Homeಅಂತರಾಷ್ಟ್ರೀಯಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

ಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

- Advertisement -
- Advertisement -

ಜಗತ್ತಿನ ಆಕ್ಸಿಜನ್ ತೊಟ್ಟಿಲು ಎಂದು ಕರೆಯಲ್ಪಡುವ ದಕ್ಷಿಣ ಅಮೆರಿಕಾದ ಅಮೆಜಾನ್ ಕಾಡುಗಳು ಒತ್ತುವರಿಯಾಗುತ್ತಿವೆ, ನಾಶವಾಗುತ್ತಿವೆ ಎಂಬ ಕೂಗು ಕಳೆದ ಹಲವಾರು ವರ್ಷಗಳಿಂದ ಕೇಳಿಬರುತ್ತಿದೆ. ಅಮೆಜಾನ್ ಉಳಿಸಿ ಅಭಿಯಾನ ಕೂಡ ನಡೆಯುತ್ತಿದೆ. ವಿವಿಧ ಪರಿಸರ ಸಂಘಟನೆಗಳು ಅಮೆಜಾನ್ ಉಳಿಸುವ ಹೋರಾಟದಲ್ಲಿ ತೊಡಗಿಸಿಕೊಂಡಿವೆ. ಬ್ರೆಜಿಲ್ ಸರ್ಕಾರ ಮಾತ್ರ ಅಮೆಜಾನ್ ಉಳಿಸಲು ಇದುವರೆಗೆ ಹೆಚ್ಚಿನ ಪ್ರಯತ್ನ ಮಾಡಿರಲಿಲ್ಲ. ಬದಲಾಗಿ 2018 ರ ತಮ್ಮ ಚುನಾವಣಾ ಪ್ರಚಾರದಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸಾನೇರೋ ಅಮೆಜಾನ್ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದರು.

ಅಮೆರಿಕಾ ಮೂಲದ ಜಾಗತಿಕ ಕಂಪನಿಗಳು ಅಮೆಜಾನ್ ಅರಣ್ಯ ವಲಯದಲ್ಲಿ ಫಾರ್ಮಿಂಗ್, ಕೃಷಿ ಸೇರಿದಂತೆ ವಿವಿಧ ರೀತಿಯ ಉದ್ಯಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವು. ಬ್ರೆಜಿಲ್ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಾಗುವಂತಹ ಕಾನೂನುಗಳನ್ನು ಜಾರಿಗೆ ತಂದಿತ್ತು. ಜೊತೆಗೆ ಸ್ಥಳೀಯ ನಿವಾಸಿಗಳು ಕೂಡ ಕಾಡಿಗೆ ಬೆಂಕಿ ಹಚ್ಚಿ ತಮ್ಮ ಕೃಷಿ ಜಮೀನನ್ನು ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದೆಲ್ಲದರಿಂದ ಜಗತ್ತಿನ ಹಸಿರು ತೊಟ್ಟಿಲು ಅಮೆಜಾನ್ ಕಾಡಿಗೆ ಧಕ್ಕೆಯಾಗಿದೆ. ಈಗ ಬ್ರೆಜಿಲ್ ಸರ್ಕಾರ ಎಚ್ಚೆತ್ತುಕೊಂಡು ಅಮೆಜಾನ್ ಕಾಡುಗಳನ್ನು ಉಳಿಸುವ ಪ್ರಯತ್ನಕ್ಕೆ ಮುಂದಾಗಿದೆ.

ನಿನ್ನೆ ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಿಸಲು ಸೈನ್ಯವನ್ನು ಕಳುಹಿಸುವುದಾಗಿ ಗ್ಯಾಝೆಟ್ ನೋಟಿಫಿಕೇಶನ್ ಹೊರಡಿಸಿದ್ದು ಎಷ್ಟು ಪ್ರಮಾಣದ ಸೈನ್ಯವನ್ನು ಅಮೆಜಾನ್ ಕಾಡುಗಳಿಗೆ ಬ್ರೆಜಿಲ್ ಸರ್ಕಾರ ಕಳುಹಿಸಿಕೊಡಲಿದೆ ಎಂಬುದು ಇದುವರೆಗೆ ಸ್ಪಷ್ಟವಾಗಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಅಮೆಜಾನ್ ವಲಯದ ಪಾರಾ, ಅಮೆಜೊನಸ್, ಮಾಟೊ ಗ್ರೋಸೊ, ರೊಂಡೆನಿಯಾ ರಾಜ್ಯಗಳಿಗೆ ಆಗಸ್ಟ್ ಅಂತ್ಯದ ವೇಳೆಗೆ ಸೈನ್ಯವನ್ನು ಕಳುಹಿಸುವುದಾಗಿ ಬ್ರೆಜಿಲ್ ಸರ್ಕಾರ ಅಧಿಕೃತವಾಗಿ ಹೇಳಿದೆ.

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಒತ್ತಡದ ಕಾರಣದಿಂದ ಬ್ರೆಜಿಲ್ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. 2020ರಲ್ಲಿ ಬ್ರೆಜಿಲ್‌ನಲ್ಲಿ ವ್ಯಾಪಕವಾದ ಅರಣ್ಯ ನಾಶ ನಡೆದಿರುವ ಸುದ್ದಿ ಜಗತ್ತಿನಾದ್ಯಂತ ಹರಡಿತ್ತು. ಉಪಗ್ರಹ ಚಿತ್ರಗಳು ಕೂಡ ಅಮೆಜಾನ್ ಕಾಡುಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಿಕೆಗಳನ್ನು ಬಹಿರಂಗಗೊಳಿಸಿದ್ದವು. ಅಕ್ರಮ ಟಿಂಬರ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಆರೋಪವನ್ನು ಎದುರಿಸಿತ್ತಿದ್ದ ಜೂನ್ 23 ರಂದು ಬ್ರೆಜಿಲ್‌ನ ಪರಿಸರ ಮಂತ್ರಿ ರಿಕಾರ್ಡೋ ಸೆಲ್ಲಾಸ್ ಇದೇ ವಿಷಯಕ್ಕೆ ರಾಜೀನಾಮೆಯನ್ನು ನೀಡಿದ್ದರು. ಇದರಿಂದ ಬ್ರೆಜಿಲ್ ಮತ್ತು ಅಮೆಜಾನ್ ಕಾಡು ನಾಶದ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಮೆಜಾನ್ ಕಾಡುಗಳ ರಕ್ಷಣೆಗೆ ಸಂಬಂಧಿಸಿದಂತೆ ವ್ಯಾಪಕ ಕ್ರಮ ಕೈಗೊಳ್ಳಲು ತನ್ನ ಬಳಿ ಆರ್ಥಿಕ ಸಂಪನ್ಮೂಲಗಳು ಇಲ್ಲವೆಂದು ಬ್ರೆಜಿಲ್ ಹೇಳಿತ್ತು. ಬ್ರೆಜಿಲ್ ಅಮೆಜಾನ್ ರಕ್ಷಣೆಗೆ ಕ್ರಮ ಕೈಗೊಳ್ಳುವವರೆಗೆ ಯಾವುದೇ ಆರ್ಥಿಕ ಸಹಾಯ ಮಾಡುವುದಿಲ್ಲವೆಂದು ಅಮೆರಿಕಾ ಹೇಳಿದೆ. ಜಾಗತಿಕ ತಾಪಮಾನ ಏರಿಕೆ ಸಮಸ್ಯೆಗೆ ಅಮೆರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಅದು ಒತ್ತಡ ಹೇರುತ್ತಿದೆ. ಅಮೆರಿಕಾ ಒತ್ತಡದ ಪರಿಣಾಮವಾಗಿ ಬ್ರೆಜಿಲ್ ಸೈನ್ಯವನ್ನು ಕಳುಹಿಸಲು ಮುಂದಾಗಿದೆ ಎಂದು ಬ್ರೆಜಿಲ್‌ನ ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ನಾಶ ಮಾಡುವವರು ಮತ್ತು ಅಕ್ರಮ ಚಟುವಟಿಕೆ ನಡೆಸುವವರಿಗೆ ದಂಡ ವಿಧಿಸುವ ಕಾನೂನನ್ನು ರದ್ದುಗೊಳಿಸಿದೆ ಎಂದು ಪರಿಸರ ಹೋರಾಟಗಾರ ಮಾರ್ಸಿಯೋ ಆಸ್ಟಿನಿ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಸೈನ್ಯವನ್ನು ಕಳುಹಿಸಿಕೊಡುತ್ತಿರುವದು ಇದು 3 ನೇ ಬಾರಿ. ಇದುವರೆಗೆ ಅಲ್ಫಾವಧಿಗೆ ಸೈನ್ಯವನ್ನು ಕಳುಹಿಸಿ ಮತ್ತೆ ಮರಳಿ ಕರೆಸಿಕೊಂಡಿದೆ. ಬ್ರೆಜಿಲ್ ಸರ್ಕಾರದ ಕೈಗೊಂಡಿರುವ ಕ್ರಮಗಳು ಅಮೆಜಾನ್ ಅರಣ್ಯ ರಕ್ಷಣೆಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಜಗತ್ತಿನ ಹಸಿರಿನ ತೊಟ್ಟಿಲು ಅಮೆಜಾನ್ ಕಾಡುಗಳು ನಾಶವಾದಂತೆಲ್ಲ ಜಗತ್ತಿನಲ್ಲಿ ಪರಿಸರ ಸಮಸ್ಯೆಗಳು ತಲೆದೋರುತ್ತಿವೆ. ನೀರ್ಗಲ್ಲುಗಳು ಕರಗಿ ಸಮುದ್ರದ ಮಟ್ಟದಲ್ಲಿ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ  ಮುಂದೊಂದು  ದಿನ ನ್ಯೂಯಾರ್ಕ, ಲಂಡನ್, ಮುಂಬೈ ಸೇರಿದಂತೆ ಸಮುದ್ರದಂಚಿನ ನಗರಗಳು ನೀರಿನಲ್ಲಿ ಮುಳುಗಡೆಯಾಗುವ ದಿನಗಳು ದೂರದಲ್ಲಿಲ್ಲ.


ಇದನ್ನೂ ಓದಿ : ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...