Homeಮುಖಪುಟಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

- Advertisement -
- Advertisement -

ಒಂದೇ ದಿನ 86 ಲಕ್ಷ ಡೋಸ್‍ ಲಸಿಕೆ ಹಾಕಿದ್ದೇವೆ ಎಂದು ಮನ್‍ ಕಿ ಬಾತ್‍ನಲ್ಲಿ ಪ್ರಧಾನಿ ಸಂಭ್ರಮಿಸಿದರು. ಇಲ್ಲಿಯವರೆಗೆ ನೀಡಿರುವ ಒಟ್ಟು ಕೋವಿಡ್ ಲಸಿಕೆ ಪ್ರಮಾಣದಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಅದರ ಪ್ರಕಾರ, ಭಾರತವು ಇಲ್ಲಿಯವರೆಗೆ ಒಟ್ಟು 32,36,63,292 (32 ಕೋಟಿ 36 ಲಕ್ಷ 63 ಸಾವಿರದ 292) ಡೋಸ್‌ಗಳನ್ನು ನೀಡಿದ್ದರೆ, ಅಮೆರಿಕವು 32,33,27,328 ಡೋಸ್‌ಗಳನ್ನು ನೀಡಿದೆ. ಹೀಗಾಗಿ ನಾವು ಲಸಿಕೆ ನೀಡಿಕೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿದ್ದೇವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಹರ್ಷವರ್ಧನ್‍ ಮತ್ತು ಅವರ ಸಚಿವಾಲಯ ಇಂದು ಟ್ವೀಟ್‍ ಮಾಡಿದ್ದಾರೆ.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ. ಅಮೆರಿಕದಲ್ಲಿ ಶೇಕಡಾ 46.5 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ (ಎರಡೂ ಡೋಸ್) ಲಸಿಕೆ ನೀಡಲಾಗಿದೆ. ಭಾರತವು ಈವರೆಗೆ ತನ್ನ ಜನಸಂಖ್ಯೆಯ ಶೇಕಡಾ 4ರಷ್ಟು ಜನರಿಗೆ ಮಾತ್ರ ಪೂರ್ಣ ಲಸಿಕೆ ನೀಡಿದೆ. ಇಲ್ಲಿ ಒಂದು ಲಸಿಕೆ ಪಡೆದವರ ಪ್ರಮಾಣ ತುಸು ಹೆಚ್ಚಿರಬಹುದು. ಆದರೆ ಎರಡೂ ಲಸಿಕೆ ಪಡೆದವರ ಪ್ರಮಾಣ ತುಂಬ ಕಡಿಮೆಯಿದೆ ಎಂದು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಈ ಪಿಳ್ಳಂಗೋವಿ ಪ್ರಚಾರಕ್ಕೇನು ಕೊರತೆಯಿಲ್ಲ. ಅಲ್ರಯ್ಯಾ, ಬೇರೆ ದೇಶಗಳ ಜನಸಂಖ್ಯೆ ಇಟ್ಟುಕೊಂಡು ತುಲನೆ ಮಾಡ್ರಯ್ಯಾ. ನೀವು ಎಷ್ಟು ಡೋಸ್ ವ್ಯಾಕ್ಸಿನ್ ಕೊಟ್ರಿ ಅನ್ನೋದಲ್ಲ ಮುಖ್ಯ, ಎಷ್ಟು ಪರ್ಸಂಟೇಜ್ ಜನರಿಗೆ ಕೊಟ್ರಿ ಅನ್ನೋದು ಮುಖ್ಯ. ಅದೂ ಕೂಡ ಎರಡೂ ಡೋಸ್ ಕೊಟ್ಟರೆ ಮಾತ್ರ Fully vaccinated ಎಂದು ಗ್ರಹಿಸುತ್ತೆ ಇಡಿಯ ಜಗತ್ತು. ನಿಮ್ಮದೇ ಕೋವಿನ್ ಆಪ್ ಪ್ರಕಾರ ದೇಶದ ಐದೂವರೆ ಕೋಟಿ ಜನರು ಮಾತ್ರ ಈ ಕ್ಷಣದವರೆಗೆ ಎರಡೂ ಡೋಸ್ ವ್ಯಾಕ್ಸಿನ್ ಪಡೆದಿದ್ದಾರೆ. ಪರ್ಸಂಟೇಜ್ ಎಷ್ಟು ಗೊತ್ತಾ? ಕೇವಲ 4% ಮಾತ್ರ. ಇದೇ ಸಮಯದಲ್ಲಿ ಅಮೆರಿಕದಲ್ಲಿ ಶೇ. 47 ರಷ್ಟು ಮಂದಿ, ಇಸ್ರೇಲ್ ನಲ್ಲಿ ಶೇ. 57 ರಷ್ಟು ಮಂದಿ fully vaccinate ಆಗಿದ್ದಾರೆ” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಡಿಮೆ ಜನಸಂಖ್ಯೆ ಇರೋ ದೇಶಗಳ ಜತೆ ಹೋಲಿಸಿಕೊಳ್ತೀರಲ್ಲ, ನಮಗಿಂತ ಹೆಚ್ಚು ಜನಸಂಖ್ಯೆ ಇರೋ ದೇಶದ ಜತೆ ಹೋಲಿಸಿಕೊಳ್ರಯ್ಯಾ? ಚೀನಾದಲ್ಲಿ 22.3 ಕೋಟಿ ಜನರಿಗೆ ಎರಡೂ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ. ಭಾರತಕ್ಕಿಂತ ನಾಲ್ಕು ಪಟ್ಟು ಹೆಚ್ಚು. 119 ಕೋಟಿ ಜನರಿಗೆ ಮೊದಲ ಡೋಸ್ ಕೊಟ್ಟಾಗಿದೆ. ಅದೂ ಕೂಡ ಭಾರತದ ನಾಲ್ಕು ಪಟ್ಟು ಹೆಚ್ಚು. ನಿಮ್ಮ‌ ಈ ಡಿಜೈನಿನಲ್ಲಿ ಚೀನಾ ಯಾಕೆ ಇಲ್ಲ? ಹೇಳ್ಕೊಳ್ಳೋಕೆ ನಾಚಿಕೆನಾ? ಎಂದು ಅವರು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರೇ, ಭಾರತದ ಜನರಿಗೆ ಪ್ರಚಾರ ಮಾಡಬೇಕಿದ್ದ ಕರೆಕ್ಟ ಗ್ರಾಫ್ ಇದು ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರ ಮತ್ತೊಂದು ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಎರಡೂ ಡೋಸ್ ಲಸಿಕೆ ಪಡೆದ ರಾಷ್ಟ್ರಗಳ ವಿವರ ಇದ್ದು ಅದರಲ್ಲಿ ಭಾರತವು 5ನೇ ಸ್ಥಾನದಲ್ಲಿದೆ.

ಅಫಿಡವಿಟ್‍ ಲೆಕ್ಕ ಏನು?

ಭಾರತೀಯ ಔಷಧೀಯ ಕಂಪನಿ ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ ಲಸಿಕೆ ಶೀಘ್ರದಲ್ಲೇ 12-18 ರ ವಯೋಮಾನದವರಿಗೆ ಲಭ್ಯವಾಗಲಿದೆ ಎಂದು ಕೇಂದ್ರವು ಶನಿವಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ತಿಳಿಸಿದೆ.

ಉನ್ನತ ನ್ಯಾಯಾಲಯಕ್ಕೆ ನೀಡಿದ ಅಫಿಡವಿಟ್‌ನಲ್ಲಿ, 18 ವರ್ಷಕ್ಕಿಂತ ಮೇಲ್ಪಟ್ಟ ನಿವಾಸಿಗಳಿಗೆ ಚುಚ್ಚುಮದ್ದು ನೀಡಲು 186.6 ಕೋಟಿ ಡೋಸ್‍ ಬೇಕಾಗುತ್ತವೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2021 ರ ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಈಗ ಅಫೀಡವಿಯೆಟ್‍ನಲ್ಲಿ ನೀಡಿದ ಪ್ರೊಜೆಕ್ಷನ್‍ ತಿಳಿಸುವ ಡೋಸ್‍ಗಳ ಪ್ರಮಾಣಕ್ಕೂ, ಈ ಹಿಂದೆ ಸರ್ಕಾರವೇ ಹೇಳಿದಂತೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಲು ಆಗಸ್ಟ್ ಮತ್ತು ಡಿಸೆಂಬರ್ ನಡುವೆ ಭಾರತವು 216 ಕೋಟಿ ಡೋಸ್ ಕೋವಿಡ್ ಡೋಸ್‍ಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಕ್ಕೂ ಅಗಾಧ ವ್ಯತ್ಯಾಸವಿದೆ. ಆ ವ್ಯತ್ಯಾಸ 81 ಕೋಟಿ ಡೋಸ್‍ ಆಗಿದೆ.

ಡಿಸೆಂಬರ್ 31ರೊಳಗೆ ಎಲ್ಲಾ ವಯಸ್ಕರಿಗೆ ಸಂಪೂರ್ಣವಾಗಿ ಲಸಿಕೆ ಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ. “ಈ ಅವಶ್ಯಕತೆಯಿಂದ, ಜುಲೈ 31 2021 ರ ವೇಳೆಗೆ 51.6 ಕೋಟಿ ಡೋಸ್‌ಗಳು ಸರ್ಕಾರಕ್ಕೆ ಲಭ್ಯವಾಗಲಿದೆ’ ಎಂದು ಹೇಳಿದೆ.

135 ಕೋಟಿಯಲ್ಲಿ 50 ಕೋಟಿ ಲಸಿಕೆಗಳನ್ನು ಕೋವಿಶೀಲ್ಡ್ ಮತ್ತು 40ಕೋಟಿ ಕೋವಾಕ್ಸಿನ್ ನಿಂದ ನೀಡಲಾಗುವುದು. ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ 10 ಕೋಟಿ ಎಂದು ಅಂದಾಜಿಸಲಾಗಿದೆ. ಜೈವಿಕ್‍ ಇ ಸಬ್ 30 ಕೋಟಿ ಡೋಸ್ ಮತ್ತು ಝೈಡನ್‍ ಕ್ಯಾಡಿಲಾ 5 ಕೋಟಿ ಡೋಸ್‍ಗಳನ್ನು ಸಹ ನೀಡಲಿದೆ ಎಂದು ಕೇಂದ್ರ ಸುಪ್ರೀಂಕೋರ್ಟಿಗೆ ಹೇಳಿದೆ.

ಆದರೆ, ಝೈಡಸ್ ಕ್ಯಾಡಿಲಾ ಮತ್ತು ಜೈವಿಕ್‍ ಇ ಸಬ್ ಲಸಿಕೆಗಳನ್ನು ತುರ್ತು ಬಳಕೆಗಾಗಿ ಇನ್ನೂ ಅನುಮೋದಿಸಲಾಗಿಲ್ಲ. ಆದರೆ, ಸದ್ಯದಲ್ಲಿಯೇ ಅವರಿಗೆ ಅನುಮೋದನೆ ನೀಡಲಾಗುವುದು ಎಂದು ಸರ್ಕಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.


ಇದನ್ನೂ ಓದಿ: ಎಂಆರ್‌ಎನ್‌ಎ ಲಸಿಕೆಗಳು; ಸಂಶೋಧನೆ ಮತ್ತು ವಿಜ್ಞಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ನೆಟ್ಟುಗೆ ವ್ಯಾಕ್ಸಿನ್ ಸ್ಟಾಕ್ ಇಲ್ಲ. ಅಂತಹದರಲ್ಲಿ ಸುಳ್ಳು ಪ್ರಚಾರ ಮಾಡಿಕೊಳ್ಳುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ..

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...