Homeಮುಖಪುಟಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

- Advertisement -
- Advertisement -

ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾಂಕ್ರಾಮಿಕ ಮತ್ತು ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಎನ್ನಲು, ಡೆಲ್ಟಾ ಪ್ಲಸ್ ವೈರಸ್‌ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಜನರು ಕೊರೊನಾ ಮಾರ್ಗಸೂಚಿಗಳನ್ನು ಸೂಕ್ತವಾಗಿ ಅನುಸರಿಸಿದರೆ ಮತ್ತು ಕೊರೊನಾ ವ್ಯಾಕ್ಸಿನೇಷನ್ ತೆಗೆದುಕೊಂಡರೆ, ಮುಂಬರುವ ಯಾವುದೇ ರೂಪಾಂತರಿ ವೈರಸ್‌ಗಳ ವಿರುದ್ಧ ಹೋರಾಡಬಹುದು ಮತ್ತು ಸುರಕ್ಷಿತವಾಗಿರಬಹುದು ಎಂದು ಡಾ.ರಂದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ.

“ಡೆಲ್ಟಾ ಪ್ಲಸ್ ರೂಪಾಂತರಿಯು ಹೆಚ್ಚು ಸಾಂಕ್ರಾಮಿಕ, ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಮತ್ತು  ರೋಗನಿರೋಧಕ ಶಕ್ತಿಯನ್ನು ಮೀರಿ ಸೋಂಕಿತರನ್ನಾಗಿಸುತ್ತದೆ ಎಂದು ಸೂಚಿಸಲು ಹೆಚ್ಚಿನ ಡೇಟಾ ಇಲ್ಲ. ಆದರೆ ನಾವು ಕೊರೊಬಾ ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸಿದರೆ ಮತ್ತು ಲಸಿಕೆ ತೆಗೆದುಕೊಂಡರೆ, ಯಾವುದೇ ರೂಪಾಂತರಿ ವೈರಸ್‌ಗಳಿಂದ ವಿರುದ್ಧ ಸುರಕ್ಷಿತವಾಗಿರುತ್ತೇವೆ” ಎಂದು ಡಾ ಗುಲೇರಿಯಾ ಹೇಳಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಯು ಮೂರನೇ ಅಲೆಗೆ ಕಾರಣವಾಗಬಹುದು: ಟಾಸ್ಕ್ ಫೋರ್ಸ್ ಎಚ್ಚರಿಕೆ

ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಪ್ರಾಣ ಕಳೆದುಕೊಂಡ ಆರೋಗ್ಯ ಕಾರ್ಯಕರ್ತರನ್ನು ವೈದ್ಯರ ದಿನದಂದು ಏಮ್ಸ್ ನಿರ್ದೇಶಕರ ರಂದೀಪ್ ಗುಲೇರಿಯಾ ನೆನಪಿಸಿಕೊಂಡಿದ್ದಾರೆ.

“ಕಳೆದ ಒಂದು ವರ್ಷದಿಂದ ವೈದ್ಯರು ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿದ್ದಾರೆ. ಅವರ ಕೆಲಸವನ್ನು ನಾವು ಪ್ರಶಂಸಿಸಬೇಕು. ಈ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದವರನ್ನು ಸಹ ನಾವು ನೆನಪಿಸಿಕೊಳ್ಳಬೇಕು. ಅವರನ್ನು ನೆನಪಿಸಿಕೊಳ್ಳುವಾಗ, ಇಂತಹ ಪ್ರಕರಣಗಳು ಮತ್ತಷ್ಟು ಹೆಚ್ಚಾಗದಂತಹ ಪರಿಸ್ಥಿತಿಯನ್ನು ಸೃಷ್ಟಿಸಬೇಕು” ಎಂದಿದ್ದಾರೆ.

“ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ವೈದ್ಯರು ಮತ್ತು ಆಸ್ಪತ್ರೆಗಳ ಮೇಲೆ ಕಡಿಮೆ ಒತ್ತಡ ಉಂಟಾಗುವಂತೆ ಎಲ್ಲರು ಲಸಿಕೆ ಹಾಕಿಸಿಕೊಳ್ಳಬೇಕು “ಎಂದು ಹೇಳಿದ್ದಾರೆ.

ಇದರ ಜೊತೆಗೆ ವೈದ್ಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿಷಯವನ್ನು ಪ್ರಸ್ತಾಪಿಸಿ, ಇದು ವೈದ್ಯಕೀಯ ಸಮುದಾಯಕ್ಕೆ ನಿರಾಶಾದಾಯಕವಾಗಿದೆ ಎಂದು ಡಾ. ಗುಲೇರಿಯಾ ಹೇಳಿದ್ದಾರೆ.

“ವೈದ್ಯರು ಮಾಡುತ್ತಿರುವ ಕೆಲಸವನ್ನು ನಾವು ಮೆಚ್ಚಬೇಕು ಮತ್ತು ಗೌರವಿಸಬೇಕು ಮತ್ತು ವೈದ್ಯರ ಮೇಲಿನ ದೌರ್ಜನ್ಯವನ್ನು ಖಂಡಿಸಬೇಕು. ಇದು ವೈದ್ಯಕೀಯ ಸಮುದಾಯಕ್ಕೆ ಧೈರ್ಯಗೆಡಿಸುವ ಒಂದು ಕೃತ್ಯವಾಗಿದೆ” ಎಂದು ಏಮ್ಸ್ ನಿರ್ದೇಶಕರು ಆತಂಕ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನ ಯಶೋಧಾ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಘ್ನೇಶ್ ನಾಯ್ಡು, ’ಒಂದು ರೂಪಾಂತರಿ ತಳಿ ಇನ್ನೂ ಬೇರೆ ಬೇರೆ ರೀತಿಯಲ್ಲಿ ಹೊಸ ರೂಪಾಂತರ ಪಡೆದುಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ವೈರಸ್‌ನ ಮೂಲಸ್ವರೂಪವೇ ಬದಲಾಗಿ ಹೊಸ ಸ್ವರೂಪದಲ್ಲಿ ಕಾಣಿಸಿಕೊಳ್ಳುತ್ತಿರುವುದು ಲಸಿಕೆ ಮತ್ತು ಚಿಕಿತ್ಸಾ ವಿಧಾನಗಳ ಪರಿಣಾಮವನ್ನು ಕುಂಠಿತಗೊಳಿಸುತ್ತಿವೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ ಜೊತೆಗೆ ಇತರ 4 ಅಪಾಯಕಾರಿ ರೂಪಾಂತರಿಗಳಿವೆ: ತಜ್ಞರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...