Homeಮುಖಪುಟಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

- Advertisement -
- Advertisement -

ಮಧ್ಯಪ್ರದೇಶದ ಭೋಪಾಲ್ ಸೈಬರ್ ಸೆಲ್ ಮಂಗಳವಾರ, ಜೂನ್ 29 ರಂದು, ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 505 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ. ಭಾರತದ ತಪ್ಪಾದ ನಕ್ಷೆಯನ್ನು ಟ್ವಿಟರ್‌‌ ಪ್ರಕಟಿಸಿದೆ (ಸೋಮವಾರ ಇದನ್ನು ಹಿಂದೆಗೆದುಕೊಳ್ಳಲಾಗಿದೆ) ಎಂಬ ಆರೋಪದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಈ ಮೊದಲೇ ಒಂದು ಎಫ್‍ಐಆರ್‌‌ ದಾಖಲಾಗಿದೆ. ಹಿಂದಿನ ವಾರ ಮುಸ್ಲಿಂ ವ್ಯಕ್ತಿ ಮೇಲಿನ ಹಲ್ಲೆ ಕುರಿತಾದ ಪೋಸ್ಟ್‌‌ಗಳಿಗೆ ಸಂಬಂಧಿಸಿ ಕೂಡ ಒಂದು ಪ್ರಕರಣವನ್ನು ಉತ್ತರಪ್ರದೇಶದಲ್ಲಿ ಟ್ವಿಟರ್‌‌ ಮುಖ್ಯಸ್ಥರ ವಿರುದ್ಧ ದಾಖಲಿಸಲಾಗಿದೆ.

ಇದನ್ನೂ ಓದಿ: ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ಭಾರತದ ತಪ್ಪು ನಕ್ಷೆಯನ್ನು ತೋರಿಸಿದ್ದಕ್ಕಾಗಿ ಮಹೇಶ್ವರಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 505 (2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾದ ಹೇಳಿಕೆಗಳು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008 ರ ಸೆಕ್ಷನ್ 74 (ಮೋಸದ ಉದ್ದೇಶಕ್ಕಾಗಿ ಪ್ರಕಟಣೆ) ಅಡಿ ಯುಪಿಯ ಬುಲಂದ್‌ಶಹರ್‌ನಲ್ಲಿ ಭಜರಂಗದಳದ ಮುಖಂಡರ ದೂರಿನ ಮೇರೆಗೆ ದೂರು ದಾಖಲಾದ ನಂತರ ಈಗ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ಈಗ ಈ ದೂರು ದಾಖಲಾಗಿದೆ.

ಆಗಿದ್ದಾದರೂ ಏನು? 

ಟ್ವಿಟರ್‌‌ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿದ ಭಾರತದ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು  ಭಾರತದಿಂದ ಬೇರ್ಪಟ್ಟ ಪ್ರದೇಶ ಎಂಬಂತೆ ತೋರಿಸಿತ್ತು ಎನ್ನುವುದು ಆರೋಪ.

ಟ್ವಿಟರ್‌ನ ವೆಬ್‌ಸೈಟ್‌ನ ಕರಿಯ‌ರ್‌‌ ವಿಭಾಗದಲ್ಲಿ ‘ಟ್ವೀಪ್ ಲೈಫ್’ ಶೀರ್ಷಿಕೆಯಡಿಯಲ್ಲಿ ವಿಶ್ವ ನಕ್ಷೆಯ ಭಾಗವಾಗಿ  ಭಾರತದ ಈ ನಕ್ಷೆ ಕಾಣಿಸಿಕೊಂಡಿತು. ಟ್ವಿಟರ್ ನಂತರ ವಿಶ್ವ ನಕ್ಷೆಯನ್ನು ಸಂಪೂರ್ಣವಾಗಿ ತೆಗೆದುಹಾಕಿದೆ.

ಇದಕ್ಕೂ ಮುನ್ನ, ಸೋಮವಾರ, ಬಿಜೆಪಿ ಮುಖಂಡ ಪಿ ಮುರಳೀಧರ್ ರಾವ್ ಅವರು, “ಟ್ವಿಟರ್ ತನ್ನ ಕಾರ್ಯಗಳಿಂದ ಭಾರತ ವಿರೋಧಿ ನಿಲುವನ್ನು ದೃಢಪಡಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಭಾರತದ ಹಿತಾಸಕ್ತಿಗಳು ಮತ್ತು ಸೂಕ್ಷ್ಮತೆಗಳ ಬಗೆಗಿನ ಪಕ್ಷಪಾತವನ್ನು ಟ್ವಿಟರ್‌‌ ಪ್ರದರ್ಶಿಸಿದೆ” ಎಂದು ಟ್ವೀಟ್‍ ಮಾಡಿದ್ದರು.

ಇದನ್ನೂ ಓದಿ: ಹೋರಾಟ ನಿರತ ರೈತರಿಂದ ದೆಹಲಿಯಲ್ಲಿ ‘ಕಿಸಾನ್ ಮೆಟ್ರೋ’ ಆರಂಭ!

ಹೊಸ ಐಟಿ ನಿಯಮಗಳ ಬಗ್ಗೆ ಕಂಪನಿಯು ಭಾರತ ಸರ್ಕಾರದೊಂದಿಗೆ ಸಂಘರ್ಷ ನಡೆಸುತ್ತಿರುವ ಸಂದರ್ಭದಲ್ಲಿ ಈ ಎಫ್‍ಐಆರ್‌‌ಗಳು ದಾಖಲಾಗುತ್ತಿವೆ ಎಂಬುದನ್ನು ಗಮನಿಸಬೇಕು. ಜೂನ್‌ನಲ್ಲಿ ಉತ್ತರ ಪ್ರದೇಶದ ಲೋನಿ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಪೋಸ್ಟ್‌ಗಳನ್ನು ಒಳಗೊಂಡ ಪ್ರಕರಣದಲ್ಲಿ ಯುಪಿ ಪೊಲೀಸರು ಟ್ವಿಟರ್‌ ಇಂಡಿಯಾ ನಿರ್ದೇಶಕ ಮನೀಷ್‍ ಮಹೇಶ್ವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದರು.

ಆದರೆ, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಜಿ. ನರೇಂದ್ರ ಅವರು ಕಳೆದ ವಾರ ಸಿಆರ್‌ಪಿಸಿಯ ಸೆಕ್ಷನ್ 41 ಎ ಅಡಿಯಲ್ಲಿ ಮಧ್ಯಂತರ ಪರಿಹಾರ ನೀಡಿದ್ದರು ಮತ್ತು ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಗಾಜಿಯಾಬಾದ್ ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಕರ್ನಾಟಕ ಹೈಕೋರ್ಟ್ ನೀಡಿದ ರಕ್ಷಣೆಯ ಆದೇಶದ ವಿರುದ್ಧ ಯುಪಿ ಸರ್ಕಾರ ಜೂನ್ 29 ರಂದು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಟ್ವಿಟರ್ ನಿರ್ದೇಶಕ ಸುಪ್ರೀಂಕೋರ್ಟ್‍ನಲ್ಲಿ ದೂರು ಸಲ್ಲಿಸಿದ್ದು, ಯುಪಿ ಸರ್ಕಾರದ ಮೇಲ್ಮನವಿಯ ವಿಚಾರಣೆ ಬಂದಾಗ ಈ ವಿಷಯದ ಚರ್ಚೆ ನಡೆಯಲಿದೆ.

ಐಟಿ ನಿಯಮಗಳ ಜಗ್ಗಾಟ

ಇದಕ್ಕೂ ಮುನ್ನ ಭಾನುವಾರ, ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿ ಧರ್ಮೇಂದ್ರ ಚತುರ್ ಅವರು ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು. ಹೊಸ ನಿಯಮಗಳ ಪ್ರಕಾರ ಅಗತ್ಯವಿರುವಂತೆ ಚತುರ್ ಅವರ ಹೆಸರನ್ನು ಈ ಹಿಂದೆ ಕಂಪನಿಯ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗುತ್ತಿತ್ತು, ಆದರೆ ಅದು ಈಗ ಇಲ್ಲ.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

ಚತುರ್ ಅವರ ರಾಜೀನಾಮೆಯ ನಂತರ ಕ್ಯಾಲಿಫೋರ್ನಿಯಾ ಮೂಲದ ಜೆರೆಮಿ ಕೆಸೆಲ್ ಅವರನ್ನು ಭಾರತದ ಹೊಸ ಕುಂದುಕೊರತೆ ಪರಿಹಾರ ಅಧಿಕಾರಿಯಾಗಿ  ಟ್ವಿಟರ್‌‌‌ ನೇಮಿಸಿತು.

ಮೇ 25 ರಿಂದ ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ,  ಬಳಕೆದಾರರ ದೂರುಗಳನ್ನು ಪರಿಹರಿಸಲು ಕುಂದುಕೊರತೆ ಅಧಿಕಾರಿಯನ್ನು ಹೊಂದಿರುವುದು ಕಂಪನಿಗೆ ಕಡ್ಡಾಯವಾಗಿದೆ. ಹೊಸ ನಿಯಮಗಳ ಪ್ರಕಾರ, 50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಎಲ್ಲಾ ಸಾಮಾಜಿಕ ಮಾಧ್ಯಮ ಕಂಪನಿಗಳು ಮುಖ್ಯ ಅನುಸರಣೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕಾಗುತ್ತದೆ.

ನಿಯಮಗಳನ್ನು ಧಿಕ್ಕರಿಸುತ್ತಿದೆ ಎಂದು ಒಕ್ಕೂಟ ಸರ್ಕಾರವು ಟ್ವಿಟರ್‌ ಮೇಲೆ ವಾಗ್ದಾಳಿ ನಡೆಸುತ್ತಿದೆ. ನಿಯಮಗಳನ್ನು ಅನುಸರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಟ್ವಿಟರ್‌‌ ಇಂಡಿಯಾ ಹೇಳುತ್ತಲೇ ಬಂದಿದೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...