Homeಮುಖಪುಟಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

ಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

- Advertisement -
- Advertisement -

ಕೊರೊನಾ ಸಾಂಕ್ರಾಮಿಕ, ಲಾಕ್‌ಡೌನ್‌ನಿಂದ ಉಂಟಾಗಿರುವ ಸಂಕಷ್ಟದಲ್ಲಿ ಇರುವ ಜನರ ಜೀವನದ ಮೇಲೆ ಬರೆ ಮೇಲೆ ಬರೆ ಬೀಳುತ್ತಿದೆ. ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್, ಡೀಸೆಲ್, ದಿನಸಿ ಪದಾರ್ಥಗಳ ಬೆಲೆ ಏರಿಕೆ ಜೊತೆಗೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ತನ್ನ ಗ್ರಾಹಕರಿಂದ ಹಲವು ರೀತಿಯ ಶುಲ್ಕಗಳನ್ನು ವಿಧಿಸಲು ಮುಂದಾಗಿದೆ.

ಖಾತೆದಾರರಿಂದ ವಿವಿಧ ರೀತಿಯಲ್ಲಿ ಶುಲ್ಕ ವಸೂಲಿಗೆ ಮುಂದಾಗಿರುವ ಎಸ್‌ಬಿಐ, ಎಟಿಎಂ ಮಾತ್ರವಲ್ಲದೆ ಶಾಖೆಗಳಲ್ಲಿಯೂ ಹಣವನ್ನು ಹಿಂಪಡೆಯುವಿಕೆಗೂ (ವಿತ್‌ಡ್ರಾ) ಜುಲೈ 01 (ಇಂದಿನಿಂದ) ರಿಂದ ಶುಲ್ಕ ವಿಧಿಸುವುದಾಗಿ ಎಸ್‌ಬಿಐ ಮಾಹಿತಿ ನೀಡಿದೆ.

ಎಸ್‌ಬಿಐ ಬ್ಯಾಂಕುಗಳಲ್ಲಿ ಉಳಿತಾಯ ಖಾತೆ (ಬಿಎಸ್‌ಬಿಡಿ) ಯನ್ನು ಹೊಂದಿರುವ ಖಾತೆದಾರರಿಗೆ ಎಂಟಿಎಂ ಮತ್ತು ಬ್ಯಾಂಕ್‌ ಶಾಖೆಗಳಲ್ಲಿ ಹಣವನ್ನು ವಿತ್‌ಡ್ರಾ ಮಾಡಿದರೂ ಶುಲ್ಕ ವಿಧಿಸಲಾಗುವುದು. ತಿಂಗಳಲ್ಲಿ ಮೊದಲ ನಾಲ್ಕು ಬಾರಿ ಎಟಿಎಂನಿಂದ ಅಥವಾ ಬ್ಯಾಂಕ್‌ನಿಂದ ಹಣ ವಿತ್‌ಡ್ರಾ ಮಾಡಲು ಯಾವುದೇ ಶುಲ್ಕವಿಲ್ಲ.

ಆದರೆ, ನಾಲ್ಕು ಬಾರಿಗಿಂತ ಹೆಚ್ಚು ಬಾರಿ ಹಣ ಡ್ರಾ ಮಾಡಿದರೆ, 15 ರಿಂದ 75 ರೂಪಾಯಿಗಳ ವರೆಗೆ ಶುಲ್ಕ ಮತ್ತು ಜಿಎಸ್‌ಟಿ ವಿಧಿಸುವುದಾಗಿ ಎಸ್‌ಬಿಐ ತಿಳಿಸಿದೆ. ಆದರೆ, ಹಣಕಾಸು ವರ್ಗಾವಣೆ ವಹಿವಾಟಿಗೆ ಸಂಬಂಧಿಸಿದಂತೆ ಯಾವುದೇ ಶುಲ್ಕವಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಉಳಿತಾಯ ಖಾತೆದಾರನಿಗೆ ಮೊದಲ ಬಾರಿಗೆ ನೀಡಲಾಗುವ 10 ಲೀಫ್ ಚೆಕ್‌ಬುಕ್‌ಅನ್ನು ಉಚಿತವಾಗಿ ನೀಡಲಾಗುವುದು. ನಂತರ ಪಡೆಯುವ ಚೆಕ್‌ಬುಕ್‌ಗೆ 40 ರೂ. ಶುಲ್ಕ ಮತ್ತು ಜಿಎಸ್‌ಟಿ ವಿಧಿಸಲಾಗುವುದು. ಅಲ್ಲದೆ, 25 ಲೀಫ್ ಚೆಕ್‌ಬುಕ್‌ಗೆ 75 ರೂ. ಶುಲ್ಕ ಮತ್ತು ಜಿಎಸ್‌ಟಿ ವಿಧಿಸಲಾಗುವುದು. ತುರ್ತಾಗಿ ಪಡೆಯುವ ಚೆಕ್‌ ಪುಸ್ತಕ (10 ಎಲೆ)ಕ್ಕೆ 50 ರೂ ಮತ್ತು ಜಿಎಸ್‌ಟಿ ವಿಧಿಸಲಾಗುವುದು ಎಂದು ತಿಳಿಸಿದೆ.

ಆದರೆ, ಹಿರಿಯ ನಾಗರಿಕರಿಗೆ ಈ ನಿಯಮಗಳು ಅನ್ವಯಿಸುವುದಿಲ್ಲ ಎಂದು ಎಸ್‌ಬಿಐ ಹೇಳಿದೆ. ಬಿಎಸ್‌ಬಿಡಿ ಖಾತೆಯು ಪ್ರಾಥಮಿಕವಾಗಿ ಕಾರ್ಮಿಕ ವರ್ಗಕ್ಕೆ ಮೀಸಲಾಗಿರುವುದರಿಂದ, ಈ ಹೊಸ ನಿಯಮವು ಅವರ ಬ್ಯಾಂಕಿಂಗ್ ಪ್ರವೇಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.

ಬ್ಯಾಂಕ್‌ಗಳಲ್ಲಿ ಖಾತೆ ತೆರೆಸುವಾಗ, ದುಡಿಯುವ ವರ್ಗವನ್ನು ಹೂಡಿಕೆ ಮಾಡಲು ಮತ್ತು ಅವರ ಹಣವನ್ನು ಉಳಿತಾಯ ಮಾಡುವುದಕ್ಕಾಗಿ ಉಳಿತಾಯ ಖಾತೆ ಅಥವಾ ಜಿರೋ ಬ್ಯಾಲೆನ್ಸ್ ಅಕೌಂಟ್‌ಗಳನ್ನು ತೆರೆಯಲು ಹೇಳಲಾಗುತ್ತಿತ್ತು. ಆದರೆ, ಇದೀಗ ಎಸ್‌ಬಿಐ ಸೇರಿದಂತ ಎಹಲವು ಬ್ಯಾಂಕ್‌ಗಳು ಈ ಪ್ರಮಾಣದಲ್ಲಿ ಶುಲ್ಕ ಮತ್ತು ಜಿಎಸ್‌ಟಿ ವಿಧಿಸುತ್ತಿರುವುದರಿಂದಾಗಿ ದುಡಿಯುವ ವರ್ಗವನ್ನು ಕಷ್ಟಕ್ಕೆ ದೂಡಿದಂತಾಗುತ್ತದೆ.


ಇದನ್ನೂ ಓದಿ: ಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರಲ್ಲ: ಬಿಎಸ್‌ವೈ ವಿರುದ್ಧ ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...