Homeಮುಖಪುಟಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

- Advertisement -
- Advertisement -

ಅಧಿಕಾರಕ್ಕೆ ಬಂದ ದಿನದಿಂದಲೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ವಿರುದ್ಧ ಮಾತನಾಡುವ ಎಲ್ಲರ ಧ್ವನಿಯನ್ನು ಅಡಗಿಸಲು ಯತ್ನಿಸುತ್ತಿದೆ ಎಂಬ ಆರೋಪವಿದೆ. ಸರ್ಕಾರದ ಹಲವಾರು ನೀತಿಗಳಿಗೆ ಅಷ್ಟೇ ಪ್ರಮಾಣದಲ್ಲಿ ಪ್ರತಿರೋಧಗಳು ವ್ಯಕ್ತವಾಗುತ್ತಲೇ ಇವೆ. ಹೋರಾಟಗಾರರು, ವಿಜ್ಞಾನಿಗಳು, ವಿಧ್ವಾಂಸರು, ಸಾಹಿತಿಗಳು, ಕಲಾವಿದರು, ನ್ಯಾಯವಾದಿಗಳು ಹೀಗೆ ಸರ್ಕಾರದ ವಿರುದ್ಧ ಮಾತನಾಡುವವರ ಮೇಲೆ UAPA, NSA ಮುಂತಾದ ಕಾನೂನುಗಳನ್ನು ಪ್ರಯೋಗಿಸುತ್ತಿದೆ. ಕೇಂದ್ರ ಸರ್ಕಾರದ ಕೆಂಗಣ್ಣು ಈಗ ಚಿತ್ರರಂಗದ ಮೇಲೆ ಬಿದ್ದಿದೆ. ಸರ್ಕಾರದ ನೀತಿ ನಿಯಮಗಳನ್ನು ಟೀಕಿಸುವ ಚಿತ್ರಗಳು ಹೆಚ್ಚುತ್ತಿರುವುದರಿಂದ ಹೆದರಿರುವ ಸರ್ಕಾರ, ಚಿತ್ರ ಬಿಡುಗಡೆಯ ಮೇಲೆಯೇ ತನ್ನ ನಿಯಂತ್ರಣ ಸಾಧಿಸಲು ಮುಂದಾಗಿದೆ. ಈ ಪ್ರಯತ್ನದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಡೆಗಣಿಸಿ ಹೊಸ ಕಾನೂನನ್ನು ಜಾರಿಗೆ ತರಲು ಮುಂದಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಸಿನೆಮಾಟೊಗ್ರಾಫರ್ಸ್‌ ಅಮೆಂಡ್‌ಮೆಂಟ್ ಬಿಲ್ 2021ಕ್ಕೆ ದೇಶಾದ್ಯಂತ ಚಿತ್ರತಾರೆಯರಿಂದ ವಿರೋಧ ವ್ಯಕ್ತವಾಗಿದೆ. ಭಾರತ ಚಿತ್ರರಂಗದ ಹಿರಿಯ ನಟ ಕಮಲ್ ಹಾಸನ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಎರಡು ತಿಂಗಳ ಹಿಂದೆ ಕೇಂದ್ರ ಸರ್ಕಾರ ಫಿಲ್ಮ್‌ ಸರ್ಟಿಫಿಕೇಟ್ ಅಪಿಲೇಟ್ ಟ್ರಿಬುನಲ್ ಅನ್ನು ವಜಾಗೊಳಿಸಿ ಆದೇಶ ನೀಡಿತ್ತು. ಸೆನ್ಸಾರ್ ಬೋರ್ಡ್‌ ತೀರ್ಮಾನಗಳು ಮತ್ತು ದೃಶ್ಯಗಳನ್ನು ಸಿನೆಮಾದಿಂದ ಕತ್ತರಿಸಿದ ಸಂದರ್ಭದಲ್ಲಿ ಚಿತ್ರ ನಿರ್ಮಾಪಕರಿಗೆ ಮೇಲ್ಮನವಿಯನ್ನು ಸಲ್ಲಿಸಲು ಇದ್ದ ನ್ಯಾಯಮಂಡಳಿ ಇದಾಗಿತ್ತು. ಕೇಂದ್ರ ಸರ್ಕಾರ ನ್ಯಾಯಮಂಡಳಿಯನ್ನೇ ವಜಾ ಮಾಡಿ ಸೆನ್ಸಾರ್ ಬೋರ್ಡ್‌ ತೀರ್ಮಾನಗಳ ವಿರುದ್ಧ ಪ್ರಶ್ನಿಸಲು ಅವಕಾಶಗಳೇ ಇಲ್ಲದಂತೆ ಮಾಡಿತ್ತು. ಆ ಮೂಲಕ ಚಿತ್ರ ನಿರ್ಮಾಪಕರು ಪದೇ ಪದೇ ಹೈ ಕೋರ್ಟ್ ಮೆಟ್ಟಿಲೇರುವ ಸಂದರ್ಭವನ್ನು ಕೇಂದ್ರ ಸರ್ಕಾರ ನಿರ್ಮಾಣ ಮಾಡಿದೆ.

“ಕೇಂದ್ರ ಸರ್ಕಾರ ಸಿನೆಮಾ, ಮಾಧ್ಯಮ, ಮತ್ತು ಸಾಹಿತ್ಯ ವಲಯದಿಂದ ಪ್ರತಿರೋಧವನ್ನು ಎದುರಿಸುತ್ತಿದೆ. ಸರ್ಕಾರಕ್ಕೆ ಪ್ರತಿರೋಧವನ್ನು ಎದುರಿಸಲು ಸಾಧ್ಯವಾಗದೇ ಇಂತಹ ಕ್ರಮ ಕೈಗೊಂಡಿದೆ. ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಯತ್ನ ಇದಾಗಿದ್ದು, ಇದನ್ನು ಗಮನಿಸುವ, ಕೇಳಿಸಿಕೊಳ್ಳುವ ಮತ್ತು ಧ್ವನಿ ಎತ್ತುವ ಮೂಲಕ ಮಾತ್ರ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯ” ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಲನಚಿತ್ರಗಳು ಮತ್ತು ಸೆನ್ಸಾರ್ ಬೋರ್ಡ್‌ನಿಂದ ಪ್ರಮಾಣಪತ್ರವನ್ನು ಪಡೆದಿರುವ ಚಿತ್ರಗಳನ್ನು ಮತ್ತೆ ಸೆನ್ಸಾರ್‌ಗೆ ಒಳಪಡಿಸುವ ಅವಕಾಶವನ್ನು ಹೊಸ ಕಾನೂನಿನಲ್ಲಿ ನೀಡಿರುವುದು ಚಿತ್ರರಂಗದ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ  ಎಂದು ಅವರು ಟ್ವೀಟ್ ಮಾಡಿದ್ದಾರೆ.

ಚಿತ್ರರಂಗದ ಎಲ್ಲರೂ ಕೇಂದ್ರ ಸರ್ಕಾರದ ಉದ್ಧೇಶಿತ ಪ್ರಯತ್ನದ ವಿರುದ್ಧ ಧ್ವನಿ ಎತ್ತಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ.

ಕೇಂದ್ರದ ಕೈಗೆ ಚಿತ್ರರಂಗದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಯಂತ್ರಿಸುವ ಅಂಕುಶ ನೀಡುವ ತಿದ್ದುಪಡಿ ಮಸೂದೆ 

ಹೊಸ ತಿದ್ದುಪಡಿ ಮಸೂದೆಯು ಸೆನ್ಸಾರ್ ಬೋರ್ಡ್‌ ಪ್ರಮಾಣಪತ್ರದ ನಂತರವೂ ಚಿತ್ರ ಬಿಡುಗಡೆಯನ್ನು ತಡೆಯುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಸಿನೆಮಾಟೊಗ್ರಾಫ್ ತಿದ್ದುಪಡಿ ಮಸೂದೆ  2021 ರ ಸೆಕ್ಷನ್ 5B(1)  ಪ್ರಖಾರ ರಾಷ್ಟ್ರೀಯ ಭದ್ರತೆ, ಸಮಾಜದ ಶಾಂತಿ, ಮತ್ತು ಮಿತ್ರ ದೇಶಗಳ ನಡುವಿನ ಸಂಬಂಧಗಳ ಕಾರಣಕ್ಕಾಗಿ ಚಿತ್ರ ಬಿಡುಗಡೆಯನ್ನು ತಡೆಯುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ನೀಡುತ್ತದೆ.

ಈಗಾಗಲೇ ಸೆನ್ಸಾರ್ ಬೋರ್ಡ್‌ನಿಂದ ಪ್ರಮಾಣಪತ್ರವನ್ನು ಪಡೆದಿರುವ ಚಲನಚಿತ್ರಗಳನ್ನು ಮತ್ತೊಮ್ಮೆ ಸೆನ್ಸಾರ್ ಮಾಡುವ ಅವಕಾಶ ಕೇಂದ್ರ ಸಾರ್ಕಾರಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್ 2000 ದಲ್ಲಿ ಆದೇಶಿಸಿತ್ತು. ಅದರಲ್ಲಿ ಸುಪ್ರೀಂ ಕೋರ್ಟ್ CBFC ತೀರ್ಮಾನವೇ ಅಂತಿಮ. ಸೆನ್ಸಾರ್ ಬೋರ್ಡ್‌ ತೀರ್ಮಾನವನ್ನು ನಿರಾಕರಿಸುವ ಅಥವಾ ಪುನರ್ ವಿಮರ್ಶಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವೆಂದು ಆದೇಶ ನೀಡಿತ್ತು. ಆದರೆ ಹೊಸ ತಿದ್ದುಪಡಿ ಮಸೂದೆಯು ಸೆನ್ಸಾರ್ ಬೋರ್ಡ್ ತೀರ್ಮಾನವನ್ನು ಅಸಿಂಧುಗೊಳಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಒಂದು ವೇಳೆ ಹೊಸ ಮಸೂದೆ ಜಾರಿಗೆ ಬಂದರೆ ಕೇಂದ್ರ ಯಾವುದೇ ಕಾರಣವನ್ನೂ ನೀಡದೆ ಚಿತ್ರ ಬಿಡುಗಡೆಯನ್ನು ತಡೆಯಬಹುದಾಗಿದೆ.

ಪ್ರಸ್ತಾವಿತ ಸಿನೆಮಾಟೋಗ್ರಾಫರ್ಸ್‌ ಅಮೆಂಡ್‌ಮೆಂಟ್‌ ಬಿಲ್‌ 2021 ತಿದ್ದುಪಡಿ ಕಾನೂನಿಗೆ ದೇಶದ ಅನೇಕ ಹಿರಿಯ ಚಿತ್ರ ನಿರ್ದೇಶಕರು ಮತ್ತು ಸಿನೆಮಾ ಕಲಾವಿದರು ವಿರೋಧ ವ್ಯಕ್ತಪಡಿಸಿದ್ದಾರೆ. ಫರ್ಹಾನ್‌ ಅಖ್ತರ್, ಶಬಾನಾ ಆಜ್ಮಿ, ಹಂಸಲ್ ಮೆಹ್ತಾ, ಅನುರಾಗ್ ಕಶ್ಯಪ್, ಜೋಯಾ ಅಖ್ತರ್ ಸೇರಿದಂತೆ ಚಿತ್ರ ಕಲಾವಿದರು, ಬಹರಗಾರರು ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಹೊಸ ಕಾನೂನು ತಿದ್ದುಪಡಿ ಕೇಂದ್ರ ಸರ್ಕಾರಕ್ಕೆ ಚಿತ್ರರಂಗದ ಮೇಲೆ ಸಂಪೂರ್ಣ ನಿಯಂತ್ರಣವನ್ನು ನೀಡುತ್ತದೆ. ಚಿತ್ರರಂಗಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅವಕಾಶವೇ ಇಲ್ಲದಂತಾಗುತ್ತದೆ ಎಂದು ಕೆಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್‌, ಫೇಸ್‌ಬುಕ್‌ನಲ್ಲಿ ದೊಡ್ಡ ಅಭಿಯಾನ ಆರಂಭವಾಗಿದ್ದು ಸಾವಿರಾರು ಜನರು ಸರ್ಕಾರದ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಜೂನ್ 18 ರಂದು ಪ್ರಸ್ತಾವಿತ ತಿದ್ದುಪಡಿ ಮಸೂದೆಯನ್ನು ಇಲಾಖೆಯ ವೆಬಸೈಟ್‌ಲ್ಲಿ ಪ್ರಕಟಿಸಿದ್ದು, ಸಾರ್ವಜನಿಕರ ಆಕ್ಷೇಪ ಮತ್ತು ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಆಕ್ಷೇಪಗಳನ್ನು ವ್ಯಕ್ತಪಡಿಸಲು ಜುಲೈ 2 ಅಂತಿಮ ದಿನವಾಗಿದ್ದು ಸರ್ಕಾರದ ಉದ್ಧೇಶಿತ ಕಾನೂನಿಗೆ ಸಿನಿಮಾ ಸಮುದಾಯ ಭಾರೀ ವಿರೋಧ ವ್ಯಕ್ತಪಡಿಸಿದೆ.

ಸರ್ಕಾರದ ವಿರುದ್ಧದ ಅಭಿಪ್ರಾಯಗಳನ್ನು ಹತ್ತಿಕ್ಕುವ ಬಿಜೆಪಿಯ ಅಜೆಂಡಾದ ಭಾಗವಾಗಿ ಈ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಚಿತ್ರ ನಿರ್ದೇಶಕ ವೆಟ್ರಿಮಾರನ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಚಿತ್ರರಂಗಕ್ಕೆ ಯಾಕೆ ಹೆದರುತ್ತಿದೆ? ದೇಶದ ಪ್ರತಿಯೊಬ್ಬ ಪ್ರಜೆಗೂ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸುವ ಹಕ್ಕು ಇದೆ. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಕಾನೂನನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ನಮ್ಮ ದೇಶದಲ್ಲಿ ಸರ್ವಾಧಿಕಾರಿ ಆಡಳಿತ ವ್ಯವಸ್ಥೆಯಲ್ಲ. ಪ್ರಜಾಪ್ರಭುತ್ವ ಎಂದು ತಮಿಳಿನ ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಅಡುರ್ ಗೋಪಾಲಕೃಷ್ಣ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ, ಚಲನಚಿತ್ರ ಕಲೆಗೂ ಮಾರಕವಾದ ಕ್ರಮ ಇದು. ದೇಶದ ಸಂವಿಧಾನವು ನಮಗೆ ಕೊಟ್ಟಿರುವ ಸ್ವಾತಂತ್ರ್ಯದ ಹರಣ. ಸರಕಾರದ ಈ ಪ್ರಯತ್ನವನ್ನು ನಾವೆಲ್ಲರೂ ವಿರೋಧಿಸಬೇಕಿದೆ ಎಂದು ಕನ್ನಡದ ಹಿರಿಯ ರಂಗಭೂಮಿ ನಿರ್ದೇಶಕರಾದ ರಘುನಂದನರವರು ಕರೆ ನೀಡಿದ್ದಾರೆ.

  • ರಾಜೇಶ್ ಹೆಬ್ಬಾರ್

ಇದನ್ನೂ ಓದಿ : ಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...