Homeಮುಖಪುಟಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

ಭಾರತದ ನಕ್ಷೆ ತಪ್ಪಾಗಿ ತೋರಿಸಿದ ಆರೋಪ: ಟ್ವಿಟರ್ ಇಂಡಿಯಾ ಮುಖ್ಯಸ್ಥರ ವಿರುದ್ಧ ಮತ್ತೊಂದು FIR

- Advertisement -
- Advertisement -

ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಿದ ಆರೋಪದ ಮೇಲೆ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಅವರ ಮೇಲೆ ಉತ್ತರ ಪ್ರದೇಶದಲ್ಲಿ FIR ದಾಖಲಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾ ಸರ್ಕಾರದ ಜೊತೆಗೆ ಸಂಘರ್ಷದಲ್ಲಿ ತೊಡಗಿದ್ದು, ಅದು ಹಲವು ತೊಂದರೆಗಳನ್ನು ಅನುಭವಿಸಬೇಕಾಗಿದೆ. ಉತ್ತರಪ್ರದೇಶದಲ್ಲಿ ಈ ತಿಂಗಳು ಟ್ವಿಟರ್ ವಿರುದ್ಧ ದಾಖಲಾದ ಎರಡನೇ FIR ಇದಾಗಿದೆ.

ಟ್ವಿಟರ್‌ನ ವೆಬ್‌ಸೈಟ್‌ನ “ಟ್ವೀಪ್ ಲೈಫ್” ವಿಭಾಗದಲ್ಲಿ ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಲಾಗಿತ್ತು. ಇದನ್ನು ಬಳಕೆದಾರರು ತಪ್ಪೆಂದು ತೋರಿಸಿದ ನಂತರ ಸೋಮವಾರ ತೆಗೆದು ಹಾಕಲಾಗಿದೆ. ಈ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಭಾರತದ ಹೊರಗಿರುವ ಪ್ರದೇಶ ಎಂದು ತೋರಿಸಲಾಗಿತ್ತು. ಇದು ಆಕ್ರೋಶಕ್ಕೆ ಗುರಿಯಾಗಿತ್ತು.

ಬಲಪಂಥೀಯ ಗುಂಪು ಭಜರಂಗದಳದ ಮುಖಂಡ ಪ್ರವೀಣ್ ಭಾಟಿ ಅವರು ಸಲ್ಲಿಸಿರುವ ದೂರಿನಲ್ಲಿ “ಈ ದೇಶದ್ರೋಹದ ಕೃತ್ಯವು ಉದ್ದೇಶಪೂರ್ವಕವಾಗಿ ನಡೆದಿದೆ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಉಲ್ಲೇಖಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು ಅಥವಾ ಉತ್ತೇಜಿಸುವುದು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 74ರ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.

ದೆಹಲಿಯಿಂದ 100 ಕಿ.ಮೀ ದೂರದಲ್ಲಿರುವ ಯುಪಿಯ ಬುಲಂದ್‌ಶಹರ್‌ನಲ್ಲಿ ದಾಖಲಾದ ಈ ಎಫ್‌ಐಆರ್‌ನಲ್ಲಿ ಟ್ವಿಟರ್ ಇಂಡಿಯಾದ ನ್ಯೂಸ್ ಪಾರ್ಟನರ್‌ಶಿಪ್ ಮುಖ್ಯಸ್ಥ ಅಮೃತ್‍ ತ್ರಿಪಾಠಿ ಅವರನ್ನು ಕೂಡ ಹೆಸರಿಸಲಾಗಿದೆ.

ಕಳೆದ ವಾರವೂ FIR

ಕಳೆದ ವಾರ, ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ಹಲ್ಲೆಗೆ ಸಂಬಂಧಿಸಿರುವ ಪೋಸ್ಟ್‌ಗಳು ವಿವಾದಕ್ಕೆ ಕಾರಣವಾದ ನಂತರ ದಾಖಲಾದ ಎಫ್‍ಐಆರ್‌ನಲ್ಲೂ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿಯವರನ್ನು ಹೆಸರಿಸಲಾಗಿತ್ತು. ಉತ್ತರ ಪ್ರದೇಶ ಪೊಲೀಸರು ಅವರಿಗೆ ಸಮನ್ಸ್ ನೀಡಿದ್ದರು. ಟ್ವಿಟರ್ ಜೊತೆಗೆ, ಪತ್ರಕರ್ತರಾದ ರಾಣಾ ಅಯೂಬ್, ಸಬಾ ನಖ್ವಿ, ಮತ್ತು ಕೆಲವು ಕಾಂಗ್ರೆಸ್ ನಾಯಕರನ್ನು ಕೂಡ ಎಫ್‍ಐಆರ್‌ನಲ್ಲಿ ಹೆಸರಿಸಲಾಗಿದೆ.

ಬೆಂಗಳೂರು ನಿವಾಸಿ ಮನೀಶ್ ಮಹೇಶ್ವರಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‍ನಿಂದ ತಾತ್ಕಾಲಿಕ ತಡೆಯಾಜ್ಞೆ ದೊರಕಿದೆ. ಇದನ್ನು ಯುಪಿ ಪೊಲೀಸರು ಆಕ್ಷೇಪಿಸಿದ್ದರು. ಅದಕ್ಕೆ ರಾಜ್ಯ ನ್ಯಾಯಾಲಯವು, ‘ತನಿಖೆಯನ್ನು ನಿಲ್ಲಿಸುತ್ತಿಲ್ಲ, ಮನೀಶ್ ಮಹೇಶ್ವರಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ’ ಎಂದು ಹೇಳಿದೆ. “ಪೊಲೀಸರು ತನಿಖೆ ಮಾಡಲು ಅಥವಾ ಪ್ರಶ್ನಿಸಲು ಬಯಸಿದರೆ, ಅವರು ಅದನ್ನು ವರ್ಚುವಲ್‍ ಮೋಡ್ ಮೂಲಕ ಮಾಡಬಹುದು” ಎಂದು ನ್ಯಾಯಮೂರ್ತಿ ನರೇಂದರ್ ಹೇಳಿದ್ದರು.


ಇದನ್ನೂ ಓದಿ; ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...