Homeಕರ್ನಾಟಕಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ...

ಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ…

- Advertisement -
- Advertisement -

ಬಸವಾದಿ ಶರಣರ ವಚನಗಳ ಓದು ನಮ್ಮನ್ನು ಒಂದು ಕಡೆ ನಿಲ್ಲಿಸಲಾರದು. ಕಾಲಿಗೆ ಚಕ್ರ ಕಟ್ಟಿಕೊಂಡು ಊರೂರು ಅಲೆದು ತತ್ವ ಪ್ರಸಾರ ಮಾಡಲೇಬೇಕು ಎಂಬ ತುಡಿತ ಉಂಟಾಗುತ್ತದೆ. ಜನ ಸಾಮಾನ್ಯರಲ್ಲಿ ಹಬ್ಬಿರುವ ಜಾತಿಯತೆ, ಮೌಢ್ಯ, ಮೇಲು ಕೀಳು ಭಾವನೆಗಳನ್ನು ಶರಣರ ವಚನ ಸಾಹಿತ್ಯದ ಔಷಧದ ಮೂಲಕ ಇಲಾಜು ಮಾಡಲು ಖಂಡಿತ ಸಾಧ್ಯವಿದೆ. ನಮ್ಮ ಸಮಾಜಕ್ಕೆ ಅಂಟಿಕೊಂಡಿರುವ ವೈದಿಕ ವೈರಸ್‍ಗಳು ನಾಶಗೊಳಿಸುವ ಶಕ್ತಿ ವಚನ ಸಾಹಿತ್ಯಕ್ಕೆ ಇದೆ. ಇದನ್ನೆಲ್ಲ ಮನಗಂಡು ಬಸವಾದಿ ಶರಣರ ತತ್ವಗಳನ್ನು ಪಸರಿಸುವ ಕೆಲಸವನ್ನು ಮಾಡಲು ನಾನು ಯಾವತ್ತೂ ಸಿದ್ಧನಾಗಿರುತ್ತೇನೆ.

ಬಸವ ಜಯಂತಿಯ ಸಂದರ್ಭದಲ್ಲಂತೂ ನಾನು ಊರಲ್ಲಿರುವುದು ಸಾಧ್ಯವೆ ಇಲ್ಲ. ಈ ಬಾರಿಯ ಬಸವ ಜಯಂತಿಗೆ ಬಸವನ ಕರ್ಮಭೂಮಿಗೆ ಹತ್ತಿರ ಇರುವ ಹುಮ್ನಾಬಾದಗೆ ಹೋಗುವ ಸಂದರ್ಭ ಒದಗಿ ಬಂತು. ಹುಮ್ನಾಬಾದಗೆ ಸಮೀಪ ಇರುವ ಚಿಟಗುಪ್ಪದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಡೆದ ಕಲ್ಯಾಣ ನಾಡಿನ ಶರಣ ಸಾಹಿತ್ಯ ಪರಿಷತ್ತಿಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಡಾ. ದೇ.ಜ.ಗೌಡರ ಮಾತುಗಳು ನನಗೆ ನೆನಪಾದವು. ಅರಿಕೇಸರಿ ಆಸ್ಥಾನದ ಕವಿ ಪಂಪ ತನ್ನ ಕಾವ್ಯದಲ್ಲಿ “ನೆನೆವುದೆನ್ನ ಮನಂ ಬನವಾಸಿ ದೇಶಮಂ” ಎನ್ನುವಂತೆಯೆ ಡಾ. ದೇ.ಜವರೇಗೌಡರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ “ಬಸವಾದಿ ಶರಣರ ವಚನಗಳನ್ನು ಓದಿದ ಮೇಲೆ ನನಗೆ ಮರು ಹುಟ್ಟಿನ ಬಗೆಗೆ ಯಾವುದೆ ನಂಬಿಕೆಗಳಿಲ್ಲ. ಆದರೆ ಆಕಸ್ಮಿಕವಾಗಿ ಹಾಗೇನಾದರೂ ಇದ್ದರೆ, ನಾನು ಮುಂದಿನ ಜನ್ಮದಲ್ಲಿ ಕಲ್ಯಾಣದ ಪರಿಸರದಲ್ಲಿ ಹುಟ್ಟುವಂತೆ ಮಾಡು ಎಂದು ಕೇಳಿಕೊಳ್ಳುತ್ತೇನೆ. ಮರಿ ದುಂಬಿ ಬೇಡ ಕನಿಷ್ಟ ಪಕ್ಷ ಮರಿ ಹಂದಿಯನ್ನಾಗಿಯಾದರೂ ಈ ಕಲ್ಯಾಣ ನಾಡಿನಲ್ಲಿ ಹುಟ್ಟಿಸು!” ಎಂದು ಸಾರ್ವಜನಿಕ ಸಭೆಯಲ್ಲಿಯೆ ಅವಲತ್ತುಕೊಳ್ಳುತ್ತಾರೆ.

ದೇ.ಜ.ಗೌಡರ ಈ ಮಾತುಗಳನ್ನು ನೆನಪಿಸುತ್ತಲೆ ಬಸವಾದಿ ಶರಣರು ಕಟ್ಟ ಬಯಸಿದ ಸಮಾಜದ ಕುರಿತು ನಾನು ಮುಕ್ತವಾಗಿ ಮನಬಿಚ್ಚಿ ಮಾತನಾಡಿದೆ.
ಗುರು ಉಪದೇಶ ಮಂತ್ರ ವೈದ್ಯ.
ಜಂಗಮ ಉಪದೇಶ ಶಸ್ತ್ರ ವೈದ್ಯ ನೋಡಾ,
ಭವರೋಗ ಕಳೆವ ಪರಿಯ ನೋಡಾ.
ಕೂಡಲಸಂಗನ ಶರಣರ ಅನುಭಾವ ಮಡಿವಾಳನ ಕಾಯಕದಂತೆ.

ಎಂಬ ಬಸವಣ್ಣನವರ ವಚನಗಳನ್ನು ಸಾಂದರ್ಭಿಕವಾಗಿ ಹೇಳುತ್ತ ಲಿಂಗಾಯತವೆಂಬುದು ಒಂದು ಜಾತಿ ಅಲ್ಲವೆ ಅಲ್ಲ. ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯ, ಅಂಬಿಗರ ಚೌಡಯ್ಯ, ಮಡಿವಾಳ ಮಾಚಯ್ಯ, ಸೂಳೆ ಸಂಕವ್ವೆ, ಕದಿರೆಯ ರೆಮ್ಮವ್ವ, ಒಕ್ಕಲಿಗ ಮುದ್ದಣ್ಣ, ಮಡಿವಾಳ ಮಾಚಿದೇವ, ಅಲ್ಲಮ ಹೀಗೆ 770 ಅಮರ ಗಣಂಗಳು ಕೂಡಿ ಕಟ್ಟಿದ ಸಂಸ್ಥೆ ಲಿಂಗಾಯತ ಎಂದು ಸಭೆಗೆ ವಿವರಿಸಿದೆ. ಇಷ್ಟಲಿಂಗ ಅರಿವಿನ ಕುರುಹು. ಆಚಾರದ ಪ್ರತೀಕ. ಲಿಂಗ ಕಟ್ಟಿಕೊಂಡ ಮೇಲೆ ಸಕಲ ಜೀವಾತ್ಮರಿಗೆ ಲೇಸಬಯಸುವವರಾಗಬೇಕು. ರಾಗ ದ್ವೇಷಗಳು ಇರಬಾರದು. ಗುಡಿ ಗುಂಡಾರ ಕಟ್ಟುವುದು ಮುಖ್ಯ ಅಲ್ಲವೇ ಅಲ್ಲ. ಗಂಟೆ ಶಂಖ ಜಾಗಟೆಗಳು ಅರ್ಥ ಕಳೆದುಕೊಂಡು ನಮ್ಮ ಆತ್ಮಸಾಕ್ಷಿಯ ಗಂಟೆ ನಿನದಿಸಬೇಕು. ಯಾವ ಶಾಸ್ತ್ರ ಪುರಾಣ ವೇದ ಆಗಮಗಳಿಗಿಂತ ಎದೆಯ ದನಿ ಬಹಳ ಪ್ರಮುಖವಾದುದು.

ಲಿಂಗವ ಪೂಜಿಸಿ ಫಲವೇನಯ್ಯಾ,
ಸಮರತಿ ಸಮಕಳೆ ಸಮ ಸುಖವನರಿಯದನ್ನಕ್ಕ
ಲಿಂಗವ ಪೂಜಿಸಿ ಫಲವೇನಯ್ಯಾ
ಕೂಡಲಸಂಗಮದೇವರ ಪೂಜಿಸಿ ನದಿಯೊಳಗೆ
ನದಿ ಬೆರಸಿದಂತಾಗದನ್ನಕ್ಕ

ಇಷ್ಟಲಿಂಗ ಕಟ್ಟಿಕೊಂಡೂ ಸ್ಥಾವರ ದೇವರಿಗೆ ಹೋಗುವುದೆಂದರೆ ಮಾಡಿಕೊಂಡು ಗಂಡನ ಬಿಟ್ಟು ಅನ್ಯ ಪುರುಷನತ್ತ ಹಾತೊರೆವಂತೆ ಎಂದು ತೀಕ್ಷ್ಣವಾಗಿ ನುಡಿದಾಗ ಹುಮ್ನಾಬಾದನ ಶಾಸಕ, ಗಣಿ ಮತ್ತು ಭೂಗರ್ಭ ಇಲಾಖೆಯ ಮಂತ್ರಿ ರಾಜಶೇಖರ ಪಾಟೀಲ ನನ್ನತ್ತ ಬೆಕ್ಕಸ ಬೆರರಾಗಿ ನೋಡಿದರು. ಕುಲ ಶ್ರೇಷ್ಠ ಎನ್ನುವುದು ಬ್ರಾಹ್ಮಣ್ಯ. ದುಡಿದು ಉಣ್ಣುವವನು ದೊಡ್ಡವನು. ಕಾಯಕದಲ್ಲಿ ದೊಡ್ಡದು ಸಣ್ಣದು ಎಂಬುದು ಇಲ್ಲವೇ ಇಲ್ಲ. ದಲಾಲಿಗಳಿಲ್ಲದ, ಸ್ಥಾವರ ದೇವರುಗಳನ್ನು ಗುಡಿಸಿ ಗುಂಡಾಂತರ ಹಾಕಿದ ಧರ್ಮ ಲಿಂಗಾಯತವೆಂದಾಗ ನನ್ನೊಂದಿಗೆ ವೇದಿಕೆಯಲ್ಲಿ ಕುಳಿತ ರಾಜಶೇಖರ ಪಾಟೀಲರಿಗೆ ಇರಿಸು ಮುರಿಸು. ಅವರು ಹುಟ್ಟಾ ಲಿಂಗಾಯತರಾಗಿದ್ದರು. ವೈದಿಕರ ಕಪಿಮುಷ್ಠಿಯಲ್ಲಿ ಸಿಲುಕಿದವರು. ಮಂತ್ರಿಯಾಗಿ ಪ್ರಮಾಣ ವಚನ ತೆಗೆದುಕೊಳ್ಳುವಾಗ ತಮ್ಮ ಊರಿನ ಸ್ಥಾವರ ದೇವರಾದ ವೀರಭದ್ರನ ಹೆಸರಿನ ಮೇಲೆ ವಿಶ್ವಾಸವಿರಿಸಿದವರು.

ಜಂಗಮ ಉಪದೇಶ ಶಸ್ತ್ರವೈದ್ಯ ಎಂಬಂತೆ ನನ್ನ ಮಾತು ಅವರ ಜಂಘಾಬಲವನ್ನು ಕುಗ್ಗಿಸಿತು. ಹೀಗಾಗಿ ನಾನು ಹೀಗೆ ಮಾತಾಡುತ್ತ ಹೋದರೆ ಕರ್ಮಠ ಲಿಂಗಾಯತರ ಒಳ ಹೂರಣವೆ ಬಯಲಾಗುತ್ತದೆ ಎಂಬ ದಿಗಿಲಿನಿಂದ ಸಂಘಟಕರಿಗೆ ನಾನು ಮಾತಾಡುವುದು ಸಾಕು ಮಾಡಲು ಚೀಟಿ ನೀಡಿ ಎಂದು ಸಂಜ್ಞೆ ಮಾಡಿದರಂತೆ. ಆದರೆ ಆಕಸ್ಮಿಕವಾಗಿ ಅದೇ ಸಮಯಕ್ಕೆ ಸರಿಯಾಗಿ ನಾನು ಸಹ : “ಹೇಳಿ ಕೇಳಿ ನಾನು ‘ಗೌರಿ ಲಂಕೇಶ್ ಪತ್ರಿಕೆಯ’ ವರದಿಗಾರನಾಗಿದ್ದೆ” ಎಂದು ಹೇಳಿದ್ದೆ ತಡ. ರಾಜಶೇಖರ ಪಾಟೀಲ ಇದನ್ನು ಗಮನಿಸಿ ಸಂಘಟಕರಿಗೆ ಮತ್ತೆ ಸೂಚಿಸಿ “ಸತ್ಯಂಪೇಟೆ ಮಾತಾಡಲಿ ಬಿಡಿ. ಆ ಪತ್ರಿಕೆಯವರು ಯಾರನ್ನೂ ಬಿಟ್ಟವರಲ್ಲ. ಅವರು ಸತ್ಯವನ್ನೇ ಹೇಳುತ್ತಾರೆ. ಸುಳ್ಳನ್ನಲ್ಲ !” ಎಂದು ಹೇಳಿದರಂತೆ.

ಹಾಗಾಗಿ ನಾನು ನಿರರ್ಗಳವಾಗಿ ತಾಸೊತ್ತು ಮಾತನಾಡಿದೆ. ಮಡಿವಾಳನ ಕಾಯಕವನ್ನು ಮಾಡಿದೆ. ನನ್ನ ಮಾತು ಅಧರಕ್ಕೆ ಕಹಿ ಅನಿಸಿದರೂ , ಉದರಕ್ಕೆ ಸಿಹಿ ಉಂಟು ಮಾಡುವಂತಹವಾಗಿದ್ದವು. ಮಾತು ಮುಗಿಸಿ ವೇದಿಕೆಯಲ್ಲಿ ಕುಳಿತಾಗ ಮಂತ್ರಿಗಳು ಮನಬಿಚ್ಚಿ ನನ್ನೊಂದಿಗೆ ಬೆರೆತರು. ಗೌರಿ ಲಂಕೇಶ್ ದೈಹಿಕವಾಗಿ ಈಗ ನಮ್ಮೊಂದಿಗೆ ಇಲ್ಲದಿದ್ದರೂ ಸಹ ಅವರ ಗಟ್ಟಿ ನಿಲುವು. ಅವರ ಮಾರ್ಗ ಬಸವ ಮಾರ್ಗ ಎಂಬುದು ನನಗೆ ಮನದಟ್ಟಾಗಿ ತುಂಬಾ ಖುಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...