Homeಮುಖಪುಟನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

ನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

- Advertisement -
- Advertisement -

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಕಾಂಗ್ರೆಸ್ಸಿನ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆಯಾಗಿದ್ದ ನಟಿ, ರಾಜಕಾರಣಿ ರಮ್ಯಾ ಅವರ ಹಠಾತ್ ನಿರ್ಗಮನವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.ಈ ಪ್ರಶ್ನೆಗಳಿಗೆ ಎರಡು ವರ್ಷಗಳ ಬಳಿಕ ಉತ್ತರ ದೊರೆತಿದೆ.

ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷ ನಟಿಯಾಗಿ ಮೆರೆದ ನಟಿ ರಮ್ಯಾ ರಾಜಕೀಯಕ್ಕೆ ಬಂದು ಮಂಡ್ಯದ ಸಂಸದೆಯಾದರು. ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡ ರಮ್ಯಾ ಬಳಿಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ಪಟ್ಟಕ್ಕೇರಿದ್ದರು. ಆದರೆ 2019 ರ ಲೋಕಸಭಾ ಚುನಾವಣೆ ಬಳಿಕ ಕಣ್ಮರೆಯಾಗಿದ್ದರು.

ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಉತ್ತರ ನೀಡಿದ್ದಾರೆ. ತಾವು ಮಾಡಿದ ತಪ್ಪಿನಿಂದ ಅಂದಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರಿಗಾದ ತೊಂದರೆಗಳ ಬಗ್ಗೆ ಮಾತನಾಡಿದ್ದಾರೆ. ತಾವು ಏಕೆ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ’ಬಂಗಾರದ ಮನುಷ್ಯ’ನ ಅಡಿಪಾಯದಿಂದ ಹೊಸತನ ಮತ್ತು ಸದಭಿರುಚಿಯನ್ನು ತಮ್ಮದಾಗಿಸಿಕೊಂಡಿದ್ದ ಚಂದ್ರು

ಅಂದಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ 2018 ರ ಆಗಸ್ಟ್‌ನಲ್ಲಿ ಪಕ್ಷದ ಕೆಲ ಸಂಸದರೊಂದಿಗೆ ಜರ್ಮನಿಗೆ ಭೇಟಿ ನೀಡಿದ್ದರು. ಬರ್ಲಿನ್‌ನ ವಸ್ತುಸಂಗ್ರಹಾಲಯದ ಪ್ರವಾಸದ ವೇಳೆ ರಮ್ಯಾ ಫೋಟೋಗಳನ್ನು ತೆಗೆದಿದ್ದರಂತೆ. ಆ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ಕಾರಣಕ್ಕೆ ವೈರಲ್ ಆಗಿ, ರಾಹುಲ್ ಗಾಂಧಿ ಅವರಿಗೆ ತೀವ್ರ ಮುಜುಗರ ಉಂಟು ಮಾಡಿದ್ದವು ಎಂದು ಹೇಳಿಕೊಂಡಿದ್ದಾರೆ.

”ರಾಹುಲ್ ಗಾಂಧಿ ಅವರ ಫೋಟೋಗಳು ಹೆಚ್ಚು ಟ್ರೋಲ್‌ಗೆ ಒಳಗಾದವು. ರಾಹುಲ್ ಗಾಂಧಿ ಬಗ್ಗೆ ಅಪಹಾಸ್ಯ ಮಾಡಲಾಯಿತು. ನಾನು ಮಾಡಿದ ತಪ್ಪಿನಿಂದ ರಾಹುಲ್ ಗಾಂಧಿ ಅವರನ್ನು ಕೆಟ್ಟ ರೀತಿಯಲ್ಲಿ ಟ್ರೋಲ್ ಮಾಡಲಾಯಿತು. ನಾನು ಮಾಡಿದ ತಪ್ಪಿನಿಂದ ಅಂದು ರಾತ್ರಿ ನನಗೆ ನಿದ್ದೆಯೇ ಬರಲಿಲ್ಲ” ಎಂದು ರಮ್ಯಾ ಬರೆದಿದ್ದಾರೆ.

ತಮ್ಮ ತಪ್ಪಿಗೆ ಕ್ಷಮಾಪಣೆ ಕೇಳಲು ಹಾಗೂ ಹುದ್ದೆಗೆ ರಾಜೀನಾಮೆ ನೀಡಲು ರಾಹುಲ್ ಗಾಂಧಿ ಬಳಿ ತೆರಳಿದ್ದಾಗಿ, ಅವರು ರಾಜೀನಾಮೆಯನ್ನು ತಿರಸ್ಕರಿಸಿ, ಇನ್ನು ಮುಂದೆ ಜಾಗರೂಕರಾಗಿರಿ ಎಂದು ಹೇಳಿದ್ದರು. ಆ ಸಮಯದಲ್ಲಿ ತಾವು ಕಣ್ಣೀರಿಟ್ಟಿದ್ದಾಗಿ ರಮ್ಯಾ ಹೇಳಿಕೊಂಡಿದ್ದಾರೆ.

“ನಾನು ಮಾಡಿದ ತಪ್ಪಿಗೆ, ನನ್ನನ್ನ ಹುದ್ದೆಯಿಂದ ಹೊರದಬ್ಬಬೇಕಿತ್ತು. ಆದರೆ, ಅವರು ಹಾಗೆ ಮಾಡಲಿಲ್ಲ. ರಾಹುಲ್ ಗಾಂಧಿ ಒಳ್ಳೆಯ ಮನುಷ್ಯ. ಅವರ ಜನಪರ ಕಾಳಜಿ ನನ್ನ ಮೇಲೆ ಸದಾ ಪ್ರಭಾವ ಬೀರುತ್ತದೆ” ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ನಟಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...