Homeಅಂತರಾಷ್ಟ್ರೀಯಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

ಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

- Advertisement -
- Advertisement -

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತನ್ನ ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್ ಒಕ್ಕೂಟ ಮತ್ತು ಇತರ ದೇಶಗಳು ಮಾನ್ಯತೆ ಮಾಡುವಂತೆ ಕ್ರಮ ಜರುಗಿಸಲು ಸರ್ಕಾರವನ್ನು ಕೋರಿದೆ.

ಈಗಿನ ಅಮಾನ್ಯತೆಯು ವಿದ್ಯಾರ್ಥಿಗಳು ಮತ್ತು ಬ್ಯುಸಿನೆಸ್‍ ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತದೆ ಮತ್ತು ತೀವ್ರ ಅಡ್ಡಿ ಉಂಟು ಮಾಡುತ್ತದೆ. ಕೋವಿಶೀಲ್ಡ್ ಪಡೆದವರಿಗೆ ಅಲ್ಲಿ ಪ್ರಯಾಣಕ್ಕೆ ಅಥವಾ ವಾಸ್ತವ್ಯಕ್ಕೆ ಅನುಮತಿ ಇಲ್ಲ. ಇದು ಭಾರತದ ಜೊತೆಗೇ ಜಾಗತಿಕ ಆರ್ಥಿಕತೆಗೆ ಹೊಡೆತ ನೀಡುತ್ತದೆ ಎಂದು ಸೀರಂ ಸಿಇಒ ಅದಾರ್ ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಯುರೋಪಿಯನ್‍ ಒಕ್ಕೂಟದಲ್ಲಿ ಕೇವಲ ನಾಲ್ಕು ಲಸಿಕೆಗಳು ಮಾನ್ಯತೆ ಪಡೆದಿವೆ. ಫಿಜರ್ ಬಯೋಟೆಕ್‌ನ ಲಸಿಕೆ, ಮಾಡೆರ್ನಾ ಲಸಿಕೆ, ಅಸ್ಟ್ರಾಜಯೋನಿಕ್‍-ಆಕ್ಸ್‌ಫರ್ಡ್‍ನ Vaxzervria ಮತ್ತು ಜಾನ್‍ಸನ್‍ & ಜಾನ್‍ಸನ್‍ ಕಂಪನಿಯ ಜಾನ್‍ಸೀನ್‍ ಲಸಿಕೆಗಳಿಗೆ ಮಾತ್ರ ಅಲ್ಲಿ ಮಾನ್ಯತೆ ಇದೆ. ಈ ಲಸಿಕೆಗಳನ್ನು ಪಡೆದವರಿಗೆ ಮಾತ್ರ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗಳನ್ನು ನೀಡಲಾಗುವುದು ಮತ್ತು ಸಾಂಕ್ರಾಮಿಕ ಸಮಯದಲ್ಲಿ ಯುರೋಪಿಯನ್‍ ಒಕ್ಕೂಟದ ಒಳಗೆ ಪ್ರಯಾಣಿಸಲು ಅನುಮತಿಸಲಾಗುವುದು.

“ಭಾರತವು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಕೋವಿಶೀಲ್ಡ್ ಅನ್ನು ಯುರೋಪಿಯನ್‍ ಒಕ್ಕೂಟ ಕೋವಿಡ್ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗೆ ಸೇರಿಸದಿರುವುದು ಕೋವಿಶೀಲ್ಡ್ ಲಸಿಕೆ ಪಡೆದ ಜನರಿಗೆ ಯುರೋಪಿಯನ್ ದೇಶಗಳಿಗೆ ಪ್ರಯಾಣಿಸಲು ಅವಕಾಶ ನೀಡುವುದಿಲ್ಲ. ಇದು ವಿದ್ಯಾರ್ಥಿಗಳು ಮತ್ತು ಉದ್ಯಮಿಗಳ ಪ್ರಯಾಣ ಮತ್ತು ವಾಸ್ತವ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನಮ್ಮ ಆರ್ಥಿಕತೆಗೆ ತೀವ್ರ ಅಡ್ಡಿ ಉಂಟು ಮಾಡುತ್ತದೆ ಮತ್ತು ಜಾಗತಿಕ ಆರ್ಥಿಕತೆಯ ಮೇಲೂ ಇದರ ಪರಿಣಾಮ ಆಗುತ್ತದೆ  ಎಂದು ಎಸ್‌ಐಐನ ಸಿಇಒ ಅದಾರ್  ಪೂನಾವಾಲಾ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳನ್ನು ಆಧರಿಸಿ ಟೆಲೆಗ್ರಾಫ್‍ ಇಂಡಿಯಾ ವರದಿ ಮಾಡಿದೆ.

ಕೋವಿಶೀಲ್ಡ್ ತೆಗೆದುಕೊಂಡ ಬಹಳಷ್ಟು ಭಾರತೀಯರು ಯುರೋಪಿಯನ್‍ ದೇಶಗಳಿಗೆ ಪ್ರಯಾಣಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಾನು ಅರಿತುಕೊಂಡಿದ್ದೇನೆ, ಎಲ್ಲರಿಗೂ ನಾನು ಭರವಸೆ ನೀಡುತ್ತೇನೆ, ನಾನು ಇದನ್ನು ಉನ್ನತ ಮಟ್ಟದಲ್ಲಿ ಚರ್ಚಿಸುತ್ತಿದ್ದೇನೆ. ವಿವಿಧ ದೇಶಗಳ ಔಷಧ ನಿಯಂತ್ರಕರು ಮತ್ತು ರಾಜತಾಂತ್ರಿಕ ಅಧಿಕಾರಿಗಳ ಜೊತೆ ಮಾತನಾಡಿ, ಶೀಘ್ರದಲ್ಲೇ ಈ ವಿಷಯವನ್ನು ಭಾರತ ಸರ್ಕಾರ ಪರಿಹರಿಸುತ್ತದೆ ಎಂದು ಆಶಿಸುತ್ತೇನೆ ಎಂದು ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಎಸ್‌ಐಐನ ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಪೂನಾವಾಲಾ ಅವರ ಪತ್ರವನ್ನು ಉಲ್ಲೇಖಿಸಿ, ಸಚಿವ ಜೈಶಂಕರ್ ಅವರ ಹಸ್ತಕ್ಷೇಪವನ್ನು ಕೋರಿದ್ದಾರೆ. “ಇದು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಹಿತದೃಷ್ಟಿಯಿಂದ ಕೂಡಿದೆ. ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್‍ ಒಕ್ಕೂಟದ ದೇಶಗಳು ಮತ್ತು ಇತರ ದೇಶಗಳು ಮಾನ್ಯ ಮಾಡುವಂತೆ ವ್ಯವಸ್ಥ ಮಾಡಬೇಕು ಎಂದು ಕೇಳಿದ್ದಾರೆ.

ಭಾರತದಲ್ಲಿ ಈಗಾಗಲೇ ಸುಮಾರು 30 ಕೋಟಿ ಜನರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ ಎಂದು ಪೂನಾವಾಲಾ ಅವರು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದ. ಅಂತಿಮವಾಗಿ ಕೋವಿಶೀಲ್ಡ್ ಲಸಿಕೆಯೊಂದಿಗೆ ಭಾರತೀಯ ಜನಸಂಖ್ಯೆಯ ಶೇಕಡಾ 50ಕ್ಕಿಂತ ಹೆಚ್ಚು ಜನರಿಗೆ ರಕ್ಷಣೆ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

‘ಆಕ್ಸ್‌ಫರ್ಢ್-ಅಸ್ಟ್ರಾಜೆನೆಕಾದಿಂದ ತಂತ್ರಜ್ಞಾನ ವರ್ಗಾವಣೆಯಡಿಯಲ್ಲಿ ಅಸ್ಟ್ರಾಜೆನೆಕಾ-ಎಸ್‌ಐಐ ಸಹಯೋಗದಲ್ಲಿ ಕೋವಿಶೀಲ್ಡ್ ಅನ್ನು ತಯಾರಿಸಲಾಗಿದೆ, ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ವಿದೇಶದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ ಮತ್ತು ತುರ್ತು ಬಳಕೆಯ ಅನುಮೋದನೆಗಾಗಿ ಎಂಹೆಚ್‌ಆರ್‌ಎ ಅನುಮೋದಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ; ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...