Homeಮುಖಪುಟಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

ಭಯೋತ್ಪಾದನೆ ಆರೋಪ ಹೊತ್ತು 11 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

- Advertisement -
- Advertisement -

ಭಯೋತ್ಪಾದನೆಯ ಆರೋಪ ಹೊತ್ತು 11 ವರ್ಷ ಜೈಲಿನಲ್ಲಿದ್ದ ಕಾಶ್ಮೀರ ಮೂಲದ ಬಶೀರ್ ಅಹ್ಮದ್ ಬಾಬಾ (44) ಅವರನ್ನು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಸಂತ್ರಸ್ತ ಬಶೀರ್‌ ಅಹ್ಮದ್‌ ಬಾಬಾ ಅವರು ಗುಜರಾತ್ ಜೈಲಿನಿಂದ ಇದೀಗ ಬಿಡುಗಡೆಯಾಗಿದ್ದಾರೆ. ಅವರ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಎಲ್ಲಾ ಆರೋಪಗಳಲ್ಲಿ ಅವರು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ ಅವರು ತಮ್ಮ ಮನೆಗೆ ಮರಳಿದ್ದಾರೆ.

ಅವರು ಜೈಲಿನಲ್ಲಿದ್ದ ಈ ಸಮಯದಲ್ಲಿ ಅವರ ಚಿಕ್ಕಪ್ಪ ಮತ್ತು ಅವರ ತಂದೆ ಗುಲಾಮ್ ನಬಿ ಬಾಬಾ ಸೇರಿದಂತೆ ಅವರ ಕುಟುಂಬದ ಅನೇಕ ಸದಸ್ಯರು ಸಾವನ್ನಪ್ಪಿದರು. ಗುತ್ತಿಗೆದಾರರಾಗಿದ್ದ ಅವರ ತಂದೆ 2017 ರಲ್ಲಿ ನಿಧನರಾಗಿದ್ದರು, ಅವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ತಮ್ಮ ತಂದೆ ಮೃತಪಟ್ಟಿರುವುದರ ಬಗ್ಗೆ ಹಲವಾರು ದಿನಗಳು ಕಳೆದರೂ ಬಶೀರ್‌ ಅವರಿಗೆ ಮಾಹಿತಿ ಇರಲಿಲ್ಲ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ಅವರ ತಂದೆ ಸಾವನ್ನಪ್ಪಿದ್ದರ ಮಾಹಿತಿ ತಿಳಿಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

ಫೆಬ್ರವರಿ 2010 ರಲ್ಲಿ ಅವರು ಗುಜರಾತ್‌ನಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲು ಕಾಶ್ಮೀರದಿಂದ ಬಂದಿದ್ದರು. ಆದರೆ, ಅವರು ಹಿಂದಿರುಗುವ ಒಂದು ದಿನ ಮೊದಲು ಅವರನ್ನು ಗುಜರಾತ್‌ನ ಆನಂದ್ ಜಿಲ್ಲೆಯ ಸಮರ್ಖಾ ಗ್ರಾಮದ ಬಳಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿತು. ಅಲ್ಲದೆ, “ಬಶೀರ್‌ ಅವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಭಾಗವಾಗಿದ್ದಾರೆ. ಭಯೋತ್ಪಾದಕ ತರಬೇತಿಗಾಗಿ ಯುವಕರ ಜಾಲವನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ” ಎಂದು ಆರೋಪಿಸಿ, ಪ್ರಕರಣ ದಾಖಲಿಸಿತ್ತು.

ಬಂಧನಕ್ಕೆ ಮುಂಚಿತವಾಗಿ, ಬಶೀರ್ ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಡಿಪ್ಲೊಮಾ ಪಡೆದಿದ್ದರು. ಜೊತೆಗೆ ಅವರು ರಾಜಕೀಯ ವಿಜ್ಞಾನ, ಸಾರ್ವಜನಿಕ ಆಡಳಿತ ಮತ್ತು ಬೌದ್ಧಿಕ ಆಸ್ತಿ ಕಾಯ್ದೆಯಲ್ಲಿ ಮೂರು ಸ್ನಾತಕೋತ್ತರ ಪದವಿಗಳನ್ನೂ ಪಡೆದಕೊಂಡಿದ್ದರು.

ಇದನ್ನೂ ಓದಿ: ವಿಭಜನೆಯ ನಂತರ ಮೊಟ್ಟಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಸರ್ವಪಕ್ಷ ಸಭೆ!

“ನಾನು ನನ್ನ ಹೆಚ್ಚಿನ ಸಮಯವನ್ನು ಜೈಲಿನ ಅಧ್ಯಯನದಲ್ಲಿ ಕಳೆದಿದ್ದೇನೆ. ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ ಎಂಬ ಭರವಸೆ ನನಗೆ ಇತ್ತು. ನಾನು ಮನೆಗೆ ಹಿಂದಿರುಗಿದ ನಂತರ, ರಾಜ್ಯದಲ್ಲಿ ನಿರುದ್ಯೋಗ, ಆತ್ಮಹತ್ಯೆ ಮತ್ತು ಹಿಂಸಾಚಾರ ಹೆಚ್ಚುತ್ತಿರುವ ವರದಿಗಳನ್ನು ಕೇಳಿದ್ದೇನೆ” ಎಂದು ಬಶೀರ್ ತಿಳಿಸಿರುವುದಾಗಿ ನ್ಯೂಸ್‌ಕ್ಲಿಕ್‌ ವರದಿ ಮಾಡಿದೆ.

ಕಾಶ್ಮೀರ ಸೇರಿದಂತೆ ದೇಶಾದ್ಯಂತ ಕಳೆದ ಮೂರು ದಶಕಗಳಲ್ಲಿ ಜೈಲಿನಲ್ಲಿದ್ದ ನೂರಾರು ಕಾಶ್ಮೀರಿಗಳಲ್ಲಿ ಬಶೀರ್ ಕೂಡ ಒಬ್ಬರು. ಹಲವರ ವಿರುದ್ದ “ಭಯೋತ್ಪಾದನೆ” ಸಂಬಂಧಿತ ಚಟುವಟಿಕೆಗಳಲ್ಲಿ ಯೋಜನೆ ಮತ್ತು ಭಾಗವಹಿಸಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆದಾಗ್ಯೂ, ವರ್ಷಗಳಲ್ಲಿ, ಡಜನ್ಗಟ್ಟಲೆ ಜನರು ನಿರಪರಾಧಿಗಳು ಎಂದು ಸಾಬೀತಾಗಿದೆ ಮತ್ತು ಅವರನ್ನು ಭಾರತೀಯ ನ್ಯಾಯಾಲಯಗಳು ಆರೋಪ ಮುಕ್ತಗೊಳಿಸಿವೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

ತನ್ನ ಮಗನ ಹಿಂದಿರುಗುವಿಕೆಗಾಗಿ ಪ್ರತಿದಿನ ಪ್ರಾರ್ಥಿಸುತ್ತಿದ್ದೆ ಎಂದು ಬಶೀರ್‌‌ ತಾಯಿ ಮೊಕ್ತಾ ತಿಳಿಸಿದ್ದಾರೆ. “ಆತನ ಬಂಧನದ ನಂತರ ನಮ್ಮ ಕುಟುಂಬವು ಸಾಕಷ್ಟು ತೊಂದರೆ ಅನುಭವಿಸಿತು. ನನ್ನ ಪತಿಗೆ ನಿಧನರಾದರು ಮತ್ತು ಮನೆಯಲ್ಲಿ ಅವಿವಾಹಿತ ಇಬ್ಬರು ಹೆಣ್ಣು ಮಕ್ಕಳಿದ್ದರು. ನಮ್ಮ ಕಷ್ಟ ಅಲ್ಲಾಹನಿಗೆ ಮಾತ್ರ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

ಬಶೀರ್ ಅವರ ಸಹೋದರಿಯರಿಬ್ಬರೂ ಈಗ ಮದುವೆಯಾಗಿದ್ದಾರೆ. ಅವರ ಸಹೋದರ ನಜೀರ್ ಅಹ್ಮದ್ ಅವರ ಕುಟುಂಬದ ಹೊಣೆ ಹೊತ್ತು, ಕುಟುಂಬ ನಿರ್ವಹಣೆಗಾಗಿ ಸೇಲ್ಸ್‌ಮ್ಯಾನ್‌ ಆಗಿ ಕೆಲಸ ಮಾಡಿದ್ದಾರೆ. ಅವರಿಗೆ ಇನ್ನೂ ಮದುವೆಯಾಗಿಲ್ಲ.

“ನನ್ನ ತಂದೆಯ ಸಾವು ಎಲ್ಲವನ್ನೂ ಬದಲಾಯಿಸಿತು… ನಾನು ನನ್ನ ಅಣ್ಣನಿಗಾಗಿ ಕಾಯುತ್ತಿದ್ದೆ. ಅವರು ನಿರಪರಾಧಿ ಎಂದು ನನಗೆ ತಿಳಿದಿತ್ತು” ಎಂದು ನಜೀರ್ ಹೇಳಿದ್ದಾರೆ. ಅವರ ಹಿರಿಯ ಸಹೋದರ ಮರಳಿದ್ದರಿಂದ, ಈಗ  ಅವರು ಒಟ್ಟಿಗೆ ಮದುವೆಯಾಗಲು ಯೋಜಿಸುತ್ತಿದ್ದಾರೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ರಾಜ್ಯತ್ವ ಮರುಸ್ಥಾಪನೆಯೆ ನಮ್ಮ ಪ್ರಮುಖ ಅಜೆಂಡಾ: ಗುಲಾಮ್‌ ನಬಿ ಆಝಾದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...