Homeಸಿನಿಮಾಕ್ರೀಡೆವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

ವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

- Advertisement -
- Advertisement -

ವಿಶ್ವ ಟೆನಿಸ್ ಅಭಿಮಾನಿಗಳು ಕಳೆದ ಎರಡು ವರ್ಷಗಳಿಂದ ಕಾತರದಿಂದ ಕಾಯುತ್ತಿದ್ದ ಪ್ರತಿಷ್ಠಿತ ಇಂಗ್ಲೆಂಡ್-ವಿಂಬಲ್ಡನ್ ಟೆನಿಸ್ ಟೂರ್ನಿ ಕೊನೆಗೂ ಸೋಮವಾರದಿಂದ ಭರ್ಜರಿಯಾಗಿ ಆರಂಭವಾಗಿದೆ. ಆಸ್ಟ್ರೇಲಿಯಾ ಓಪನ್, ಫ್ರೆಂಚ್ ಓಪನ್, ಯುಎಸ್ ಓಪನ್ ಸೇರಿದಂತೆ ಟೆನಿಸ್ ಜಗತ್ತಿನಲ್ಲಿ ನಾಲ್ಕು ಜನಪ್ರಿಯ ಗ್ರ್ಯಾಂಡ್ ಸ್ಲಾಂ ಟೂರ್ನಿಗಳು ಇದ್ದಾಗ್ಯೂ ವಿಂಬಲ್ಡನ್‌ಗೇ ಅತ್ಯಂತ ಹೆಚ್ಚು ಪ್ರಾಶಸ್ತ್ಯ ಎಂದರೆ ತಪ್ಪಾಗಲಾರದು. 2019ರಲ್ಲಿ ನಡೆದ ಕೊನೆಯ ವಿಂಬಲ್ಡನ್ ಟೂರ್ನಿಯಲ್ಲಿ ಸರ್ಬಿಯಾದ ನಂಬರ್.1 ಆಟಗಾರ ನೊವಾಕ್ ಜಾಕೋವಿಚ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರೆ, ಮಹಿಳಾ ವಿಭಾಗದಲ್ಲಿ ಸೈಮನ್ ಹೆಲಿಪ್ ಮೊದಲ ಬಾರಿಗೆ ವಿಂಬಲ್ಡನ್ ಪ್ರಶಸ್ತಿಗೆ ಮುತ್ತಿಟ್ಟಿದ್ದರು.

ಆದರೆ, ಕಳೆದ ವರ್ಷ 2020ರಲ್ಲಿ ಮಾರಕ ಕೊರೊನಾ ವೈರಸ್ ಇಡೀ ವಿಶ್ವವನ್ನು ತಲ್ಲಣಕ್ಕೆ ದೂಡಿತ್ತು. ಪರಿಣಾಮ ಎಲ್ಲಾ ಕ್ರೀಡಾ ಕ್ಷೇತ್ರಗಳೂ ನಿಂತ ನೀರಾಗಿದ್ದವು. ಟೆನಿಸ್ ಜಗತ್ತಿನಲ್ಲೂ ಸಹ ಎಲ್ಲಾ ಪ್ರಮುಖ ಟೂರ್ನಿಗಳನ್ನು ಮುಂದೂಡಲಾಗಿತ್ತು. ಇದಕ್ಕೂ ಮುನ್ನ ಈ ರೀತಿ ಆಗಿದ್ದು ಯುದ್ಧದ ಸಮಯದಲ್ಲಿ! 1915-18ರ ಅವಧಿಯಲ್ಲಿ ನಾಲ್ಕು ವರ್ಷ ಮೊದಲ ಮಹಾಯುದ್ಧದ ಕಾರಣಕ್ಕೆ ಈ ಟೂರ್ನಿಯನ್ನು ನಡೆಸಿರಲಿಲ್ಲ. ಅದರ ನಂತರ 2020ರಲ್ಲಿಯೇ ಕೊರೊನಾದಿಂದ ವಿಂಬಲ್ಡನ್‌ಗೆ ಬ್ರೇಕ್ ಬಿದ್ದದ್ದು. ಆದರೆ, ಈಗ ಆತಂಕಗಳು ನಿವಾರಣೆಯಾಗುತ್ತಿದ್ದು, ಟೂರ್ನಿ ಆರಂಭವಾಗಿದೆ.

ವಿಂಬಲ್ಡನ್ ಆರಂಭ ಮತ್ತು ಇತಿಹಾಸ

ಆಲ್ ಇಂಗ್ಲೆಂಡ್ ಲಾನ್ ಟೆನಿಸ್ ಮತ್ತು ಕ್ರೋಕೆ ಕ್ಲಬ್ ಎರಡೂ ಜಂಟಿಯಾಗಿ 23 ಜುಲೈ 1868ರಂದು ಖಾಸಗಿ ಕ್ಲಬ್ ಒಂದನ್ನು ಸ್ಥಾಪಿಸಿದವು. ಇದನ್ನು ’ದಿ ಆಲ್ ಇಂಗ್ಲೆಂಡ್ ಕ್ರೋಕೆ ಕ್ಲಬ್’ ಎಂದು ಕರೆಯಲಾಯಿತು. ಈ ಕ್ಲಬ್‌ನ ಟೆನಿಸ್ ಮೈದಾನ ವಿಂಬಲ್ಡನ್‌ನ ವರ್ಪಲ್ ರಸ್ತೆಯ ನರ್ಸರಿ ರಸ್ತೆಯಲ್ಲಿತ್ತು.

PC : Wikipedia, (ಸ್ಪೆನ್ಸರ್ ಗೋರ್)

1876ರಲ್ಲಿ ಮೇಜರ್ ವಾಲ್ಟರ್ ಕ್ಲೋಪ್ಟನ್ ವಿಂಗ್ಫೀಲ್ಡ್ ಮೊದಲ ಬಾರಿಗೆ ಹೊರಾಂಗಣ ಟೆನಿಸ್ ಅಂಕಣವನ್ನು ನಿರ್ಮಿಸಿದರು. 1877ರ ಜುಲೈ ತಿಂಗಳಲ್ಲಿ ಈ ಕ್ಲಬ್‌ಗೆ ’ದಿ ಆಲ್ ಇಂಗ್ಲೆಂಡ್ ಕ್ರೋಕೆ ಅಂಡ್ ಲಾನ್ ಟೆನಿಸ್ ಕ್ಲಬ್’ ಎಂದು ಮರುನಾಮಕರಣ ಮಾಡಲಾಯಿತು ಮತ್ತು ಸಾಂಪ್ರದಾಯಿಕ ಟೆನಿಸ್‌ನ ಮೊದಲ ಅಂತಾರಾಷ್ಟ್ರೀಯ ಗ್ರ್ಯಾನ್‌ಸ್ಲ್ಯಾಮ್ ಟೂರ್ನಿಗೆ ಚಾಲನೆ ನೀಡಲಾಯಿತು.

1877ರ ಉದ್ಘಾಟನಾ ವಿಂಬಲ್ಡನ್ ಚಾಂಪಿಯನ್‌ಶಿಪ್ 9 ಜುಲೈ, 1877ರಂದು ಪ್ರಾರಂಭವಾಯಿತು. ಮೊದಲ ಟೂರ್ನಿಯಲ್ಲಿ ಪುರುಷರ ಸಿಂಗಲ್ಸ್ ಮಾತ್ರ ಆಯೋ ಜಿಸಲಾಗಿತ್ತು. ಆ ವರ್ಷದಲ್ಲಿ 22 ಜನ ಭಾಗವಹಿಸಿದ್ದರು. ತದನಂತರದ ಕಾಲಘಟ್ಟಗಳಲ್ಲಿ ಮಹಿಳಾ ಸಿಂಗಲ್ಸ್, ಡಬಲ್ಸ್ ಮತ್ತು ಮಿಶ್ರ ಡಬಲ್ಸ್ ಟೂರ್ನಿಗಳನ್ನೂ ಸಹ ಆರಂಭಿ ಸಲಾಯಿತು. ಅಂದಿನಿಂದ ಇಂದಿನವರೆಗೆ ವಿಂಬಲ್ಡನ್ ಟೂರ್ನಿ ಪ್ರತಿ ವರ್ಷ ಜೂನ್ ಕೊನೆಯ ಅಥವಾ ಜುಲೈ ಮೊದಲ ವಾರದಲ್ಲಿ ಪ್ರಾರಂಭಿಸುವುದು ವಾಡಿಕೆ.

ಮೊದಲ ವಿಂಬಲ್ಡನ್ ಟೂರ್ನಿಯಲ್ಲಿ ಇಂಗ್ಲೆಂಡ್‌ನ ಸ್ಪೆನ್ಸರ್ ಗೋರ್ ಎಂಬವರು ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಆದರೆ, ಈತ ಕ್ರಿಕೆಟ್ ಆಟಗಾರನೂ ಆಗಿದ್ದು, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸರ್ರೆ ತಂಡವನ್ನೂ ಪ್ರತಿನಿಧಿಸಿದ್ದರು ಎಂಬುದು ಉಲ್ಲೇಖಾರ್ಹ. ಆನಂತರ ಹಲವು ಆಟಗಾರರು ಟಿನಿಸ್ ಲೋಕವನ್ನು ಆಳಿದ್ದಾರೆ. ಆದರೆ, ಸ್ಪೆಫಿ ಗ್ರಾಫ್ ಅವರನ್ನು ಟೆನಿಸ್ ದಂತಕಥೆ ಎಂದು ಬಣ್ಣಿಸಲಾಗುತ್ತಿದೆ. 8 ಬಾರಿ ವಿಂಬಲ್ಡನ್ ಟೆನಿಸ್ ಪ್ರಶಸ್ತಿಯನ್ನು ಜಯಿಸುವ ಮೂಲಕ ಸ್ವಿಜಲೆಂಡ್‌ನ ರೋಜರ್ ಫೆಡರರ್ ಅತಿಹೆಚ್ಚು ಬಾರಿ ಈ ಪ್ರಶಸ್ತಿಯನ್ನು ಗೆದ್ದ ಆಟಗಾರ ಎಂಬ ಶ್ರೇಯಕ್ಕೆ ಪಾತ್ರವಾಗಿದ್ದಾರೆ.

ವಿಶೇಷವೆಂದರೆ ಈ ವರ್ಷವೂ ಟೆನಿಸ್ ದಂತಕಥೆ ರೋಜರ್ ಫೆಡರರ್ ಕಣದಲ್ಲಿದ್ದು, ಸರ್ಬಿಯಾದ ರನ್ನಿಂಗ್ ಚಾಂಪಿಯನ್ ನೊವಾಕ್ ಜಾಕೋವಿಚ್ ಮತ್ತು ರಫೇಲ್ ನಡಾಲ್ ಕಠಿಣ ಪೈಪೋಟಿ ನೀಡಲಿದ್ದಾರೆ ಎಂದು ಟೆನಿಸ್ ಅಭಿಮಾನಿಗಳು ಕಾತುರದಿಂದ ಎದುರುನೊಡುತ್ತಿದ್ದಾರೆ.

ಮಹಿಳಾ ಸಿಂಗಲ್ಸ್‌ನಲ್ಲಿ ದಂತೆಕಥೆಯಾಗಿರುವ ಸಹೋದರಿಯರು ಸೆರೆನಾ ವಿಲಿಯಮ್ಸ್-ವೀನಸ್ ವಿಲಿಯಮ್ಸ್, ಸೈಮನ್ ಹೆಲಿಪ್, ನದಿಯಾ ಪೊಡರೊಸ್ಕಾ, ಅಂಜೆಲಿಕಾ ಕೆರ್ಬರ್, ಎಲೀಸ್ ಮಾರ್ಟೆನ್ಸ್ ಸೇರಿದಂತೆ ಅನೇಕ ಪ್ರಮುಖ ಆಟಗಾರ್ತಿಯರಿದ್ದಾರೆ. ಪ್ರಶಸ್ತಿ ಯಾರ ಮುಡಿಗೇರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಮಹಾಯುದ್ಧದ ಕಾಲದಲ್ಲಿ ಈ ಅಂಗಳದಲ್ಲೂ ಬಿದ್ದಿತ್ತು ಬಾಂಬ್

ಮೊದಲ ಮಹಾಯುದ್ಧದ ಕಾಲದಲ್ಲಿ 1915 ರಿಂದ 1918ರ ವರೆಗೆ ಮೊದಲ ಬಾರಿಗೆ ವಿಂಬಲ್ಡನ್ ಟೂರ್ನಿಯನ್ನು ಆಯೋಜಿಸಲಾಗಿರಲಿಲ್ಲ. 1916ರಲ್ಲಿ ಇಲ್ಲಿನ ಟೆನಿಸ್ ಅಂಗಳದ ಮೇಲೆ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿದ್ದವು. ಪರಿಣಾಮ ನಂತರದ ದಿನಗಳಲ್ಲಿ ಸೆಂಟರ್ ಕೋರ್ಟ್ ಅನ್ನು ಮರುನಿರ್ಮಾಣ ಮಾಡಲಾಯಿತು.

ರೋಜರ್ ಫೆಡರರ್ ಹೆಸರಲ್ಲಿದೆ ವಿಶಿಷ್ಟ ದಾಖಲೆ

PC : Fox Sports, (ರೋಜರ್ ಫೆಡರರ್)

ವಿಂಬಲ್ಡನ್ ಗೆಲುವು ಪ್ರತಿಯೊಬ್ಬ ಟೆನಿಸ್ ಆಟಗಾರನಿಗೆ ಒಂದು ಮಹತ್ವದ ಮೈಲಿಗಲ್ಲು. ಆಟಗಾರರು ಒಮ್ಮೆ ವಿಂಬಲ್ಡನ್ ಗೆದ್ದರೆ ಅದು ಅವರ ಜೀವನ ಶೇಷ್ಠ ಸಾಧನೆ ಎಂದು ಪರಿಗಣಿಸಲಾಗುತ್ತದೆ. ಆದರೆ, ಸ್ವಿಜರ್ಲೆಂಡ್ ಮೂಲದ ರೋಜರ್ ಫೆಡರರ್ ಒಟ್ಟು 8 ಸಲ ವಿಂಬಲ್ಡನ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಅದರಲ್ಲೂ 2003ರಿಂದ 2007ರ ವರೆಗೆ ಸತತ 5 ಬಾರಿ ಈ ಟ್ರೋಫಿಯನ್ನು ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ್ದರು. ಈ ಹಿಂದೆ ವಿಲಿಯಂ ರೆನ್ಶಾ ಎಂಬವರು 1981ರಿಂದ 1989ರ ಅವಧಿಯಲ್ಲಿ 7 ಬಾರಿ ಈ ಟ್ರೋಫಿಯನ್ನು ಗೆದ್ದದ್ದು ದಾಖಲೆಯಾಗಿ ಉಳಿದಿತ್ತು.

ವಿಂಬಲ್ಡನ್‌ನಲ್ಲಿ ಭಾರತದ ಸಾಧನೆ

ಕ್ರಿಕೆಟ್‌ಗೆ ಟೆನಿಸ್‌ಗಿಂತಲೂ ಅಥವಾ ಬೇರೆ ಯಾವುದೇ ಆಟಕ್ಕಿಂತಲೂ ಹೆಚ್ಚು ಪ್ರಾಶಸ್ತ್ಯ ನೀಡುವ ಭಾರತದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಟೆನಿಸ್ ದಾಖಲೆಗಳು ಸಾಕಷ್ಟು ಕಡಿಮೆ. ಆದರಲ್ಲೂ ವಿಂಬಲ್ಡನ್‌ನಂತಹ ಗ್ರ್ಯಾಂಡ್‌ಸ್ಲ್ಯಾಮ್ ಟೂರ್ನಿಗಳಲ್ಲಿ ಭಾರತದ ಸಾಧನೆ ಹೇಳಿಕೊಳ್ಳುವ ಮಟ್ಟದ್ದಲ್ಲ. ಆದರೂ, 1960 ಮತ್ತು 1961ರಲ್ಲಿ ಸತತ ಎರಡು ಬಾರಿ ಭಾರತದ ಟೆನಿಸ್ ಆಟಗಾರ ರಾಮನಾಥನ್ ಕೃಷ್ಣನ್ ಎಂಬವರು ಸೆಮಿಫೈನಲ್‌ಗೆ ತಲುಪಿ ಸಾಧನೆ ಮಾಡಿದ್ದರು. ಆದರೆ, ಟ್ರೋಫಿಗೆ ಮುತ್ತಿಡುವುದು ಸಾಧ್ಯವಾಗಿರಲಿಲ್ಲ.

PC : The Bridge, (ಮಹೇಶ್ ಭೂಪತಿ ಮತ್ತು ಲಿಯಾಂಡರ್ ಪೇಸ್)

1999ರಲ್ಲಿ ಭಾರತದ ಖ್ಯಾತ ಟೆನಿಸ್ ಜೋಡಿ ಮಹೇಶ್ ಭೂಪತಿ ಮತ್ತು ಲಿಯಾಂಡರ್ ಪೇಸ್ ಮೊದಲ ಬಾರಿಗೆ ಪುರುಷರ ಡಬಲ್ಸ್‌ನಲ್ಲಿ ವಿಂಬಲ್ಡನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಈ ಜೋಡಿ ಅದೇ ವರ್ಷ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲ್ಯಾಮ್ ಟೂರ್ನಿಯಲ್ಲೂ ಜಯ ಗಳಿಸುವ ಮೂಲಕ ಹೊಸ ಇತಿಹಾಸಕ್ಕೆ ನಾಂದಿ ಹಾಡಿತ್ತು. ಆ ನಂತರ ಈ ಜೋಡಿ 2017ರವರೆಗೆ 18 ಬಾರಿ ಗ್ರ್ಯಾಂಡ್‌ಸ್ಲ್ಯಾಮ್ ಪ್ರಶಸ್ತಿಯನ್ನು ಗೆದ್ದದ್ದು ಇಂದು ಇತಿಹಾಸ.

ಇನ್ನು ಮಹಿಳಾ ಟೆನಿಸ್‌ನಲ್ಲಿ ತನ್ನದೇ ಛಾಪು ಮೂಡಿಸಿದ್ದ ಸಾನಿಯಾ ಮಿರ್ಜಾ ಸಹ 2015ರಲ್ಲಿ ಸ್ವಿಜರ್ಲೆಂಡ್‌ನ ಮಾರ್ಟಿನಾ ಹಿಂಗಿಸ್ ಜೊತೆಗೂಡಿ ರಷ್ಯಾದ ಎಲೆನಾ ವೆಸ್ನೇನಾ ಮತ್ತು ಎಕಟೆರೀನಾ ಮಕರೋವಾ ಜೋಡಿಯನ್ನು ಸೋಲಿಸುವ ಮೂಲಕ ಮಹಿಳಾ ಡಬಲ್ಸ್‌ನಲ್ಲಿ ಚೊಚ್ಚಲ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದರು. ಆದರೆ, ಆ ನಂತರದ ದಿನಗಳಿಂದ ಈವರೆಗೆ ಭಾರತ ಮಹಿಳಾ ಟೆನಿಸ್ ಕ್ರೀಡೆಯಲ್ಲಿ ಮತ್ತೊಂದು ಗ್ರ್ಯಾಂಡ್‌ಸ್ಲ್ಯಾಮ್ ಪ್ರಶಸ್ತಿಯ ಬರ ಎದುರಿಸುತ್ತಿದೆ.

ಈ ವರ್ಷ ವಿಂಬಲ್ಡನ್ ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ರಾಮ್‌ಕುಮಾರ್ ರಾಮನಾಥನ್ ಭಾರತದ ಪರ ಕಣಕ್ಕಿಳಿದಿದ್ದರು. ಆದರೆ ಅರ್ಹತಾ ಸುತ್ತಿನಲ್ಲೇ ಅವರು ಆಸ್ಟ್ರೇಲಿಯಾದ ಮಾರ್ಕ್ ಪೋಮನ್ಸ್ ವಿರುದ್ಧ ಸೋಲುವ ಮೂಲಕ ವಿಂಬಲ್ಡನ್‌ನಲ್ಲಿ ಭಾರತದ ಪ್ರಾತಿನಿಧ್ಯವೇ ಇಲ್ಲದಂತಾಗಿದೆ!


ಇದನ್ನೂ ಓದಿ: ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...