HomeUncategorizedಕೇರಳದ ಪ್ರಯಾಣಿಕರಿಗೆ ರಾಜ್ಯದ ನಿರ್ಬಂಧ - ಕರ್ನಾಟಕ ಪ್ರವೇಶಿಸುವುದು ಹೇಗೆ? ಇಲ್ಲಿದೆ ಮಾಹಿತಿ!

ಕೇರಳದ ಪ್ರಯಾಣಿಕರಿಗೆ ರಾಜ್ಯದ ನಿರ್ಬಂಧ – ಕರ್ನಾಟಕ ಪ್ರವೇಶಿಸುವುದು ಹೇಗೆ? ಇಲ್ಲಿದೆ ಮಾಹಿತಿ!

- Advertisement -
- Advertisement -

ನೆರೆಯ ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ನೆಗೆಟಿವ್‌‌ ವರದಿ ಅಥವಾ “ಎರಡೂ ಡೋಸ್‌ಗಳನ್ನು ಪಡೆದಿರುವ” ಕೊರೊನಾ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ನೀಡುವಂತೆ ಕೇಳಲಾಗುವುದು ಎಂದು ಗುರುವಾರ ಹೊರಡಿಸಲಾದ ಅಧಿಕೃತ ಆದೇಶದಲ್ಲಿ ರಾಜ್ಯ ಸರ್ಕಾರ ತಿಳಿಸಿದೆ. ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹೊರಡಿಸಿದ ಆದೇಶದಲ್ಲಿ, ಕೇರಳದ ಕೆಲವು ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರವು ವರದಿಯಾಗಿದೆ, ಆದ್ದರಿಂದ ವಿಶೇಷ ಕಣ್ಗಾವಲು ಕ್ರಮಗಳು ರಾಜ್ಯದಾದ್ಯಂತ ಜಾರಿಯಲ್ಲಿರುತ್ತದೆ ಎಂದು ಹೇಳಿದೆ.

ಆದೇಶವು, “ಆರ್ಟಿ-ಪಿಸಿಆರ್‌ ನೆಗೆಟಿವ್‌‌ ವರದಿಯು 72 ಗಂಟೆಗಳಿಗಿಂತ ಹಳೆಯದಾಗಿರಬಾರದು. ಲಸಿಕೆ ಪ್ರಮಾಣಪತ್ರವು ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆಂದು ನಿರ್ದಿಷ್ಟಪಡಿಸಿರಬೇಕು. ವಿಮಾನ, ಬಸ್, ರೈಲು, ಟ್ಯಾಕ್ಸಿ ಮತ್ತು ವೈಯಕ್ತಿಕ ಸಾರಿಗೆಯ ಮೂಲಕ ಕರ್ನಾಟಕಕ್ಕೆ ಪ್ರವೇಶಿಸುವ ಎಲ್ಲ ಪ್ರಯಾಣಿಕರಿಗೂ ಈ ನಿಯಮ ಅನ್ವಯವಾಗುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

ಇದಲ್ಲದೆ, ಕೇರಳದೊಂದಿಗೆ ಗಡಿ ಹಂಚಿಕೊಳ್ಳುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರದ ಜಿಲ್ಲಾಧಿಕಾರಿಗಳಿಗೆ ನಿಯಮವನ್ನು ಜಾರಿಗೆ ತರಲು ಚೆಕ್ ಪೋಸ್ಟ್‌ಗಳಲ್ಲಿ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚನೆ ನೀಡಲಾಗಿದೆ.

“ಎಲ್ಲಾ ವಾಹನಗಳ ಚಾಲಕ, ಸಹಾಯಕ ಅಥವಾ ಕ್ಲೀನರ್ ಮತ್ತು ಪ್ರಯಾಣಿಕರು ಸೇರಿದಂತೆ ಎಲ್ಲರನ್ನು ಪರೀಕ್ಷಿಸಲು ಅಧಿಕಾರಿಗಳಿಗೆ ನಿರ್ದಿಷ್ಟವಾಗಿ ಕೇಳಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುವವರ ಆರ್‌ಟಿ-ಪಿಸಿಆರ್ ಪ್ರಮಾಣಪತ್ರವು 72 ಗಂಟೆಗಳಿಗಿಂತ ಹಳೆಯದಾಗಿರಬಾರದು.ಇದನ್ನು ಪರಿಶೀಲಿಸುವುದು ಕಂಡಕ್ಟರ್‌ನ ಜವಾಬ್ದಾರಿಯಾಗಿದೆ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಧ್ಯೆ, “ಶಿಕ್ಷಣ, ವ್ಯವಹಾರ ಮತ್ತು ಇತರ ಕಾರಣಗಳಿಗಾಗಿ ಕರ್ನಾಟಕಕ್ಕೆ ಪ್ರತಿದಿನ ಭೇಟಿ ನೀಡುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗುವುದು ಮತ್ತು ನೆಗಟಿವ್‌‌ ರಿಪೋರ್ಟ್ ವರದಿ ಹೊಂದಿರುವುದು ಕಡ್ಡಾಯವಾಗಿದೆ” ಎಂದು ಆದೇಶವು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಇಂಟರ್‍‍ನ್ಯಾಶನಲ್ ಫೋಕಸ್; ಇಥಿಯೋಪಿಯಾ: ನೊಬೆಲ್ ಶಾಂತಿ ಪ್ರಶಸ್ತಿಯ ಇನ್ನೊಂದು ಯುದ್ಧ

ಈ ವಾರದ ಆರಂಭದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾಡಳಿತಗಳು ಮಂಗಳವಾರದಿಂದ ಕೇರಳದಿಂದ ಬರುವ ಜನರಿಂದ ಪರೀಕ್ಷಾ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಪರಿಶೀಲಿಸಲಾಗುವುದು ಎಂದು ಘೋಷಿಸಿತ್ತು. ಕೇರಳ-ಕರ್ನಾಟಕ ಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಹೆಚ್ಚಿನ ಜಾಗರೂಕತೆಯಿಂದ ಇರಬೇಕು ಮತ್ತು ಚೆಕ್‌ಪೋಸ್ಟ್‌ಗಳನ್ನು ಬಲಪಡಿಸುವಂತೆ ರಾಜ್ಯ ಸರ್ಕಾರ ಜಿಲ್ಲೆಗಳಿಗೆ ಸೂಚನೆ ನೀಡಿದ ನಂತರ ಈ ಕ್ರಮಕ್ಕೆ ಚಾಲನೆ ನೀಡಲಾಯಿತು.

ಆದರೆ, ಸಾಂವಿಧಾನಿಕ ಹುದ್ದೆಗಳಲ್ಲಿರುವವರಿಗೆ, ಆರೋಗ್ಯ ಕಾರ್ಯಕರ್ತರಿಗೆ ಮತ್ತು ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಜೊತೆಗೆ ಕುಟುಂಬದಲ್ಲಿ ಸಾವು ಮತ್ತು ವೈದ್ಯಕೀಯ ಅವಶ್ಯಕತೆಗಳಂತಹ ತುರ್ತು ಸಂದರ್ಭಗಳಲ್ಲಿ ಗಡಿಗಳ ನಡುವೆ ಪ್ರಯಾಣಿಸಲು ಅನುಮತಿಸಲಾಗುವುದು. ಆದರೆ ಅವರು ತಮ್ಮ ಗುರುತು ಮತ್ತು ವಿಳಾಸದ ವಿವರಗಳನ್ನು ನೀಡುವುದರ ಜೊತೆಗೆ ಕೋವಿಡ್ ಪರೀಕ್ಷೆಗೆ ತಮ್ಮ ಸ್ವ್ಯಾಬ್ ಮಾದರಿಯನ್ನು ನೀಡಬೇಕಾಗುತ್ತದೆ. ಪರೀಕ್ಷಾ ಫಲಿತಾಂಶವನ್ನು ಅವಲಂಬಿಸಿ ಪ್ರೋಟೋಕಾಲ್ ಪ್ರಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆದೇಶ ಹೇಳಿದೆ.

ಜೂನ್ 28 ರಂದು ರಾಜ್ಯ ಸರ್ಕಾರವು ಮಹಾರಾಷ್ಟ್ರದ ಎಲ್ಲ ಪ್ರಯಾಣಿಕರಿಗೆ 72 ಗಂಟೆಗಳನ್ನು ಮೀರದ ಆರ್‌ಟಿ-ಪಿಸಿಆರ್ ಬೆಗೆಟಿವ್‌‌ ವರದಿಯನ್ನು ಮತ್ತು ಕನಿಷ್ಠ ಒಂದು ಡೋಸ್‌ನ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವ ಜನರಿಗೆ ರಾಜ್ಯಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ನಿರ್ದೇಶಿಸಿತ್ತು.

ಇದನ್ನೂ ಓದಿ: ಮತದಾನ ನಂತರದ ಹಿಂಸಾಚಾರ: ಚುನಾವಣಾ ಆಯೋಗ, ಬಂಗಾಳ ಮತ್ತು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂನಿಂದ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...