Homeಚಳವಳಿಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಬಿಜೆಪಿ ಸರಕಾರವು ತನ್ನ ಮತೀಯವಾದಿ ನೀತಿಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲು ಇದು ಸಂಪೂರ್ಣವಾಗಿ ಸಹಕಾರಿಯಾಗುತ್ತದೆ.  ಅವರ ಉದ್ದೇಶವೂ ಸಹ ಇದೇ’ ಎಂದು ಶ್ರೀಪಾದ ಭಟ್‍ ಅಭಿಪ್ರಾಯ ಪಡುತ್ತಾರೆ.

- Advertisement -
- Advertisement -

ಎಲ್ಲವನ್ನೂ ನಿಯಂತ್ರಿಸಲು ಹೊರಟಿರುವ ಮೋದಿ ನೇತೃತ್ವದ ಸರ್ಕಾರ ಈಗ ರಾಜ್ಯಗಳ ಶಿಕ್ಷಣ ಕ್ಷೇತ್ರಕ್ಕೂ ಕೈ ಹಾಕಿದೆ. ಅದು ನಮ್ಮ ಮಕ್ಕಳ ಶಾಲಾ ಪುಸ್ತಕದಲ್ಲಿ ಏನಿರಬೇಕು ಎಂಬುದನ್ನು ತಾನೇ ನಿರ್ಧರಿಸಲು ಹೊರಟಿದ್ದು, ತಮಿಳುನಾಡು ಮತ್ತು ಕೇರಳ ಸರ್ಕಾರಗಳು ಮಾತ್ರ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ ಎಂದು ಶಿಕ್ಷಣ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ತಜ್ಞ, ಜನಪರ ಚಿಂತಕ ಬಿ. ಶ್ರೀಪಾದ ಭಟ್‍, ‘ಇನ್ನು ಮುಂದೆ ರಾಜ್ಯ ಸರಕಾರಗಳು ರಚಿಸಿದ ಪಠ್ಯಪುಸ್ತಕಗಳನ್ನು, ಪಠ್ಯಕ್ರಮವನ್ನು ಕೇಂದ್ರ ಸರಕಾರವು ಸೆನ್ಸಾರ್‌ಶಿಪ್ ಮಾಡಲು ಬಿಜೆಪಿ ನೇತೃತ್ವದ ಆಡಳಿತವು ನಿರ್ಧರಿಸಿದೆ…..’ ಎನ್ನುತ್ತಾರೆ.

‘ಈ ಮೂಲಕ ತನಗೆ ಸರಿ ಕಾಣದ, ಸೈದ್ದಾಂತಿಕವಾಗಿ ಭಿನ್ನ ಪಠ್ಯಗಳಿರುವ ಸಿಲಬಸ್‍ ಅನ್ನು ತೆಗೆದು ಹಾಕಿ ತನ್ನದೇ ಹೊಸ ಪಠ್ಯಗಳನ್ನು ಸೇರಿಸುವ ಪರಮಾಧಿಕಾರ ಹೊಂದಲು ನಿರ್ಧರಿಸಿದೆ…. ಈ ಹಿನ್ನೆಲೆಯಲ್ಲಿ ಎನ್‍ಸಿಇಆರ್‌ಟಿ (ರಾಷ್ಟ್ರೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ) ತಮ್ಮ ಶಿಫಾರಸ್ಸುಗಳನ್ನು ಸಲ್ಲಿಸಬೇಕೆಂದು ರಾಜ್ಯಗಳಿಗೆ ಕೇಳಿದೆ. ಎನ್‍ಸಿಇಆರ್‌ಟಿಟಿ ಈ ರೀತಿಯ ನಿರ್ದೇಶನ ನೀಡುತ್ತಿರುವುದು ಇದೇ ಮೊದಲು’ ಎನ್ನುತ್ತಾರೆ ಶ್ರೀಪಾದ ಭಟ್‍.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು ‘ಇದಕ್ಕೂ ಮುಂಚೆ  ಕೇಂದ್ರವು ಕೊಡುವ ಸ್ಥೂಲ ವಿವರಣೆ ಒಳಗೊಂಡಂತೆ ರಾಜ್ಯಗಳು  ಸಲ್ಲಿಸುವ ದಸ್ತಾವೇಜು ಆಧರಿಸಿ ‘ರಾಷ್ಟ್ರೀಯ ಪಠ್ಯಕ್ರಮ’ ರಚನೆಯಾಗುತ್ತಿತ್ತು. ರಾಜ್ಯಗಳು ಕಳುಹಿಸಿದ ಪಠ್ಯಕ್ರಮದಲ್ಲಿ ಕೆಲ ಭಾಗಗಳನ್ನು ತೆಗೆದು ತನ್ನ ಪಠ್ಯವನ್ನು ಸೇರಿಸಲು ಕೇಂದ್ರಕ್ಕೆ ಅಧಕಾರವಿದೆ. ಇದು ಕೂಡ ರಾಜ್ಯಗಳ ಸ್ವಾಯತ್ತತೆ ಮತ್ತು ಒಕ್ಕೂಟ ತತ್ವಕ್ಕೆ ವಿರೋಧ ನೀತಿಯಾಗಿದೆ. ಆದರೆ ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿ ಬರುವುದರಿಂದ ಇದು ಸಾಮಾನ್ಯವಾದ ವಾಡಿಕೆಯಾಗಿದೆ. ಈವರೆಗೂ ಕೇಂದವು ರಾಜ್ಯಗಳ ಪಠ್ಯವಸ್ತು ರಚನೆ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡುತ್ತಿರಲಿಲ್ಲ. ಆದರೆ ಈ ರೂಢಿಯನ್ನು ಬದಲಿಸಲು ಬಿಜೆಪಿ ನಿರ್ಧರಿಸಿದೆ. ಇದರ ಅನುಸಾರ ಇನ್ನು ಮುಂದೆ ರಾಜ್ಯಗಳು ತಾವು ಶಾಲಾ ಸಿಲಬಸ್‍ ರಚನೆ ಮಾಡುವುದಕ್ಕೂ ಮುಂಚೆ ಕೇಂದ್ರಕ್ಕೆ ಅದರ ಎಲ್ಲಾ ರೂಪುರೇಷೆಗಳ, ಪಠ್ಯಗಳ ಮಾಹಿತಿ ಒದಗಿಸಬೇಕು. ನಂತರ ಕೇಂದ್ರ ಸರಕಾರವು ಅದರಲ್ಲಿ ಯಾವುದನ್ನು ಉಳಿಸಿಕೊಳ್ಳಬೇಕು, ಯಾವುದನ್ನು ತೆಗೆಯಬೇಕು ಎಂದು ನಿರ್ಧರಿಸುತ್ತದೆ. ಅದರ ಆದಾರದಲ್ಲಿ ರಾಜ್ಯಗಳು ಮರಳಿ ಪಠ್ಯಕ್ರಮ ರಚಿಸಿ ಕೇಂದ್ರಕ್ಕೆ ಕಳುಹಿಸಬೇಕು. ಇದು ಸರ್ವಾಧಿಕಾರದ ಲಕ್ಷಣವೇ ಆಗಿದ್ದು, ಒಕ್ಕೂಟ ವ್ಯವಸ್ಥೆಯನ್ನೇ ಧ್ವಂಸ ಮಾಡುವ ನಿಟ್ಟಿನಲ್ಲಿ ನಡೆಯುತ್ತಿರುವ ಕ್ರಮಗಳ ಮಗದೊಂದು ಭಾಗವೇ ಆಗಿದೆ’ ಎನ್ನುತ್ತಾರೆ.

‘2007ರಲ್ಲಿ ರಾಜ್ಯಗಳು ಸಿದ್ದಪಡಿಸಿದ್ದ ಪಠ್ಯಕ್ರಮ ಅಥವಾ ಸಿಲಬಸ್‍ ಅನ್ನು 2013ರಲ್ಲಿ ಪರಿಷ್ಕರಿಸಲಾಯಿತು. ಆಗ ಕೇಂದ್ರವು ಯಾವುದೇ ಹಸ್ತಕ್ಷೇಪ ಮಾಡಿರಲಿಲ್ಲ. ಆದರೆ ಈಗ ರಾಜ್ಯಗಳು ಪಠ್ಯಕ್ರಮ ಅಥವಾ ಸಿಲಬಸ್‍ ರಚನೆಗೆ ಮುಂಚೆ ಕೇಂದ್ರಕ್ಕೆ ಅದರ ವಿವರಗಳನ್ನು ಒದಗಿಸಬೇಕು. ಇದು ವಿಕೇಂದ್ರಿಕರಣ ನೀತಿಗೆ ತದ್ವಿರುದ್ಧ’ ಎಂದರು.

‘ಚುನಾವಣೆಗಳೇ ಬೇಡ ಬಿಡಿ. ಕೇಂದ್ರ ಸರ್ಕಾರವೇ ಮುಖ್ಯಮಂತ್ರಿಗಳನ್ನು ಮತ್ತು ರಾಜ್ಯ ಸರ್ಕಾರಗಳನ್ನು ನೇಮಿಸಿ ಬಿಡಲಿ. ಇದು ತೀರಾ ಅತಿಗೆ ಹೋಗುತ್ತಿದೆ. ಹೊಸ ಶಿಕ್ಷಣ ನೀತಿಯೇ ಒಂದು ಅಧ್ವಾನ.. ಎಲ್ಲ ರಾಜ್ಯ ಸರ್ಕಾರಗಳು ಇದನ್ನು ತಿರಸ್ಕರಿಸುವ ನಿರ್ಣಯ ಮಂಡಣೆ ಮಾಡಬೇಕು’ ಎಂದು ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಸರ್ಕಾರ ಒಂದು ಪಠ್ಯ ಚೌಕಟ್ಟನ್ನು ಒದಗಿಸಬೇಕು ಅಷ್ಟೇ. ಅದರ ಅನ್ವಯ ರಾಜ್ಯಗಳು ತಮ್ಮ ಸ್ಥಳೀಯತೆಯ ಆಧಾರದಲ್ಲಿ ಪಠ್ಯ  ರಚನೆ ಮಾಡಿಕೊಳ್ಳುತ್ತವೆ. ಆದರೀಗ ತಾನು ಸೂಚಿಸಿದ ಪಠ್ಯಗಳನ್ನೇ ಅಥವಾ ಪಠ್ಯಕ್ರಮವನ್ನೇ ಎಲ್ಲರೂ ಪಾಲಿಸಬೇಕು ಎನ್ನುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಸಮವರ್ತಿ ಪಟ್ಟಿಯಲ್ಲಿರುವ ಶಿಕ್ಷಣಕ್ಕೆ ಮೊದಲು ಅನುದಾನ ನೀಡುವ ಕೆಲಸವನ್ನು ಕೇಂದ್ರ ಮಾಡಲಿ. ಅದು ಬಿಟ್ಟು ಇಂತಹ ಅನಾಹುತ ಕೆಲಸ ಮಾಡುವುದನ್ನು ಕೈ ಬಿಡಲಿ. ಒಕ್ಕೂಟ ವ್ಯವಸ್ಥೆಯನ್ನೇ ನಾಶ ಮಾಡಲು ಹೊರಟ ಕೇಂದ್ರದ ವಿರುದ್ಧ ಎಲ್ಲ ರಾಜ್ಯಗಳ ಜನ ಪ್ರತಿರೋಧ ತೋರಬೇಕಾಗಿದೆ’ ಎಂದು ನಿರಂಜನಾರಾಧ್ಯ ಹೇಳಿದರು.

‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಸಹ ಶಿಕ್ಷಣದ ಕೇಂದ್ರೀಕರಣಕ್ಕೆ ಹೆಚ್ಚಿನ ಒತ್ತು ಕೊಡುತ್ತದೆ. ಈಗ ಪಠ್ಯದಲ್ಲೂ ತಲೆ ಹಾಕುವ ನಿರ್ಧಾರ ಪ್ರಜಾಪ್ರಭುತ್ವದ ಆಶಯಗಳಿಗೆ, ಸಂವಿಧಾನದ ನೀತಿಸಂಹಿತೆಗಳಿಗೆ ವಿರೋಧಿಯಾಗಿದೆ. ಬಿಜೆಪಿ ಸರಕಾರವು ತನ್ನ ಮತೀಯವಾದಿ ನೀತಿಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲು ಇದು ಸಂಪೂರ್ಣವಾಗಿ ಸಹಕಾರಿಯಾಗುತ್ತದೆ.  ಅವರ ಉದ್ದೇಶವೂ ಸಹ ಇದೇ’ ಎಂದು ಶ್ರೀಪಾದ ಭಟ್‍ ಅಭಿಪ್ರಾಯ ಪಡುತ್ತಾರೆ.

‘ಇದರಿಂದ ರಾಜ್ಯಗಳು ಪಠ್ಯಕ್ರಮ ಸಿದ್ದಪಡಿಸುವ ಸಂಬಂಧಿತ ತಮಗಿರುವ ಅಲ್ಪ ಸ್ವಲ್ಪ ಹಕ್ಕುಗಳನ್ನು ಕಳೆದುಕೊಳ್ಳುತ್ತವೆ. ಕೇರಳ, ತಮಿಳುನಾಡು ರಾಜ್ಯಗಳು ಮಾತ್ರ ಈ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿವೆ. ವಿರೋಧ ಪಕ್ಷ ಆಡಳಿತವಿರುವ ಮಿಕ್ಕ 12 ರಾಜ್ಯಗಳು ದಿವ್ಯ ಮೌನದಲ್ಲಿವೆ. ಕರ್ನಾಟಕ ಬಿಡಿ, ಜಿಎಸ್‍ಟಿ ಪಾಲು, ಅತಿವೃಷ್ಟಿ ಪರಿಹಾರ ಕೊಡದಿದ್ದರೂ ತೆಪ್ಪಗಿರುತ್ತದೆ, ಎಲ್ಲ ಬಿಜೆಪಿ ಆಳ್ವಿಕೆಯ ಸರ್ಕಾರಗಳಂತೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಇಬ್ಬರು ಶಿಕ್ಷಣ ತಜ್ಞರು ಹೊಸ ಶಿಕ್ಷಣ ನೀತಿಯೇ ಅಪಾಯಕಾರಿ ಎನ್ನುತ್ತಾರೆ. ‘ಆ ಶಿಕ್ಷಣ ನೀತಿಯ ಕರಡುವಿನಲ್ಲಿ ಬಸವ, ಅಂಬೇಡ್ಕರ್, ಪೆರಿಯಾರ್, ತಿರುವಳ್ಳುವರ್ ಮುಂತಾದ ಸಮಾನತೆಯ ಹರಿಕಾರರ ಪ್ರಸ್ತಾಪವೇ ಇಲ್ಲ. ಚರಕ, ಶುಶ್ರೂತ ಇತ್ಯಾದಿ ವೈದಿಕ ಹೆಸರುಗಳೇ ತುಂಬಿವೆ. ಎಲ್ಲ ರಾಜ್ಯ ಸರ್ಕಾರಗಳೂ ಮೊದಲು ಹೊಸ ಶಿಕ್ಷಣ ನೀತಿಯನ್ನು ತಿರಸ್ಕರಿಸಬೇಕು. ಸಂವಿಧಾನ ಆ ಅವಕಾಶವನ್ನೂ ನೀಡಿದೆ’ ಎಂದು ಪ್ರೊ. ನಿರಂಜನಾರಾಧ್ಯ ನಾನುಗೌರಿ.ಕಾಂಗೆ ತಿಳಿಸಿದರು.


ಇದನ್ನೂ ಓದಿ: ಪದವಿ ಶಿಕ್ಷಣ ನಾಲ್ಕು ವರ್ಷಕ್ಕೆ ಏರಿಸುವುದಕ್ಕೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವಿರೋಧ   

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...