HomeUncategorizedಕೇರಳದ ಪ್ರಯಾಣಿಕರಿಗೆ ರಾಜ್ಯದ ನಿರ್ಬಂಧ - ಕರ್ನಾಟಕ ಪ್ರವೇಶಿಸುವುದು ಹೇಗೆ? ಇಲ್ಲಿದೆ ಮಾಹಿತಿ!

ಕೇರಳದ ಪ್ರಯಾಣಿಕರಿಗೆ ರಾಜ್ಯದ ನಿರ್ಬಂಧ – ಕರ್ನಾಟಕ ಪ್ರವೇಶಿಸುವುದು ಹೇಗೆ? ಇಲ್ಲಿದೆ ಮಾಹಿತಿ!

- Advertisement -
- Advertisement -

ನೆರೆಯ ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ನೆಗೆಟಿವ್‌‌ ವರದಿ ಅಥವಾ “ಎರಡೂ ಡೋಸ್‌ಗಳನ್ನು ಪಡೆದಿರುವ” ಕೊರೊನಾ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ನೀಡುವಂತೆ ಕೇಳಲಾಗುವುದು ಎಂದು ಗುರುವಾರ ಹೊರಡಿಸಲಾದ ಅಧಿಕೃತ ಆದೇಶದಲ್ಲಿ ರಾಜ್ಯ ಸರ್ಕಾರ ತಿಳಿಸಿದೆ. ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹೊರಡಿಸಿದ ಆದೇಶದಲ್ಲಿ, ಕೇರಳದ ಕೆಲವು ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರವು ವರದಿಯಾಗಿದೆ, ಆದ್ದರಿಂದ ವಿಶೇಷ ಕಣ್ಗಾವಲು ಕ್ರಮಗಳು ರಾಜ್ಯದಾದ್ಯಂತ ಜಾರಿಯಲ್ಲಿರುತ್ತದೆ ಎಂದು ಹೇಳಿದೆ.

ಆದೇಶವು, “ಆರ್ಟಿ-ಪಿಸಿಆರ್‌ ನೆಗೆಟಿವ್‌‌ ವರದಿಯು 72 ಗಂಟೆಗಳಿಗಿಂತ ಹಳೆಯದಾಗಿರಬಾರದು. ಲಸಿಕೆ ಪ್ರಮಾಣಪತ್ರವು ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆಂದು ನಿರ್ದಿಷ್ಟಪಡಿಸಿರಬೇಕು. ವಿಮಾನ, ಬಸ್, ರೈಲು, ಟ್ಯಾಕ್ಸಿ ಮತ್ತು ವೈಯಕ್ತಿಕ ಸಾರಿಗೆಯ ಮೂಲಕ ಕರ್ನಾಟಕಕ್ಕೆ ಪ್ರವೇಶಿಸುವ ಎಲ್ಲ ಪ್ರಯಾಣಿಕರಿಗೂ ಈ ನಿಯಮ ಅನ್ವಯವಾಗುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

ಇದಲ್ಲದೆ, ಕೇರಳದೊಂದಿಗೆ ಗಡಿ ಹಂಚಿಕೊಳ್ಳುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರದ ಜಿಲ್ಲಾಧಿಕಾರಿಗಳಿಗೆ ನಿಯಮವನ್ನು ಜಾರಿಗೆ ತರಲು ಚೆಕ್ ಪೋಸ್ಟ್‌ಗಳಲ್ಲಿ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚನೆ ನೀಡಲಾಗಿದೆ.

“ಎಲ್ಲಾ ವಾಹನಗಳ ಚಾಲಕ, ಸಹಾಯಕ ಅಥವಾ ಕ್ಲೀನರ್ ಮತ್ತು ಪ್ರಯಾಣಿಕರು ಸೇರಿದಂತೆ ಎಲ್ಲರನ್ನು ಪರೀಕ್ಷಿಸಲು ಅಧಿಕಾರಿಗಳಿಗೆ ನಿರ್ದಿಷ್ಟವಾಗಿ ಕೇಳಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುವವರ ಆರ್‌ಟಿ-ಪಿಸಿಆರ್ ಪ್ರಮಾಣಪತ್ರವು 72 ಗಂಟೆಗಳಿಗಿಂತ ಹಳೆಯದಾಗಿರಬಾರದು.ಇದನ್ನು ಪರಿಶೀಲಿಸುವುದು ಕಂಡಕ್ಟರ್‌ನ ಜವಾಬ್ದಾರಿಯಾಗಿದೆ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಧ್ಯೆ, “ಶಿಕ್ಷಣ, ವ್ಯವಹಾರ ಮತ್ತು ಇತರ ಕಾರಣಗಳಿಗಾಗಿ ಕರ್ನಾಟಕಕ್ಕೆ ಪ್ರತಿದಿನ ಭೇಟಿ ನೀಡುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗುವುದು ಮತ್ತು ನೆಗಟಿವ್‌‌ ರಿಪೋರ್ಟ್ ವರದಿ ಹೊಂದಿರುವುದು ಕಡ್ಡಾಯವಾಗಿದೆ” ಎಂದು ಆದೇಶವು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಇಂಟರ್‍‍ನ್ಯಾಶನಲ್ ಫೋಕಸ್; ಇಥಿಯೋಪಿಯಾ: ನೊಬೆಲ್ ಶಾಂತಿ ಪ್ರಶಸ್ತಿಯ ಇನ್ನೊಂದು ಯುದ್ಧ

ಈ ವಾರದ ಆರಂಭದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾಡಳಿತಗಳು ಮಂಗಳವಾರದಿಂದ ಕೇರಳದಿಂದ ಬರುವ ಜನರಿಂದ ಪರೀಕ್ಷಾ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಪರಿಶೀಲಿಸಲಾಗುವುದು ಎಂದು ಘೋಷಿಸಿತ್ತು. ಕೇರಳ-ಕರ್ನಾಟಕ ಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಹೆಚ್ಚಿನ ಜಾಗರೂಕತೆಯಿಂದ ಇರಬೇಕು ಮತ್ತು ಚೆಕ್‌ಪೋಸ್ಟ್‌ಗಳನ್ನು ಬಲಪಡಿಸುವಂತೆ ರಾಜ್ಯ ಸರ್ಕಾರ ಜಿಲ್ಲೆಗಳಿಗೆ ಸೂಚನೆ ನೀಡಿದ ನಂತರ ಈ ಕ್ರಮಕ್ಕೆ ಚಾಲನೆ ನೀಡಲಾಯಿತು.

ಆದರೆ, ಸಾಂವಿಧಾನಿಕ ಹುದ್ದೆಗಳಲ್ಲಿರುವವರಿಗೆ, ಆರೋಗ್ಯ ಕಾರ್ಯಕರ್ತರಿಗೆ ಮತ್ತು ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಜೊತೆಗೆ ಕುಟುಂಬದಲ್ಲಿ ಸಾವು ಮತ್ತು ವೈದ್ಯಕೀಯ ಅವಶ್ಯಕತೆಗಳಂತಹ ತುರ್ತು ಸಂದರ್ಭಗಳಲ್ಲಿ ಗಡಿಗಳ ನಡುವೆ ಪ್ರಯಾಣಿಸಲು ಅನುಮತಿಸಲಾಗುವುದು. ಆದರೆ ಅವರು ತಮ್ಮ ಗುರುತು ಮತ್ತು ವಿಳಾಸದ ವಿವರಗಳನ್ನು ನೀಡುವುದರ ಜೊತೆಗೆ ಕೋವಿಡ್ ಪರೀಕ್ಷೆಗೆ ತಮ್ಮ ಸ್ವ್ಯಾಬ್ ಮಾದರಿಯನ್ನು ನೀಡಬೇಕಾಗುತ್ತದೆ. ಪರೀಕ್ಷಾ ಫಲಿತಾಂಶವನ್ನು ಅವಲಂಬಿಸಿ ಪ್ರೋಟೋಕಾಲ್ ಪ್ರಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆದೇಶ ಹೇಳಿದೆ.

ಜೂನ್ 28 ರಂದು ರಾಜ್ಯ ಸರ್ಕಾರವು ಮಹಾರಾಷ್ಟ್ರದ ಎಲ್ಲ ಪ್ರಯಾಣಿಕರಿಗೆ 72 ಗಂಟೆಗಳನ್ನು ಮೀರದ ಆರ್‌ಟಿ-ಪಿಸಿಆರ್ ಬೆಗೆಟಿವ್‌‌ ವರದಿಯನ್ನು ಮತ್ತು ಕನಿಷ್ಠ ಒಂದು ಡೋಸ್‌ನ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವ ಜನರಿಗೆ ರಾಜ್ಯಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ನಿರ್ದೇಶಿಸಿತ್ತು.

ಇದನ್ನೂ ಓದಿ: ಮತದಾನ ನಂತರದ ಹಿಂಸಾಚಾರ: ಚುನಾವಣಾ ಆಯೋಗ, ಬಂಗಾಳ ಮತ್ತು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂನಿಂದ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...