Homeಮುಖಪುಟಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

ಅನಗತ್ಯ ಇತಿಹಾಸದ ಪಠ್ಯ ಕೈಬಿಟ್ಟು 1975ರ ಎಮರ್ಜೆನ್ಸಿ ಸೇರಿಸುತ್ತೇವೆ: ವಿನಯ್ ಸಹಸ್ರಬುದ್ದೆ

- Advertisement -
- Advertisement -

ಶಾಲಾ ಪಠ್ಯ ಪುಸ್ತಕಗಳಲ್ಲಿನ ಇತಿಹಾಸದ ಪಾಠಗಳನ್ನು ಬಲಾಯಿಸುವ ಕಾರ್ಯ ರಾಷ್ಟ್ರಮಟ್ಟದಲ್ಲಿ ಸದ್ದಿಲ್ಲದೇ ನಡೆಯುತ್ತಿದೆ. ಸರ್ಕಾರಗಳು ಬದಲಾದಾಗ ತಮಗೆ ಸರಿ ಎನಿಸಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸುತ್ತ ಬರುವುದು, ಬೇಡವಾದದ್ದನ್ನು ಕೈಬಿಡುವುದು ವಾಡಿಕೆಯ ಸಂಗತಿ. ಈಗ ದೇಶದ ಇತಿಹಾಸದ ಪಠ್ಯವನ್ನು ಸಮಗ್ರವಾಗಿ ಬದಲಾಯಿಸುವ ಅಗತ್ಯವಿದೆಯೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಪಾಶ್ಚಿಮಾತ್ಯ ದೃಷ್ಟಿಕೋನದ ಇತಿಹಾಸವನ್ನು ಸ್ವದೇಶಿಕರಣಗೊಳಿಸುವ ಪ್ರಯತ್ನದಲ್ಲಿ ತೊಡಗಿರುವುದಾಗಿ ನಿನ್ನೆ ಪಠ್ಯ ಪುಸ್ತಕ ಪರಿಷ್ಕರಿಸುತ್ತಿರುವ ಸಂಸದೀಯ ಸಮಿತಿ ತಿಳಿಸಿದೆ.

“ಇತಿಹಾಸಗಳ ಪಠ್ಯ ರೂಪಿಸುವ ಪ್ರಕ್ರಿಯೆಯಲ್ಲಿ ಸರಿಯಾದ ಇತಿಹಾಸವನ್ನು ಸೇರಿಸುವ ಮತ್ತು ತಪ್ಪಾದ ಇತಿಹಾಸವನ್ನು ತೆಗೆಯುವ ಕೆಲಸವೂ ಒಳಗೊಂಡಿದೆ. ಬಿಟ್ಟು ಹೋದ ಅನೇಕ ಇತಿಹಾಸದ ಘಟನೆಗಳಿಂದ ಮಕ್ಕಳು ವಂಚಿತರಾಗಿದ್ದಾರೆ. ಕೆಲವು ರಾಷ್ಟ್ರೀಯವಾದಿ ನಾಯಕರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿ ಪಠ್ಯದಿಂದ ಬಿಟ್ಟುಹೋಗಿದೆ” ಎಂದು ಸಂಸದೀಯ ಸಮಿತಿಯ ಅಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಳೆಯ ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯವಾದಿ ಚಿಂತನೆಗಳನ್ನು ಬೆಳೆಸುವ ಅಗತ್ಯವಿದ್ದು ಆ ಸಂಬಂಧ ಪ್ರೇರಣೆಯನ್ನು ನೀಡುವಂತೆ ಇತಿಹಾಸದ ಪಠ್ಯವನ್ನು ರೂಪಿಸಲಾಗುತ್ತಿದೆ. ಮಹಿಳಾ ಹೋರಾಟಗಾರರು ಮತ್ತು ಸ್ವದೇಶಿ ಚಿಂತನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೊಸ ಪಠ್ಯಕ್ರಮಗಳ ಕುರಿತಾಗಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

1975ರ ಎಮರ್ಜೆನ್ಸಿ ಮತ್ತು 1998ರ ಫೋಖ್ರಾನ್ ಪರಮಾಣು ಸಂಶೋಧನೆಯನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ ಎಂದು ಬಿಜೆಪಿ ಸಂಸದ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ತಿಳಿಸಿದ್ದಾರೆ.

ಸಂಸದೀಯ ಸಮಿತಿಯು ಶಿಕ್ಷಣ ತಜ್ಞರು, ಇತಿಹಾಸಕಾರರು, ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರಿಂದ ಸಲಹೆ ಸೂಚನೆಯನ್ನು ಆಹ್ವಾನಿಸಿದೆ. ಜೂನ್ 30 ಸಲಹೆ ಸೂಚನೆಗಳನ್ನು ನೀಡಲು ಕೊನೆಯ ದಿನವಾಗಿತ್ತು. ಕೋವಿಡ್ ಎರಡನೇ ಅಲೆಯ ಕಾರಣದಿಂದ ಅನೇಕ ತಜ್ಞರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಈ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ಮತ್ತು ವನ್ಯಜೀವಿ ಸಂಘರ್ಷ ನಮ್ಮ ಅಭಿವೃದ್ಧಿ ನೀತಿಗಳ ಫಲ

ಸಂಸದೀಯ ಸಮಿತಿಯ ವರದಿಯು ಈಗಾಗಲೇ ಅಂತಿಮಗೊಂಡಿದ್ದು ಕೆಲವು ತಜ್ಞರು ತಮ್ಮ ಸಲಹೆಗಳನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ. ರಾಜ್ಯಸಭೆ ಕಾರ್ಯಾಲಯವು ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಕೆಲವು ಚಾರಿತ್ರಿಕವಲ್ಲದ ಘಟನೆಗಳನ್ನು ಕೈಬಿಡುವುದು, ದೇಶದ ರಾಷ್ಟ್ರೀಯ ಚಿಂತಕರ ಮತ್ತು ನಾಯಕರ ಕುರಿತಾದ ಆಕ್ಷೇಪಿತ ವಿಷಯಗಳನ್ನು ಕೈಬಿಡುವುದನ್ನು ಒಳಗೊಂಡಿರಲಿದೆ ಎಂದು ಹೇಳಿತ್ತು. ಎಲ್ಲಾ ಕಾಲಘಟ್ಟದ ಇತಿಹಾಸಕ್ಕೆ ಸಮಾನ ಪ್ರಾಧಾನ್ಯತೆಯನ್ನು ನೀಡುವುದು ಮತ್ತು ಚಾರಿತ್ರಿಕ ಅಲ್ಲವೆಂದು ಇದುವರೆಗೆ ಪರಿಗಣಿಸಿದ್ದ ಚಾರಿತ್ರಿಕ ಘಟನೆಗಳನ್ನು ಇತಿಹಾಸದ ಪಠ್ಯದಲ್ಲಿ ಸೇರಿಸುವುದೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ನಡೆಯಲಿದೆ. ಗಾರ್ಗಿ, ಮೈತ್ರೇಯಿ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ರಾಣಿ ಚನ್ನಮ್ಮ, ಚಾಂದ್‌ ಬೀಬಿ, ಜಲ್ಕಾರಿ ಬಾಯಿ ಮುಂತಾದ ಮಹಿಳಾ ಹೋರಾಟಗಾರರ ವಿಷಯವನ್ನು ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಸಲಾಗಿತ್ತು.

ಕೆಲವು ಇತಿಹಾಸಕಾರರ ಏಕಪಕ್ಷೀಯ ವಿಚಾರಧಾರೆಗಳಿಂದ ದೇಶದ ಇತಿಹಾಸದ ಪಠ್ಯಗಳು ತುಂಬಿ ಹೋಗಿವೆ. ನಿಜವಾದ ಇತಿಹಾಸವನ್ನು ಮರೆ ಮಾಚಲಾಗಿದ್ದು ಒಂದು ವರ್ಗದ ಇತಿಹಾಸವನ್ನು ವಿಜ್ರಂಭಿಸಿದ ಪಠ್ಯವನ್ನು ಮಕ್ಕಳು ಓದುತ್ತಿದ್ದಾರೆ. ಇದನ್ನು ಸುಧಾರಿಸುವ ಕ್ರಮವಾಗಿ ಇತಿಹಾಸದ ಪಠ್ಯಕ್ರಮದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ತರಲಾಗುವುದು ಎಂದು ಪಠ್ಯ ಪುಸ್ತಕ ರೂಪಿಸುತ್ತಿರುವ ಸಂಸದೀಯ ಸಮಿತಿ ಅಧ್ಯಕ್ಷ ವಿನಯ್‌ ಸಹಸ್ರಬುದ್ಧೆ ಈ ಸಂದರ್ಭದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...