Homeಮುಖಪುಟಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

ಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

- Advertisement -
- Advertisement -

ನಾವು ಅಪರೂಪದಲ್ಲಿ ಅಪರೂಪವಾಗಿರುವ ಎರಡು ರೂಪಾಯಿ ವೈದ್ಯರು, ಐದು ರೂಪಾಯಿ ವೈದ್ಯರ ಬಗ್ಗೆಯೆಲ್ಲಾ ಕೇಳಿದ್ದೇವೆ. ಸುಮಾರು ಹತ್ತು ವರ್ಷಗಳ ಹಿಂದೆ ನಮ್ಮ ಮಂಗಳೂರು ತಾಲೂಕಿನ ಉಚ್ಚಿಲ- ಕೆ.ಸಿ.ರೋಡ್ ಎಂಬಲ್ಲಿ ಎರಡು ರೂಪಾಯಿ ವೈದ್ಯರೆಂದೇ ಖ್ಯಾತರಾಗಿದ್ದ ಶೆಟ್ಟಿ ಡಾಕ್ಟರ್‌ರ ಬಗ್ಗೆ ವಾರ್ತಾಭಾರತಿ ಪತ್ರಿಕೆಯಲ್ಲಿ ಬರೆದಿದ್ದೆ. ಇಂತವರಿಗಿಂತಲೂ ವಿಶಿಷ್ಟ ಉಚಿತ ಡಾಕ್ಟರ್ ಒಬ್ಬರು ಮಂಗಳೂರು ನಗರದಲ್ಲೇ ಇದ್ದಾರೆ.‌ ಅವರೇ ಮಂಗಳೂರಿನ ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಂಜೀವ ರೈ..

ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದು, ಅಕಾಡೆಮಿಕ್ ವಲಯದಲ್ಲಿ ಇವರ ಅತ್ಯುನ್ನತ ಸಾಧನೆಗಳಿಂದ ಮತ್ತು ಒಳ್ಳೆಯ ಮಕ್ಕಳ ತಜ್ಞರೆಂದು ಇವರು ಪ್ರಸಿದ್ಧರಾಗಿದ್ದರೂ ಇವರ ಮಾನವೀಯ ಸೇವೆಗಳು ಎಲ್ಲೂ ಪ್ರಚಾರಕ್ಕೆ ಬಂದಿಲ್ಲ. ಅವರು ತಾನು ನೀಡುತ್ತಿರುವ ಮಾನವೀಯ ಸೇವೆಯನ್ನು ಈ ವರೆಗೆ ಪ್ರಚಾರ ಮಾಡಿದ್ದೂ ಇಲ್ಲ.. ಅವರದಕ್ಕೆ ಪ್ರಚಾರವನ್ನು ಬಯಸಿಯೂ ಇಲ್ಲ.

ಮಂಗಳೂರು ನಗರದ ಕರಂಗಲ್ಪಾಡಿಯಲ್ಲಿರುವ ಮೆಡಿಕೇರ್ ಎಂಬ ಕಟ್ಟಡದ ಮಾಲಕರೂ ಆಗಿರುವ ಡಾ.ಬಿ.ಸಂಜೀವ ರೈ ಅದೇ ಕಟ್ಟಡದಲ್ಲಿ ತನ್ನದೊಂದು ಮಕ್ಕಳ ಚಿಕಿತ್ಸಾಲಯವನ್ನಿಟ್ಟು ವೃತ್ತಿ ನಿರತರಾಗಿದ್ದಾರೆ. ಅವರು ವೃತ್ತಿ ನಿರತರಾಗಿದ್ದಾರೆ ಎನ್ನುವುದಕ್ಕಿಂತಲೂ ಅಲ್ಲಿ ಅವರು ಸೇವೆ ನೀಡುತ್ತಿದ್ದಾರೆ ಎನ್ನುವುದು ಹೆಚ್ಚು ಸೂಕ್ತ. ಅವರು ತನ್ನ ಕ್ಲಿನಿಕಿಗೆ ಚಿಕಿತ್ಸೆಗೆಂದು ಬರುವ ಮಕ್ಕಳ ಹೆತ್ತವರಿಂದ ನಯಾ ಪೈಸೆಯ ಶುಲ್ಕ ಪಡೆಯುವುದಿಲ್ಲ. ಔಷಧಿಗಳನ್ನು ಫಾರ್ಮಸಿಗಳಿಗೆ ಬರೆದು ಕೊಡುತ್ತಾರೆ. ತನ್ನ ಬಳಿ ಸ್ಯಾಂಪಲ್‌ಗಳಿದ್ದರೆ ಅದನ್ನೂ ಉಚಿತವಾಗಿ ನೀಡುತ್ತಾರೆ. ಅಗತ್ಯ ಬಿದ್ದರೆ ಮಾತ್ರ ಔಷಧಿ ಬರೆಯುತ್ತಾರೆ. ಎಷ್ಟೋ ಮಕ್ಕಳಿಗೆ ಔಷಧಿಯೇ ಬೇಡ ಎನ್ನುತ್ತಾರೆ. ಆದರೆ ಈ ಡಾಕ್ಟರ್ ಔಷಧಿ ನೀಡುವುದಿಲ್ಲ ಎಂದು ಕೆಲವರಿಗೆ ಅಸಮಾಧಾನವಾಗುವುದೂ ಇದೆ. ವೃತ್ತಿಯನ್ನು ವಾಣಿಜ್ಯೀಕರಿಸದ್ದರಿಂದ ಅಗತ್ಯವಿರುವವರಿಗೆ ಮಾತ್ರ ಔಷಧಿ ಬರೆಯುತ್ತಾರೆ.

ಇವರು ಓರ್ವ ಮಕ್ಕಳ ತಜ್ಞನಾಗಿ ಮಕ್ಕಳೊಂದಿಗೆ ಮಕ್ಕಳಂತೆ ಅತ್ಯಂತ ಪ್ರೀತಿಯಿಂದ ವರ್ತಿಸುತ್ತಾರೆ. ಮಕ್ಕಳಿಗೆ ಔಷಧಿ ಕುಡಿಸುವ ಹೆತ್ತವರ ಕಷ್ಟವನ್ನು ಚೆನ್ನಾಗಿ ಅರಿತಿರುವ ಇವರು ಯಾವತ್ತೂ ಪುಟಗಟ್ಟಲೆ ಪ್ರಿಸ್ಕ್ರಿಪ್ಷನ್ ಬರೆಯುವುದಿಲ್ಲ.‌ ಅನಗತ್ಯ ಆಂಟಿ ಬಯೋಟಿಕ್‌ಗಳನ್ನೂ ಹಾಕುವುದಿಲ್ಲ ಎಂದು ಇವರ ಬಳಿ ಚಿಕಿತ್ಸೆ ಪಡೆಯುವ ಮಕ್ಕಳ ಹೆತ್ತವರು ಹೇಳುತ್ತಾರೆ.

ಅವರು ಶುಲ್ಕ ಪಡೆಯುವುದಿಲ್ಲ ಎಂದು ನನಗೆ ಗೊತ್ತಾಗಿದ್ದೇ ನನ್ನ ತಂಗಿಯಿಂದ. ಅವಳು ನನ್ನ ಸೋದರಳಿಯನನ್ನು ಸುಮಾರು ಮೂರು ವರ್ಷಗಳ ಹಿಂದೆ ಎರಡು ಬಾರಿ ಅವರ ಬಳಿ ಚಿಕಿತ್ಸೆಗೆಂದು ಕರೆದೊಯ್ದು ಫೀಸ್ ಎಷ್ಟು ಸರ್ ಎಂದು ಕೇಳಿದಾಗ.. ಬೇಡ.. ಹೋಗಮ್ಮಾ ಎಂದರಂತೆ.. ಈಕೆಗೆ ಆಶ್ಚರ್ಯವಾಗಿತ್ತು. ನನ್ನ ತಂಗಿ ಈ ಕತೆ ಹೇಳಿದಾಗ ನನಗಿದನ್ನು ನಂಬಲು ಸಾಧ್ಯವಾಗಿರಲಿಲ್ಲ. ಆ ಬಳಿಕ ಅವರ ಬಳಿ ಚಿಕಿತ್ಸೆಗೆಂದು ಹೋಗುವ ಮೂರ್ನಾಲ್ಕು ಮಂದಿ ಹೆತ್ತವರ ಬಳಿ ವಿಚಾರಿಸಿದಾಗ “ನಿಮಗಿದು ಗೊತ್ತೇ ಇಲ್ವಾ…?” ಎಂದು ಮರುಪ್ರಶ್ನೆ ಹಾಕಿದರು. ಶ್ರೀಮಂತರಿಗೆ ಮತ್ತಷ್ಟು ಶ್ರೀಮಂತಿಕೆ ಗಳಿಸುವ ಆಶೆಯಿರುವುದೇ ಹೆಚ್ಚು. ಆದರೆ ಡಾ.ಬಿ.ಸಂಜೀವ ರೈ ಅವರಿಗೆ ವೈದ್ಯಕೀಯ ವೃತ್ತಿ ಒಂದು ಅಪ್ಪಟ ಮಾನವೀಯ ಸೇವೆ.

ಅವರಿಗೆ ತನ್ನ ಕಟ್ಟಡದಿಂದ ಬಾಡಿಗೆ ಬರುತ್ತದೆ, ಇನ್ನೊಂದೆಡೆ ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದುದರಿಂದ ಒಳ್ಳೆಯ ಸಂಬಳ ಬರುತ್ತದೆ. ಈ ನೆಲೆಯಲ್ಲಿ ತನ್ನಿಂದ ಸಮಾಜಕ್ಕೆ ಒಂದಿಷ್ಟು ಸೇವೆಯಿರಲಿ ಎಂದು ಅವರು ಶುಲ್ಕವನ್ನೇ ಪಡೆಯದೆ ಸೇವೆ ನೀಡುತ್ತಿದ್ದಾರೆ.

ಮೂಲತಃ ಪುತ್ತೂರು ತಾಲೂಕಿನ ಬೂಡಿಯಾರ್ ಎಂಬ ಹಳ್ಳಿಯವರಾದ ಇವರದ್ದು ಪ್ರತಿಷ್ಟಿತ ಬಂಟ ಮನೆತನ. ಆದರೆ ಬಂಟರ ಗುತ್ತಿನ ಗತ್ತಾಗಲಿ, ಪ್ರತಿಷ್ಟಿತ ವೈದ್ಯಕೀಯ ಕಾಲೇಜೊಂದರ ಶೈಕ್ಷಣಿಕ ಮುಖ್ಯಸ್ಥನೆಂಬ ಅಹಂ ಆಗಲೀ ಡಾ.ಬಿ.ಸಂಜೀವ ರೈಯವರ ಮಾತಿನಲ್ಲೋ, ವರ್ತನೆಯಲ್ಲೋ ಕಾಣಲು ಸಾಧ್ಯವಿಲ್ಲ. ನಾನು ವಿದ್ಯಾರ್ಥಿಯಾಗಿದ್ದ ಕಾಲದಲ್ಲೊಮ್ಮೆ ಇವರನ್ನು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ಭೇಟಿಯಾಗಿದ್ದೆ. ಅಷ್ಟು ದೊಡ್ಡ ಹುದ್ದೆಯಲ್ಲಿದ್ದರೂ ನನ್ನೊಂದಿಗೆ ಅತ್ಯಂತ ಸಜ್ಜನಿಕೆಯಿಂದ ತುಳುವಿನಲ್ಲಿ ಮಾತನಾಡಿದ್ದರು. ಅವರು ಫಾದರ್ ಮುಲ್ಲರ್ಸ್ ಕಾಲೇಜಿನ ಡೀನ್ ಆಗಿದ್ದ ಕಾಲದಲ್ಲಿ ಅದೆಷ್ಟೋ ಬಡವರಿಗೆ ಆಸ್ಪತ್ರೆಯಲ್ಲಿ ಸಹಾಯ ಮಾಡುತ್ತಿದ್ದರೆನ್ನುವುದನ್ನು ಹಲವರಿಂದ ಕೇಳಿ ಬಲ್ಲೆ.

ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ, ಆಸ್ಪತ್ರೆಯಲ್ಲಿ ಚಿಕ್ಕ ಪುಟ್ಟ ಗುಮಾಸ್ತ, ಜವಾನ, ಹೌಸ್ ಕೀಪಿಂಗ್ ಹುದ್ದೆಗಳಿಗಾಗಿ ಅರ್ಜಿ ಹಾಕುವವರಿಗೆ ಸ್ವಯಂ ಆಸಕ್ತಿಯಿಂದ ಉದ್ಯೋಗವನ್ನೂ ಕೊಡಿಸುತ್ತಿದ್ದರು. ಅಲ್ಲಿನ ಹೌಸ್ ಕೀಪಿಂಗ್ ಸಿಬ್ಬಂದಿಗಳೊಂದಿಗೂ ಅತ್ಯಂತ ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಎಂದು ಅವರ ಒಡನಾಟವಿದ್ದ ಕಸ ಗುಡಿಸುವ ಮಹಿಳೆಯರಿಂದ ಅರಿತು ಬಲ್ಲೆ. ಆದರೆ ಅವರು ಯಾವತ್ತೂ ತಾನು ಮಾಡಿದ ಉಪಕಾರಗಳನ್ನು ಹೇಳಿಕೊಂಡು ನಡೆದವರಲ್ಲ.

ಕೆಲವು ವೈದ್ಯರ ಧನದಾಹದಿಂದ ವೈದ್ಯರೆಂದರೆ ಹಾಗೆಯೇ… ಜನರನ್ನು ಸುಲಿಯಲೆಂದೇ ಇರುವವರು ಎಂಬ ಆರೋಪವಿರುವ ಈ ಕಾಲದಲ್ಲೂ ಮಂಗಳೂರಿನಂತಹ ವಾಣಿಜ್ಯ ನಗರದಲ್ಲಿ ಇಂತಹ ಮಾನವೀಯ ಮುಖದ ವೈದ್ಯರಿದ್ದಾರೆ ಎಂದರೆ ಎಂತವರಿಗೂ ಆಶ್ಚರ್ಯವಾಗದಿರದು. ಡಾ.ಬಿ.ಸಂಜೀವ ರೈಯವರಂತಹವರ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿ.. ವೈದ್ಯರ ದಿನದ ಶುಭಾಶಯಗಳು ಸಂಜೀವ್ ಸರ್…

  • ಇಸ್ಮತ್ ಪಜೀರ್

ಇದನ್ನೂ ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...