Homeಚಳವಳಿಹೊನ್ನಾವರ: ಖಾಸಗಿ ಬಂದರು ಯೋಜನೆಗಾಗಿ ಬಡ ಬೆಸ್ತರ ಬಲಿಗೆ ಹುನ್ನಾರ!

ಹೊನ್ನಾವರ: ಖಾಸಗಿ ಬಂದರು ಯೋಜನೆಗಾಗಿ ಬಡ ಬೆಸ್ತರ ಬಲಿಗೆ ಹುನ್ನಾರ!

ಕೃಷಿಕಾಯ್ದೆಗಳು ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸುವಂತೆಯೇ ಕಡಲು ಮತ್ತು ಬಂದರು ಖಾಸಗೀಕರಣ ಮೀನುಗಾರರ ಉದ್ಯೋಗ ಕಸಿದುಕೊಂಡು ನಿರ್ಗತಿಕರನ್ನಾಗಿಸುತ್ತದೆ.

- Advertisement -
- Advertisement -

ಉತ್ತರಕನ್ನಡದ ಕಡಲಂಚಿನ ಪಟ್ಟಣ ಹೊನ್ನಾವರಕ್ಕೆ ಹೊಂದಿಕೊಂಡೇ ಇರುವ ಕಾಸರಕೋಡು ಟೊಂಕದ ಬಡ ಬೆಸ್ತರನ್ನು ಕಳೆದೊಂದು ವರ್ಷದಿಂದ ಕಾಡುತ್ತಿರುವ ಬೃಹತ್ ಖಾಸಗಿ ಬಂದರು ಯೋಜನೆಯ ಹಿಂಸೆ ಈಗ ಪರಾಕಷ್ಠೆ ತಲುಪಿಬಿಟ್ಟಿದೆ! ಕಳೆದ ವಾರದ ಕರೊನಾ ವೀಕ್ಎಂಡ್ ಕರ್ಫ್ಯೂನಲ್ಲಿಯೇ 500ಕ್ಕೂ ಹೆಚ್ಚು ಪೊಲೀಸ್ ಬಲದಲ್ಲಿ ಅಸಾಯಕ ಮೀನುಗಾರರ ಒಕ್ಕಲೆಬ್ಬಸುವ ಬಲಾತ್ಕಾರವೂ ನಡೆದು ಹೋಗಿದೆ. ಪ್ರಭುತ್ವ ಮತ್ತು ಬಂಡವಾಳಶಾಹಿ ಜಂಟೀ ಕಾರ್ಯಾಚರಣೆಗೆ ತತ್ತರಿಸಿ ಹೋದ ಮೀನುಗಾರರ ತರುಣರು ಮಹಿಳೆಯರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ.

ತಮ್ಮ ತುತ್ತಿಗಾಧಾರವಾದ ಮೀನುಗಾರಿಕೆಗೆ ಸಂಚುಕಾರ ತರುವ ಈ ಖಾಸಗೀಕರಣ ಯೋಜನೆ ಬೇಡವೇ ಬೇಡವೆಂದು ಬಡ ಬೆಸ್ತರು ತಿಂಗಳಾನುಗಟ್ಟಲೆ ಉಪವಾಸ ಸತ್ಯಾಗ್ರಹ, ರ್ಯಾಲಿ, ಪ್ರತಿಭಟನೆ ನಡೆಸಿದ್ದರು. ಮೀನುಗಾರರ ಮನೆ, ಮೀನುಗಾರಿಕಾ ನೆಲೆ, ಬಲೆ-ಒಣ ಮೀನು ಇಡುವ ಶೆಡ್ ತೆರೆವಿಗೆ ಖಾಸಗಿ ಬಂದರು ಕಂಪನಿಯವರು ಜೆಸಿಬಿ, ಬುಲ್ಡೊಜರ್ ತಂದಾಗ ಅಡ್ಡ ಮಲಗಿ ಪ್ರತಿರೋಧಿಸಿದ್ದರು. ಆಳುವ ವರ್ಗದ ಬೆಂಬಲ ಪಡೆದಿದ್ದ ಈ ಕಂಪನಿ ಸಾಹುಕಾರರು ಬಲಾತ್ಕಾರ ನಡೆಸಿದಾಗ ಉಚ್ಛನ್ಯಾಯಲಯಕ್ಕೆ ತಕರಾರು ಸಲ್ಲಿಸಲಾಗಿತ್ತು. ಹೊನ್ನಾವರ ಪೋರ್ಟ್ ಪ್ರೈವೆಟ್ ಕಂಪನಿ ನಿರ್ಮಿಸುತ್ತಿರುವ ಖಾಸಗಿ ವಾಣಿಜ್ಯ ಬಂದರು ಯೋಜನೆ ಅನುಷ್ಠಾನ ವಿರುದ್ದದ ಸಾರ್ವಜನಿಕ ಹಿತಾಸಕ್ತಿ ದಾವೆ ವಿಚಾರಣೆಯಲ್ಲಿ ಹೈಕೋರ್ಟ್ ಅರಣ್ಯ ಸರ್ವೆ ನಂಬರ್ 233 ಮತ್ತು 237ರಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಎಚ್‌ಪಿಪಿಲಿಗೆ ಸೂಚನೆ ನೀಡಿತ್ತು.

ಆದರೆ ಎಚ್‌ಪಿಪಿಲಿ ಕಂಪನಿ ಹೈಕೋರ್ಟ್ ತಡೆಯಾಜ್ಞೆಗೂ ಕೇರ್ ಮಾಡದೆ ಕಳದೆ ಶನಿವಾರ ಜಿಲ್ಲಾಡಳಿತ, ತಾಲ್ಲೂಕಾಡಳಿತ ಸಹಕಾರದಿಂದ ಮೀನುಗಾರರ ಶೆಡ್, ಮನೆ, ಮರ ನೆಲಕ್ಕುರುಳಿಸಲು ಹವಣಿಸಿದೆ. ಮೀನುಗಾರ ಮಹಿಳೆಯರು ಪ್ರತಿಭಟಿಸುವ ಅಂದಾಜಿದ್ದ ಪ್ರಭುತ್ವ ಮತ್ತು ಕಂಪನಿ ಬೆಳಗಾವಿಯಿಂದ 500ರಷ್ಟು ಪೊಲೀಸ್‌ ಪಡೆಯನ್ನು ತರಿಸಿತ್ತು. ಒಂದೆರಡು ಮನೆ, ಶೆಡ್‌, ಮರ ಉರುಳಿಸುತ್ತಿದ್ದಂತೆ ಒಂದೇ ಸಮನೆ ಜಮೆಯಾದ ಮೀನುಗಾರರು ತೆರವಿಗೆ ಅವಕಾಶ ಕೊಡದೆ ಪ್ರತಿಭಟಿಸಿದರು. ತಮ್ಮ ತಲತಲಾಂತರದ ಕಸುಬಿಗೆ ಆಧಾರವಾದ ನೆಲೆ ಧ್ವಂಸ ಮಾಡದಂತೆ ಮಹಿಳೆಯರು ಕಣ್ಣೀರು ಸುರಿಸಿದರು. ಬೆಸ್ತರ ಯುವಕರು ಸಮುದ್ರಕ್ಕೆ ಹಾರಲು ಓಡಿದರು. ಅಧಿಕಾರಿಗಳು ದಾರಿ ಕಾಣದೆ ತೆರವಿನ ಕಾರ್ಯ ಸ್ಥಗಿತಗೊಳಿಸಬೇಕಾಗಿ ಬಂತು.

ಸದ್ಯಕ್ಕೆ ಒಕ್ಕಲೆಬ್ಬಿಸುವ ಕಾರ್ಯಚರಣೆ ನಿಂತಿದೆಯಾದರೂ ಬೆಸ್ತರ ತಲೆ ಮೇಲೆ ಕತ್ತಿ ತೂಗುತ್ತಲೇ ಇದೆ. ಮೀನುಗಾರರ ಮನೆ ಶೆಡ್ ತೆಗೆಯುವುದಿಲ್ಲ, ಅವರ ಮೀನುಗಾರಿಕಾ ಬಂದರಿಗೆ ತೊಂದರೆ ಕೊಡುವುದಿಲ್ಲ ಎಂದು ಆಡಳಿತಗಾರರು ಹೇಳುತ್ತಾರೆ. ಆದರೆ ಖಾಸಗಿ ಬಂದರು ನೀಲಿ ನಕ್ಷೆ ನೋಡಿದರೆ ಬಂದರು ಕಂಪನಿಯವರ ಧಾವಂತ ಗಮನಿಸಿದರೆ ಬಂದರು ಮತ್ತು ಅದಕ್ಕೆ ಬೇಕಾದ ಚತುಷ್ಪಥ ರಸ್ತೆಗೆ ಸಾವಿರಾರು ಎಕರೆ ಭೂಮಿ ಬೇಕೆಂಬುದು ಖಾತ್ರಿಯಾಗುತ್ತದೆ. ಆಗ ಈ ಭಾಗದಲ್ಲಿರುವ 600 ಮೀನುಗಾರ ಕುಟುಂಬದ ಕೇರಿಗೆ ಕೇರಿಯೇ ಆಹುತಿಯಾಗಲಿದೆ.

ಒಂದೇ ಸಾಲಿಸಲ್ಲಿರುವ ಬೆಸ್ತರ ಮನೆ ತೆರವು ಮಾಡದೇ ಚತುಷ್ಪಥ ರಸ್ತೆ ನಿರ್ಮಾಣ ಸಾಧ್ಯವಿಲ್ಲ. ನಿಧಾನಕ್ಕೆ ಕಾಸರಕೋಡು ಟೊಂಕದ ಮೀನುಗಾರರ ಬದುಕಿಗಾಧಾರವಾದ ನೆಲೆಯೇ ಬಂದರು ಸ್ವಾಹ ಮಾಡುತ್ತದೆ ಎಂಬ ಆತಂಕ ಸಹಜವಾಗೇ ಮೂಡಿದೆ. ಆಗ ಪಾವಿನಕುರ್ವ, ಕರ್ಕಿಕೋಡಿ, ರಮಟೆಹಿತ್ತಲು, ಮುಲ್ಲಕುರ್ವಾ… ಮುಂತಾದ ಪ್ರದೇಶವೂ ಬೃಹತ್ ಬಂದರು ವ್ಯಾಪ್ತಿಗೆ ಸೇರುತ್ತದೆ. ಶರಾವತಿ ನದಿ ಮತ್ತು ಅರಬ್ಬೀ ಸಮುದ್ರದ ಸಂಗಮ ಕಾಸರಕೋಡು ಟೊಂಕದಲ್ಲಿ 600 ಕೋಟಿ ರೂಪಾಯಿ ಬಜೆಟ್‌ನ ಬಂದರು ಕಟ್ಟಲು ಹೊನ್ನಾವರ ಪೋರ್ಟ್ ಪ್ರೈವೆಟ್ ಕಂಪನಿ ಲಿಮಿಟೆಡ್(ಎಚ್‌ಪಿಪಿಲಿ)ಗೆ 2010ರಲ್ಲಿ ಗುತ್ತಿಗೆ ನೀಡಲಾಗಿದೆ. ಆದರೆ ಸರ್ಕಾರ 93 ಎಕರೆ ಜಾಗ ಮಂಜೂರು ಮಾಡಿರುವುದು ನಾರ್ತ್ ಕೆನಾರಾ ಸೀ ಪೋರ್ಟ್ ಪ್ರವೈಟ್ ಲಿಮಿಟೆಡ್ ಹೆಸರಿನ ಕಂಪನಿಗೆ.

ಇಲ್ಲೊಂದು ತಮಾಷೆಯಿದೆ ಈ ಎರಡೂ ಕಂಪನಿ ಹೆಸರಷ್ಟೇ ಬೇರೆ. ಶೇರುದಾರರು, ಒಡೆಯರು, ನಿರ್ದೇಶಕರು ಮಾತ್ರ ಅವರೇ. ಜಾಗ ಮಂಜೂರು ಮಾಡಿಸಿಕೊಂಡ ಎಸಿಸಿಪಿಪಿಲಿ ಕಂಪನಿ ಕಾಸರಕೋಡು ಟೊಂಕ ಮಲ್ಲುಕುರ್ವಾಕ್ಕೆ ಬಂದು ನೋಡಿದಾಗ ಈ ಜಾಗ ಸುಮಾರು 300 ಮೀನುಗಾರರಿಗೆ ಮನೆ ನಿರ್ಮಾಣಕ್ಕೆಂದು ಕೊಟ್ಟಿರುವುದು ತಿಳಿಯುತ್ತದೆ. ಜಾಗದ ಸರ್ವೆ ನಂಬರ್ ಕೂಡ ಬೋಗಸ್ ಆಗಿತ್ತು (ಸರ್ವೆ ನಂಬರ್ 9999) ಆ ಜಾಗದ ಸರ್ವೆ ಹೆಸರನ್ನೇ ಬದಲಿಸಿ ಎಚ್‌ಪಿಪಿಲಿ ಎಂದು ಬದಲಾಯಿಸಲಾಯಿತು. ಈ ಎಸಿಸಿಪಿಪಿಲಿ ಮತ್ತು ಎಚ್‌ಪಿಪಿಲಿ ಕಂಪನಿಗಳು ಆಂಧ್ರ ಮೂಲದ್ದು; ಸಿಕಂದರಾಬಾದ್, ಹೈದರಾಬಾದ್ ವಿಳಾಸದ ಕಂಪನಿಗಳ ಹಿಂದೆ ಆಂಧ್ರ ಅಧಿಕಾರಿಗಳ ಪ್ರಬಲ ಲಾಬಿಯಿದೆ ಎನ್ನಲಾಗಿದೆ. ಕರ್ನಾಟಕ ಆಯಕಟ್ಟಿನ ಇಲಾಖೆಗಳ ಮುಖ್ಯಸ್ಥರು ಆಂಧ್ರದವರಾಗಿರುವುದರಿಂದ ಈ ಬಂದರು ಕಂಪನಿ ತಮಗೆ ಬೇಕಾದಂತೆ ಕಾನೂನನ್ನು ಬಳಸಿಕೊಳ್ಳುತ್ತಿವೆ ಎಂಬ ಆರೋಪವಿದೆ.

ಎಚ್‌ಪಿಪಿಗೆ ಅನುಕೂಲವಾಗುವಂತೆ ಹೊನ್ನಾವರ ತಾಲ್ಲೂಕಿನ ಕರಾವಳಿ ಗಡಿಯನ್ನೆ ಬದಲಿಸಲಾಗಿದೆ! ಪಾವಿನಕುರ್ವಾ, ಮಲ್ಲುಕುರ್ವಾ, ಕರ್ಕಿ ಮತ್ತು ಕಾಸರಕೋಟು ಗ್ರಾಮದ ಗಡಿಯನ್ನು ಜಿಲ್ಲಾಡಳಿತ ಮತ್ತು ಸರ್ವೆ ಇಲಾಖೆ (ಎಡಿಎಲ್‌ಆರ್—ಕಚೇರಿ) ಬದಲಿಸಿದೆ. ಕಡಲಂಚಿನ ವಿಜ್ಞಾನಿಯೊಬ್ಬರು ಮತ್ತು ಮೀನುಗಾರರು ಈ ಅಕ್ರಮದ ಬಗ್ಗೆ ಸರ್ವೆ ಆಫ್ ಇಂಡಿಯಾಕ್ಕೆ ದೂರು ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ವೆ ಆಫ್ ಇಂಡಿಯಾದ ಅಧಿಕಾರಿಗಳು ಸಂಬಂಧಿಸಿದ ಪ್ರದೇಶದ ಅಷ್ಟೂ ದಾಖಲೆ ಕಳಿಸುವಂತೆ ಸೂಚಿಸಿದ್ದರು. ಅಲ್ಲಿಗೆ ಆಂಧ್ರ ಮೂಲದ ಬಂಡವಾಳಶಾಹಿ ಮತ್ತು ಅಧಿಕಾರಿಗಳ ಲಾಬಿ ಗೋಲ್‌ಮಾಲ್ ಮಾಡುತ್ತಿದೆ ಎಂಬುದು ಜಗಜ್ಜಾಹೀರಾಗಿ ಹೋಗಿದೆ!!

ಎಚ್ಪಿಪಿಲಿಗೆ ಯಾವುದೇ ಬಂದರು ಕಟ್ಟಿದ ಅಥವಾ ಬಂದರು ನಿರ್ವಹಿಸಿದ ದಾಖಲೆ ಇಲ್ಲ. ಈಗ ಕಾಸರಕೋಡದಲ್ಲಿ ಕಂಪನಿ ತನಗೆ ಬೇಕಾದಲ್ಲಿ ಭೂಕಬಳಿಕೆ ಮಾಡಿ ಬಂದರು ನಿರ್ಮಾಣ ಮಾಡುತ್ತಿದೆ. ಬಂದರು ಕಟ್ಟಲು ಸರ್ಕಾರ ಮಂಜೂರು ಮಾಡಿದ ಸ್ಥಳವೇ ಬೇರೆ, ಸದರಿ ನಿರ್ಮಿಸುತ್ತಿರುವ ಜಾಗವೇ ಬೇರೆಯಂದು ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ.

ಕರಾವಳಿ ಗಡಿ ಬದಲಾಯಿಸಿವುದು ತುಂಬ ಅಪಾಯಕಾರಿ. ವಿದೇಶಿಯರಿಗೆ ಆಕ್ರಮಣಕ್ಕೆ ಇದು ಅವಕಾಶ ಮಾಡಿಕೊಡುತ್ತದೆನ್ನುತ್ತಾರೆ ಕಡಲ ಶಾಸ್ತ್ರಜ್ಞರು. ಕರಾವಳಿ ಪ್ರದೇಶದ ಗಡಿಯನ್ನು ಬದಲಾಯಿಸುವುದು ಕೋಸ್ಟಲ್ ಝೋನ್ ಮ್ಯಾನೇಜ್‌ಮೆಂಟ್ ಪ್ಲಾನ್‌ಗೆ ವಿರುದ್ಧವಾದದು. ಕರಾವಳಿ ಗಡಿಯನ್ನು ನೆವೆಲ್ ಹೈಡ್ರಾಲಜಿ ಆಫೀಸರ್ ಮತ್ತು ಸರ್ವೆ ಆಫ್ ಇಂಡಿಯಾ ನಿರ್ಧರಿಸುತ್ತದೆ. ಸ್ಥಳೀಯ ಕಂದಾಯ ಇಲಾಖೆ ನಕ್ಷೆ ಬಳಸಿ ಗಡಿ ಗುರುತಿಸಬೇಕು. ಜಲಗಡಿ ಬದಲಿಸುವ ಅಧಿಕಾರವಿರುವುದು ಭಾರತ ಸರ್ಕಾರಕ್ಕೆ ಮಾತ್ರ ಆದರೂ ಕಾಸರಕೋಡು, ಕರ್ಕಿ, ಪಾವಿನಕುರ್ವಾದ ಗಡಿ ರಾಜ್ಯ ಸರ್ಕಾರ ಬದಲಾಯಿಸಿರುವುದು ಇದು ಅನೇಕ ಅನುಮಾನಕ್ಕೆ ಮತ್ತು ಅನಾಹುತಕ್ಕೂ ಕಾರಣವಾಗಲಿದೆ.

ಕಾಸರಕೋಡು ಪ್ರದೇಶದ ಮೀನುಗಾರರಲ್ಲಿ ಹಿಂದು, ಮುಸ್ಲಿಮ್, ಕ್ರಿಶ್ಚಿಯನ್ ಸಮುದಾಯದವರಿದ್ದಾರೆ. ಖಾಸಗಿ ಬಂದರು ಯೋಜನೆಯಿಂದ ತಮ್ಮ ಬದುಕು ಮೂರಾಬಟ್ಟೆಯಾಗುತ್ತದೆಂಬ ಆತಂಕದಿಂದ ಸಾಮೂಹಿಕವಾಗಿ ಸಮುದ್ರಕ್ಕೆ ಹಾರಲು ಮುಂದಾಗಿದ್ದೂ ನಡೆದುಹೋಗಿದೆ. ಆದರೆ ಸ್ಥಳಿಯ ಶಾಸಕ ಸುನಿಲ್‌ ನಾಯ್ಕ್ ಅತ್ತ ಸುಳಿದಿಲ್ಲ. ಕಳೆದ ಚುನಾವಣೆಯಲ್ಲಿ ಮೀನುಗಾರರ ಹುಡುಗ ಪರೇಶ್ ಮೇಸ್ತನ ಸಂಶಯಾಸ್ಪದ ಸಾವಿನ ವಿಚಾರದಲ್ಲಿ ಬಹಳ ಹೋರಾಟ ನಡೆಸಿದ್ದ ಈ ಬಿಜೆಪಿ ಶಾಸಕರ ಬಗ್ಗೆ ಸಹಜವಾಗೇ ಮೀನುಗಾರರೀಗ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಸಕ ಸುನಿಲ್‌ನಾಯ್ಕ್ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗೊಳಾಗಗುತ್ತಿದ್ದಾರೆ.

ಕೃಷಿಕಾಯ್ದೆಗಳು ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸುವಂತೆಯೇ ಕಡಲು ಮತ್ತು ಬಂದರು ಖಾಸಗೀಕರಣ ಮೀನುಗಾರರ ಉದ್ಯೋಗ ಕಸಿದುಕೊಂಡು ನಿರ್ಗತಿಕರನ್ನಾಗಿಸುತ್ತದೆ. ಮೊದಲೇ ಸಣ್ಣ ಹಾಗೂ ನಾಡದೋಣಿ ಮೀನುಗಾರಿಕೆಯವರು ಬದುಕು ಸಾಗಿಸುವುದೇ ಕಷ್ಟವಾಗಿದೆ. ಮೀನಿನ ಇಳುವರಿ ಕಮ್ಮಿಯಾಗಿ ಆದಾಯವೇ ಇಲ್ಲದಾಗಿದೆ. ಇಂಥ ಸಂದರ್ಭದಲ್ಲಿ ಬೆನ್ನಿಗೆ ಬಿದ್ದು ಕಾಡುತ್ತಿರುವ ಖಾಸಗಿ ಬಂದರು ಯೋಜನೆ ಮೀನುಗಾರರಿಗೆ ದೊಡ್ಡ ಚಿಂತೆಯಾಗಿದೆ. ಕಡಲಂಚಿನ ಪಟ್ಟಣಗಳಲ್ಲಿ ಜಾರಿಗೊಳಿಸಿರುವ ತರತರದ ಯೋಜನೆಗಳು ಮೀನುಗಾರರನ್ನು ಸಂಕಷ್ಟಕ್ಕೆ ನೂಕಿದೆ; ಕಡಲು ಮಾಲಿನ್ಯದಿಂದ ಮೀನಿನ ಸಂತತಿ ನಶಿಸಿದೆ. ಆಳ ಸಮುದ್ರ ಮೀನುಗಾರಿಕೆಯಿಂದ ಪಾರಂಪರಿಕ ಮೀನುಗಾರರು ಕಷ್ಟಕ್ಕೆ ಸಿಲುಕಿದ್ದಾರೆ. ಹೀಗೆ ಹತ್ತು ಹಲವು ಸಮಸ್ಯೆಗಳು ಮೀನುಗಾರರನ್ನು ಬಾಧಿಸುತ್ತಿವೆ.

ಆಳುವವರು ಬಂದರು ಖಾಸಗೀಕರಣ ಯೋಜನೆ ನಿಲ್ಲಿಸಿ, ಸ್ಥಳಿಯರ ಜೀವನಕ್ಕೆ ಅನುಕೂಲವಾದ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಬೇಕು, ಮೀನುಗಾರರ ಒಳತಿಗೆ ತಕ್ಕಂತ ಯೋಜನೆಗಳು ಬೇಕು ಎಂಬ ಕೂಗು ದಿನೇ ದಿನೇ ಜೋರಾಗುತ್ತಿದೆ.


ಇದನ್ನೂ ಓದಿ: ಉತ್ತರ ಕನ್ನಡ: ವಿಭಿನ್ನ ಜನ – ಜಾತಿ: ವೈವಿದ್ಯ ಭಾಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...