Homeಮುಖಪುಟಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

ಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

- Advertisement -
- Advertisement -

ನಾವು ಅಪರೂಪದಲ್ಲಿ ಅಪರೂಪವಾಗಿರುವ ಎರಡು ರೂಪಾಯಿ ವೈದ್ಯರು, ಐದು ರೂಪಾಯಿ ವೈದ್ಯರ ಬಗ್ಗೆಯೆಲ್ಲಾ ಕೇಳಿದ್ದೇವೆ. ಸುಮಾರು ಹತ್ತು ವರ್ಷಗಳ ಹಿಂದೆ ನಮ್ಮ ಮಂಗಳೂರು ತಾಲೂಕಿನ ಉಚ್ಚಿಲ- ಕೆ.ಸಿ.ರೋಡ್ ಎಂಬಲ್ಲಿ ಎರಡು ರೂಪಾಯಿ ವೈದ್ಯರೆಂದೇ ಖ್ಯಾತರಾಗಿದ್ದ ಶೆಟ್ಟಿ ಡಾಕ್ಟರ್‌ರ ಬಗ್ಗೆ ವಾರ್ತಾಭಾರತಿ ಪತ್ರಿಕೆಯಲ್ಲಿ ಬರೆದಿದ್ದೆ. ಇಂತವರಿಗಿಂತಲೂ ವಿಶಿಷ್ಟ ಉಚಿತ ಡಾಕ್ಟರ್ ಒಬ್ಬರು ಮಂಗಳೂರು ನಗರದಲ್ಲೇ ಇದ್ದಾರೆ.‌ ಅವರೇ ಮಂಗಳೂರಿನ ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಂಜೀವ ರೈ..

ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದು, ಅಕಾಡೆಮಿಕ್ ವಲಯದಲ್ಲಿ ಇವರ ಅತ್ಯುನ್ನತ ಸಾಧನೆಗಳಿಂದ ಮತ್ತು ಒಳ್ಳೆಯ ಮಕ್ಕಳ ತಜ್ಞರೆಂದು ಇವರು ಪ್ರಸಿದ್ಧರಾಗಿದ್ದರೂ ಇವರ ಮಾನವೀಯ ಸೇವೆಗಳು ಎಲ್ಲೂ ಪ್ರಚಾರಕ್ಕೆ ಬಂದಿಲ್ಲ. ಅವರು ತಾನು ನೀಡುತ್ತಿರುವ ಮಾನವೀಯ ಸೇವೆಯನ್ನು ಈ ವರೆಗೆ ಪ್ರಚಾರ ಮಾಡಿದ್ದೂ ಇಲ್ಲ.. ಅವರದಕ್ಕೆ ಪ್ರಚಾರವನ್ನು ಬಯಸಿಯೂ ಇಲ್ಲ.

ಮಂಗಳೂರು ನಗರದ ಕರಂಗಲ್ಪಾಡಿಯಲ್ಲಿರುವ ಮೆಡಿಕೇರ್ ಎಂಬ ಕಟ್ಟಡದ ಮಾಲಕರೂ ಆಗಿರುವ ಡಾ.ಬಿ.ಸಂಜೀವ ರೈ ಅದೇ ಕಟ್ಟಡದಲ್ಲಿ ತನ್ನದೊಂದು ಮಕ್ಕಳ ಚಿಕಿತ್ಸಾಲಯವನ್ನಿಟ್ಟು ವೃತ್ತಿ ನಿರತರಾಗಿದ್ದಾರೆ. ಅವರು ವೃತ್ತಿ ನಿರತರಾಗಿದ್ದಾರೆ ಎನ್ನುವುದಕ್ಕಿಂತಲೂ ಅಲ್ಲಿ ಅವರು ಸೇವೆ ನೀಡುತ್ತಿದ್ದಾರೆ ಎನ್ನುವುದು ಹೆಚ್ಚು ಸೂಕ್ತ. ಅವರು ತನ್ನ ಕ್ಲಿನಿಕಿಗೆ ಚಿಕಿತ್ಸೆಗೆಂದು ಬರುವ ಮಕ್ಕಳ ಹೆತ್ತವರಿಂದ ನಯಾ ಪೈಸೆಯ ಶುಲ್ಕ ಪಡೆಯುವುದಿಲ್ಲ. ಔಷಧಿಗಳನ್ನು ಫಾರ್ಮಸಿಗಳಿಗೆ ಬರೆದು ಕೊಡುತ್ತಾರೆ. ತನ್ನ ಬಳಿ ಸ್ಯಾಂಪಲ್‌ಗಳಿದ್ದರೆ ಅದನ್ನೂ ಉಚಿತವಾಗಿ ನೀಡುತ್ತಾರೆ. ಅಗತ್ಯ ಬಿದ್ದರೆ ಮಾತ್ರ ಔಷಧಿ ಬರೆಯುತ್ತಾರೆ. ಎಷ್ಟೋ ಮಕ್ಕಳಿಗೆ ಔಷಧಿಯೇ ಬೇಡ ಎನ್ನುತ್ತಾರೆ. ಆದರೆ ಈ ಡಾಕ್ಟರ್ ಔಷಧಿ ನೀಡುವುದಿಲ್ಲ ಎಂದು ಕೆಲವರಿಗೆ ಅಸಮಾಧಾನವಾಗುವುದೂ ಇದೆ. ವೃತ್ತಿಯನ್ನು ವಾಣಿಜ್ಯೀಕರಿಸದ್ದರಿಂದ ಅಗತ್ಯವಿರುವವರಿಗೆ ಮಾತ್ರ ಔಷಧಿ ಬರೆಯುತ್ತಾರೆ.

ಇವರು ಓರ್ವ ಮಕ್ಕಳ ತಜ್ಞನಾಗಿ ಮಕ್ಕಳೊಂದಿಗೆ ಮಕ್ಕಳಂತೆ ಅತ್ಯಂತ ಪ್ರೀತಿಯಿಂದ ವರ್ತಿಸುತ್ತಾರೆ. ಮಕ್ಕಳಿಗೆ ಔಷಧಿ ಕುಡಿಸುವ ಹೆತ್ತವರ ಕಷ್ಟವನ್ನು ಚೆನ್ನಾಗಿ ಅರಿತಿರುವ ಇವರು ಯಾವತ್ತೂ ಪುಟಗಟ್ಟಲೆ ಪ್ರಿಸ್ಕ್ರಿಪ್ಷನ್ ಬರೆಯುವುದಿಲ್ಲ.‌ ಅನಗತ್ಯ ಆಂಟಿ ಬಯೋಟಿಕ್‌ಗಳನ್ನೂ ಹಾಕುವುದಿಲ್ಲ ಎಂದು ಇವರ ಬಳಿ ಚಿಕಿತ್ಸೆ ಪಡೆಯುವ ಮಕ್ಕಳ ಹೆತ್ತವರು ಹೇಳುತ್ತಾರೆ.

ಅವರು ಶುಲ್ಕ ಪಡೆಯುವುದಿಲ್ಲ ಎಂದು ನನಗೆ ಗೊತ್ತಾಗಿದ್ದೇ ನನ್ನ ತಂಗಿಯಿಂದ. ಅವಳು ನನ್ನ ಸೋದರಳಿಯನನ್ನು ಸುಮಾರು ಮೂರು ವರ್ಷಗಳ ಹಿಂದೆ ಎರಡು ಬಾರಿ ಅವರ ಬಳಿ ಚಿಕಿತ್ಸೆಗೆಂದು ಕರೆದೊಯ್ದು ಫೀಸ್ ಎಷ್ಟು ಸರ್ ಎಂದು ಕೇಳಿದಾಗ.. ಬೇಡ.. ಹೋಗಮ್ಮಾ ಎಂದರಂತೆ.. ಈಕೆಗೆ ಆಶ್ಚರ್ಯವಾಗಿತ್ತು. ನನ್ನ ತಂಗಿ ಈ ಕತೆ ಹೇಳಿದಾಗ ನನಗಿದನ್ನು ನಂಬಲು ಸಾಧ್ಯವಾಗಿರಲಿಲ್ಲ. ಆ ಬಳಿಕ ಅವರ ಬಳಿ ಚಿಕಿತ್ಸೆಗೆಂದು ಹೋಗುವ ಮೂರ್ನಾಲ್ಕು ಮಂದಿ ಹೆತ್ತವರ ಬಳಿ ವಿಚಾರಿಸಿದಾಗ “ನಿಮಗಿದು ಗೊತ್ತೇ ಇಲ್ವಾ…?” ಎಂದು ಮರುಪ್ರಶ್ನೆ ಹಾಕಿದರು. ಶ್ರೀಮಂತರಿಗೆ ಮತ್ತಷ್ಟು ಶ್ರೀಮಂತಿಕೆ ಗಳಿಸುವ ಆಶೆಯಿರುವುದೇ ಹೆಚ್ಚು. ಆದರೆ ಡಾ.ಬಿ.ಸಂಜೀವ ರೈ ಅವರಿಗೆ ವೈದ್ಯಕೀಯ ವೃತ್ತಿ ಒಂದು ಅಪ್ಪಟ ಮಾನವೀಯ ಸೇವೆ.

ಅವರಿಗೆ ತನ್ನ ಕಟ್ಟಡದಿಂದ ಬಾಡಿಗೆ ಬರುತ್ತದೆ, ಇನ್ನೊಂದೆಡೆ ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದುದರಿಂದ ಒಳ್ಳೆಯ ಸಂಬಳ ಬರುತ್ತದೆ. ಈ ನೆಲೆಯಲ್ಲಿ ತನ್ನಿಂದ ಸಮಾಜಕ್ಕೆ ಒಂದಿಷ್ಟು ಸೇವೆಯಿರಲಿ ಎಂದು ಅವರು ಶುಲ್ಕವನ್ನೇ ಪಡೆಯದೆ ಸೇವೆ ನೀಡುತ್ತಿದ್ದಾರೆ.

ಮೂಲತಃ ಪುತ್ತೂರು ತಾಲೂಕಿನ ಬೂಡಿಯಾರ್ ಎಂಬ ಹಳ್ಳಿಯವರಾದ ಇವರದ್ದು ಪ್ರತಿಷ್ಟಿತ ಬಂಟ ಮನೆತನ. ಆದರೆ ಬಂಟರ ಗುತ್ತಿನ ಗತ್ತಾಗಲಿ, ಪ್ರತಿಷ್ಟಿತ ವೈದ್ಯಕೀಯ ಕಾಲೇಜೊಂದರ ಶೈಕ್ಷಣಿಕ ಮುಖ್ಯಸ್ಥನೆಂಬ ಅಹಂ ಆಗಲೀ ಡಾ.ಬಿ.ಸಂಜೀವ ರೈಯವರ ಮಾತಿನಲ್ಲೋ, ವರ್ತನೆಯಲ್ಲೋ ಕಾಣಲು ಸಾಧ್ಯವಿಲ್ಲ. ನಾನು ವಿದ್ಯಾರ್ಥಿಯಾಗಿದ್ದ ಕಾಲದಲ್ಲೊಮ್ಮೆ ಇವರನ್ನು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ಭೇಟಿಯಾಗಿದ್ದೆ. ಅಷ್ಟು ದೊಡ್ಡ ಹುದ್ದೆಯಲ್ಲಿದ್ದರೂ ನನ್ನೊಂದಿಗೆ ಅತ್ಯಂತ ಸಜ್ಜನಿಕೆಯಿಂದ ತುಳುವಿನಲ್ಲಿ ಮಾತನಾಡಿದ್ದರು. ಅವರು ಫಾದರ್ ಮುಲ್ಲರ್ಸ್ ಕಾಲೇಜಿನ ಡೀನ್ ಆಗಿದ್ದ ಕಾಲದಲ್ಲಿ ಅದೆಷ್ಟೋ ಬಡವರಿಗೆ ಆಸ್ಪತ್ರೆಯಲ್ಲಿ ಸಹಾಯ ಮಾಡುತ್ತಿದ್ದರೆನ್ನುವುದನ್ನು ಹಲವರಿಂದ ಕೇಳಿ ಬಲ್ಲೆ.

ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ, ಆಸ್ಪತ್ರೆಯಲ್ಲಿ ಚಿಕ್ಕ ಪುಟ್ಟ ಗುಮಾಸ್ತ, ಜವಾನ, ಹೌಸ್ ಕೀಪಿಂಗ್ ಹುದ್ದೆಗಳಿಗಾಗಿ ಅರ್ಜಿ ಹಾಕುವವರಿಗೆ ಸ್ವಯಂ ಆಸಕ್ತಿಯಿಂದ ಉದ್ಯೋಗವನ್ನೂ ಕೊಡಿಸುತ್ತಿದ್ದರು. ಅಲ್ಲಿನ ಹೌಸ್ ಕೀಪಿಂಗ್ ಸಿಬ್ಬಂದಿಗಳೊಂದಿಗೂ ಅತ್ಯಂತ ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಎಂದು ಅವರ ಒಡನಾಟವಿದ್ದ ಕಸ ಗುಡಿಸುವ ಮಹಿಳೆಯರಿಂದ ಅರಿತು ಬಲ್ಲೆ. ಆದರೆ ಅವರು ಯಾವತ್ತೂ ತಾನು ಮಾಡಿದ ಉಪಕಾರಗಳನ್ನು ಹೇಳಿಕೊಂಡು ನಡೆದವರಲ್ಲ.

ಕೆಲವು ವೈದ್ಯರ ಧನದಾಹದಿಂದ ವೈದ್ಯರೆಂದರೆ ಹಾಗೆಯೇ… ಜನರನ್ನು ಸುಲಿಯಲೆಂದೇ ಇರುವವರು ಎಂಬ ಆರೋಪವಿರುವ ಈ ಕಾಲದಲ್ಲೂ ಮಂಗಳೂರಿನಂತಹ ವಾಣಿಜ್ಯ ನಗರದಲ್ಲಿ ಇಂತಹ ಮಾನವೀಯ ಮುಖದ ವೈದ್ಯರಿದ್ದಾರೆ ಎಂದರೆ ಎಂತವರಿಗೂ ಆಶ್ಚರ್ಯವಾಗದಿರದು. ಡಾ.ಬಿ.ಸಂಜೀವ ರೈಯವರಂತಹವರ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿ.. ವೈದ್ಯರ ದಿನದ ಶುಭಾಶಯಗಳು ಸಂಜೀವ್ ಸರ್…

  • ಇಸ್ಮತ್ ಪಜೀರ್

ಇದನ್ನೂ ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...