Homeಮುಖಪುಟನೋಟು ಬಂದಿಯಿಂದ ರೈತರ ಜೀವನ ಬರ್ಬಾದ್: ಒಪ್ಪಿಕೊಂಡ ಮೋದಿ ಸರ್ಕಾರ

ನೋಟು ಬಂದಿಯಿಂದ ರೈತರ ಜೀವನ ಬರ್ಬಾದ್: ಒಪ್ಪಿಕೊಂಡ ಮೋದಿ ಸರ್ಕಾರ

ನೋಟು ಬಂದಿ ತರುವಾಯ ಲಕ್ಷಾಂತರ ರೈತರು ಸಂಕಷ್ಟ ಅನುಭವಿಸಿದ್ದಾರೆ ಎಂದು ಮೋದಿ ಸರ್ಕಾರದ ಕೃಷಿ ಇಲಾಖೆ ಒಪ್ಪಿಕೊಂಡಿದೆ!!

- Advertisement -
- Advertisement -

| ಕೆ.ಪಿ ಸುರೇಶ್ |

ನೋಟು ಬಂದಿ ತರುವಾಯ ಲಕ್ಷಾಂತರ ರೈತರು ಸಂಕಷ್ಟ ಅನುಭವಿಸಿದ್ದಾರೆ ಎಂದು ಮೋದಿ ಸರ್ಕಾರದ ಕೃಷಿ ಇಲಾಖೆ ಒಪ್ಪಿಕೊಂಡಿದೆ!! ಸಂಸತ್ತಿನ ಆರ್ಥಿಕ ಸ್ಥಾಯಿ ಸಮಿತಿಗೆ ನೀಡಿದ ವರದಿಯಲ್ಲಿ ಕೃಷಿ ಇಲಾಖೆ ಈ ತಪ್ಪೊಪ್ಪಿಗೆ ವರದಿ ನೀಡಿದೆ. ವ್ಯಂಗ್ಯವೆಂದರೆ ಪ್ರಧಾನ ಚೌಕೀದಾರರು “ಕಾಳ ಧನ ಹತ್ತಿಕ್ಕಲು ನೋಟು ಬಂದಿಯಂಥಾ ಕಹಿ ಗುಳಿಗೆ ಪ್ರಯೋಗಿಸಿದೆ” ಎಂದು ಬೊಗಳೆ ಭಾಷಣ ಮಾಡುತ್ತಿದ್ದ ದಿನವೇ ಈ ವರದಿ ಬಹಿರಂಗವಾಗಿದೆ. ಈ ವರದಿ ಇಂದಿನದ್ದಲ್ಲ!! ಕಳೆದ ವರ್ಷದ ನವಂಬರ್ 20ರದ್ದು!! ಮೂರು ರಾಜ್ಯಗಳ ಚುನಾವಣಾ ಸಂದರ್ಭದಲ್ಲಿ ಮೋದಿ ಬೂಸಿ ಭಾಷಣ ಮಾಡುವಾಗ ಈ ವರದಿ ಬಂದಿದ್ದು ಗಮನಾರ್ಹ.

ರೈತರು ಮುಂಗಾರು ಬೆಳೆ ಮಾರಿ ಹಿಂಗಾರು ಬೆಳೆಗೆ ತಯಾರಿ ನಡೆಸುವ ಸಂಕ್ರಮಣ ಘಟ್ಟದಲ್ಲಿ ಬಿದ್ದ ಈ ಹೊಡೆತದಿಂದಾಗಿ ನಗದು ಅಭಾವ ಅನುಭವಿಸಿದ ರೈತರು ಅಪಾರ ಸಂಕಷ್ಟ ಅನುಭವಿಸಬೇಕಾಯಿತು. ದೇಶದ 27 ಕೋಟಿ ರೈತಾಪಿ ವರ್ಗ ಬಹುತೇಕ ನಗದು ಮೂಲಕವೇ ವ್ಯವಹರಿಸುತ್ತಿದ್ದು ಬೀಜ, ಗೊಬ್ಬರ ಕೊಳ್ಳುವುದರಿಂದ ಹಿಡಿದು ಬೇಸಾಯದ ಎಲ್ಲಾ ಕಾರ್ಯಗಳಲ್ಲೂ ತೊಂದರೆ ಅನುಭವಿಸಿದರು. ದೊಡ್ಡ ಜಮೀನುದಾರರೂ ಕೂಲಿ ಸಂಬಳ ಕೊಡಲು ನಗದು ಅಭಾವ ಅನುಭವಿಸಿದರು.

ರಾಷ್ಟ್ರೀಯ ಬೀಜ ನಿಗಮ 1.38 ಲಕ್ಷ ಕ್ವಿಂಟಾಲುಗಳಷ್ಟು ಬಿತ್ತನೆ ಗೋಧಿ ಬೀಜ ಮಾರಾಟ ಮಾಡಲಾರದೇ ಸೋತಿತು. ಹಳೇ ನೋಟು ಬಳಸಬಹುದು ಎಂದು ಸರ್ಕಾರ ಹೇಳಿದ ಮೇಲೂ ಮಾರಾಟ ಹೆಚ್ಚಲಿಲ್ಲ.

ಬೇಸಾಯ ಕುಂಟಿದ ಬಗ್ಗೆ ಕೃಷಿ ಇಲಾಖೆ ವರದಿಯಲ್ಲಿ ಹೇಳಿದೆ. ಆದರೆ ಇದರ ಸಾಮಾಜಿಕ ಪರಿಣಾಮದ ಬಗ್ಗೆ ಅದು ಹೇಳಿಲ್ಲ. ಅತ್ತ ಕಾರ್ಮಿಕ ಸಚಿವಾಲಯ ನೋಟು ಬಂದಿಯಿಂದ ಕಷ್ಟ-ನಷ್ಟ ಉಂಟಾಗಲಿಲ್ಲ ಎಂದು ಹೇಳಿ ಈ ಸಮಿತಿಯಿಂದ ಉಗಿಸಿಕೊಂಡಿದೆ.

ಇದನ್ನು ಓದಿ: ನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

ಕೃಷಿ ಕ್ಷೇತ್ರ ಸತತವಾಗಿ ಒಂದೆರಡು ದಶಕಗಳಿಂದ ಕುಂಟುತ್ತಿರುವುದು ಸರ್ಕಾರಕ್ಕೆ ಗೊತ್ತು. ಅಂಥಾ ಸಂದರ್ಭದಲ್ಲಿ ಈ ತಲೆ ಮೇಲೆ ಚಪ್ಪಡಿ ಎಳೆಯುವ ಕೆಲಸ ಮಾಡಿದ ಮೋದಿ ಇಂದಿಗೂ ಈ ಪ್ರಮಾದವನ್ನು ಒಪ್ಪಿಕೊಳ್ಳುತ್ತಿಲ್ಲ. ಗಾಯದ ಮೇಲೆ ಉಪ್ಪು ಸವರಿದ ಹಾಗೆ ರೈತರ ಆದಾಯ ದ್ವಿಗುಣ ಎಂಬ ಬೂಸಿಯನ್ನು ದೇಶದ ಮೇಲೆ ಹೇರುತ್ತಾ ಮೊನ್ನೆ ಮೊನ್ನೆ ವರೆಗೂ ಓಡಾಡುತ್ತಿದ್ದ ಈ ಬೊಗಳೆ ಪ್ರಧಾನಿ ಲೋಕಸಭಾ ಚುನಾವಣೆಯಲ್ಲಿ ಈ ಯಾವ ವಿಷಯವನ್ನೂ ಪ್ರಸ್ತಾಪಿಸದೇ ಕೂತಿದ್ದಾರೆ.

ನಮ್ಮ ದುರಂತವೆಂದರೆ ಎದುರಾಳಿ ಪಕ್ಷಗಳೂ ನಿರುದ್ಯೋಗ, ರೈತ ಸಂಕಷ್ಟದಂಥಾ ವಿಷಯಗಳನ್ನು ಮುಂದೊತ್ತದೇ ಮೋದಿಯೊಬ್ಬರನ್ನೇ ಟಾರ್ಗೆಟ್ ಮಾಡುವ ರಾಜಕೀಯ ಮಾಡುತ್ತಿದ್ದಾರೆ. ಅಷ್ಟೇಕೆ ಮೋದಿ ಸೃಷ್ಟಿಸಿದ ಮರಣಾಂತಿಕ ಗಾಯಗಳಿಗೆ ಪರಿಹಾರ ಏನು ಎಂಬ ನಕಾಶೆಯೂ ಇವರಲ್ಲಿ ಇಲ್ಲ. ಮೇವಿಲ್ಲದ ಹಸುಗಳು ಕೂತಲ್ಲೇ ತೂಕಡಿಸಿ ಒದ್ದಾಡಿ ಸಾಯುತ್ತವೆ. ಪ್ರಾಣಿ ಸಹಜ ಅಸಹಾಯಕತೆ ಅದು. ಒಂದು ವರ್ಗದ ರೈತರು ಈ ಅಸಹಾಯಕತೆಯಲ್ಲಿದ್ದರೆ, ಇನ್ನೊಂದು ವರ್ಗ ಇರುವ ರಾಜಕೀಯ ಪಕ್ಷಗಳ ಮೇಲಾಟವನ್ನೇ ಸಂಭ್ರಮಿಸುತ್ತಾ ಕೂತಿರುವಂತಿದೆ.

ಜಿಂಕೆಯೊಂದು ಹುಲಿಗೆ ಬಲಿಯಾದರೆ ಹಿಂಡಿನ ಉಳಿದ ಜಿಂಕೆಗಳು ಹೋರಾಡಿದ್ದಿಲ್ಲ. ಒಮ್ಮೆ ನೋಡಿ ಮತ್ತೆ ಮೇಯತೊಡಗುತ್ತವೆ. ರೈತರೂ ಇಂಥಾ ಪಶು ಸಹಜ ಮಟ್ಟಕ್ಕೆ ಬಂದಿದ್ದಾರೆ. ಈ ರೂಪಾಂತರಕ್ಕೆ ಮೋದಿಯ ಕೊಡುಗೆ ದೊಡ್ಡದು!

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....