Homeಮುಖಪುಟತಮಿಳುನಾಡು: ಯುಜಿ ಪ್ರವೇಶಾತಿ ಆಗಸ್ಟ್‌‌ 1 ರಿಂದ ಪ್ರಾರಂಭ

ತಮಿಳುನಾಡು: ಯುಜಿ ಪ್ರವೇಶಾತಿ ಆಗಸ್ಟ್‌‌ 1 ರಿಂದ ಪ್ರಾರಂಭ

- Advertisement -
- Advertisement -

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಆಗಸ್ಟ್ 1 ರಿಂದ ಪ್ರಥಮ ವರ್ಷದ ಯುಜಿ ಪ್ರವೇಶವನ್ನು ಪ್ರಾರಂಭಿಸಲಿವೆ ಎಂದು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಗುರುವಾರ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, 10, 11 ಮತ್ತು 12 ನೇ ತರಗತಿಯ ಫಲಿತಾಂಶಗಳ ಒಟ್ಟು ಮೊತ್ತವನ್ನು ಉನ್ನತ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಬಳಸಲಾಗುವುದು ಎಂದು ಹೇಳಿದ್ದಾರೆ.

ಅಣ್ಣಾ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯಲು ‘ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ’ (ಡಿಒಟಿಇ) ದಿಂದ ಅನುಕೂಲವಾಗಲಿದೆ. ಒಟ್ಟು ಅಂಕಗಳನ್ನು ಬಳಸಿಕೊಂಡು ‘ಸಿಂಗಲ್-ವಿಂಡೋ’ ವ್ಯವಸ್ಥೆಯ ಮೂಲಕ ಪ್ರವೇಶಾತಿ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಆದಾಗ್ಯೂ ಪ್ರವೇಶಾತಿಯು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ನಡೆಯುತ್ತದೆಯೇ ಎಂದು ಅವರು ಸ್ಪಷ್ಟಪಡಿಸಿಲ್ಲ.

ಇದನ್ನೂ ಓದಿ: ಎಲ್‌ಎಸ್‌ಇಯಿಂದ ಅಂಬೇಡ್ಕರ್‌ ಅವರ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ

ಆಗಸ್ಟ್ 1 ರಿಂದ ಕಾಲೇಜುಗಳನ್ನು ಮತ್ತೆ ತೆರೆಯಲು ಅನುಮತಿ ನೀಡಲಾಗಿದೆ ಎಂದು ಪೊನ್ಮುಡಿ ಹೇಳಿದ್ದಾರೆ. ಜುಲೈ 31 ನಂತರ ಕಾಲೇಜುಗಳಿಗೆ ತಮ್ಮ ಕ್ಯಾಂಪಸ್‌ನಲ್ಲಿ ಪ್ರವೇಶ ಪ್ರಕ್ರಿಯೆಯನ್ನು ನಿರ್ವಹಿಸಲು ಮತ್ತು ಆನ್‌ಲೈನ್ ತರಗತಿಗಳನ್ನು ನಡೆಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ತಮಿಳುನಾಡಿನ ಎಲ್ಲಾ ರಾಜ್ಯ ವಿಶ್ವವಿದ್ಯಾಲಯಗಳ ಉಪಕುಲಪತಿಳೊಂದಿಗೆ ಗುರುವಾರ ನಡೆದ ಆನ್‌ಲೈನ್‌‌ ಸಭೆಯ ನಂತರ ಮಾತನಾಡಿದ ಪೊನ್ಮುಡಿ, “ಶಿಕ್ಷಣ ಸಂಸ್ಥೆಗಳಲ್ಲಿ ನೇಮಕಾತಿ ವ್ಯತ್ಯಾಸಗಳ ಬಗ್ಗೆ ಚರ್ಚಿಸಲಾಗಿದೆ. ಎಲ್ಲಾ ವಿಶ್ವವಿದ್ಯಾನಿಲಯಗಳು ನೇಮಕಾತಿಯಲ್ಲಿ ಒಂದೇ ರೀತಿಯ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಬೇಕು. ಈ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ನಾನು ಅವರನ್ನು ಕೇಳಿದ್ದೇನೆ” ಎಂದು ಅವರು ಹೇಳಿದ್ದಾರೆ.

ಕಳೆದ ಒಂದು ದಶಕದಲ್ಲಿ ಮಾಡಿದ ಪ್ರಮುಖ ನೇಮಕಾತಿಗಳ ಬಗ್ಗೆ ಸರ್ಕಾರ ಆಳವಾದ ಅವಲೋಕನವನ್ನು ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

ಮದ್ರಾಸ್ ವಿಶ್ವವಿದ್ಯಾಲಯವು ಎಂಫಿಲ್ ಕೋರ್ಸ್‌ಗಳನ್ನು ರದ್ದುಗೊಳಿಸಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಪೊನ್ಮುಡಿ, ಎಲ್ಲಾ ವಿಶ್ವವಿದ್ಯಾಲಯಗಳು ಈ ಕೋರ್ಸ್‌‌ಗಳನ್ನು ಮುಂದುವರಿಸಬೇಕು ಎಂದು ಹೇಳಿದ್ದಾರೆ. “ಎಲ್ಲಾ ವಿಶ್ವವಿದ್ಯಾಲಯಗಳಿಗೆ ಎಂಫಿಲ್ ಕೋರ್ಸ್‌ಗಳನ್ನು ಮುಂದುವರಿಸಲು ಸೂಚನೆ ನೀಡಲಾಗಿದೆ. ಈ ಕೋರ್ಸ್‌ ಸ್ಥಗಿತಗೊಳಿಸುವ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳಿವೆ” ಎಂದು ವಿವರಿಸಿದ್ದಾರೆ.


ಇದನ್ನೂ ಓದಿ: ಮತದಾನ ನಂತರದ ಹಿಂಸಾಚಾರ: ಚುನಾವಣಾ ಆಯೋಗ, ಬಂಗಾಳ ಮತ್ತು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂನಿಂದ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...