Homeಮುಖಪುಟಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಈ ಹಿಂದೆ ಕೂಡಾ ಕೇರಳ ಹೈಕೋರ್ಟ್‌ ಪ್ರಫುಲ್ ಪಟೇಲ್‌ ನೀಡಿದ್ದ ಎರಡು ವಿವಾದಾತ್ಮಕ ಆದೇಶಗಳನ್ನು ತಡೆಹಿಡಿದಿತ್ತು.

- Advertisement -
- Advertisement -

ಸಮುದ್ರ ತೀರದಲ್ಲಿರುವ ಮನೆಗಳನ್ನು ನೆಲಸಮಗೊಳಿಸಬೇಕು ಎಂದು ಲಕ್ಷದ್ವೀಪ ಆಡಳಿತ ನೀಡಿದ್ದ ಆದೇಶವನ್ನು ಕೇರಳ ಹೈಕೋರ್ಟ್‌ ಮಂಗಳವಾರ ತಡೆಹಿಡಿದಿದೆ. ಮುಂದಿನ ಆದೇಶ ಬರುವವರೆಗೂ ದ್ವೀಪಗಳ ಕರಾವಳಿಯಲ್ಲಿರುವ ಮನೆಗಳನ್ನು ಧ್ವಂಸಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ತನ್ನ ಕಟ್ಟಡಗಳ ನೆಲಸಮಗೊಳಿಸುವಿಕೆಯ ಬಗ್ಗೆ ನೋಟಿಸ್ ಪಡೆದ ಮಾಲಿಕರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಲಯವು, ಎರಡು ವಾರಗಳಲ್ಲಿ ಈ ವಿಷಯದ ಬಗ್ಗೆ ತನ್ನ ಅಫಿಡವಿಟ್ ನೀಡುವಂತೆ ಆಡಳಿತಕ್ಕೆ ನಿರ್ದೇಶಿಸಿದೆ.

ಈ ಹಿಂದೆಯೆ ಹಲವರ ಮನೆಗಳನ್ನು ಧ್ವಂಸ ಮಾಡುವ ಬಗ್ಗೆ ಆಡಳಿತವು ನೋಟಿಸ್ ನೀಡಿತ್ತು. ಅದಕ್ಕಾಗಿ ಅವರು ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಆದರೆ ಆಡಳಿತವು ಅದು ಕೇವಲ ಕರಡು ಸಲಹೆಯಾಗಿದೆ ಎಂದು ತಿಳಿಸಿತ್ತು. ಇದರ ನಂತರ ಸಂತ್ರಸ್ತರು ಮತ್ತೆ ಧ್ವಂಸಗೊಳಿಸುವಿಕೆಯ ಆದೇಶವನ್ನು ಆಡಳಿತದಿಂದ ಪಡೆದಿದ್ದರು, ಹೀಗಾಗಿ ಅವರು ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಇತ್ತೀಚೆಗೆ ಹೊರಡಿಸಲಾಗಿರುವ ಹೊಸ ಆದೇಶಗಳಲ್ಲಿ, ಸಮುದ್ರ ತೀರದಿಂದ 20 ಮೀಟರ್ ಒಳಗೆ ಇರುವ ನೂರಕ್ಕಿಂತಲೂ ಹೆಚ್ಚಿನ ಮನೆಗಳನ್ನು ಧ್ವಂಸ ಮಾಡಲು ಹೇಳಲಾಗಿದೆ. ತೀರದಿಂದ 20 ಮೀಟರ್‌‌ ಒಳಗೆ ಇರುವ ಶೌಚಾಲಯಗಳು ಮತ್ತು ನಿರ್ಜನ ದ್ವೀಪಗಳಲ್ಲಿ ನಿರ್ಮಿಸಲಾದ ತಾತ್ಕಾಲಿಕ ಮೀನುಗಾರಿಕಾ ಶೆಡ್‌ಗಳನ್ನು ಸಹ ಧ್ವಂಸ ಮಾಡಲು ಅದು ಹೇಳಿದೆ.

ಲಕ್ಷದ್ವೀಪದ ಆಡಳಿತ ಕೇಂದ್ರವಾಗಿರುವ ಕವರತ್ತಿಯ 102 ಮನೆಗಳಿಗೆ ನೋಟಿಸ್ ಪಡೆದಿವೆ. ಅಷ್ಟೇ ಅಲ್ಲದೆ ಇನ್ನೂ 52 ಮನೆಗಳಿಗೆ ಶೀಘ್ರದಲ್ಲೇ ನೋಟಿಸ್‌‌ ನೀಡಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೆರಿಯಮ್, ಸುಹೆಲಿ ಪಾರ್ ಮತ್ತು ಕಲ್ಪೇನಿ ದ್ವೀಪಗಳ ಅನೇಕರು ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳಿಂದ ಇದೀ ರೀತಿಯ ನೋಟಿಸ್ ಪಡೆದಿದ್ದಾರೆ ಎಂದು ‘ಮಾಧ್ಯಮಂ’ ವರದಿ ಮಾಡಿದೆ.

ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ | Naanu gauri

ಮನೆಗಳಿಗೆ ನೀಡಲಾದ ನೋಟಿಸ್‌ಗೆ ಉತ್ತರಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ಒಂದು ವೇಳೆ ನೋಟಿಸ್‌ ನೀಡಿದ ಕಟ್ಟಡಗಳನ್ನು ಧ್ವಂಸ ಮಾಡಲು ವಿಫಲವಾದರೆ ಅದನ್ನು ಅಧಿಕಾರಿಗಳೇ ಧ್ವಂಸ ಮಾಡಲಿದ್ದು, ಅದಕ್ಕೆ ತಗುಲುವ ವೆಚ್ಚವನ್ನು ಕಟ್ಟಡದ ಮಾಲಿಕರು ನೀಡಬೇಕಾಗುತ್ತದೆ ಎಂದು ನೋಟಿಸ್ ಹೇಳಿತ್ತು.

ಸಮುದ್ರ ತೀರದಿಂದ 50 ಮೀಟರ್ ದೂರವಿರುವ ಕಟ್ಟಡಗಳಿಗೂ ನೋಟಿಸ್‌ ಬಂದಿದೆ ಎಂದು ದ್ವೀಪವಾಸಿಗಳು ಹೇಳಿದ್ದಾರೆ. ನೋಟಿಸ್ ಪಡೆದ ಹಲವು ಕಟ್ಟಡಗಳು ತೀರದಿಂದ 50 ಮೀಟರ್ ದೂರದಲ್ಲೆ ನಿರ್ಮಿಸಲ್ಪಟ್ಟಿತ್ತಾದರೂ, ಸಮುದ್ರ ಕೊರೆತದಿಂದ ಅದರ ಅಂತರ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಆದರೆ ಅಧಿಕಾರಿಗಳು, “ಇಂಟಿಗ್ರೇಟೆಡ್ ಐಲ್ಯಾಂಡ್ ಮ್ಯಾನೇಜ್ಮೆಂಟ್ ಪ್ಲ್ಯಾನ್ ಅಡಿಯಲ್ಲಿ ಕಾನೂನುಬಾಹಿರವಾಗಿ ಕಟ್ಟಲ್ಪಟ್ಟ ಕಟ್ಟವೆಂದು ಕಂಡುಬಂದವರಿಗೆ ಮಾತ್ರ ನೋಟಿಸ್ ನೀಡಲಾಗುತ್ತದೆ. ಅಲ್ಲದೆ, ಶಿಥಿಲವಾದ ಮನೆಗಳು ಮತ್ತು ಶೌಚಾಲಯಗಳನ್ನು ಮಾತ್ರ ಉರುಳಿಸುತ್ತಿದ್ದು, ಯಾರೂ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಐದು ಸ್ಥಳಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಲು ಬೇಕಾಗಿ ಕಟ್ಟಡಗಳನ್ನು ತೆಗೆದುಹಾಕಲಾಗುತ್ತದೆ” ಎಂದು ಹೇಳುತ್ತಾರೆ.

ಈ ಮಧ್ಯೆ, ದ್ವೀಪವಾಸಿಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಕಳಪೆ ತ್ಯಾಜ್ಯ ನಿರ್ವಹಣೆಗೆ ದಂಡ ವಿಧಿಸಲಿರುವ ಹೊಸ ಆದೇಶಕ್ಕೆ ಆಕ್ರೋಶಗಳು ಹೆಚ್ಚಿವೆ. ತ್ಯಾಜ್ಯ ನಿರ್ವಹಣೆಗೆ ಯಾವುದೆ ಮೂಲಸೌಕರ್ಯಗಳೇ ಇಲ್ಲದೆ ಇರುವಾಗ ದಂಡ ವಿಧಿಸುವಂತಹ ಆದೇಶಗಳು ಹೇಗೆ ತಾರ್ಕಿಕವಾಗುತ್ತದೆ ಎಂದು ದ್ವೀಪವಾಸಿಗಳು ವಾದಿಸುತ್ತಿದ್ದಾರೆ.

ಈ ಮೊದಲು ಚೆರಿಯಮ್ ದ್ವೀಪದಲ್ಲಿ, ಕಡಲತೀರದ ಉದ್ದಕ್ಕೂ ಇರುವ ಮೀನುಗಾರರ ನಿರ್ಮಾಣಗಳನ್ನು ಏಳು ದಿನಗಳಲ್ಲಿ ತೆರವುಗೊಳಿಸಲು ಆಡಳಿತವು ಆದೇಶಿಸಿತ್ತು. ಮೀನುಗಾರರು ಅದನ್ನು ಸ್ವಇಚ್ಛೆಯಿಂದ ಮಾಡದಿದ್ದರೆ, ಕಂದಾಯ ಇಲಾಖೆಯು ಇದನ್ನು ಮಾಡುತ್ತದೆ ಎಂದು ಆದೇಶವು ಉಲ್ಲೇಖಿಸಿತ್ತು.

ಲಕ್ಷದ್ವೀಪ ಆಡಳಿತವು ಈ ಮೊದಲು ಕೂಡಾ ಮೀನುಗಾರರ ನಿರ್ಮಾಣಗಳನ್ನು ಇದೇ ಮಾದರಿಯಲ್ಲಿ ಕಿತ್ತುಹಾಕಿತ್ತು. ಇದು ದ್ವೀಪವಾಸಿಗಳು ಸೇರಿದಂತೆ ಭಾರತದಾದ್ಯಂತ ಭಾರಿ ಆಕ್ರೋಶವನ್ನು ಹುಟ್ಟಹಾಕಿತ್ತು. ಪ್ರಫುಲ್ ಪಟೇಲ್ ನೇತೃತ್ವದ ಹೊಸ ಲಕ್ಷದ್ವೀಪ ಆಡಳಿತವು ಪರಿಚಯಿಸಿದ ಅನೇಕ ಕಠಿಣ ಯೋಜನೆಗಳಲ್ಲಿ ಇದು ಒಂದಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ಇದಕ್ಕೂ ಮುನ್ನ, ಕಳೆದ ಶನಿವಾರದಂದು, ಪರಿಸರ ಕಾಳಜಿಗಳ ಬಗ್ಗೆ ತಜ್ಞರ ಎಚ್ಚರಿಕೆಗಳ ಹೊರತಾಗಿಯೂ, ಒಕ್ಕೂಟ ಸರ್ಕಾರವು ಲಕ್ಷದ್ವೀಪದಲ್ಲಿ ಪ್ರಮುಖ ಪ್ರವಾಸೋದ್ಯಮ ಯೋಜನೆಗೆ ಅನುಮೋದನೆ ನೀಡಿತ್ತು. ಲಕ್ಷದ್ವೀಪದ ಮಿನಿಕಾಯ್ ದ್ವೀಪದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲು ಖಾಸಗಿ ಕಂಪನಿಗೆ 75 ವರ್ಷಗಳ ಅವಧಿಗೆ 15 ಹೆಕ್ಟೇರ್ ಭೂಮಿಯನ್ನು ಸರ್ಕಾರ ಗುತ್ತಿಗೆಗೆ ನೀಡಲಿದೆ.

#SaveLakshadweep-ಬಿಜೆಪಿಯ ಧ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?
PC: A.B. Deayou

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಶಾಲೆಯ ಮಧ್ಯಾಹ್ನದ ಊಟದಲ್ಲಿ ಮಾಂಸವನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಪ್ರಫುಲ್ ಪಟೇಲ್‌ ನೀಡಿದ್ದ ಎರಡು ವಿವಾದಾತ್ಮಕ ಆದೇಶಗಳನ್ನು ಕೇರಳ ಹೈಕೋರ್ಟ್ ತಡೆಹಿಡಿದಿತ್ತು.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...