Homeಮುಖಪುಟಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

- Advertisement -
- Advertisement -

ಒಂದೇ ದಿನ 86 ಲಕ್ಷ ಡೋಸ್‍ ಲಸಿಕೆ ಹಾಕಿದ್ದೇವೆ ಎಂದು ಮನ್‍ ಕಿ ಬಾತ್‍ನಲ್ಲಿ ಪ್ರಧಾನಿ ಸಂಭ್ರಮಿಸಿದರು. ಇಲ್ಲಿಯವರೆಗೆ ನೀಡಿರುವ ಒಟ್ಟು ಕೋವಿಡ್ ಲಸಿಕೆ ಪ್ರಮಾಣದಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಅದರ ಪ್ರಕಾರ, ಭಾರತವು ಇಲ್ಲಿಯವರೆಗೆ ಒಟ್ಟು 32,36,63,292 (32 ಕೋಟಿ 36 ಲಕ್ಷ 63 ಸಾವಿರದ 292) ಡೋಸ್‌ಗಳನ್ನು ನೀಡಿದ್ದರೆ, ಅಮೆರಿಕವು 32,33,27,328 ಡೋಸ್‌ಗಳನ್ನು ನೀಡಿದೆ. ಹೀಗಾಗಿ ನಾವು ಲಸಿಕೆ ನೀಡಿಕೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿದ್ದೇವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಹರ್ಷವರ್ಧನ್‍ ಮತ್ತು ಅವರ ಸಚಿವಾಲಯ ಇಂದು ಟ್ವೀಟ್‍ ಮಾಡಿದ್ದಾರೆ.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ. ಅಮೆರಿಕದಲ್ಲಿ ಶೇಕಡಾ 46.5 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ (ಎರಡೂ ಡೋಸ್) ಲಸಿಕೆ ನೀಡಲಾಗಿದೆ. ಭಾರತವು ಈವರೆಗೆ ತನ್ನ ಜನಸಂಖ್ಯೆಯ ಶೇಕಡಾ 4ರಷ್ಟು ಜನರಿಗೆ ಮಾತ್ರ ಪೂರ್ಣ ಲಸಿಕೆ ನೀಡಿದೆ. ಇಲ್ಲಿ ಒಂದು ಲಸಿಕೆ ಪಡೆದವರ ಪ್ರಮಾಣ ತುಸು ಹೆಚ್ಚಿರಬಹುದು. ಆದರೆ ಎರಡೂ ಲಸಿಕೆ ಪಡೆದವರ ಪ್ರಮಾಣ ತುಂಬ ಕಡಿಮೆಯಿದೆ ಎಂದು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಈ ಪಿಳ್ಳಂಗೋವಿ ಪ್ರಚಾರಕ್ಕೇನು ಕೊರತೆಯಿಲ್ಲ. ಅಲ್ರಯ್ಯಾ, ಬೇರೆ ದೇಶಗಳ ಜನಸಂಖ್ಯೆ ಇಟ್ಟುಕೊಂಡು ತುಲನೆ ಮಾಡ್ರಯ್ಯಾ. ನೀವು ಎಷ್ಟು ಡೋಸ್ ವ್ಯಾಕ್ಸಿನ್ ಕೊಟ್ರಿ ಅನ್ನೋದಲ್ಲ ಮುಖ್ಯ, ಎಷ್ಟು ಪರ್ಸಂಟೇಜ್ ಜನರಿಗೆ ಕೊಟ್ರಿ ಅನ್ನೋದು ಮುಖ್ಯ. ಅದೂ ಕೂಡ ಎರಡೂ ಡೋಸ್ ಕೊಟ್ಟರೆ ಮಾತ್ರ Fully vaccinated ಎಂದು ಗ್ರಹಿಸುತ್ತೆ ಇಡಿಯ ಜಗತ್ತು. ನಿಮ್ಮದೇ ಕೋವಿನ್ ಆಪ್ ಪ್ರಕಾರ ದೇಶದ ಐದೂವರೆ ಕೋಟಿ ಜನರು ಮಾತ್ರ ಈ ಕ್ಷಣದವರೆಗೆ ಎರಡೂ ಡೋಸ್ ವ್ಯಾಕ್ಸಿನ್ ಪಡೆದಿದ್ದಾರೆ. ಪರ್ಸಂಟೇಜ್ ಎಷ್ಟು ಗೊತ್ತಾ? ಕೇವಲ 4% ಮಾತ್ರ. ಇದೇ ಸಮಯದಲ್ಲಿ ಅಮೆರಿಕದಲ್ಲಿ ಶೇ. 47 ರಷ್ಟು ಮಂದಿ, ಇಸ್ರೇಲ್ ನಲ್ಲಿ ಶೇ. 57 ರಷ್ಟು ಮಂದಿ fully vaccinate ಆಗಿದ್ದಾರೆ” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಡಿಮೆ ಜನಸಂಖ್ಯೆ ಇರೋ ದೇಶಗಳ ಜತೆ ಹೋಲಿಸಿಕೊಳ್ತೀರಲ್ಲ, ನಮಗಿಂತ ಹೆಚ್ಚು ಜನಸಂಖ್ಯೆ ಇರೋ ದೇಶದ ಜತೆ ಹೋಲಿಸಿಕೊಳ್ರಯ್ಯಾ? ಚೀನಾದಲ್ಲಿ 22.3 ಕೋಟಿ ಜನರಿಗೆ ಎರಡೂ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ. ಭಾರತಕ್ಕಿಂತ ನಾಲ್ಕು ಪಟ್ಟು ಹೆಚ್ಚು. 119 ಕೋಟಿ ಜನರಿಗೆ ಮೊದಲ ಡೋಸ್ ಕೊಟ್ಟಾಗಿದೆ. ಅದೂ ಕೂಡ ಭಾರತದ ನಾಲ್ಕು ಪಟ್ಟು ಹೆಚ್ಚು. ನಿಮ್ಮ‌ ಈ ಡಿಜೈನಿನಲ್ಲಿ ಚೀನಾ ಯಾಕೆ ಇಲ್ಲ? ಹೇಳ್ಕೊಳ್ಳೋಕೆ ನಾಚಿಕೆನಾ? ಎಂದು ಅವರು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರೇ, ಭಾರತದ ಜನರಿಗೆ ಪ್ರಚಾರ ಮಾಡಬೇಕಿದ್ದ ಕರೆಕ್ಟ ಗ್ರಾಫ್ ಇದು ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರ ಮತ್ತೊಂದು ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಎರಡೂ ಡೋಸ್ ಲಸಿಕೆ ಪಡೆದ ರಾಷ್ಟ್ರಗಳ ವಿವರ ಇದ್ದು ಅದರಲ್ಲಿ ಭಾರತವು 5ನೇ ಸ್ಥಾನದಲ್ಲಿದೆ.

ಅಫಿಡವಿಟ್‍ ಲೆಕ್ಕ ಏನು?

ಭಾರತೀಯ ಔಷಧೀಯ ಕಂಪನಿ ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ ಲಸಿಕೆ ಶೀಘ್ರದಲ್ಲೇ 12-18 ರ ವಯೋಮಾನದವರಿಗೆ ಲಭ್ಯವಾಗಲಿದೆ ಎಂದು ಕೇಂದ್ರವು ಶನಿವಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ತಿಳಿಸಿದೆ.

ಉನ್ನತ ನ್ಯಾಯಾಲಯಕ್ಕೆ ನೀಡಿದ ಅಫಿಡವಿಟ್‌ನಲ್ಲಿ, 18 ವರ್ಷಕ್ಕಿಂತ ಮೇಲ್ಪಟ್ಟ ನಿವಾಸಿಗಳಿಗೆ ಚುಚ್ಚುಮದ್ದು ನೀಡಲು 186.6 ಕೋಟಿ ಡೋಸ್‍ ಬೇಕಾಗುತ್ತವೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2021 ರ ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಈಗ ಅಫೀಡವಿಯೆಟ್‍ನಲ್ಲಿ ನೀಡಿದ ಪ್ರೊಜೆಕ್ಷನ್‍ ತಿಳಿಸುವ ಡೋಸ್‍ಗಳ ಪ್ರಮಾಣಕ್ಕೂ, ಈ ಹಿಂದೆ ಸರ್ಕಾರವೇ ಹೇಳಿದಂತೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಲು ಆಗಸ್ಟ್ ಮತ್ತು ಡಿಸೆಂಬರ್ ನಡುವೆ ಭಾರತವು 216 ಕೋಟಿ ಡೋಸ್ ಕೋವಿಡ್ ಡೋಸ್‍ಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಕ್ಕೂ ಅಗಾಧ ವ್ಯತ್ಯಾಸವಿದೆ. ಆ ವ್ಯತ್ಯಾಸ 81 ಕೋಟಿ ಡೋಸ್‍ ಆಗಿದೆ.

ಡಿಸೆಂಬರ್ 31ರೊಳಗೆ ಎಲ್ಲಾ ವಯಸ್ಕರಿಗೆ ಸಂಪೂರ್ಣವಾಗಿ ಲಸಿಕೆ ಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ. “ಈ ಅವಶ್ಯಕತೆಯಿಂದ, ಜುಲೈ 31 2021 ರ ವೇಳೆಗೆ 51.6 ಕೋಟಿ ಡೋಸ್‌ಗಳು ಸರ್ಕಾರಕ್ಕೆ ಲಭ್ಯವಾಗಲಿದೆ’ ಎಂದು ಹೇಳಿದೆ.

135 ಕೋಟಿಯಲ್ಲಿ 50 ಕೋಟಿ ಲಸಿಕೆಗಳನ್ನು ಕೋವಿಶೀಲ್ಡ್ ಮತ್ತು 40ಕೋಟಿ ಕೋವಾಕ್ಸಿನ್ ನಿಂದ ನೀಡಲಾಗುವುದು. ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ 10 ಕೋಟಿ ಎಂದು ಅಂದಾಜಿಸಲಾಗಿದೆ. ಜೈವಿಕ್‍ ಇ ಸಬ್ 30 ಕೋಟಿ ಡೋಸ್ ಮತ್ತು ಝೈಡನ್‍ ಕ್ಯಾಡಿಲಾ 5 ಕೋಟಿ ಡೋಸ್‍ಗಳನ್ನು ಸಹ ನೀಡಲಿದೆ ಎಂದು ಕೇಂದ್ರ ಸುಪ್ರೀಂಕೋರ್ಟಿಗೆ ಹೇಳಿದೆ.

ಆದರೆ, ಝೈಡಸ್ ಕ್ಯಾಡಿಲಾ ಮತ್ತು ಜೈವಿಕ್‍ ಇ ಸಬ್ ಲಸಿಕೆಗಳನ್ನು ತುರ್ತು ಬಳಕೆಗಾಗಿ ಇನ್ನೂ ಅನುಮೋದಿಸಲಾಗಿಲ್ಲ. ಆದರೆ, ಸದ್ಯದಲ್ಲಿಯೇ ಅವರಿಗೆ ಅನುಮೋದನೆ ನೀಡಲಾಗುವುದು ಎಂದು ಸರ್ಕಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.


ಇದನ್ನೂ ಓದಿ: ಎಂಆರ್‌ಎನ್‌ಎ ಲಸಿಕೆಗಳು; ಸಂಶೋಧನೆ ಮತ್ತು ವಿಜ್ಞಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ನೆಟ್ಟುಗೆ ವ್ಯಾಕ್ಸಿನ್ ಸ್ಟಾಕ್ ಇಲ್ಲ. ಅಂತಹದರಲ್ಲಿ ಸುಳ್ಳು ಪ್ರಚಾರ ಮಾಡಿಕೊಳ್ಳುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ..

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...