Homeಮುಖಪುಟಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ...

ಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ ವ್ಯಕ್ತಿ

- Advertisement -
- Advertisement -

ಭಯೋತ್ಪಾದನೆ ಆರೋಪದ ಮೇಲೆ ಗುಜರಾತ್ ಪೊಲೀಸರು 11 ವರ್ಷಗಳ ಹಿಂದೆ ಬಂಧಿಸಿದ್ದ ಶ್ರೀನಗರದ ವ್ಯಕ್ತಿಯನ್ನು ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲವಾದ ಹಿನ್ನೆಲೆ ನಿರಪರಾಧಿ ಎಂದು ಬಿಡುಗಡೆ ಮಾಡಲಾಗಿದೆ. ಕಂಪ್ಯೂಟರ್ ವೃತ್ತಿಪರರಾಗಿರುವ ಬಶೀರ್ ಅಹ್ಮದ್ ಬಾಬಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ವಡೋದರಾ ನ್ಯಾಯಾಲಯ ಹೇಳಿದೆ.

ರಾಜ್ಯದಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸಲು ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ ಸಂಘಟನೆಗಾಗಿ 2002 ರ ಗಲಭೆಯ ಬಗ್ಗೆ ಕೋಪಗೊಂಡಿರುವ ಮುಸ್ಲಿಂ ಯುವಕರನ್ನು ಸಂಘಟಿಸಲು ಬಶೀರ್ ಅಹ್ಮದ್ ಬಾಬಾ ಗುಜರಾತ್‌ಗೆ ಬಂದಿದ್ದಾರೆ ಎಂದು ಗುಜರಾತ್ ಎಟಿಎಸ್ ಮಾರ್ಚ್ 13, 2010 ರಂದು 43 ವರ್ಷದ ಅಹ್ಮದ್ ಅವರನ್ನು ಬಂಧಿಸಿದ್ದರು.

ಅಹ್ಮದ್ ಅವರು,  ಹಿಜ್ಬುಲ್ ಮುಜಾಹಿದ್ದೀನ್‌ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಬಿಲಾಲ್ ಅಹ್ಮದ್ ಶೇರಾ ಅವರೊಂದಿಗೆ ದೂರವಾಣಿ ಮತ್ತು ಇಮೇಲ್ ಮೂಲಕ ಸಂಪರ್ಕದಲ್ಲಿದ್ದಾರೆ ಎಂದು ಗುಜರಾತ್ ಎಟಿಎಸ್ ಆರೋಪಿಸಿತ್ತು. ಆದರೆ ಈಗ ಆರೋಪ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ: ಹೋರಾಟಗಾರ ಅಖಿಲ್ ಗೊಗೋಯ್‌ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೈಬಿಟ್ಟ ಎನ್‌ಐಎ ನ್ಯಾಯಾಲಯ

ಕ್ಯಾನ್ಸರ್ ನಂತರದ ಆರೈಕೆಗಾಗಿ ಮಾಡಲಾಗಿದ್ದ ನಾಲ್ಕು ದಿನಗಳ ಶಿಬಿರದಲ್ಲಿ ಪಾಲ್ಗೊಳ್ಳಲು ಅಹ್ಮದ್ ಗುಜರಾತ್‌ಗೆ ಬಂದಿದ್ದರು. ಕಿಮಾಯ ಫೌಂಡೇಶನ್ ಮೂಲಕ ಕಾಶ್ಮೀರದ ಕಣಿವೆಯ ಜನರಿಗೆ ಸೇವೆಗಳನ್ನು ಒದಗಿಸಲು, ಈ ಕ್ಯಾಂಪ್‌ನ ಭಾಗವಾಗಿದ್ದರು ಎಂಬ ವಾದವನ್ನು ನ್ಯಾಯಾಲಯವು ಜೂನ್ 19 ರಂದು ಎತ್ತಿಹಿಡಿದಿದೆ.

ಜೂನ್ 23 ರಂದು 11 ವರ್ಷಗಳ ಬಳಿಕ ಬಶೀರ್ ಅಹ್ಮದ್ ಬಾಬಾ ಶ್ರೀನಗರದ ರೈನಾವರಿಯಲ್ಲಿರುವ ತಮ್ಮ ಮನೆಗೆ ತಲುಪಿದ್ದಾರೆ. ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

87 ಪುಟಗಳ ತೀರ್ಪಿನಲ್ಲಿ, ಆನಂದ್ ಜಿಲ್ಲಾ ನ್ಯಾಯಾಲಯದ 4 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್.ಎ.ನಕುಮ್, “ಗುಜರಾತ್‌ನಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸುವುದಕ್ಕಾಗಿ ಬಂದಿದ್ದರು ಎಂಬುದು ಸಾಬೀತಾಗಿಲ್ಲ, ಭಯೋತ್ಪಾದಕ ಘಟಕವನ್ನು ಸ್ಥಾಪಿಸಿದರು ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ. ಆರೋಪಿ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸ್ಪಷ್ಟವಾಗಿ ವಿಫಲವಾಗಿದೆ. ಜೊತೆಗೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್‌ಗಳೊಂದಿಗೆ ಸಂಪರ್ಕದಲ್ಲಿದ್ದರು ಎಂಬುದನ್ನು ಸಾಬೀತುಪಡಿಸಲು ಕೂಡ ಪ್ರಾಸಿಕ್ಯೂಷನ್ ಸಂಪೂರ್ಣ ವಿಫಲವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಶೀರ್ ಅಹಮದ್ ಬಾಬಾರವರಿಗೆ ಒಳ್ಳೆಯದಾಗಲಿ. ಅಮಾಯಕರನ್ನು ವರ್ಷಾನುಗಟ್ಟಲೆ ಜೈಲಿನಲ್ಲಿ ಕೊಳೆಸುವಂತಹ ಯು.ಎ.ಪಿ.ಎ. ಅಂತಹ ಅಮಾನುಷ ಕಾನೂನುಗಳನ್ನು ರದ್ದುಪಡಿಸಬೇಕು. ಒಬ್ಬ ವ್ಯಕ್ತಿಯ ಜೀವನದಲ್ಲಿ ೧೧ ವರ್ಷಗಳು ಅಮೂಲ್ಯವಾದ ಅವದಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...