Homeಅಂಕಣಗಳುಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

- Advertisement -
- Advertisement -

ಈದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು. ಛತ್ತೀಸಗಢದ ಬಿಜಾಪುರ ಜಿಲ್ಲೆಯ ಸರ್ಕೇಗುಡದಲ್ಲಿ 2012ರಲ್ಲಿ ಹುಸಿ ಎನ್ಕೌಂಟರೊಂದು ನಡೆಯಿತು. ಆರು ಮಂದಿ ಅಪ್ರಾಪ್ತ ವಯಸ್ಕರೂ ಸೇರಿದಂತೆ 17 ಮಂದಿ ಆದಿವಾಸಿಗಳನ್ನು ಈ ಎನ್ಕೌಂಟರಿನಲ್ಲಿ ಕೊಲ್ಲಲಾಗಿತ್ತು. ಈ ಹತ್ಯಾಕಾಂಡದಲ್ಲಿ ಹತರಾದವರಿಗೆ ಮಾವೋವಾದಿಗಳ ಹಣೆಪಟ್ಟಿ ಹಚ್ಚಿತ್ತು ಅಂದಿನ ರಮಣಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ. ಭಾರೀ ಪ್ರತಿಭಟನೆ ವಿವಾದದ ನಂತರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿತ್ತು.

ಮಧ್ಯಪ್ರದೇಶ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ವಿ.ಕೆ. ಅಗರವಾಲ ಆಯೋಗ ಸಲ್ಲಿಸಿದ ವರದಿಯನ್ನು 2019ರ ಡಿಸೆಂಬರಿನಲ್ಲಿ ಛತ್ತೀಸಗಢ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಭದ್ರತಾ ಪಡೆಗಳಿಂದ ಹತರಾದ 17 ಮಂದಿಯ ಪೈಕಿ ಯಾರೂ ಮಾವೋವಾದಿಗಳಾಗಿರಲಿಲ್ಲ ಎಂದು ಈ ವರದಿಯಲ್ಲಿ ಹೇಳಲಾಗಿತ್ತು. ಗ್ರಾಮಸ್ಥರನ್ನು ಬಹಳ ಸಮೀಪದಿಂದ ಗುಂಡು ಹಾರಿಸಿ ಕೊಲ್ಲಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಸ್ಥಳೀಯ ಪೊಲೀಸರಿದ್ದ ಭದ್ರತಾ ಪಡೆಯು ಗಾಬರಿಯಲ್ಲಿ ಗುಂಡು ಹಾರಿಸಿರಬೇಕು. ಎನ್ಕೌಂಟರ್ ಜರುಗಿದ್ದು ರಾತ್ರಿಯ ಹೊತ್ತು. ಆದರೆ ಈ 17 ಮಂದಿಯ ಪೈಕಿ ಒಬ್ಬ ಯುವಕನನ್ನು ಬೆಳಿಗ್ಗೆ ಹಿಡಿದು ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದೂ ಆಯೋಗ ಹೇಳಿತ್ತು.

ಭದ್ರತಾ ಪಡೆಯ ಕೆಲವರಿಗೆ ಆಗಿರುವ ಗಾಯಗಳಿಗೆ ತಮ್ಮದೇ ಸಂಗಾತಿಗಳ ಮತ್ತೊಂದು ತಂಡ ಕತ್ತಲಲ್ಲಿ ಗೊತ್ತಿಲ್ಲದೆ ಹಾರಿಸಿರುವ ಗುಂಡುಗಳೇ ಕಾರಣ. ಆದರೆ ಅಷ್ಟು ಮಂದಿ ಗ್ರಾಮಸ್ಥರ ಹಬ್ಬದ ಆಚರಣೆಯ ಯೋಜನೆಯನ್ನು ಚರ್ಚಿಸಲು ಸೇರಿದ್ದರು ಎಂಬ ಕಾರಣವನ್ನು ನಂಬಲಾಗದು ಎಂದೂ ವರದಿಯಲ್ಲಿ ಸಂದೇಹ ಪ್ರಕಟಿಸಲಾಗಿತ್ತು.

ಬಸಗುಡಾದಿಂದ ಹೊರಟ ಎರಡು ಭದ್ರತಾ ಪಡೆಯ ತಂಡಗಳು ಮೂರು ಕಿ.ಮೀ. ದೂರದ ಸರ್ಕೇಗುಡದಲ್ಲಿ ’ಮಾವೋವಾದಿಗಳ ಸಭೆ’ ನಡೆಯುತ್ತಿದ್ದುದನ್ನು ಕಂಡವು. ಸಭೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರ ಭದ್ರತಾ ಪಡೆಯ ತಂಡಗಳ ಮೇಲೆ ಗುಂಡು ಹಾರಿಸಿದರು. ಭದ್ರತಾ ಪಡೆಗಳು ವಾಪಸು ಗುಂಡು ಹಾರಿಸಿದರು ಎಂಬುದು ಭದ್ರತಾ ಪಡೆಗಳ ಹೇಳಿಕೆಯಾಗಿತ್ತು.

ಆದರೆ ಗ್ರಾಮಸ್ಥರ ಪ್ರಕಾರ ತಾವು ಬೀಜ ಪಂಡುಮ್ ಹಬ್ಬದ ಸಿದ್ಧತೆಗಾಗಿ ಸಭೆ ಸೇರಿದ್ದು. ಭದ್ರತಾ ಪಡೆಗಳು ಅವರನ್ನು ಸುತ್ತುವರೆದು ಗುಂಡು ಹಾರಿಸಿದವು. ಪಡೆಗಳಿಂದ ಹತ್ಯೆಗೀಡಾದ ಮತ್ತು ಗಾಯಗೊಂಡ ಗ್ರಾಮಸ್ಥರ ನಕ್ಸಲೀಯರು ಎನ್ನಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ. ’ದೂರದಲ್ಲಿ ಅನುಮಾನಾಸ್ಪದ ಸದ್ದು ಕೇಳಿಬರುತ್ತಿದೆ ಎಂಬುದಾಗಿ ತಮ್ಮ ’ಮಾರ್ಗದರ್ಶಿ’ಯ ಮಾತಿನಿಂದ ಪ್ರಭಾವಿತರಾದಂತಿರುವ ಪೊಲೀಸರು ಗಾಬರಿಯಾಗಿ ನಕ್ಸಲೀಯರಿದ್ದಾರೆಂದು ಭಾವಿಸಿ ಗುಂಡು ಹಾರಿಸಿ ಗ್ರಾಮಸ್ಥರ ಸಾವು ನೋವುಗಳಿಗೆ ಕಾರಣರಾಗಿದ್ದಾರೆ. ಗ್ರಾಮಸ್ಥರ ಗುಂಡು ಹಾರಿಸಿಲ್ಲವೆಂಬ ಅಂಶವು ಹಿರಿಯ ಪೊಲೀಸ್ ಅಧಿಕಾರಿಗಳಾದ ಎಸ್.ಇಳಂಗೋ ಮತ್ತು ಮನೀಶ್ ಬರ್ಮೋಲ ಅವರ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಸಾಕ್ಷ್ಯಾಧಾರಗಳ ಪ್ರಕಾರ 17 ರಲ್ಲಿ ಹತ್ತು ಮಂದಿ ಬೆನ್ನಿಗೆ ಗುಂಡು ಬಿದ್ದು ಸತ್ತಿದ್ದಾರೆ. ಅರ್ಥಾತ್ ಪರಾರಿಯಾಗುತ್ತಿದ್ದಾಗ ಕೊಲ್ಲಲಾಗಿದೆ. ಕೆಲವರು ತಲೆಗೆ ಗುಂಡು ಬಿದ್ದು ಸತ್ತಿದ್ದಾರೆ. ಈ ಅಂಶಗಳನ್ನು ಗಮನಿಸಿದರೆ ಗುಂಡು ಹಾರಿಸಿದ್ದು ಬಲು ಸಮೀಪದಿಂದಲೇ ವಿನಾ ಪೊಲೀಸರು ಹೇಳುವಂತೆ ದೂರದಿಂದ ಅಲ್ಲ. ಗಾಯಗೊಂಡವರ ಮೈ ಮೇಲಿನ ಗಾಯಗಳು ಕೂಡ ಬಂದೂಕದ ಹಿಡಿಯಿಂದ ಮತ್ತು ಹರಿತ ಅಂಚಿನ ಮತ್ತು ಮೊಂಡು ವಸ್ತುವಿನಿಂದ ಆದಂತಹವು. ಈ ಗಾಯಗಳು ಆದದ್ದು ಹೇಗೆ ಎಂಬುದಕ್ಕೆ ಭದ್ರತಾ ಪಡೆಗಳಿಂದ ಉತ್ತರ ಬರಲಿಲ್ಲ’ ಎಂದು ನ್ಯಾಯಾಂಗ ವರದಿ ಹೇಳಿತ್ತು.

ಹತ್ಯೆಗೀಡಾದವರ ಪೈಕಿ ಕಾಕಾ ಸರಸ್ವತಿ ಮತ್ತು ಕಾಕಾ ನಾಗೇಶ್ 12 ವರ್ಷ ವಯಸ್ಸಿನವರು. ಇರ್ಪಾ ಸುರೇಶ್ ವಯಸ್ಸು ಹದಿನೈದು. ಹಾಪ್ಕಾ ಮಿಟ್ಟೂಗೆ 17 ವರ್ಷ. ಹದಿನೇಳು ವರ್ಷದ ಕುಂಜಮ್ ಮಲ್ಲಾ, ಹದಿನಾರು ವಯಸ್ಸಿನ ಕೊರ್ಸಾ ಬಿಚೆಮ್ ಅವರಂತಹ ಸಣ್ಣ ವಯಸ್ಸಿನವರೂ ಇದ್ದರು. ಇವರನ್ನು ’ಹಾರ್ಡ್ ಕೋರ್’ ನಕ್ಸಲೀಯರು ಎಂದು ಬಣ್ಣಿಸಲಾಗಿತ್ತು. ಅಂದಿನ ಕೇಂದ್ರ ಗೃಹಮಂತ್ರಿ ಪಿ.ಚಿದಂಬರಂ ಅವರಂತೂ ಮೂವರು ಬಹುಮುಖ್ಯ ನಕ್ಸಲೀಯ ನಾಯಕರನ್ನು ಕೊಲ್ಲಲಾಯಿತು ಎಂದು ಎದೆ ಉಬ್ಬಿಸಿದ್ದರು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಮತ್ತು ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಈ ಎನ್ಕೌಂಟರನ್ನು ಬಹುದೊಡ್ಡ ಮಾವೋವಾದಿ ಎನ್ಕೌಂಟರ್ ಎಂದು ಬಣ್ಣಿಸಿದ್ದವು. ವರದಿ ಬಂದ ನಂತರ ಚಿದಂಬರಂ ಅವರು ಕ್ಷಮಾಪಣೆ ಕೇಳಬೇಕಾಯಿತು.

ಬಂಡುಕೋರರನ್ನು ಹತ್ತಿಕ್ಕುವ ಯಶಸ್ವೀ ಕಾರ್ಯಾಚರಣೆ ಎಂದು ಈ ನರಮೇಧವನ್ನು ಸರ್ಕಾರ ಬಣ್ಣಿಸಿತ್ತು. ಮುಖ್ಯವಾಹಿನಿಯ ಸಮೂಹ ಮಾಧ್ಯಮಗಳು ಈ ಸುಳ್ಳನ್ನು ಧ್ವನಿವರ್ಧಕ ಹಿಡಿದು ಕೂಗಿ ಹೇಳಿದ್ದವು. ಆದರೆ ಹತ್ಯೆಗೀಡಾದವರು ಅಮಾಯಕ ಗ್ರಾಮಸ್ಥರಷ್ಟೇ ಎಂಬ ಅಂಶವಷ್ಟೇ ಅಲ್ಲ, ಈ ಎನ್ಕೌಂಟರ್ ನಡೆದ ಸ್ಥಳದ ಸುತ್ತಮುತ್ತ ಎಲ್ಲಿಯೂ ಮಾವೋವಾದಿಗಳು ಇದ್ದ ಕುರಿತು ಯಾವ ಸಾಕ್ಷ್ಯವೂ ಸಿಕ್ಕಿಲ್ಲ. ಎನ್ಕೌಂಟರ್ ನಡೆದ ನಂತರ ಈ ನಿರಪರಾಧಿ ಗ್ರಾಮಸ್ಥರ ನರಮೇಧವನ್ನು ಸಮರ್ಥಿಸಲು ಸುಳ್ಳಿನ ಜಾಲವನ್ನೇ ಹೆಣೆಯಲಾಯಿತು ಎಂದು ವರದಿ ಹೇಳಿತ್ತು.

ಎಡಪಂಥೀಯ ಉಗ್ರವಾದದ ನೆಲೆಯೆಂದು ಹೆಸರಾಗಿದ್ದ ಬಿಜಾಪುರದ ಸರ್ಕೇಗುಡ ಅದೇ ಕಾರಣಕ್ಕಾಗಿ ಕೆಂಡದ ಹೊಂಡದ ಮೇಲೆ ಜೀವಿಸಿದ ಗ್ರಾಮ. ಆದಿವಾಸಿಗಳಿಂದಲೇ ಆದಿವಾಸಿಗಳನ್ನು ಬೇಟೆಯಾಡಲು ಛತ್ತೀಸಗಢ ಸರ್ಕಾರ ಕಟ್ಟಿದ ಖಾಸಗಿ ಆದಿವಾಸಿ ಸೇನೆ ಸಲ್ವಾ ಜುದುಮ್ ಈ ಗ್ರಾಮವನ್ನು 2005ರಲ್ಲಿ ಸುಟ್ಟು ಹಾಕಿತ್ತು. 2009ರಲ್ಲಿ ಗ್ರಾಮಸ್ಥರ ಈ ಹಳ್ಳಿಗೆ ವಾಪಸು ಬರಲು ಆರಂಭಿಸಿದ್ದರು. ಬೂದಿಯಾಗಿದ್ದ ತಮ್ಮ ಬದುಕುಗಳನ್ನು ಪುನಃ ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದರು. ನರಮೇಧ ನಡೆದ ರಾತ್ರಿ ನಡೆದ ಗ್ರಾಮಸ್ಥರ ಸಭೆಯಲ್ಲಿ ಬೀಜ ಪಂಡುಮ್ ಉತ್ಸವ ಆಚರಣೆಯ ಜೊತೆಗೆ ಜಾನುವಾರು ಇಲ್ಲದ ಕುಟುಂಬಗಳು ಮತ್ತು ಏಕಮಹಿಳೆಯ ಕುಟುಂಬಗಳಿಗೆ ನೆರವಾಗುವ ಬಗೆ ಎಂತು ಎಂದು ಚರ್ಚಿಸಲಾಗುತ್ತಿತ್ತು. ಆದಿವಾಸಿ ರೂಢಿ ರಿವಾಜುಗಳ ಪ್ರಕಾರ ಉತ್ಸವದ ಸಿದ್ಧತೆಗಳು ರಾತ್ರಿ ನಡೆಯುತ್ತವೆ. ಮರುದಿನ ಮುಂಜಾನೆ ಉತ್ಸವ ಆರಂಭವಾಗುತ್ತದೆ.

ನ್ಯಾಯಾಂಗ ವರದಿ ಬಂದನಂತರ ಈ ನರಮೇಧಕ್ಕೆ ಕಾರಣರಾದವರ ವಿರುದ್ಧ ಅತ್ಯಂತ ಬಿಗಿ ಕ್ರಮವನ್ನು ಜರುಗಿಸಲಾಗುವುದು ಎಂದು ಛತ್ತೀಸಗಢದ ಹಾಲಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಾರಿದ್ದುಂಟು. ಆದರೆ ಎರಡು ವರ್ಷ ಉರುಳಿದರೂ ಹಂತಕರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಸರ್ಕೇಗುಡದಲ್ಲಿ ಒಂಬತ್ತು ವರ್ಷಗಳ ಹಿಂದೆ ಜರುಗಿದ ಸರ್ಕಾರಿ ನರಮೇಧದಲ್ಲಿ ಹತರಾದ 17 ಮಂದಿಗೆ ಶ್ರದ್ಧಾಂಜಲಿ ಮೇಳವನ್ನು ಮೊನ್ನೆ ನಡೆಸಲಾಯಿತು. ಸಾವಿರಾರು ಆದಿವಾಸಿಗಳು ಸೇರಿದ್ದರು. ಭಾರೀ ಸಂಖ್ಯೆಯ ಅರೆಸೇನಾ ಪಡೆಗಳು ಈ ಮೇಳವನ್ನು ಸುತ್ತುವರೆದು ನಿಗಾ ಇಟ್ಟಿದ್ದವು.

ಬಿಗಿ ಕ್ರಮ ಕೈಗೊಳ್ಳುವ ಬಾಘೇಲ್ ಸರ್ಕಾರ ತುಟಿ ಹೊಲಿದುಕೊಂಡಿದೆ. ಈ ದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು.


ಇದನ್ನೂ ಓದಿ: ಬಹುಜನ ಭಾರತ: ಪಾರುಲ್ ಖಕ್ಕಡ್ ಎಂಬ ಗೃಹಿಣಿ ಬರೆದ ರಾಜಕೀಯ ಕವಿತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...