Homeಮುಖಪುಟಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

ಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

- Advertisement -
- Advertisement -

ನಾವು ಅಪರೂಪದಲ್ಲಿ ಅಪರೂಪವಾಗಿರುವ ಎರಡು ರೂಪಾಯಿ ವೈದ್ಯರು, ಐದು ರೂಪಾಯಿ ವೈದ್ಯರ ಬಗ್ಗೆಯೆಲ್ಲಾ ಕೇಳಿದ್ದೇವೆ. ಸುಮಾರು ಹತ್ತು ವರ್ಷಗಳ ಹಿಂದೆ ನಮ್ಮ ಮಂಗಳೂರು ತಾಲೂಕಿನ ಉಚ್ಚಿಲ- ಕೆ.ಸಿ.ರೋಡ್ ಎಂಬಲ್ಲಿ ಎರಡು ರೂಪಾಯಿ ವೈದ್ಯರೆಂದೇ ಖ್ಯಾತರಾಗಿದ್ದ ಶೆಟ್ಟಿ ಡಾಕ್ಟರ್‌ರ ಬಗ್ಗೆ ವಾರ್ತಾಭಾರತಿ ಪತ್ರಿಕೆಯಲ್ಲಿ ಬರೆದಿದ್ದೆ. ಇಂತವರಿಗಿಂತಲೂ ವಿಶಿಷ್ಟ ಉಚಿತ ಡಾಕ್ಟರ್ ಒಬ್ಬರು ಮಂಗಳೂರು ನಗರದಲ್ಲೇ ಇದ್ದಾರೆ.‌ ಅವರೇ ಮಂಗಳೂರಿನ ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಂಜೀವ ರೈ..

ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದು, ಅಕಾಡೆಮಿಕ್ ವಲಯದಲ್ಲಿ ಇವರ ಅತ್ಯುನ್ನತ ಸಾಧನೆಗಳಿಂದ ಮತ್ತು ಒಳ್ಳೆಯ ಮಕ್ಕಳ ತಜ್ಞರೆಂದು ಇವರು ಪ್ರಸಿದ್ಧರಾಗಿದ್ದರೂ ಇವರ ಮಾನವೀಯ ಸೇವೆಗಳು ಎಲ್ಲೂ ಪ್ರಚಾರಕ್ಕೆ ಬಂದಿಲ್ಲ. ಅವರು ತಾನು ನೀಡುತ್ತಿರುವ ಮಾನವೀಯ ಸೇವೆಯನ್ನು ಈ ವರೆಗೆ ಪ್ರಚಾರ ಮಾಡಿದ್ದೂ ಇಲ್ಲ.. ಅವರದಕ್ಕೆ ಪ್ರಚಾರವನ್ನು ಬಯಸಿಯೂ ಇಲ್ಲ.

ಮಂಗಳೂರು ನಗರದ ಕರಂಗಲ್ಪಾಡಿಯಲ್ಲಿರುವ ಮೆಡಿಕೇರ್ ಎಂಬ ಕಟ್ಟಡದ ಮಾಲಕರೂ ಆಗಿರುವ ಡಾ.ಬಿ.ಸಂಜೀವ ರೈ ಅದೇ ಕಟ್ಟಡದಲ್ಲಿ ತನ್ನದೊಂದು ಮಕ್ಕಳ ಚಿಕಿತ್ಸಾಲಯವನ್ನಿಟ್ಟು ವೃತ್ತಿ ನಿರತರಾಗಿದ್ದಾರೆ. ಅವರು ವೃತ್ತಿ ನಿರತರಾಗಿದ್ದಾರೆ ಎನ್ನುವುದಕ್ಕಿಂತಲೂ ಅಲ್ಲಿ ಅವರು ಸೇವೆ ನೀಡುತ್ತಿದ್ದಾರೆ ಎನ್ನುವುದು ಹೆಚ್ಚು ಸೂಕ್ತ. ಅವರು ತನ್ನ ಕ್ಲಿನಿಕಿಗೆ ಚಿಕಿತ್ಸೆಗೆಂದು ಬರುವ ಮಕ್ಕಳ ಹೆತ್ತವರಿಂದ ನಯಾ ಪೈಸೆಯ ಶುಲ್ಕ ಪಡೆಯುವುದಿಲ್ಲ. ಔಷಧಿಗಳನ್ನು ಫಾರ್ಮಸಿಗಳಿಗೆ ಬರೆದು ಕೊಡುತ್ತಾರೆ. ತನ್ನ ಬಳಿ ಸ್ಯಾಂಪಲ್‌ಗಳಿದ್ದರೆ ಅದನ್ನೂ ಉಚಿತವಾಗಿ ನೀಡುತ್ತಾರೆ. ಅಗತ್ಯ ಬಿದ್ದರೆ ಮಾತ್ರ ಔಷಧಿ ಬರೆಯುತ್ತಾರೆ. ಎಷ್ಟೋ ಮಕ್ಕಳಿಗೆ ಔಷಧಿಯೇ ಬೇಡ ಎನ್ನುತ್ತಾರೆ. ಆದರೆ ಈ ಡಾಕ್ಟರ್ ಔಷಧಿ ನೀಡುವುದಿಲ್ಲ ಎಂದು ಕೆಲವರಿಗೆ ಅಸಮಾಧಾನವಾಗುವುದೂ ಇದೆ. ವೃತ್ತಿಯನ್ನು ವಾಣಿಜ್ಯೀಕರಿಸದ್ದರಿಂದ ಅಗತ್ಯವಿರುವವರಿಗೆ ಮಾತ್ರ ಔಷಧಿ ಬರೆಯುತ್ತಾರೆ.

ಇವರು ಓರ್ವ ಮಕ್ಕಳ ತಜ್ಞನಾಗಿ ಮಕ್ಕಳೊಂದಿಗೆ ಮಕ್ಕಳಂತೆ ಅತ್ಯಂತ ಪ್ರೀತಿಯಿಂದ ವರ್ತಿಸುತ್ತಾರೆ. ಮಕ್ಕಳಿಗೆ ಔಷಧಿ ಕುಡಿಸುವ ಹೆತ್ತವರ ಕಷ್ಟವನ್ನು ಚೆನ್ನಾಗಿ ಅರಿತಿರುವ ಇವರು ಯಾವತ್ತೂ ಪುಟಗಟ್ಟಲೆ ಪ್ರಿಸ್ಕ್ರಿಪ್ಷನ್ ಬರೆಯುವುದಿಲ್ಲ.‌ ಅನಗತ್ಯ ಆಂಟಿ ಬಯೋಟಿಕ್‌ಗಳನ್ನೂ ಹಾಕುವುದಿಲ್ಲ ಎಂದು ಇವರ ಬಳಿ ಚಿಕಿತ್ಸೆ ಪಡೆಯುವ ಮಕ್ಕಳ ಹೆತ್ತವರು ಹೇಳುತ್ತಾರೆ.

ಅವರು ಶುಲ್ಕ ಪಡೆಯುವುದಿಲ್ಲ ಎಂದು ನನಗೆ ಗೊತ್ತಾಗಿದ್ದೇ ನನ್ನ ತಂಗಿಯಿಂದ. ಅವಳು ನನ್ನ ಸೋದರಳಿಯನನ್ನು ಸುಮಾರು ಮೂರು ವರ್ಷಗಳ ಹಿಂದೆ ಎರಡು ಬಾರಿ ಅವರ ಬಳಿ ಚಿಕಿತ್ಸೆಗೆಂದು ಕರೆದೊಯ್ದು ಫೀಸ್ ಎಷ್ಟು ಸರ್ ಎಂದು ಕೇಳಿದಾಗ.. ಬೇಡ.. ಹೋಗಮ್ಮಾ ಎಂದರಂತೆ.. ಈಕೆಗೆ ಆಶ್ಚರ್ಯವಾಗಿತ್ತು. ನನ್ನ ತಂಗಿ ಈ ಕತೆ ಹೇಳಿದಾಗ ನನಗಿದನ್ನು ನಂಬಲು ಸಾಧ್ಯವಾಗಿರಲಿಲ್ಲ. ಆ ಬಳಿಕ ಅವರ ಬಳಿ ಚಿಕಿತ್ಸೆಗೆಂದು ಹೋಗುವ ಮೂರ್ನಾಲ್ಕು ಮಂದಿ ಹೆತ್ತವರ ಬಳಿ ವಿಚಾರಿಸಿದಾಗ “ನಿಮಗಿದು ಗೊತ್ತೇ ಇಲ್ವಾ…?” ಎಂದು ಮರುಪ್ರಶ್ನೆ ಹಾಕಿದರು. ಶ್ರೀಮಂತರಿಗೆ ಮತ್ತಷ್ಟು ಶ್ರೀಮಂತಿಕೆ ಗಳಿಸುವ ಆಶೆಯಿರುವುದೇ ಹೆಚ್ಚು. ಆದರೆ ಡಾ.ಬಿ.ಸಂಜೀವ ರೈ ಅವರಿಗೆ ವೈದ್ಯಕೀಯ ವೃತ್ತಿ ಒಂದು ಅಪ್ಪಟ ಮಾನವೀಯ ಸೇವೆ.

ಅವರಿಗೆ ತನ್ನ ಕಟ್ಟಡದಿಂದ ಬಾಡಿಗೆ ಬರುತ್ತದೆ, ಇನ್ನೊಂದೆಡೆ ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದುದರಿಂದ ಒಳ್ಳೆಯ ಸಂಬಳ ಬರುತ್ತದೆ. ಈ ನೆಲೆಯಲ್ಲಿ ತನ್ನಿಂದ ಸಮಾಜಕ್ಕೆ ಒಂದಿಷ್ಟು ಸೇವೆಯಿರಲಿ ಎಂದು ಅವರು ಶುಲ್ಕವನ್ನೇ ಪಡೆಯದೆ ಸೇವೆ ನೀಡುತ್ತಿದ್ದಾರೆ.

ಮೂಲತಃ ಪುತ್ತೂರು ತಾಲೂಕಿನ ಬೂಡಿಯಾರ್ ಎಂಬ ಹಳ್ಳಿಯವರಾದ ಇವರದ್ದು ಪ್ರತಿಷ್ಟಿತ ಬಂಟ ಮನೆತನ. ಆದರೆ ಬಂಟರ ಗುತ್ತಿನ ಗತ್ತಾಗಲಿ, ಪ್ರತಿಷ್ಟಿತ ವೈದ್ಯಕೀಯ ಕಾಲೇಜೊಂದರ ಶೈಕ್ಷಣಿಕ ಮುಖ್ಯಸ್ಥನೆಂಬ ಅಹಂ ಆಗಲೀ ಡಾ.ಬಿ.ಸಂಜೀವ ರೈಯವರ ಮಾತಿನಲ್ಲೋ, ವರ್ತನೆಯಲ್ಲೋ ಕಾಣಲು ಸಾಧ್ಯವಿಲ್ಲ. ನಾನು ವಿದ್ಯಾರ್ಥಿಯಾಗಿದ್ದ ಕಾಲದಲ್ಲೊಮ್ಮೆ ಇವರನ್ನು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ಭೇಟಿಯಾಗಿದ್ದೆ. ಅಷ್ಟು ದೊಡ್ಡ ಹುದ್ದೆಯಲ್ಲಿದ್ದರೂ ನನ್ನೊಂದಿಗೆ ಅತ್ಯಂತ ಸಜ್ಜನಿಕೆಯಿಂದ ತುಳುವಿನಲ್ಲಿ ಮಾತನಾಡಿದ್ದರು. ಅವರು ಫಾದರ್ ಮುಲ್ಲರ್ಸ್ ಕಾಲೇಜಿನ ಡೀನ್ ಆಗಿದ್ದ ಕಾಲದಲ್ಲಿ ಅದೆಷ್ಟೋ ಬಡವರಿಗೆ ಆಸ್ಪತ್ರೆಯಲ್ಲಿ ಸಹಾಯ ಮಾಡುತ್ತಿದ್ದರೆನ್ನುವುದನ್ನು ಹಲವರಿಂದ ಕೇಳಿ ಬಲ್ಲೆ.

ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ, ಆಸ್ಪತ್ರೆಯಲ್ಲಿ ಚಿಕ್ಕ ಪುಟ್ಟ ಗುಮಾಸ್ತ, ಜವಾನ, ಹೌಸ್ ಕೀಪಿಂಗ್ ಹುದ್ದೆಗಳಿಗಾಗಿ ಅರ್ಜಿ ಹಾಕುವವರಿಗೆ ಸ್ವಯಂ ಆಸಕ್ತಿಯಿಂದ ಉದ್ಯೋಗವನ್ನೂ ಕೊಡಿಸುತ್ತಿದ್ದರು. ಅಲ್ಲಿನ ಹೌಸ್ ಕೀಪಿಂಗ್ ಸಿಬ್ಬಂದಿಗಳೊಂದಿಗೂ ಅತ್ಯಂತ ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಎಂದು ಅವರ ಒಡನಾಟವಿದ್ದ ಕಸ ಗುಡಿಸುವ ಮಹಿಳೆಯರಿಂದ ಅರಿತು ಬಲ್ಲೆ. ಆದರೆ ಅವರು ಯಾವತ್ತೂ ತಾನು ಮಾಡಿದ ಉಪಕಾರಗಳನ್ನು ಹೇಳಿಕೊಂಡು ನಡೆದವರಲ್ಲ.

ಕೆಲವು ವೈದ್ಯರ ಧನದಾಹದಿಂದ ವೈದ್ಯರೆಂದರೆ ಹಾಗೆಯೇ… ಜನರನ್ನು ಸುಲಿಯಲೆಂದೇ ಇರುವವರು ಎಂಬ ಆರೋಪವಿರುವ ಈ ಕಾಲದಲ್ಲೂ ಮಂಗಳೂರಿನಂತಹ ವಾಣಿಜ್ಯ ನಗರದಲ್ಲಿ ಇಂತಹ ಮಾನವೀಯ ಮುಖದ ವೈದ್ಯರಿದ್ದಾರೆ ಎಂದರೆ ಎಂತವರಿಗೂ ಆಶ್ಚರ್ಯವಾಗದಿರದು. ಡಾ.ಬಿ.ಸಂಜೀವ ರೈಯವರಂತಹವರ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿ.. ವೈದ್ಯರ ದಿನದ ಶುಭಾಶಯಗಳು ಸಂಜೀವ್ ಸರ್…

  • ಇಸ್ಮತ್ ಪಜೀರ್

ಇದನ್ನೂ ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...