Homeಅಂಕಣಗಳುಮೋದಿಯವರೆ, ನೀವು ರೈತರ `ಮನ್‍ಕಿ ಬಾತ್’ ಕೇಳುವ ಸಮಯ ಬಂದಿದೆ

ಮೋದಿಯವರೆ, ನೀವು ರೈತರ `ಮನ್‍ಕಿ ಬಾತ್’ ಕೇಳುವ ಸಮಯ ಬಂದಿದೆ

- Advertisement -
- Advertisement -
  • ಯೋಗೇಂದ್ರ ಯಾದವ್ |

ಮೋದಿಯವರ ಇತ್ತೀಚಿನ ಭಾಷಣಗಳ ಕುರಿತು ಯೋಚಿಸುತ್ತಿರುವಾಗ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮನನೋಯಿಸುವ ವೀಡಿಯೋವೊಂದನ್ನು ನೋಡಿದೆ. ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ರೈತ ಪ್ರೇಮ್‍ಸಿಂಗ್ ಲಖಿರಾಮ್ ಚವಾಣ್ ತನ್ನ ಹೊಲದಲ್ಲಿ ತಾನೇ ಬೆಳೆದ ಕ್ಯಾಬೇಜ್ ಬೆಳೆಯನ್ನು ಅತ್ಯಂತ ಸಿಟ್ಟಿನಿಂದ ನಾಶ ಮಾಡುವ ದೃಶ್ಯ ಮನಕಲುಕುವಂತಿತ್ತು.

ಮೊದಲು ಹತ್ತಿ ಬೆಳೆ ಬೆಳೆದು ಲಾಭದ ನಿರೀಕ್ಷೆಯಲ್ಲಿದ್ದ ಪ್ರೇಮ್‍ಸಿಂಗ್‍ಗೆ ನಿರಾಶೆ ಕಾದಿತ್ತು. ಹತ್ತಿ ಬೆಳೆ ಕೈಕೊಟ್ಟಿದ್ದಲ್ಲದೆ, ಅದಕ್ಕಾಗಿ ಮಾಡಿದ ಭಾರಿ ಸಾಲ ತಲೆ ಮೇಲೆ ಬಂದಿತ್ತು. ಈ ಕಾರಣದಿಂದ ಆತ ತನ್ನ ಹೊಲದಲ್ಲಿ ಟೊಮ್ಯಾಟೋ ಮತ್ತು ಎಲೆಕೋಸನ್ನು ಹಾಕಿದ್ದ. ಬೆಳೆದ ನಾಲ್ಕು ಕ್ವಿಂಟಲ್ ಟೊಮ್ಯಾಟೋಕ್ಕೆ ಕೇವಲ 442 ರೂಪಾಯಿಗಳು ಮಾತ್ರ ಸಿಗುತ್ತದೆ ಎಂದು ಆತನಿಗೆ ಗೊತ್ತಾಯಿತು. ಆ ನಾಲ್ಕು ಕ್ವಿಂಟಲ್ ಟೊಮ್ಯಾಟೋವನ್ನು ನಗರಕ್ಕೆ ಸಾಗಿಸಲು ಆತ 600 ರೂಪಾಯಿಗಳನ್ನು ಮತ್ತು ಅದನ್ನು ಬೆಳೆಯಲು 25,000 ರೂಪಾಯಿಗಳನ್ನು ಖರ್ಚು ಮಾಡಿದ್ದ. ಇನ್ನು ಬೆಳೆದ ಎಲೆಕೋಸಿಗೂ ಇದೇ ತರಹದ ಬೆಲೆ ಸಿಕ್ಕತ್ತು. ಆ ಕಾರಣಕ್ಕಾಗಿ ಪ್ರೇಮ್‍ಸಿಂಗ್ ತನ್ನ ಬೆಳೆಯನ್ನು ಹೊಲದಲ್ಲಿಯೇ ನಾಶ ಮಾಡಲು ನಿರ್ಧರಿಸಿದ್ದ.

ಪ್ರೇಮ್‍ಸಿಂಗ್‍ನ ವೀಡಿಯೋ ನೋಡುತ್ತಿದ್ದಂತೆ ಭಾರತದ ರೈತ ತನ್ನ ಬದುಕಿನುದ್ದಕ್ಕೂ ಪ್ರಕೃತಿ ಮತ್ತು ಮಾರುಕಟ್ಟೆ ಆರ್ಥಿಕತೆಯಿಂದ ಎದುರಿಸುವ ಗಂಡಾಂತರ ಮತ್ತು ಆತಂಕಗಳು ಕಣ್ಣ ಮುಂದೆ ಸುಳಿದವು. ಅನೇಕ ಸಲ ರೈತರ ಬೆಳೆಗಳು ರೋಗಕ್ಕೆ ತುತ್ತಾಗಿ ಹಾಳಾಗುತ್ತವೆ, ಇಲ್ಲವೆ ಬರ, ಅತಿವೃಷ್ಟಿಯಿಂದ ಬೆಳೆ ಕೈಗೆ ಸಿಗುವುದಿಲ್ಲ. ಅಕಾಸ್ಮಾತ್, ಬರ, ಬೆಳೆ ರೋಗ ಮತ್ತು ಪ್ರಕೃತಿ ವಿಕೋಪಗಳಿಂದ ಪಾರಾಗಿ ಉತ್ತಮ ಬೆಳೆ ಬೆಳೆದರೆ ಮಾರುಕಟ್ಟೆಯಲ್ಲಿ ರೈತನ ಫಸಲಿಗೆ ಉತ್ತಮ ಬೆಲೆ ಸಿಗುವುದಿಲ್ಲ. ಹಣಕಾಸಿನ ದುಸ್ಥಿತಿ, ಪರಿಸರ ವಿಕೋಪ ಮತ್ತು ಅಸ್ತಿತ್ವದಲ್ಲಿರುವ ಅನೇಕ ಸಮಸ್ಯೆಗಳು ಒಂದಕ್ಕೊಂದು ಹೆಣೆದುಕೊಂಡು ಭಾರತದ ರೈತರು ಅನೇಕ ಬಿಕ್ಕುಟ್ಟುಗಳನ್ನು ಎದುರಿಸುವಂತಾಗಿದೆ.

ಗುಜರಾತಿನ ಚುನಾವಣಾ ಫಲಿತಾಂಶ, ಮಹಾರಾಷ್ಟ್ರದ ರೈತರು ನಡೆಸಿದ `ಲಾಂಗ್‍ಮಾರ್ಚ’ ಮತ್ತು ದೇಶದಾದ್ಯಂತ ನಡೆದ ರೈತರ ಪ್ರಭಟನೆಗಳಿಂದಾಗಿ ಭಾರತದ ವ್ಯವಸಾಯಿ ಸಮುದಾಯದ ಸಮಸ್ಯೆಗಳು ಮುನ್ನೆಲೆಗೆ ಬಂದಿವೆ. ತಡವಾಗಿಯಾದರೂ ರೈತರ ಈ ಸಮಸ್ಯೆಗಳ ಕುರಿತು ಗಮನ ಹರಿಸುವ ಒತ್ತಡ ಸರ್ಕಾರದ ಮೇಲೆ ಬಿದ್ದಿದೆ. ಇಂತಹ ಸಂದರ್ಭದಲ್ಲಿ ನಮ್ಮ ಪ್ರಧಾನ ಮಂತ್ರಿ ಸುಮ್ಮನಿರುವುದಿಲ್ಲ. ತಮ್ಮ ಸರ್ಕಾರ ರೈತರಿಗಾಗಿ ಏನೇನು ಮಾಡಿದೆ ಎಂದು ಪಟಪಟನೆ ಹರಳು ಹುರಿದಂತೆ ಮಾತಾಡಿ ದೊಡ್ಡ ಪಟ್ಟಿಯನ್ನೇ ನೀಡುತ್ತಾರೆ. ಮಣ್ಣಿನ ಆರೋಗ್ಯದ ಕಾರ್ಡ, ಬೇವು ಮಿಶ್ರಿತ ಯೂರಿಯಾ, ಒಂದು ಹನಿ-ಹೆಚ್ಚು ಬೆಳೆ, ಪ್ರಧಾನ ಮಂತ್ರಿ ಫಸಲ್ ಭೀಮ್ ಯೋಜನಾ ಹೀಗೆ ಪಟ್ಟಿ ಮುಂದಿಡುತ್ತಾರೆ. ಕಳೆದ ಮೂರು ವರ್ಷದಿಂದ ನಾನು ನಿರಂತವಾಗಿ ಹಳ್ಳಿಗಳನ್ನು ಸುತ್ತಿದ್ದೇನೆ. ಪ್ರಧಾನ ಮಂತ್ರಿಗಳು ರೈತರಿಗಾಗಿ ರೂಪಿಸಿರುವ ಯಾವ ಯೋಜನೆಗಳ ಕುರಿತು ಹಳ್ಳಿಯ ರೈತರು ಮಾತನಾಡಿದ್ದನ್ನು ನಾನು ಕೇಳಿಲ್ಲ. ಪ್ರಧಾನ ಮಂತ್ರಿ ಫಸಲ್ ಬೀಮ್ ಯೋಜನೆ ಇದಕ್ಕೆ ಹೊರತಾಗಿದೆ. ಪ್ರಧಾನ ಮಂತ್ರಿಯವರ ಅತ್ಯಂತ ಪ್ರೀತಿಯ ಯೋಜನೆಗಳು ರೈತರಿಗೆ ಶಾಪವಾಗಿ ಪರಿಣಮಿಸಿವೆ. ಪ್ರಧಾನ ಮಂತ್ರಿ ಬರೀ ಮಾತಾಡುತ್ತಲೇ ಎಲ್ಲರನ್ನೂ ಒಪ್ಪಿಸುವ ಕೆಲಸ ಮಾಡದೆ, ರೈತರ ಸಮಸ್ಯೆಗಳನ್ನು ಪರಿಹರಿಸಲು ಬದ್ಧತೆಯ ಪ್ರಯತ್ನಗಳನ್ನು ಮಾಡಬೇಕಿದೆ. ರೈತರು ಜನಪ್ರಿಯ ಯೋಜನೆಗಳ ಕುರಿತು ಬರೀ ಮಾತುಗಳನ್ನು ಕೇಳಲು ಇಷ್ಟಪಡುವುದಿಲ್ಲ. ಅವರ ಆದಾಯ ಹೆಚ್ಚಾಗುವ, ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗುವ ಪಾಸಿಟಿವ್ ಅಂಶಗಳ ಕುರಿತು ಕೇಳಲು ಬಯಸುತ್ತಾರೆ. ದಿನದ ಕೊನೆಗಾದರೂ ಸರ್ಕಾರ ತಡಮಾಡದೆ, ಪ್ರತಿ ವರ್ಷ ಕೇಂದ್ರ ಸರ್ಕಾರ 24 ಬೆಳೆಗಳಿಗೆ ಪ್ರತಿ ವರ್ಷ ಘೋಷಿಸುವ ಕನಿಷ್ಟ ಬೆಂಬಲ ಬೆಲೆಯ ಕುರಿತು ಗಮನ ಹರಿಸಬೇಕಿದೆ. ರೈತರ ಬೆಳೆಗಳಿಗೆ ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆಯನ್ನು ನಮ್ಮ ಪ್ರಧಾನಿಗಳು ಹೆಚ್ಚಿಸಿ, ಇದು ನಮ್ಮ ಸರ್ರ್ಕಾರದ `ಐತಿಹಾಸಿಕ’ ಸಾಧನೆ ಎಂದು ಘೋಷಿಸಬಹುದು. ರೈತರು ಈ ಘೋಷಣೆಯಿಂದ ಹೆಚ್ಚು ಆದಾಯ ಗಳಿಸುತ್ತಾರೆ ಎಂದು ಭರವಸೆ ಹುಟ್ಟಿಸಿದರೆ ಸಾಕು.

ಕಳೆದ ಹತ್ತು ದಿನಗಳಿಂದ ನಾನು ಸ್ವರಾಜ್ ಅಭಿಯಾನದ ಜೈಕಿಸಾನ್ ಆಂದೋಲನದ ಸಂದರ್ಭದಲ್ಲಿ ವಿವಿಧ ರೈತ ಸಂಘಟನೆಗಳ ಜೊತೆಗೂಡಿ ಕನಿಷ್ಟ ಬೆಂಬಲ ಬೆಲೆಯ ಮೂಲಕ ಅನುಕೂಲ ಪಡೆದ, ದೇಶದ ವಿವಿಧ ಮಂಡಿಗಳಲ್ಲಿನ ರೈತರ ಕ್ಲೇಮುಗಳನ್ನು ಹುಡುಕುತ್ತಿದ್ದೆ. ದೇಶದ ಬೇರೆ ಬೇರೆ ಭಾಗದ ಎಪಿಎಂಸಿಗಳಲ್ಲಿ ಚಾಲ್ತಿಯಲ್ಲಿರುವ ದರಗಳ ಮೂಲಕವೇ ರೈತರ ಬೆಳೆಗಳನ್ನು ಖರೀದಿಸಿರುವುದನ್ನು ಕಂಡುಕೊಳ್ಳಬೇಕಿತ್ತು. ಎಪಿಎಂಸಿಗಳ ಅಧಿಕಾರಿಗಳ ಜೊತೆ, ಮಧ್ಯವರ್ತಿಗಳ ಜೊತೆ, ರೈತರ ಜೊತೆ ಮತ್ತು ವ್ಯಾಪಾರಿಗಳ ಜೊತೆ ಸರ್ಕಾರದ ಕನಿಷ್ಟ ಬೆಂಬಲ ಬೆಲೆಯ ಆಗುಹೋಗುಗಳ ಕುರಿತು ಚರ್ಚಿಸಲಾಯಿತು. ಈ ತಿರುಗಾಟದಲ್ಲಿ ನಾವು ಕಂಡುಕೊಂಡಿದ್ದು; ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆಗೆ ಯಾವೊಬ್ಬ ರೈತನೂ ತಮ್ಮ ಬೆಳೆಯನ್ನು ಯಾವ ಮಂಡಿಯಲ್ಲೂ ಮಾರಾಟ ಮಾಡಿರುವುದು ಕಂಡುಬರಲಿಲ್ಲ. ಕೇದ್ರ ಸರ್ಕಾರ ಒಂದು ಕ್ವಿಂಟಾಲ್ ತೊಗರಿಗೆ 5,450/- ರೂಪಾಯಿಗಳ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿದ್ದರೆ, ಕರ್ನಾಟಕ ಸರ್ಕಾರ ಅದನ್ನು 6,000/- ರೂಪಾಯಿಗಳಿಗೆ ಏರಿಸಿದೆ. ಆದರೆ ಅರ್ಧಕ್ಕಿಂತ ಕಡಿಮೆ ರೈತರು ಮಾತ್ರ ಈ ಬೆಂಬಲ ಬೆಲೆಗೆ ತಮ್ಮ ಬೆಳೆಗಳನ್ನು ಮಾರಬಹುದು. ಉಳಿದ ಅರ್ಧಕ್ಕಿಂತ ಹೆಚ್ಚು ರೈತರು ಮುಕ್ತ ಮಾರುಕಟ್ಟೆಯಲ್ಲಿ ಅದೇ ಬೆಳೆಯನ್ನು ಕ್ವಿಂಟಾಲ್‍ಗೆ ಕೇವಲ 4000/- ರೂಪಾಯಿಗಳಿಗೆ ಮಾರಾಟ ಮಾಡುತ್ತಾರೆ. ದಕ್ಷಿಣದ ಮೂರು ರಾಜ್ಯಗಳ ಶೇಂಗಾ ಬೆಳೆಗಾರ ರೈತರು ತಮ್ಮ ಬೆಳೆಯನ್ನು ಸರ್ಕಾರದ ಕನಿಷ್ಟ ಬೆಂಬಲ ಬೆಲೆಗೆ ಮಾರಾಟ ಮಾಡುವುದು ಸಾಧ್ಯವಾಗುವುದೇ ಇಲ್ಲ. ಕಾರಣ ಖರೀದಿಸುವ ಅವಧಿ ಚಿಕ್ಕದಾಗಿದ್ದು, ಆ ಅವಧಿಯಲ್ಲಿ ರೈತರು ಸರ್ಕಾರದ ಕನಿಷ್ಟ ಬೆಂಬಲ ಬೆಲೆ 4,450/- ರೂಪಾಯಿಗಳಿಗೆ ತಮ್ಮ ಶೇಂಗಾ ಬೆಳೆಯನ್ನು ಅಲ್ಲಿ ಮಾರದೆ, ಮುಕ್ತ ಮಾರುಕಟ್ಟೆಯಲ್ಲಿ 3,600/- ರೂಪಾಯಿಗಳಿಂದ 3,700/- ರೂಪಾಯಿಗಳಿಗೆ ಮಾರಾಟ ಮಾಡುತ್ತಾರೆ. ಒಳ್ಳೆಯ ಹತ್ತಿ ಉತ್ತಮ ಬೆಲೆಗೆ ಮಾರಾಟವಾದರೆ, ಮಳೆಗೆ, ರೋಗರುಜಿನೆಗಳಿಗೆ ಸಿಕ್ಕು ಹಾಳಾದ ಹತ್ತಿ ಕನಿಷ್ಟ ದರಕ್ಕೆ ಮಾರಾಟವಾಗುತ್ತದೆ. ಇದರಿಂದಾಗಿ ಒಂದು ವರ್ಷದಲ್ಲಿ ರೈತರು 14,474/- ಕೋಟಿಗಳಷ್ಟು ಆದಾಯವನ್ನು ಕಳೆದುಕೊಳ್ಳುತ್ತಿದ್ದಾರೆ. ಇದು ಕೇವಲ ಲಾಸ್ ಅಲ್ಲ, ಅವರ ಆದಾಯವನ್ನು ಲೂಟಿ ಮಾಡಲಾಗುತ್ತದೆ.

ನಮ್ಮ ಈ ತಿರುಗಾಟದಲ್ಲಿ ನಾವು ಸರ್ಕಾರದ ಖರೀದಿ ಕೇಂದ್ರಗಳ ವ್ಯವಹಾರಗಳನ್ನೂ ಗಮನಿಸಿದೆವು. ಸರ್ಕಾರದ ಖರೀದಿ ಕೇಂದ್ರಗಳಲ್ಲಿ ಬೆಳೆಗಳನ್ನು ಮಾರಾಟ ಮಾಡುವುದೆಂದರೆ ಅನೇಕ ಅಡೆತಡೆಗಳನ್ನು ಜೋಡಿಸಿರುವ ದಾರಿಯಲ್ಲಿ ರೈತರು ಓಡಿದಂತೆ. ರೈತರು ಸರ್ಕಾರದ ಖರೀದಿ ಕೇಂದ್ರಗಳಲ್ಲಿ ಕನಿಷ್ಟ ಬೆಂಬಲ ಬೆಲೆಗೆ ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಾಗದೇ ಇರುವಂತಹ ಎಲ್ಲ ಅಡತಡೆಗಳನ್ನು ಸೃಷ್ಟಿ ಮಾಡಿಟ್ಟಿದೆ. ಹಲವು ರೈತರು ಮಧ್ಯವರ್ತಿಗಳ ಹಾವಳಿಯ ಕುರಿತು ನಮಗೆ ಹೇಳಿದರು. ಮಧ್ಯವರ್ತಿಗಳು ಮೊದಲು ಅತ್ಯಂತ ಕಡಿಮೆ ಬೆಲೆಗೆ, ಅದರಲ್ಲೂ ಸರ್ಕಾರದ ಕನಿಷ್ಟ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ರೈತರ ಬೆಳೆಗಳನ್ನು ಖರೀದಿಸಿ, ನಂತರ ಸರ್ಕಾರದ ಕನಿಷ್ಟ ಬೆಂಬಲ ಬೆಲೆಗೆ ತಾವು ಖರೀದಿಸಿದ ಬೆಳೆಗಳನ್ನು ಮಾರಾಟ ಮಾಡುತ್ತಾರೆ. ಇದೆಲ್ಲಕ್ಕಿಂತ ಹೆಚ್ಚಾಗಿ ಸರ್ಕಾರ ಒಬ್ಬ ರೈತನ ಮಾರಾಟಕ್ಕೆ ಇಂತಿಷ್ಟು ಗರಿಷ್ಟ ಹಣದ ಮಿತಿಯನ್ನು ವಿಧಿಸಿದೆ.

ಸರ್ಕಾರದ ಖರೀದಿ ಕೇಂದ್ರಗಳಲ್ಲಿ ಅಧಿಕಾರಿಗಳು ಕೇಳುವ ದಾಖಲೆಗಳ ಕುರಿತು ರೈತರು ತಮ್ಮ ಗೋಳು ಹೇಳಿಕೊಂಡರು. ಖರೀದಿ ಕೇಂದ್ರದಲ್ಲಿ, ಅಧಿಕಾರಿಗಳು ರೈತರಿಗೆ ತಮ್ಮ ಆಧಾರ ಕಾರ್ಡ, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ, ಭೂಮಿ ಒಡೆತನದ ಪತ್ರ ಮತ್ತು ಕೃಷಿ ಅಧಿಕಾರಿಗಳ ದೃಢೀಕರಣ ಪತ್ರಗಳನ್ನು ಸಲ್ಲಿಸಲು ಹೇಳುತ್ತಾರೆ. ಈ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂಬ ಕ್ರಮದ ಹಿಂದೆ ಸಣ್ಣ ರೈತರನ್ನು ಹೊರಗಿಡುವ ಹುನ್ನಾರು ಇದೆ. ಈ ದಾಖಲೆಗಳನ್ನು ಹೊಂದಿಸಿಕೊಂಡು ಬಂದ ರೈತ ಖರೀದಿ ಕೇಂದ್ರದಲ್ಲಿ ತನ್ನ ಬೆಳೆಗಳನ್ನು ಮಾರಾಟ ಮಾಡಿದನೆಂದರೆ, ಅವನಿಗೆ ಹಣ ಬರುವುದು ಮೂರೋ ನಾಲ್ಕೋ ತಿಂಗಳಾಗುತ್ತದೆ. ಮತ್ತು ಆ ಹಣ ನೇರ ರೈತನ ಬ್ಯಾಂಕ್ ಅಕೌಂಟ್‍ಗೆ ಹೋದಾಗ ಬ್ಯಾಂಕ್‍ನವರು ಆ ಹಣವನ್ನು ರೈತನ ಸಾಲಗಳಿಗೆ ಮುರಿದುಕೊಳ್ಳುತ್ತಾರೆ. ಈ ಎಲ್ಲ ಕಾರಣಗಳಿಗಾಗಿ ರೈತರು ತಮ್ಮ ಬೆಳೆಗಳನ್ನು ಖಾಸಗಿ ವ್ಯಾಪಾರಿಗಳಿಗೆ, ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ.

ರೈತರನ್ನು ಕುರಿತ ಪ್ರಧಾನಿಯವರ `ಮನ್ ಕಿ ಬಾತ್‍ನ್ನು’ ನಾನು ಕೇಳಿದ್ದೇನೆ. ಪ್ರಧಾನಿಗಳಿಗೆ ನಾನು ಒಂದು ಸವಾಲು ಒಡ್ಡುತ್ತಿದ್ದೇನೆ. ಪ್ರಧಾನ ಮಂತ್ರಿಗಳೆ, ದೇಶದ ಯಾವುದಾದರೊಂದು ಖರೀದಿ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಿ, ನೀವು ಇಷ್ಟಪಡುವ ಯಾವುದಾದರೊಂದು ಹಿಂಗಾರಿನ ಬೆಳೆಯನ್ನು ಆಯ್ದುಕೊಳ್ಳಿ. ಯಾರಾದರು ಒಬ್ಬ ರೈತ ಆ ಖರೀದಿ ಕೇಂದ್ರಕ್ಕೆ ಬಂದು ಸರ್ಕಾರ ಘೋಷಿಸಿದ ಕನಿಷ್ಟ ಬೆಂಬಲ ಬೆಲೆಗೆ ತನ್ನ ಬೆಳೆಗಳನ್ನು ಮಾರಾಟ ಮಾಡಿದನೇ ಎಂದು ನನಗೆ ತೋರಿಸಿ. ನೀವು ಹಾಗೆ ಮಾಡಿದರೆ ನಾನು ನಿಮಗೆ ಸೆಲ್ಯೂಟ್ ಮಾಡುವೆ. ಜೊತೆಗೆ ರೈತರಿಗೆಲ್ಲ ಹೇಳಿ ಮತ ಹಾಕಿಸಿ ಮತ್ತೆ ನೀವು ಅಧಿಕಾರಕ್ಕೆ ಬರುವಂತೆ ಮಾಡಲು ಪ್ರಯತ್ನಿಸುವೆ. ನೀವು ನನ್ನ ಈ ಸವಾಲನ್ನು ಸ್ವೀಕರಿಸದೇ ಇದ್ದರೆ, ಈಗ ಸಮಯ ಬಂದಿದೆ, ದಯವಿಟ್ಟು ರೈತರ `ಮನ್ ಕಿ ಬಾತ್’ ನ್ನು ನೀವೂ ಕೇಳಲೇಬೇಕು.

ಅನುವಾದ: ಎ.ಎಸ್.ಪ್ರಭಾಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...