. ಅಮೆರಿಕಾ ಒತ್ತಡದ ಪರಿಣಾಮವಾಗಿ ಬ್ರೆಜಿಲ್ ಸೈನ್ಯವನ್ನು ಕಳುಹಿಸಲು ಮುಂದಾಗಿದೆ ಎಂದು ಬ್ರೆಜಿಲ್‌ನ ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ನಾಶ ಮಾಡುವವರು ಮತ್ತು ಅಕ್ರಮ ಚಟುವಟಿಕೆ ನಡೆಸುವವರಿಗೆ ದಂಡ ವಿಧಿಸುವ ಕಾನೂನನ್ನು ರದ್ದುಗೊಳಿಸಿದೆ ಎಂದು ಪರಿಸರ ಹೋರಾಟಗಾರ ಮಾರ್ಸಿಯೋ ಆಸ್ಟಿನಿ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಸೈನ್ಯವನ್ನು ಕಳುಹಿಸಿಕೊಡುತ್ತಿರುವದು ಇದು 3 ನೇ ಬಾರಿ. ಇದುವರೆಗೆ ಅಲ್ಫಾವಧಿಗೆ ಸೈನ್ಯವನ್ನು ಕಳುಹಿಸಿ ಮತ್ತೆ ಮರಳಿ ಕರೆಸಿಕೊಂಡಿದೆ. ಬ್ರೆಜಿಲ್ ಸರ್ಕಾರದ ಕೈಗೊಂಡಿರುವ ಕ್ರಮಗಳು ಅಮೆಜಾನ್ ಅರಣ್ಯ ರಕ್ಷಣೆಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಜಗತ್ತಿನ ಹಸಿರಿನ ತೊಟ್ಟಿಲು ಅಮೆಜಾನ್ ಕಾಡುಗಳು ನಾಶವಾದಂತೆಲ್ಲ ಜಗತ್ತಿನಲ್ಲಿ ಪರಿಸರ ಸಮಸ್ಯೆಗಳು ತಲೆದೋರುತ್ತಿವೆ. ನೀರ್ಗಲ್ಲುಗಳು ಕರಗಿ ಸಮುದ್ರದ ಮಟ್ಟದಲ್ಲಿ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ  ಮುಂದೊಂದು  ದಿನ ನ್ಯೂಯಾರ್ಕ, ಲಂಡನ್, ಮುಂಬೈ ಸೇರಿದಂತೆ ಸಮುದ್ರದಂಚಿನ ನಗರಗಳು ನೀರಿನಲ್ಲಿ ಮುಳುಗಡೆಯಾಗುವ ದಿನಗಳು ದೂರದಲ್ಲಿಲ್ಲ.


ಇದನ್ನೂ ಓದಿ : ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...