Homeಮುಖಪುಟಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ...

ಭಯೋತ್ಪಾದನೆ ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲ: 11 ವರ್ಷಗಳ ಬಳಿಕ ಮನೆ ಸೇರಿದ ಶ್ರೀನಗರದ ವ್ಯಕ್ತಿ

- Advertisement -
- Advertisement -

ಭಯೋತ್ಪಾದನೆ ಆರೋಪದ ಮೇಲೆ ಗುಜರಾತ್ ಪೊಲೀಸರು 11 ವರ್ಷಗಳ ಹಿಂದೆ ಬಂಧಿಸಿದ್ದ ಶ್ರೀನಗರದ ವ್ಯಕ್ತಿಯನ್ನು ಆರೋಪ ಸಾಬೀತು ಪಡಿಸಲು ಪೊಲೀಸರು ವಿಫಲವಾದ ಹಿನ್ನೆಲೆ ನಿರಪರಾಧಿ ಎಂದು ಬಿಡುಗಡೆ ಮಾಡಲಾಗಿದೆ. ಕಂಪ್ಯೂಟರ್ ವೃತ್ತಿಪರರಾಗಿರುವ ಬಶೀರ್ ಅಹ್ಮದ್ ಬಾಬಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ವಡೋದರಾ ನ್ಯಾಯಾಲಯ ಹೇಳಿದೆ.

ರಾಜ್ಯದಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸಲು ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ ಸಂಘಟನೆಗಾಗಿ 2002 ರ ಗಲಭೆಯ ಬಗ್ಗೆ ಕೋಪಗೊಂಡಿರುವ ಮುಸ್ಲಿಂ ಯುವಕರನ್ನು ಸಂಘಟಿಸಲು ಬಶೀರ್ ಅಹ್ಮದ್ ಬಾಬಾ ಗುಜರಾತ್‌ಗೆ ಬಂದಿದ್ದಾರೆ ಎಂದು ಗುಜರಾತ್ ಎಟಿಎಸ್ ಮಾರ್ಚ್ 13, 2010 ರಂದು 43 ವರ್ಷದ ಅಹ್ಮದ್ ಅವರನ್ನು ಬಂಧಿಸಿದ್ದರು.

ಅಹ್ಮದ್ ಅವರು,  ಹಿಜ್ಬುಲ್ ಮುಜಾಹಿದ್ದೀನ್‌ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಬಿಲಾಲ್ ಅಹ್ಮದ್ ಶೇರಾ ಅವರೊಂದಿಗೆ ದೂರವಾಣಿ ಮತ್ತು ಇಮೇಲ್ ಮೂಲಕ ಸಂಪರ್ಕದಲ್ಲಿದ್ದಾರೆ ಎಂದು ಗುಜರಾತ್ ಎಟಿಎಸ್ ಆರೋಪಿಸಿತ್ತು. ಆದರೆ ಈಗ ಆರೋಪ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ: ಹೋರಾಟಗಾರ ಅಖಿಲ್ ಗೊಗೋಯ್‌ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಕೈಬಿಟ್ಟ ಎನ್‌ಐಎ ನ್ಯಾಯಾಲಯ

ಕ್ಯಾನ್ಸರ್ ನಂತರದ ಆರೈಕೆಗಾಗಿ ಮಾಡಲಾಗಿದ್ದ ನಾಲ್ಕು ದಿನಗಳ ಶಿಬಿರದಲ್ಲಿ ಪಾಲ್ಗೊಳ್ಳಲು ಅಹ್ಮದ್ ಗುಜರಾತ್‌ಗೆ ಬಂದಿದ್ದರು. ಕಿಮಾಯ ಫೌಂಡೇಶನ್ ಮೂಲಕ ಕಾಶ್ಮೀರದ ಕಣಿವೆಯ ಜನರಿಗೆ ಸೇವೆಗಳನ್ನು ಒದಗಿಸಲು, ಈ ಕ್ಯಾಂಪ್‌ನ ಭಾಗವಾಗಿದ್ದರು ಎಂಬ ವಾದವನ್ನು ನ್ಯಾಯಾಲಯವು ಜೂನ್ 19 ರಂದು ಎತ್ತಿಹಿಡಿದಿದೆ.

ಜೂನ್ 23 ರಂದು 11 ವರ್ಷಗಳ ಬಳಿಕ ಬಶೀರ್ ಅಹ್ಮದ್ ಬಾಬಾ ಶ್ರೀನಗರದ ರೈನಾವರಿಯಲ್ಲಿರುವ ತಮ್ಮ ಮನೆಗೆ ತಲುಪಿದ್ದಾರೆ. ಬಶೀರ್ ಅವರು ಶ್ರೀನಗರದ ರೈನವರಿ ಪ್ರದೇಶದ ತಮ್ಮ ನಿವಾಸದ ಹತ್ತಿರ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಅವರು ಎನ್‌ಜಿಓ ಒಂದರಲ್ಲಿ ಸಹಾಯಕ ಪ್ರಾಜೆಕ್ಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು, ಅವರ ಭಾಗವಾಗಿ ಹಲವಾರು ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದ್ದರು.

87 ಪುಟಗಳ ತೀರ್ಪಿನಲ್ಲಿ, ಆನಂದ್ ಜಿಲ್ಲಾ ನ್ಯಾಯಾಲಯದ 4 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್.ಎ.ನಕುಮ್, “ಗುಜರಾತ್‌ನಲ್ಲಿ ಭಯೋತ್ಪಾದಕ ಜಾಲವನ್ನು ಸ್ಥಾಪಿಸುವುದಕ್ಕಾಗಿ ಬಂದಿದ್ದರು ಎಂಬುದು ಸಾಬೀತಾಗಿಲ್ಲ, ಭಯೋತ್ಪಾದಕ ಘಟಕವನ್ನು ಸ್ಥಾಪಿಸಿದರು ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ. ಆರೋಪಿ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಸ್ಪಷ್ಟವಾಗಿ ವಿಫಲವಾಗಿದೆ. ಜೊತೆಗೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್‌ಗಳೊಂದಿಗೆ ಸಂಪರ್ಕದಲ್ಲಿದ್ದರು ಎಂಬುದನ್ನು ಸಾಬೀತುಪಡಿಸಲು ಕೂಡ ಪ್ರಾಸಿಕ್ಯೂಷನ್ ಸಂಪೂರ್ಣ ವಿಫಲವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಶೀರ್ ಅಹಮದ್ ಬಾಬಾರವರಿಗೆ ಒಳ್ಳೆಯದಾಗಲಿ. ಅಮಾಯಕರನ್ನು ವರ್ಷಾನುಗಟ್ಟಲೆ ಜೈಲಿನಲ್ಲಿ ಕೊಳೆಸುವಂತಹ ಯು.ಎ.ಪಿ.ಎ. ಅಂತಹ ಅಮಾನುಷ ಕಾನೂನುಗಳನ್ನು ರದ್ದುಪಡಿಸಬೇಕು. ಒಬ್ಬ ವ್ಯಕ್ತಿಯ ಜೀವನದಲ್ಲಿ ೧೧ ವರ್ಷಗಳು ಅಮೂಲ್ಯವಾದ ಅವದಿ.

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...