Homeಮುಖಪುಟಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

- Advertisement -
- Advertisement -

ಒಂದು ತಿಂಗಳ ಹಿಂದೆ ಕಾಣೆಯಾಗಿದ್ದ ಒಂದೇ ಕುಟುಂಬದ ಐವರು ಶವವಾಗಿ 8 ಅಡಿ ಗುಂಡಿಯಲ್ಲಿ ಪತ್ತೆಯಾಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ದಿವಾಸ್ ಜಿಲ್ಲೆಯಲ್ಲಿ ನಡೆದಿದೆ. ದೇಹಗಳು ಜೀರ್ಣವಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಎಲ್ಲಾ ದೇಹಗಳನ್ನು ನಗ್ನವಾದ ಸ್ಥಿತಿಯಲ್ಲಿ ಕಂಡುಬಂದಿವೆ. ಪೊಲೀಸರು ಹಿಟಾಚಿಯನ್ನು ಬಳಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

45 ವರ್ಷ ವಯಸ್ಸಿನ ಮಮತಾ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ರೂಪಾಲಿ(21), ದಿವ್ಯಾ(14) ಮತ್ತು ಅವರ ಇಬ್ಬರು ಸೋದರ ಸಂಬಂಧಿಕರು ದಿವಾಸ್‌ನ ತಮ್ಮ ನಿವಾಸದಿಂದ ಮೇ 13 ರಂದು ಕಾಣೆಯಾಗಿದ್ದರು. ಮೃತ ಕುಟುಂಬದವರು ವಾಸವಿದ್ದ ಮನೆಯ ಮಾಲೀಕ ಮತ್ತು ಆತನ 12 ಜನ ಸಹಾಯಕರು ಈ ಭೀಕರ ಘಟನೆಯ ಹಿಂದೆ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಗುಂಡಿಯನ್ನು ತೋಡಿದಾಗ ದೇಹಗಳು ನಗ್ನಾವಸ್ಥೆಯಲ್ಲಿ ಪತ್ತೆಯಾಗಿದ್ದವು. ಆರೋಪಿಗಳು ಕೊಲೆ ಮಾಡಿ ಬಟ್ಟೆಗಳನ್ನು ಸುಟ್ಟು ಉಪ್ಪು ಮತ್ತು ಯೂರಿಯಾವನ್ನು ಬಳಸಿ ಮೃತದೇಹಗಳನ್ನು ಕೊಳೆಯುವಂತೆ ಮಾಡಿದ್ದರೆಂದು ಪ್ರಕರಣದ ಕುರಿತು ಪೊಲೀಸ್ ಇಲಾಖೆ ಹೇಳಿಕೆ ನೀಡಿದೆ.

ಮುಖ್ಯ ಅರೋಪಿ ಸುರೇಂದ್ರ ಚೌಹಾಣ್ ಸೇರಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಂದ್ರ ಚೌಹಾಣ್ ಕೊಲೆಯ ಯೋಜನೆಯನ್ನು ರೂಪಿಸಿ ಕೊಲೆಗೈದಿದ್ದಾನೆ. ಉಳಿದ 5 ಜನ ಆರೋಪಿಗಳು ಗುಂಡಿಯನ್ನು ತೆಗಯುವ ಮೂಲಕ ಕೊಲೆಗೆ ಸಹಕರಿಸಿದ್ದಾರೆ ಎಂದು ದಿವಾಸ್ ಪೊಲೀಸ್ ಠಾಣಾಧಿಕಾರಿ ಶಿವ ದಯಾಳ್ ಸಿಂಗ್ ಮಾಹಿತಿ ನೀಡಿದ್ದಾರೆ. ಉಳಿದ ಏಳು ಜನ ಆರೋಪಿಗಳಿಗಾಗಿ ದಿವಾಸ್ ಪೊಲೀಸರು ಶೋಧಕಾರ್ಯವನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: ಯುಪಿ: ಅತ್ಯಾಚಾರ ಆರೋಪಿಗಳ ಕಪಾಳಕ್ಕೆ ಹೊಡೆದು ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯ!

ಮೃತ ಕುಟುಂಬದ ಸಂಬಂಧಿಕರು ಮೇ 13ರಂದು ಕಾಣೆಯಾಗಿರುವ ಕಂಪ್ಲೇಂಟ್‌ ದಾಖಲಿಸಿದ್ದರು. ಆರೋಪಿಯು ಪೊಲೀಸರ ತನಿಖೆಯ ಹಾದಿಯನ್ನು ತಪ್ಪಿಸಲು ಹಲವು ಪ್ರಯತ್ನಗಳನ್ನು ಮಾಡಿದ್ದ. ಕೊಲೆ ಆರೋಪಿ ಸುರೇಂದ್ರ ಚೌಹಾಣ್ ಕುಟುಂಬಸ್ಥರ ಫೇಸ್‌ಬುಕ್ ಐಡಿಯನ್ನು ಬಳಸಿ ಮೃತ ರೂಪಾಲಿ ತನ್ನ ಇಚ್ಛೆಯಂತೆಯೇ ಮದುವೆಯಾಗಿದ್ದಾಳೆ. ಹಾಗೂ ಆಕೆಯ ತಾಯಿ ಮತ್ತು ಸಹೋದರಿಯರು ಅವಳೊಂದಿಗೆ ಸುರಕ್ಷಿತವಾಗಿದ್ದಾರೆ ಎಂಬ ಸಂದೇಶಗಳನ್ನು ಹರಿಬಿಟ್ಟು ಪೊಲೀಸರ ಕಣ್ಣು ತಪ್ಪಿಸಲು ಯತ್ನಿಸಿದ್ದಾನೆ. ಪೊಲೀಸರು ಸಂದೇಶ ಕಳುಹಿಸಲಾದ ಮೊಬೈಲ್ ಫೋನ್‌ ಅನ್ನು ಟ್ರೇಸ್‌ ಮಾಡಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

ಘಟನೆಯ ಹಿನ್ನಲೆ

ಕೊಲೆಯ ಮುಖ್ಯ ಆರೋಪಿ ಸುರೇಂದ್ರ ಚೌಹಾಣ್ ಮೃತ ಕುಟುಂಬಕ್ಕೆ ಪರಿಚಿತ ವ್ಯಕ್ತಿಯಾಗಿದ್ದು ಅವರ ಮನೆಗೆ ಬಂದು ಹೋಗುವ ಪರಿಪಾಠವನ್ನು ಬೆಳೆಸಿಕೊಂಡಿದ್ದ. ಮೃತ ರೂಪಾಲಿ ಮತ್ತು ಆರೋಪಿ ಸುರೇಂದ್ರನ ನಡುವೆ ಪ್ರೇಮ ಸಂಬಂಧವೂ ನಡೆದಿತ್ತು. ಇದ್ದಕ್ಕಿದ್ದಂತೆ ಸುರೇಂದ್ರ ಇನ್ನೊಂದು ಮಹಿಳೆಯೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದು ರೂಪಾಲಿಯಯನ್ನು ಸಿಟ್ಟಿಗೇಳಿಸಿತ್ತು. ಸುರೇಂದ್ರ ಮತ್ತು ತನ್ನ ಪೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ರೂಪಾಲಿ ಸುರೇಂದ್ರ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹುಡುಗಿಗೂ ಈ ಚಿತ್ರವನ್ನು ಕಳುಹಿಸಿದ್ದಳು. ರೂಪಾಲಿ ಮತ್ತು ಆಕೆಯ ಕುಟುಂಬ ತನ್ನ ನಿಶ್ಚಿತಾರ್ಥನ್ನು ಎಲ್ಲಿ ಮುರಿದುಹಾಕುತ್ತದೆಯೋ ಎಂಬ ಭಯದಲ್ಲಿ ಆರೋಪಿಯು ಕುಟುಂಬಸ್ಥರೆಲ್ಲರನ್ನು ಕೊಲೆ ಮಾಡಿ 8 ಅಡಿ ಗುಂಡಿಯಲ್ಲಿ ಹೂತಿದ್ದಾನೆ ಎಂದು ದಿವಾಸ್ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಾವ ರೀತಿಯಲ್ಲಿ ಕೊಲೆಯನ್ನು ಮಾಡಲಾಗಿದೆ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಯೋತ್ಪಾದನೆ ಆರೋಪ ಹೊತ್ತು 12 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...