Homeಮುಖಪುಟಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

ಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

- Advertisement -
- Advertisement -

ಕೊರೊನಾ ಸಾಂಕ್ರಾಮಿಕ, ಲಾಕ್‌ಡೌನ್‌ನಿಂದ ಉಂಟಾಗಿರುವ ಸಂಕಷ್ಟದಲ್ಲಿ ಇರುವ ಜನರ ಜೀವನದ ಮೇಲೆ ಬರೆ ಮೇಲೆ ಬರೆ ಬೀಳುತ್ತಿದೆ. ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್, ಡೀಸೆಲ್, ದಿನಸಿ ಪದಾರ್ಥಗಳ ಬೆಲೆ ಏರಿಕೆ ಜೊತೆಗೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ತನ್ನ ಗ್ರಾಹಕರಿಂದ ಹಲವು ರೀತಿಯ ಶುಲ್ಕಗಳನ್ನು ವಿಧಿಸಲು ಮುಂದಾಗಿದೆ.

ಖಾತೆದಾರರಿಂದ ವಿವಿಧ ರೀತಿಯಲ್ಲಿ ಶುಲ್ಕ ವಸೂಲಿಗೆ ಮುಂದಾಗಿರುವ ಎಸ್‌ಬಿಐ, ಎಟಿಎಂ ಮಾತ್ರವಲ್ಲದೆ ಶಾಖೆಗಳಲ್ಲಿಯೂ ಹಣವನ್ನು ಹಿಂಪಡೆಯುವಿಕೆಗೂ (ವಿತ್‌ಡ್ರಾ) ಜುಲೈ 01 (ಇಂದಿನಿಂದ) ರಿಂದ ಶುಲ್ಕ ವಿಧಿಸುವುದಾಗಿ ಎಸ್‌ಬಿಐ ಮಾಹಿತಿ ನೀಡಿದೆ.

ಎಸ್‌ಬಿಐ ಬ್ಯಾಂಕುಗಳಲ್ಲಿ ಉಳಿತಾಯ ಖಾತೆ (ಬಿಎಸ್‌ಬಿಡಿ) ಯನ್ನು ಹೊಂದಿರುವ ಖಾತೆದಾರರಿಗೆ ಎಂಟಿಎಂ ಮತ್ತು ಬ್ಯಾಂಕ್‌ ಶಾಖೆಗಳಲ್ಲಿ ಹಣವನ್ನು ವಿತ್‌ಡ್ರಾ ಮಾಡಿದರೂ ಶುಲ್ಕ ವಿಧಿಸಲಾಗುವುದು. ತಿಂಗಳಲ್ಲಿ ಮೊದಲ ನಾಲ್ಕು ಬಾರಿ ಎಟಿಎಂನಿಂದ ಅಥವಾ ಬ್ಯಾಂಕ್‌ನಿಂದ ಹಣ ವಿತ್‌ಡ್ರಾ ಮಾಡಲು ಯಾವುದೇ ಶುಲ್ಕವಿಲ್ಲ.

ಆದರೆ, ನಾಲ್ಕು ಬಾರಿಗಿಂತ ಹೆಚ್ಚು ಬಾರಿ ಹಣ ಡ್ರಾ ಮಾಡಿದರೆ, 15 ರಿಂದ 75 ರೂಪಾಯಿಗಳ ವರೆಗೆ ಶುಲ್ಕ ಮತ್ತು ಜಿಎಸ್‌ಟಿ ವಿಧಿಸುವುದಾಗಿ ಎಸ್‌ಬಿಐ ತಿಳಿಸಿದೆ. ಆದರೆ, ಹಣಕಾಸು ವರ್ಗಾವಣೆ ವಹಿವಾಟಿಗೆ ಸಂಬಂಧಿಸಿದಂತೆ ಯಾವುದೇ ಶುಲ್ಕವಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಉಳಿತಾಯ ಖಾತೆದಾರನಿಗೆ ಮೊದಲ ಬಾರಿಗೆ ನೀಡಲಾಗುವ 10 ಲೀಫ್ ಚೆಕ್‌ಬುಕ್‌ಅನ್ನು ಉಚಿತವಾಗಿ ನೀಡಲಾಗುವುದು. ನಂತರ ಪಡೆಯುವ ಚೆಕ್‌ಬುಕ್‌ಗೆ 40 ರೂ. ಶುಲ್ಕ ಮತ್ತು ಜಿಎಸ್‌ಟಿ ವಿಧಿಸಲಾಗುವುದು. ಅಲ್ಲದೆ, 25 ಲೀಫ್ ಚೆಕ್‌ಬುಕ್‌ಗೆ 75 ರೂ. ಶುಲ್ಕ ಮತ್ತು ಜಿಎಸ್‌ಟಿ ವಿಧಿಸಲಾಗುವುದು. ತುರ್ತಾಗಿ ಪಡೆಯುವ ಚೆಕ್‌ ಪುಸ್ತಕ (10 ಎಲೆ)ಕ್ಕೆ 50 ರೂ ಮತ್ತು ಜಿಎಸ್‌ಟಿ ವಿಧಿಸಲಾಗುವುದು ಎಂದು ತಿಳಿಸಿದೆ.

ಆದರೆ, ಹಿರಿಯ ನಾಗರಿಕರಿಗೆ ಈ ನಿಯಮಗಳು ಅನ್ವಯಿಸುವುದಿಲ್ಲ ಎಂದು ಎಸ್‌ಬಿಐ ಹೇಳಿದೆ. ಬಿಎಸ್‌ಬಿಡಿ ಖಾತೆಯು ಪ್ರಾಥಮಿಕವಾಗಿ ಕಾರ್ಮಿಕ ವರ್ಗಕ್ಕೆ ಮೀಸಲಾಗಿರುವುದರಿಂದ, ಈ ಹೊಸ ನಿಯಮವು ಅವರ ಬ್ಯಾಂಕಿಂಗ್ ಪ್ರವೇಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.

ಬ್ಯಾಂಕ್‌ಗಳಲ್ಲಿ ಖಾತೆ ತೆರೆಸುವಾಗ, ದುಡಿಯುವ ವರ್ಗವನ್ನು ಹೂಡಿಕೆ ಮಾಡಲು ಮತ್ತು ಅವರ ಹಣವನ್ನು ಉಳಿತಾಯ ಮಾಡುವುದಕ್ಕಾಗಿ ಉಳಿತಾಯ ಖಾತೆ ಅಥವಾ ಜಿರೋ ಬ್ಯಾಲೆನ್ಸ್ ಅಕೌಂಟ್‌ಗಳನ್ನು ತೆರೆಯಲು ಹೇಳಲಾಗುತ್ತಿತ್ತು. ಆದರೆ, ಇದೀಗ ಎಸ್‌ಬಿಐ ಸೇರಿದಂತ ಎಹಲವು ಬ್ಯಾಂಕ್‌ಗಳು ಈ ಪ್ರಮಾಣದಲ್ಲಿ ಶುಲ್ಕ ಮತ್ತು ಜಿಎಸ್‌ಟಿ ವಿಧಿಸುತ್ತಿರುವುದರಿಂದಾಗಿ ದುಡಿಯುವ ವರ್ಗವನ್ನು ಕಷ್ಟಕ್ಕೆ ದೂಡಿದಂತಾಗುತ್ತದೆ.


ಇದನ್ನೂ ಓದಿ: ಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರಲ್ಲ: ಬಿಎಸ್‌ವೈ ವಿರುದ್ಧ ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...