Homeಮುಖಪುಟಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

ಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

- Advertisement -
- Advertisement -

ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಿದ ಆರೋಪದ ಮೇಲೆ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಅವರ ಮೇಲೆ ಉತ್ತರ ಪ್ರದೇಶದಲ್ಲಿ FIR ದಾಖಲಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾ ಸರ್ಕಾರದ ಜೊತೆಗೆ ಸಂಘರ್ಷದಲ್ಲಿ ತೊಡಗಿದ್ದು, ಅದು ಹಲವು ತೊಂದರೆಗಳನ್ನು ಅನುಭವಿಸಬೇಕಾಗಿದೆ. ಉತ್ತರಪ್ರದೇಶದಲ್ಲಿ ಈ ತಿಂಗಳು ಟ್ವಿಟರ್ ವಿರುದ್ಧ ದಾಖಲಾದ ಎರಡನೇ FIR ಇದಾಗಿದೆ.

ಟ್ವಿಟರ್‌ನ ವೆಬ್‌ಸೈಟ್‌ನ “ಟ್ವೀಪ್ ಲೈಫ್” ವಿಭಾಗದಲ್ಲಿ ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಲಾಗಿತ್ತು. ಇದನ್ನು ಬಳಕೆದಾರರು ತಪ್ಪೆಂದು ತೋರಿಸಿದ ನಂತರ ಸೋಮವಾರ ತೆಗೆದು ಹಾಕಲಾಗಿದೆ. ಈ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಭಾರತದ ಹೊರಗಿರುವ ಪ್ರದೇಶ ಎಂದು ತೋರಿಸಲಾಗಿತ್ತು. ಇದು ಆಕ್ರೋಶಕ್ಕೆ ಗುರಿಯಾಗಿತ್ತು.

ಬಲಪಂಥೀಯ ಗುಂಪು ಭಜರಂಗದಳದ ಮುಖಂಡ ಪ್ರವೀಣ್ ಭಾಟಿ ಅವರು ಸಲ್ಲಿಸಿರುವ ದೂರಿನಲ್ಲಿ “ಈ ದೇಶದ್ರೋಹದ ಕೃತ್ಯವು ಉದ್ದೇಶಪೂರ್ವಕವಾಗಿ ನಡೆದಿದೆ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಉಲ್ಲೇಖಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು ಅಥವಾ ಉತ್ತೇಜಿಸುವುದು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 74ರ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.

ದೆಹಲಿಯಿಂದ 100 ಕಿ.ಮೀ ದೂರದಲ್ಲಿರುವ ಯುಪಿಯ ಬುಲಂದ್‌ಶಹರ್‌ನಲ್ಲಿ ದಾಖಲಾದ ಈ ಎಫ್‌ಐಆರ್‌ನಲ್ಲಿ ಟ್ವಿಟರ್ ಇಂಡಿಯಾದ ನ್ಯೂಸ್ ಪಾರ್ಟನರ್‌ಶಿಪ್ ಮುಖ್ಯಸ್ಥ ಅಮೃತ್‍ ತ್ರಿಪಾಠಿ ಅವರನ್ನು ಕೂಡ ಹೆಸರಿಸಲಾಗಿದೆ.

ಕಳೆದ ವಾರವೂ FIR

ಕಳೆದ ವಾರ, ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ಹಲ್ಲೆಗೆ ಸಂಬಂಧಿಸಿರುವ ಪೋಸ್ಟ್‌ಗಳು ವಿವಾದಕ್ಕೆ ಕಾರಣವಾದ ನಂತರ ದಾಖಲಾದ ಎಫ್‍ಐಆರ್‌ನಲ್ಲೂ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿಯವರನ್ನು ಹೆಸರಿಸಲಾಗಿತ್ತು. ಉತ್ತರ ಪ್ರದೇಶ ಪೊಲೀಸರು ಅವರಿಗೆ ಸಮನ್ಸ್ ನೀಡಿದ್ದರು. ಟ್ವಿಟರ್ ಜೊತೆಗೆ, ಪತ್ರಕರ್ತರಾದ ರಾಣಾ ಅಯೂಬ್, ಸಬಾ ನಖ್ವಿ, ಮತ್ತು ಕೆಲವು ಕಾಂಗ್ರೆಸ್ ನಾಯಕರನ್ನು ಕೂಡ ಎಫ್‍ಐಆರ್‌ನಲ್ಲಿ ಹೆಸರಿಸಲಾಗಿದೆ.

ಬೆಂಗಳೂರು ನಿವಾಸಿ ಮನೀಶ್ ಮಹೇಶ್ವರಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‍ನಿಂದ ತಾತ್ಕಾಲಿಕ ತಡೆಯಾಜ್ಞೆ ದೊರಕಿದೆ. ಇದನ್ನು ಯುಪಿ ಪೊಲೀಸರು ಆಕ್ಷೇಪಿಸಿದ್ದರು. ಅದಕ್ಕೆ ರಾಜ್ಯ ನ್ಯಾಯಾಲಯವು, ‘ತನಿಖೆಯನ್ನು ನಿಲ್ಲಿಸುತ್ತಿಲ್ಲ, ಮನೀಶ್ ಮಹೇಶ್ವರಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ’ ಎಂದು ಹೇಳಿದೆ. “ಪೊಲೀಸರು ತನಿಖೆ ಮಾಡಲು ಅಥವಾ ಪ್ರಶ್ನಿಸಲು ಬಯಸಿದರೆ, ಅವರು ಅದನ್ನು ವರ್ಚುವಲ್‍ ಮೋಡ್ ಮೂಲಕ ಮಾಡಬಹುದು” ಎಂದು ನ್ಯಾಯಮೂರ್ತಿ ನರೇಂದರ್ ಹೇಳಿದ್ದರು.


ಇದನ್ನೂ ಓದಿ; ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...