Homeಅಂತರಾಷ್ಟ್ರೀಯಅಂಟಾರ್ಟಿಕದಲ್ಲೂ ಏರಿದ ತಾಪಮಾನ: ಕರಗುತ್ತಿವೆ ನೀರ್ಗಲ್ಲುಗಳು

ಅಂಟಾರ್ಟಿಕದಲ್ಲೂ ಏರಿದ ತಾಪಮಾನ: ಕರಗುತ್ತಿವೆ ನೀರ್ಗಲ್ಲುಗಳು

- Advertisement -
- Advertisement -

ಹಿಮಖಂಡವೆಂದು ಕರೆಯಲ್ಪಡುವ ದಕ್ಷಿಣ ದ್ರುವದಲ್ಲಿರುವ ಅಂಟಾರ್ಟಿಕದಲ್ಲಿ ಜನವಸತಿಯಿಲ್ಲ. ಮನುಷ್ಯ ವಾಸಕ್ಕೆ ಯೋಗ್ಯವಾದ ಅನುಕೂಲಕರವಾದ ಹವಮಾನವೂ ಇಲ್ಲ. ಉಷ್ಣಾಂಶ ಜೀರೋ ಡಿಗ್ರಿ ಸೆಲ್ಸಿಯಸ್‌ ಗಿಂತಲೂ ಕಡಿಮೆ ಅಥವಾ ಅದರ ಆಸುಪಾಸಿನಲ್ಲಿರುವ ನಿರ್ಜನ ಭೂಪ್ರದೇಶವೆಂದು ಅಂಟಾರ್ಟಿಕ ಪ್ರಖ್ಯಾತಿ ಪಡೆದಿದೆ. ಕೆಲವು ಸಾಹಸಿಗರು ಅಂಟಾರ್ಟಿಕಕ್ಕೆ ಪ್ರಯಾಣ ಬೆಳೆಸಿ ದಾಖಲೆ ನಿರ್ಮಿಸುತ್ತಿರುವುದನ್ನು ಇತ್ತೀಚಿನ ವರ್ಷಗಳಲ್ಲಿ ನೋಡುತ್ತಿದ್ದೇವೆ. ಅಂತಹ ಹಿಮಖಂಡದಲ್ಲಿಯೂ ತಾಪಮಾನದಲ್ಲಿ ತೀವ್ರ ಏರಿಕೆಯಾಗಿದ್ದು, ನಿನ್ನೆ ಇತಿಹಾಸದಲ್ಲಿಯೇ ಅತಿಹೆಚ್ಚು ಉಷ್ಣಾಂಶ ದಾಖಲಾಗಿದೆ.

18.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ನಿನ್ನೆ ಅಂಟಾರ್ಟಿಕಾದಲ್ಲಿ ದಾಖಲಾಗಿದ್ದು ಇದು ಇದುವರೆಗೆ ಶೀತಖಂಡದಲ್ಲಿ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವಾಗಿದೆ. ವಿಶ್ವ ಸಂಸ್ಥೆಯ ಅಂತರಾಷ್ಟ್ರೀಯ ಹವಾಮಾನ ಇಲಾಖೆ ಈ ವಿಷಯವನ್ನು ಬಹಿರಂಗಪಡಿಸಿದ್ದು, ಜಗತ್ತಿನಲ್ಲಿ ಅತಿ ವೇಗವಾಗಿ ಉಷ್ಣಾಂಶ ಏರಿಕೆಯಾಗುತ್ತಿರುವ ಪ್ರದೇಶದಲ್ಲಿ ಅಂಟಾರ್ಟಿಕ ಮೊದಲ ಸ್ಥಾನದಲ್ಲಿದೆ. ಕಳೆದ 50 ವರ್ಷಗಳಲ್ಲಿ ಇಲ್ಲಿನ ಸಾಮಾನ್ಯ ಉಷ್ಣಾಂಶದಲ್ಲಿ 3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಿರುವುದು ಜಗತ್ತಿಗೆ ತೀವ್ರ ಆಂತಂಕವನ್ನು ತಂದೊಡ್ಡಿದೆ ಎಂದು ವಿಶ್ವ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಅಂಟಾರ್ಟಿಕಾದಲ್ಲಿ ಸತತವಾಗಿ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿರುವುದಕ್ಕೆ ಕಾರಣ ವಾತಾವರಣದಲ್ಲಿ ಬದಲಾವಣೆ. ಭೂಮಿಯಲ್ಲಿನ ಕಾರ್ಬನ್ ಪ್ರಮಾಣ ಹೆಚ್ಚುತ್ತಿರುವ ಕಾರಣ ದಕ್ಷಿಣ ದ್ರುವ ಮತ್ತು ಉತ್ತರ ದ್ರುವದ ಅನೇಕ ಪ್ರದೇಶಗಳು ವರ್ಷದಿಂದ ವರ್ಷಕ್ಕೆ ಹೆಚ್ಚು ಹೆಚ್ಚು ತಾಪಮಾನ ದಾಖಲಿಸುತ್ತಿವೆ. ಅಂಟಾರ್ಟಿಕದಲ್ಲಿ ಉಷ್ಣಾಂಶ ಹೆಚ್ಚಿದಷ್ಟು ಸಮುದ್ರ ಮಟ್ಟ ಏರಿಕೆಯಾಗುತ್ತದೆ. ತಾಪಮಾನದಲ್ಲಿ ಇದೇ ರೀತಿಯ ಏರಿಕೆ ಮುಂದುವರೆದರೆ ನಿರ್ಗಡ್ಡೆಯಾದ ಅಂಟಾರ್ಟಿಕ ಮುಂದೊಂದು ದಿನ ಇಲ್ಲವಾಗಬಹುದು ಎಂದು ಹವಾಮಾನ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಶೀತ ವಾತಾವರಣಕ್ಕೆ ಹೊಂದಿಕೊಂಡು ಸಾವಿರಾರು ವರ್ಷಗಳಿಂದ ಅಂಟಾರ್ಟಿಕದಲ್ಲಿ ನೆಲೆ ಕಂಡುಕೊಂಡಿರುವ ಅರೆ ಜಲವಾಸಿಗಳಾದ ಪೆಂಗ್ವಿನ್, ಹಿಮ ಕರಡಿ, ಹಿಮ ನಾಯಿ ಸೇರಿದಂತೆ ಮುಂತಾದ ಜಲಚರಗಳು ಏರುತ್ತಿರುವ ತಾಪಮಾನದಿಂದಾಗಿ ಅಪಾಯವನ್ನು ಎದುರಿಸುತ್ತಿವೆ. ಕೆಲವು ಪ್ರಾಣಿ ಸಂಕುಲಗಳಂತೂ ಅಳಿವಿನ ಅಂಚಿಗೆ ಬಂದು ತಲುಪಿವೆ ಎಂದು ವಿಶ್ವ ಹವಾಮಾನ ಸಂಸ್ಥೆಯ ತಜ್ಞರು ಕ್ಲೈಮೇಟ್ ಚೆಂಜ್‌ನಿಂದ ಉಂಟಾಗುವ ಪರಿಣಾಮಗಳ ಕುರಿತು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಪತ್ರಿಕಾ ದಿನಾಚರಣೆ: ಕಾವಲುನಾಯಿ ಮಲಗಿದೆ… ಏಳುವುದೆಂತೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...