Homeಅಂತರಾಷ್ಟ್ರೀಯಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

ಅಮೆಜಾನ್ ಅರಣ್ಯನಾಶ ತಡೆಯಲು ಸೈನ್ಯ ಕಳುಹಿಸಲು ಮುಂದಾದ ಬ್ರೆಜಿಲ್

- Advertisement -
- Advertisement -

ಜಗತ್ತಿನ ಆಕ್ಸಿಜನ್ ತೊಟ್ಟಿಲು ಎಂದು ಕರೆಯಲ್ಪಡುವ ದಕ್ಷಿಣ ಅಮೆರಿಕಾದ ಅಮೆಜಾನ್ ಕಾಡುಗಳು ಒತ್ತುವರಿಯಾಗುತ್ತಿವೆ, ನಾಶವಾಗುತ್ತಿವೆ ಎಂಬ ಕೂಗು ಕಳೆದ ಹಲವಾರು ವರ್ಷಗಳಿಂದ ಕೇಳಿಬರುತ್ತಿದೆ. ಅಮೆಜಾನ್ ಉಳಿಸಿ ಅಭಿಯಾನ ಕೂಡ ನಡೆಯುತ್ತಿದೆ. ವಿವಿಧ ಪರಿಸರ ಸಂಘಟನೆಗಳು ಅಮೆಜಾನ್ ಉಳಿಸುವ ಹೋರಾಟದಲ್ಲಿ ತೊಡಗಿಸಿಕೊಂಡಿವೆ. ಬ್ರೆಜಿಲ್ ಸರ್ಕಾರ ಮಾತ್ರ ಅಮೆಜಾನ್ ಉಳಿಸಲು ಇದುವರೆಗೆ ಹೆಚ್ಚಿನ ಪ್ರಯತ್ನ ಮಾಡಿರಲಿಲ್ಲ. ಬದಲಾಗಿ 2018 ರ ತಮ್ಮ ಚುನಾವಣಾ ಪ್ರಚಾರದಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸಾನೇರೋ ಅಮೆಜಾನ್ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದರು.

ಅಮೆರಿಕಾ ಮೂಲದ ಜಾಗತಿಕ ಕಂಪನಿಗಳು ಅಮೆಜಾನ್ ಅರಣ್ಯ ವಲಯದಲ್ಲಿ ಫಾರ್ಮಿಂಗ್, ಕೃಷಿ ಸೇರಿದಂತೆ ವಿವಿಧ ರೀತಿಯ ಉದ್ಯಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವು. ಬ್ರೆಜಿಲ್ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳಿಗೆ ನೆರವಾಗುವಂತಹ ಕಾನೂನುಗಳನ್ನು ಜಾರಿಗೆ ತಂದಿತ್ತು. ಜೊತೆಗೆ ಸ್ಥಳೀಯ ನಿವಾಸಿಗಳು ಕೂಡ ಕಾಡಿಗೆ ಬೆಂಕಿ ಹಚ್ಚಿ ತಮ್ಮ ಕೃಷಿ ಜಮೀನನ್ನು ವಿಸ್ತರಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದೆಲ್ಲದರಿಂದ ಜಗತ್ತಿನ ಹಸಿರು ತೊಟ್ಟಿಲು ಅಮೆಜಾನ್ ಕಾಡಿಗೆ ಧಕ್ಕೆಯಾಗಿದೆ. ಈಗ ಬ್ರೆಜಿಲ್ ಸರ್ಕಾರ ಎಚ್ಚೆತ್ತುಕೊಂಡು ಅಮೆಜಾನ್ ಕಾಡುಗಳನ್ನು ಉಳಿಸುವ ಪ್ರಯತ್ನಕ್ಕೆ ಮುಂದಾಗಿದೆ.

ನಿನ್ನೆ ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಿಸಲು ಸೈನ್ಯವನ್ನು ಕಳುಹಿಸುವುದಾಗಿ ಗ್ಯಾಝೆಟ್ ನೋಟಿಫಿಕೇಶನ್ ಹೊರಡಿಸಿದ್ದು ಎಷ್ಟು ಪ್ರಮಾಣದ ಸೈನ್ಯವನ್ನು ಅಮೆಜಾನ್ ಕಾಡುಗಳಿಗೆ ಬ್ರೆಜಿಲ್ ಸರ್ಕಾರ ಕಳುಹಿಸಿಕೊಡಲಿದೆ ಎಂಬುದು ಇದುವರೆಗೆ ಸ್ಪಷ್ಟವಾಗಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಅಮೆಜಾನ್ ವಲಯದ ಪಾರಾ, ಅಮೆಜೊನಸ್, ಮಾಟೊ ಗ್ರೋಸೊ, ರೊಂಡೆನಿಯಾ ರಾಜ್ಯಗಳಿಗೆ ಆಗಸ್ಟ್ ಅಂತ್ಯದ ವೇಳೆಗೆ ಸೈನ್ಯವನ್ನು ಕಳುಹಿಸುವುದಾಗಿ ಬ್ರೆಜಿಲ್ ಸರ್ಕಾರ ಅಧಿಕೃತವಾಗಿ ಹೇಳಿದೆ.

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಒತ್ತಡದ ಕಾರಣದಿಂದ ಬ್ರೆಜಿಲ್ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. 2020ರಲ್ಲಿ ಬ್ರೆಜಿಲ್‌ನಲ್ಲಿ ವ್ಯಾಪಕವಾದ ಅರಣ್ಯ ನಾಶ ನಡೆದಿರುವ ಸುದ್ದಿ ಜಗತ್ತಿನಾದ್ಯಂತ ಹರಡಿತ್ತು. ಉಪಗ್ರಹ ಚಿತ್ರಗಳು ಕೂಡ ಅಮೆಜಾನ್ ಕಾಡುಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಿಕೆಗಳನ್ನು ಬಹಿರಂಗಗೊಳಿಸಿದ್ದವು. ಅಕ್ರಮ ಟಿಂಬರ್ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಆರೋಪವನ್ನು ಎದುರಿಸಿತ್ತಿದ್ದ ಜೂನ್ 23 ರಂದು ಬ್ರೆಜಿಲ್‌ನ ಪರಿಸರ ಮಂತ್ರಿ ರಿಕಾರ್ಡೋ ಸೆಲ್ಲಾಸ್ ಇದೇ ವಿಷಯಕ್ಕೆ ರಾಜೀನಾಮೆಯನ್ನು ನೀಡಿದ್ದರು. ಇದರಿಂದ ಬ್ರೆಜಿಲ್ ಮತ್ತು ಅಮೆಜಾನ್ ಕಾಡು ನಾಶದ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಮೆಜಾನ್ ಕಾಡುಗಳ ರಕ್ಷಣೆಗೆ ಸಂಬಂಧಿಸಿದಂತೆ ವ್ಯಾಪಕ ಕ್ರಮ ಕೈಗೊಳ್ಳಲು ತನ್ನ ಬಳಿ ಆರ್ಥಿಕ ಸಂಪನ್ಮೂಲಗಳು ಇಲ್ಲವೆಂದು ಬ್ರೆಜಿಲ್ ಹೇಳಿತ್ತು. ಬ್ರೆಜಿಲ್ ಅಮೆಜಾನ್ ರಕ್ಷಣೆಗೆ ಕ್ರಮ ಕೈಗೊಳ್ಳುವವರೆಗೆ ಯಾವುದೇ ಆರ್ಥಿಕ ಸಹಾಯ ಮಾಡುವುದಿಲ್ಲವೆಂದು ಅಮೆರಿಕಾ ಹೇಳಿದೆ. ಜಾಗತಿಕ ತಾಪಮಾನ ಏರಿಕೆ ಸಮಸ್ಯೆಗೆ ಅಮೆರಿಕಾ ಕ್ರಮ ಕೈಗೊಳ್ಳುವ ಸಲುವಾಗಿ ಅದು ಒತ್ತಡ ಹೇರುತ್ತಿದೆ. ಅಮೆರಿಕಾ ಒತ್ತಡದ ಪರಿಣಾಮವಾಗಿ ಬ್ರೆಜಿಲ್ ಸೈನ್ಯವನ್ನು ಕಳುಹಿಸಲು ಮುಂದಾಗಿದೆ ಎಂದು ಬ್ರೆಜಿಲ್‌ನ ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ನಾಶ ಮಾಡುವವರು ಮತ್ತು ಅಕ್ರಮ ಚಟುವಟಿಕೆ ನಡೆಸುವವರಿಗೆ ದಂಡ ವಿಧಿಸುವ ಕಾನೂನನ್ನು ರದ್ದುಗೊಳಿಸಿದೆ ಎಂದು ಪರಿಸರ ಹೋರಾಟಗಾರ ಮಾರ್ಸಿಯೋ ಆಸ್ಟಿನಿ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

ಬ್ರೆಜಿಲ್ ಸರ್ಕಾರ ಅಮೆಜಾನ್ ರಕ್ಷಣೆಗೆ ಸೈನ್ಯವನ್ನು ಕಳುಹಿಸಿಕೊಡುತ್ತಿರುವದು ಇದು 3 ನೇ ಬಾರಿ. ಇದುವರೆಗೆ ಅಲ್ಫಾವಧಿಗೆ ಸೈನ್ಯವನ್ನು ಕಳುಹಿಸಿ ಮತ್ತೆ ಮರಳಿ ಕರೆಸಿಕೊಂಡಿದೆ. ಬ್ರೆಜಿಲ್ ಸರ್ಕಾರದ ಕೈಗೊಂಡಿರುವ ಕ್ರಮಗಳು ಅಮೆಜಾನ್ ಅರಣ್ಯ ರಕ್ಷಣೆಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಜಗತ್ತಿನ ಹಸಿರಿನ ತೊಟ್ಟಿಲು ಅಮೆಜಾನ್ ಕಾಡುಗಳು ನಾಶವಾದಂತೆಲ್ಲ ಜಗತ್ತಿನಲ್ಲಿ ಪರಿಸರ ಸಮಸ್ಯೆಗಳು ತಲೆದೋರುತ್ತಿವೆ. ನೀರ್ಗಲ್ಲುಗಳು ಕರಗಿ ಸಮುದ್ರದ ಮಟ್ಟದಲ್ಲಿ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ  ಮುಂದೊಂದು  ದಿನ ನ್ಯೂಯಾರ್ಕ, ಲಂಡನ್, ಮುಂಬೈ ಸೇರಿದಂತೆ ಸಮುದ್ರದಂಚಿನ ನಗರಗಳು ನೀರಿನಲ್ಲಿ ಮುಳುಗಡೆಯಾಗುವ ದಿನಗಳು ದೂರದಲ್ಲಿಲ್ಲ.


ಇದನ್ನೂ ಓದಿ : ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...