Homeಮುಖಪುಟಕಾಸರಗೋಡು ಗಡಿ ಗ್ರಾಮಗಳ ಹೆಸರು ಬದಲಿಸುವಿಕೆ: ಸತ್ಯ ಮತ್ತು ಅರೆಸತ್ಯಗಳು

ಕಾಸರಗೋಡು ಗಡಿ ಗ್ರಾಮಗಳ ಹೆಸರು ಬದಲಿಸುವಿಕೆ: ಸತ್ಯ ಮತ್ತು ಅರೆಸತ್ಯಗಳು

- Advertisement -
- Advertisement -

ಕಳೆದ ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಭಾಷೆ ಬಗ್ಗೆ ಸಂಚಲನ ಮೂಡಿಸಿರುವ ಸುದ್ದಿಯೊಂದು ಹರಿದಾಡುತ್ತಿದೆ. ಕೇರಳ ಸರ್ಕಾರವು ಕಾಸರಗೋಡು ಜಿಲ್ಲೆಯ ಗಡಿ ಗ್ರಾಮಗಳ ಹೆಸರನ್ನು ಕನ್ನಡದಿಂದ ಮಲಯಾಳಂಗೆ ಬದಲಾಯಿಸಲು ಯೋಜಿಸುತ್ತಿದೆ ಎಂಬುದೇ ಈ ಸುದ್ದಿ.

ಕಾಸರಗೋಡು ಪ್ರದೇಶಗಳಲ್ಲಿನ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಮಾತನಾಡಿದ ದಿ ನ್ಯೂ ಇಂಡಿಯನ್‍ ಎಕ್ಸ್‍ಪ್ರೆಸ್‍, “ಇದು ಮೊದಲು ಸರ್ಕಾರಿ ಸಂಸ್ಥೆಯಾದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಸೃಷ್ಟಿಯಾದ ನಕಲಿ ನಿರೂಪಣೆಯಾಗಿದೆ” ಎಂದು ಹೇಳಿದೆ. ಕಾಸರಗೋಡು ಜಿಲ್ಲಾಡಳಿತದ ಉನ್ನತ ಅಧಿಕಾರಿ ಒಬ್ಬರು, “ಇದು ನಕಲಿ ಸುದ್ದಿ” ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ಗೆ ತಿಳಿಸಿದ್ದಾರೆ.

ಕಾಸರಗೋಡು ಜಿಲ್ಲಾಡಳಿತವು, “ನಮ್ಮೊಂದಿಗೆ ಕಾಸರಗೋಡಿನ ಹಳ್ಳಿಗಳ ಹೆಸರನ್ನು ಬದಲಾಯಿಸುವ ಬಗ್ಗೆ  ಯಾವುದೇ ಪ್ರಸ್ತಾಪ ಇಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಕೇರಳ ಸರ್ಕಾರ ಇಂತಹ ಅಧಿಕೃತ  ಅಧಿಸೂಚನೆ ಹೊರಡಿಸಿಲ್ಲ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ಉಲ್ಲೇಖಿಸಿದೆ.

ಕಾಸರಗೋಡು ಕುರಿತು ಸತತವಾಗಿ ಬರೆಯುತ್ತಿರುವ ಕನ್ನಡ ಬರಹಗಾರ ಕುಮಾರ್‌‌ ರೈತ, “ನಾವೀಗ ಮುಂದೆ ಬದಲಾಗಬಹುದಾದ ಸ್ಥಳನಾಮಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆದರೆ ಈಗಾಗಲೇ 20 ಕ್ಕೂ ಹೆಚ್ಚಿನ ಸ್ಥಳನಾಮ ಬದಲಿಸಿದ್ದಾರೆ” ಎನ್ನುತ್ತಾರೆ.

“ಅಲ್ಲಿನ ಕನ್ನಡ ಶಾಲೆಗಳಿಗೆ ಮಲಯಾಳಂ ಶಿಕ್ಷಕರನ್ನು ನೇಮಿಸುವ ಪ್ರಕ್ರಿಯೆ ಮೊದಲಿನಿಂದಲೂ ಇದೆ. ಅದು ಯುಡಿಎಫ್‍ ಅಥವಾ ಎಲ್‍ಡಿಎಫ್‍ ಇರಲಿ, ಇದು ನಡೆದೇ ಇದೆ” ಎಂದು ಕುಮಾರ್‌‌‌ ನಾನುಗೌರಿ.ಕಾಂ ಗೆ ತಿಳಿಸಿದ್ದಾರೆ.

ಕಳೆದ ಮೂರು ನಾಲ್ಕು ದಿನಗಳ ಪತ್ರಿಕಾ ವರದಿಗಳ ಪ್ರಕಾರ, ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್‌‌ ಮತ್ತಿಹಳ್ಳಿ ಹೇಳುವುದು ಏನೆಂದರೆ, “ಮಧುರ ಅನ್ನು ಮಧುರಂ, ಮಲ್ಲಾ ಅನ್ನು ಮಲ್ಲಂ, ಕಾರಡ್ಕಾವನ್ನು ಕಡಗಂ, ಬೆಡಡ್ಕಾವನ್ನು ಬೆಡಗಂ, ಪಿಲಿಕುಂಜೆ ಅನ್ನು ಪಿಲಿಕುನ್ನು, ಅನೆಬಾಗಿಲು ಆನೆವಗಿಲ್, ಮಂಜೇಶ್ವರ ಅನ್ನು ಮಂಜೇಶ್ವರಂ, ಅಂತ ಬದಲಾಯಿಸಲಿದ್ದಾರೆ….”

ಇದನ್ನೂ ಓದಿ: ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

ಕೇರಳದಲ್ಲಿ ಬೇರೆ ವಿಷಯಗಳೆ ಇಲ್ಲದ ಬಿಜೆಪಿ ಈ ಅನಗತ್ಯ ವಿವಾದ ಸೃಷ್ಟಿಸುತ್ತಿದೆಯೇ ಎಂಬ ಅನುಮಾನಗಳು ಎದ್ದಿವೆ. ಕೇರಳ ಸರ್ಕಾರ ಅಥವಾ ಕಾಸರಗೋಡು ಜಿಲ್ಲಾಡಳಿತ ಇಂತಹ ಯಾವುದೇ ಆದೇಶ ಅಥವಾ ಕ್ರಮಕ್ಕೆ ಮುಂದಾಗಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ ಅವರು, “ಕೆಲವು ಸ್ಥಳೀಯ ಸಂಸ್ಥೆಗಳು ಜನರೊಂದಿಗೆ ಯಾವುದೆ ಸಮಾಲೋಚನೆ ಮಾಡದೆ ಕಾಸರಗೋಡಿನ ಕನ್ನಡ ಮಾತನಾಡುವ ಗ್ರಾಮಗಳ ಹೆಸರನ್ನು ಬದಲಾಯಿಸಲು ಪ್ರಯತ್ನಿಸುತ್ತಿವೆ” ಎಂದು ಹೇಳಿಕೆ ನೀಡಿದ್ದಾರೆ. “ಇದು ಇಲ್ಲಿ ದೀರ್ಘಕಾಲ ಇರುವ ಕನ್ನಡ ಮತ್ತು ತುಳು ಸಂಸ್ಕೃತಿಯನ್ನು ನಾಶಪಡಿಸುತ್ತದೆ” ಎಂದು ಅವರು ಹೇಳಿದ್ದಾರೆ. ಈ ವಿಷಯವನ್ನು ಕಾಸರಗೋಡು ಜಿಲ್ಲಾಡಳಿತ ಅಥವಾ ಸ್ಥಳೀಯ ಸಂಸ್ಥೆಗಳೊಂದಿಗೆ ಕ್ರಾಸ್‍ಚೆಕ್‍ ಮಾಡದೇ ಮಾಧ್ಯಮಗಳು ವರದಿ ಮಾಡಿವೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ವಿಷಯವನ್ನು ಜೀವಂತವಾಗಿಡಲು ಸೋಮಶೇಖರ ಕರ್ನಾಟಕ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ.

ಕುಮಾರಸ್ವಾಮಿ ಪ್ರವೇಶ

ಜನತಾದಳ (ಎಸ್) ಮುಖಂಡ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದು, “ಕೇರಳ ಸರ್ಕಾರವು ಮಂಜೇಶ್ವರದ ಕೆಲವು ಹಳ್ಳಿಯನ್ನು ಮಲಯಾಳಂ ಹೆಸರಿಗೆ ಬದಲಾಯಿಯಿಸುವ ಯತ್ನ ಮಾಡುತ್ತಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ. ಇದು ನಿಜವೇ ಆಗಿದ್ದರೆ. ಭಾಷಾ ಸಾಮರಸ್ಯ ಮತ್ತು ಸಾಂಸ್ಕೃತಿಕ ಸಹಬಾಳ್ವೆಗೆ ಅಡ್ಡಿ ಮಾಡುತ್ತದೆ. ಈ ಪ್ರಕ್ರಿಯೆ ನಿಲ್ಲಿಸಬೇಕು ಎಂದು ಪ್ರಾಮಾಣಿಕವಾಗಿ ವಿನಂತಿಸುತ್ತೇನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಕಾಸರಗೋಡಿನ ಗ್ರಾಮಗಳ ಕನ್ನಡದ ಹೆಸರು ಬದಲಿಸದಂತೆ ಕೇರಳ ಸಿಎಂಗೆ ಪತ್ರ ಬರೆಯುವೆ: ಬಿಎಸ್‌ವೈ

ಆದರೆ, ವಾಸ್ತವ ತಿಳಿಯದೆ ಅವಸರದ ಹೇಳಿಕೆ ನೀಡುತ್ತಿರುವವರ ಬಗ್ಗೆ ವಿಷಾದ ವ್ಯಕ್ತಪಡಿಸಬೇಕಷ್ಟೇ ಎಂದು ಎಕ್ಸ್‍ಪ್ರೆಸ್‍ ವರದಿ ಹೇಳುತ್ತದೆ. ಇಂಡಿಯನ್‍ ಎಕ್ಸ್‍ಪ್ರೆಸ್‍  ಜಿಲ್ಲಾಡಳಿತ ಮತ್ತು ಕಾಸರಗೋಡಿನ ಸ್ಥಳೀಯ ಸಂಸ್ಥೆಗಳ ಜನರ ಪ್ರತಿನಿಧಿಗಳೊಂದಿಗೆ ಮಾತನಾಡಿದೆ. ಅಲ್ಲಿನ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು  ಈ ವಿಷಯ ಕೇಳಿ ಗೊಂದಲಕ್ಕೊಳಗಾಗಿದ್ದಾರೆ. ಮಧುರ ಅನ್ನು ಮಧುರಂ ಎಂದು ಮರುನಾಮಕರಣ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಬಿಜೆಪಿಯ ಮಧುರ ಪಂಚಾಯತ್ ಅಧ್ಯಕ್ಷ ಗೋಪಾಲಕೃಷ್ಣ ಹೇಳಿದ್ದಾರೆ. “ಸರ್ಕಾರ ಅಂತಹ ಯಾವುದೇ ಪ್ರಸ್ತಾಪವನ್ನು ಮಾಡಿಲ್ಲ ಅಥವಾ ಹೆಸರನ್ನು ಬದಲಾಯಿಸಲು ನಾವು ಕೇಳಿಲ್ಲ” ಎಂದು ಗೋಪಾಲಕೃಷ್ಣ ಹೇಳಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಅಲ್ಲಿ ಪಂಚಾಯಿತಿಯನ್ನು ಬಿಜೆಪಿ ಆಳುತ್ತಿದೆ.

ಅನೆಬಾಗಿಲು ಮಧುರ ಬಳಿಯ ಸ್ಥಳವಾಗಿದ್ದು, ಆ ಹೆಸರನ್ನು ಬದಲಾಯಿಸುವ ಪ್ರಸ್ತಾಪವೂ ಇಲ್ಲ. ಕಾರಡ್ಕಾ ಪಂಚಾಯತ್ ಉಪಾಧ್ಯಕ್ಷೆ ಎಂ.ಜನನಿ, ಕಾರಡ್ಕಾ ಹೆಸರನ್ನು ಕಡಗಂ ಎಂದು ಬದಲಾಯಿಸಲು ಜನರಿಂದ ಯಾವುದೇ ಬೇಡಿಕೆಯಿಲ್ಲ ಮತ್ತು ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ. ಈ ಪಂಚಾಯಿತಿಯನ್ನು ಬಿಜೆಪಿಯೇ ಆಳುತ್ತಿದೆ.

ಕಡಗಂ ಎಂಬುದು ಪಂಚಾಯತ್ ಕೇಂದ್ರ ಕಚೇರಿ ಮುಲ್ಲೆರಿಯಾದಿಂದ 6 ಕಿ.ಮೀ ದೂರದಲ್ಲಿದೆ ಎಂದು ಬಿಜೆಪಿ ನಾಯಕಿ ಜನನಿ ಹೇಳಿದ್ದಾರೆ. “ಕಡಗಂ, ಕರಡ್ಕಾ ಎರಡೂ ಹೆಸರುಗಳು ಯಾವಾಗಲೂ ಇರುತ್ತವೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ಕಾಸರಗೋಡು ಸರ್ಕಾರಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಕೆ.ವಿಜಯನ್ ಮಾತನಾಡಿ, “ಕಾಸರಗೋಡು ಜನರು ಹಲವಾರು ಭಾಷೆಗಳನ್ನು ಮಾತನಾಡುತ್ತಾರೆ ಮತ್ತು ಅವರು ತಮ್ಮ ಸ್ಥಳಗಳಿಗೆ ತಮ್ಮದೇ ಹೆಸರನ್ನು ಹೊಂದಿದ್ದಾರೆ. ಮಲಯಾಳಿಗಳು ಮಂಜೇಶ್ವರಂ ಮತ್ತು ನೀಲೇಶ್ವರಂ ಎಂದು ಹೇಳಬಹುದು. ಆದರೆ ಅಧಿಕೃತವಾಗಿ ಈ ಸ್ಥಳವು ಮಂಜೇಶ್ವರ ಮತ್ತು ನೀಲೇಶ್ವರ ಅಷ್ಟೇ. ಹೆಸರುಗಳನ್ನು ಬದಲಾಯಿಸುವ ಪ್ರಸ್ತಾಪ ಅಧೀಕೃತವಾಗಿ ಇಲ್ಲ” ಎಂದಿದ್ದಾರೆ.

ಜಿಲ್ಲಾ ಮಾಹಿತಿ ಅಧಿಕಾರಿ ಎಂ.ಮಧುಸೂದನ್ ಮಾತನಾಡಿ, “ಅಧಿಕೃತವಾಗಿ, ಇದು ಕಾಸರಗೋಡು. ಆದರೆ ಜನರು ಅದನ್ನು ಬರೆಯುವ ಮತ್ತು ಉಚ್ಚರಿಸುವ ವಿವಿಧ ವಿಧಾನವನ್ನು ಹೊಂದಿದ್ದಾರೆ” ಎಂದು ಹೇಳಿದ್ದಾರೆ.

ಕಾಸರಗೋಡು ಶಾಂತವಾಗಿದೆ

ಗಡಿ ವಿಷಯ ಬಂದ ತಕ್ಷಣ ಮಾಧ್ಯಮಗಳು ಮತ್ತು ಗಡಿಭಾಗದ ಜನರು ಉದ್ವೇಗಕ್ಕೆ ಒಳಗಾಗುತ್ತಾರೆ. ಮಂಜೇಶ್ವರದ ಶಾಸಕ ಅಶ್ರಫ್‍ ಅವರು ಕನ್ನಡದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಮೊದಲ ಅಧಿವೇಶನದಲ್ಲಿ  ಗೋವಿಂದ ಪೈ ಅವರ ಕವನ ಉಲ್ಲೇಖಿಸಿ ಮಾತನಾಡಿದ್ದು ಅಲ್ಲಿ ಕೇರಳದಲ್ಲಿ ಯಾವ ವಿವಾದವನ್ನೂ ಉಂಟು ಮಾಡಲೇ ಇಲ್ಲ.

ಕಾಸರಗೋಡಿನ ಗಡಿಭಾಗದ ಸಾಕಷ್ಟು ಜನ ಇವತ್ತಿಗೂ ವೈದ್ಯಕೀಯ ಸೇವೆ, ಶಿಕ್ಷಣ ಮುಂತಾದ ಕಾರಣಗಳಿಗೆ ಮಂಗಳೂರನ್ನೆ ಅವಲಂಬಿಸಿದ್ದಾರೆ. ಅಂದಂತೆ, ಕಾಸರಗೋಡಿನ ಜನ ಮಂಗಳೂರನ್ನು ಮಂಗಳಾಪುರಂ ಅನ್ನುತ್ತಾರೆ! ಜನರಭಾಷೆ ಅಂದರೆ ಹೀಗೆ ಅಲ್ಲವೇ? ಕುಮಾರ ರೈತ ಅಂತಹವರಿಗೆ ಕಾಸರಗೋಡು ಬಗ್ಗೆ ಹಲವು ಸಕಾರಣಿಕ ಆಕ್ಷೇಪ ಇರಬಹುದು. ಅಲ್ಲಿರುವ ಕನ್ನಡೆ ಶಾಲೆಗಳ ಲೆಕ್ಕ ಇಟ್ಟುಕೊಂಡು, ಬೆಂಗಳೂರಿನಲ್ಲಿ ಇರುವ ಸರ್ಕಾರಿ ಕನ್ನಡ ಶಾಲೆಗಳ ಲೆಕ್ಕ ನೋಡಬೇಕಾಗಿದೆ ಅಲ್ಲವೇ? ರಾಜ್ಯದ ಶಾಲೆಗಳಲ್ಲೇ ಕನ್ನಡ ಮಾಯ ಆಗುತ್ತಿರುವ ಸಂದರ್ಭದಲ್ಲಿ ನಾವು ಕಾಸರಗೋಡಿನ ಬಗ್ಗೆ ತಲೆ ಕೆಡಿಸಿಕೊಂಡು ಕೂಡುವುದು ಬೇಡ ಅಲ್ಲವೇ?

ಇದನ್ನೂ ಓದಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರವೇಶ ಬೇಕೆಂದರೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ: ನೈರುತ್ಯ ರೈಲ್ವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...