Homeಅಂತರಾಷ್ಟ್ರೀಯಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

ಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

- Advertisement -
- Advertisement -

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತನ್ನ ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್ ಒಕ್ಕೂಟ ಮತ್ತು ಇತರ ದೇಶಗಳು ಮಾನ್ಯತೆ ಮಾಡುವಂತೆ ಕ್ರಮ ಜರುಗಿಸಲು ಸರ್ಕಾರವನ್ನು ಕೋರಿದೆ.

ಈಗಿನ ಅಮಾನ್ಯತೆಯು ವಿದ್ಯಾರ್ಥಿಗಳು ಮತ್ತು ಬ್ಯುಸಿನೆಸ್‍ ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತದೆ ಮತ್ತು ತೀವ್ರ ಅಡ್ಡಿ ಉಂಟು ಮಾಡುತ್ತದೆ. ಕೋವಿಶೀಲ್ಡ್ ಪಡೆದವರಿಗೆ ಅಲ್ಲಿ ಪ್ರಯಾಣಕ್ಕೆ ಅಥವಾ ವಾಸ್ತವ್ಯಕ್ಕೆ ಅನುಮತಿ ಇಲ್ಲ. ಇದು ಭಾರತದ ಜೊತೆಗೇ ಜಾಗತಿಕ ಆರ್ಥಿಕತೆಗೆ ಹೊಡೆತ ನೀಡುತ್ತದೆ ಎಂದು ಸೀರಂ ಸಿಇಒ ಅದಾರ್ ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಯುರೋಪಿಯನ್‍ ಒಕ್ಕೂಟದಲ್ಲಿ ಕೇವಲ ನಾಲ್ಕು ಲಸಿಕೆಗಳು ಮಾನ್ಯತೆ ಪಡೆದಿವೆ. ಫಿಜರ್ ಬಯೋಟೆಕ್‌ನ ಲಸಿಕೆ, ಮಾಡೆರ್ನಾ ಲಸಿಕೆ, ಅಸ್ಟ್ರಾಜಯೋನಿಕ್‍-ಆಕ್ಸ್‌ಫರ್ಡ್‍ನ Vaxzervria ಮತ್ತು ಜಾನ್‍ಸನ್‍ & ಜಾನ್‍ಸನ್‍ ಕಂಪನಿಯ ಜಾನ್‍ಸೀನ್‍ ಲಸಿಕೆಗಳಿಗೆ ಮಾತ್ರ ಅಲ್ಲಿ ಮಾನ್ಯತೆ ಇದೆ. ಈ ಲಸಿಕೆಗಳನ್ನು ಪಡೆದವರಿಗೆ ಮಾತ್ರ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗಳನ್ನು ನೀಡಲಾಗುವುದು ಮತ್ತು ಸಾಂಕ್ರಾಮಿಕ ಸಮಯದಲ್ಲಿ ಯುರೋಪಿಯನ್‍ ಒಕ್ಕೂಟದ ಒಳಗೆ ಪ್ರಯಾಣಿಸಲು ಅನುಮತಿಸಲಾಗುವುದು.

“ಭಾರತವು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಕೋವಿಶೀಲ್ಡ್ ಅನ್ನು ಯುರೋಪಿಯನ್‍ ಒಕ್ಕೂಟ ಕೋವಿಡ್ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗೆ ಸೇರಿಸದಿರುವುದು ಕೋವಿಶೀಲ್ಡ್ ಲಸಿಕೆ ಪಡೆದ ಜನರಿಗೆ ಯುರೋಪಿಯನ್ ದೇಶಗಳಿಗೆ ಪ್ರಯಾಣಿಸಲು ಅವಕಾಶ ನೀಡುವುದಿಲ್ಲ. ಇದು ವಿದ್ಯಾರ್ಥಿಗಳು ಮತ್ತು ಉದ್ಯಮಿಗಳ ಪ್ರಯಾಣ ಮತ್ತು ವಾಸ್ತವ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನಮ್ಮ ಆರ್ಥಿಕತೆಗೆ ತೀವ್ರ ಅಡ್ಡಿ ಉಂಟು ಮಾಡುತ್ತದೆ ಮತ್ತು ಜಾಗತಿಕ ಆರ್ಥಿಕತೆಯ ಮೇಲೂ ಇದರ ಪರಿಣಾಮ ಆಗುತ್ತದೆ  ಎಂದು ಎಸ್‌ಐಐನ ಸಿಇಒ ಅದಾರ್  ಪೂನಾವಾಲಾ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳನ್ನು ಆಧರಿಸಿ ಟೆಲೆಗ್ರಾಫ್‍ ಇಂಡಿಯಾ ವರದಿ ಮಾಡಿದೆ.

ಕೋವಿಶೀಲ್ಡ್ ತೆಗೆದುಕೊಂಡ ಬಹಳಷ್ಟು ಭಾರತೀಯರು ಯುರೋಪಿಯನ್‍ ದೇಶಗಳಿಗೆ ಪ್ರಯಾಣಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಾನು ಅರಿತುಕೊಂಡಿದ್ದೇನೆ, ಎಲ್ಲರಿಗೂ ನಾನು ಭರವಸೆ ನೀಡುತ್ತೇನೆ, ನಾನು ಇದನ್ನು ಉನ್ನತ ಮಟ್ಟದಲ್ಲಿ ಚರ್ಚಿಸುತ್ತಿದ್ದೇನೆ. ವಿವಿಧ ದೇಶಗಳ ಔಷಧ ನಿಯಂತ್ರಕರು ಮತ್ತು ರಾಜತಾಂತ್ರಿಕ ಅಧಿಕಾರಿಗಳ ಜೊತೆ ಮಾತನಾಡಿ, ಶೀಘ್ರದಲ್ಲೇ ಈ ವಿಷಯವನ್ನು ಭಾರತ ಸರ್ಕಾರ ಪರಿಹರಿಸುತ್ತದೆ ಎಂದು ಆಶಿಸುತ್ತೇನೆ ಎಂದು ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಎಸ್‌ಐಐನ ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಪೂನಾವಾಲಾ ಅವರ ಪತ್ರವನ್ನು ಉಲ್ಲೇಖಿಸಿ, ಸಚಿವ ಜೈಶಂಕರ್ ಅವರ ಹಸ್ತಕ್ಷೇಪವನ್ನು ಕೋರಿದ್ದಾರೆ. “ಇದು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಹಿತದೃಷ್ಟಿಯಿಂದ ಕೂಡಿದೆ. ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್‍ ಒಕ್ಕೂಟದ ದೇಶಗಳು ಮತ್ತು ಇತರ ದೇಶಗಳು ಮಾನ್ಯ ಮಾಡುವಂತೆ ವ್ಯವಸ್ಥ ಮಾಡಬೇಕು ಎಂದು ಕೇಳಿದ್ದಾರೆ.

ಭಾರತದಲ್ಲಿ ಈಗಾಗಲೇ ಸುಮಾರು 30 ಕೋಟಿ ಜನರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ ಎಂದು ಪೂನಾವಾಲಾ ಅವರು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದ. ಅಂತಿಮವಾಗಿ ಕೋವಿಶೀಲ್ಡ್ ಲಸಿಕೆಯೊಂದಿಗೆ ಭಾರತೀಯ ಜನಸಂಖ್ಯೆಯ ಶೇಕಡಾ 50ಕ್ಕಿಂತ ಹೆಚ್ಚು ಜನರಿಗೆ ರಕ್ಷಣೆ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

‘ಆಕ್ಸ್‌ಫರ್ಢ್-ಅಸ್ಟ್ರಾಜೆನೆಕಾದಿಂದ ತಂತ್ರಜ್ಞಾನ ವರ್ಗಾವಣೆಯಡಿಯಲ್ಲಿ ಅಸ್ಟ್ರಾಜೆನೆಕಾ-ಎಸ್‌ಐಐ ಸಹಯೋಗದಲ್ಲಿ ಕೋವಿಶೀಲ್ಡ್ ಅನ್ನು ತಯಾರಿಸಲಾಗಿದೆ, ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ವಿದೇಶದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ ಮತ್ತು ತುರ್ತು ಬಳಕೆಯ ಅನುಮೋದನೆಗಾಗಿ ಎಂಹೆಚ್‌ಆರ್‌ಎ ಅನುಮೋದಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ; ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...