Homeಅಂತರಾಷ್ಟ್ರೀಯಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

- Advertisement -
- Advertisement -

ಯುರೋಪ್ ದೇಶಗಳಲ್ಲಿ ಕಳೆದ ಒಂದು ತಿಂಗಳಿನಿಂದ ಫುಟ್ಬಾಲ್ ಕಲರವ ಆರಂಭವಾಗಿದೆ. ಕಳೆದ 1 ವರ್ಷದಿಂದ ಖಾಲಿ ಮೈದಾನಗಳಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಗಳು ಈಗ ತುಂಬಿ ತುಳುಕಾಡುತ್ತಿವೆ. ಮೈದಾನಗಳ ಹೊರಗೆ, ವಿಮಾನ ನಿಲ್ಧಾಣ, ರೈಲ್ವೆ ಸ್ಟೇಷನ್, ಮಾರ್ಕೆಟ್ ಎಲ್ಲೆಡೆಯೂ ಈಗ ಫುಟ್ಬಾಲ್ ಗುಂಗು ಗುನುಗುತ್ತಿದೆ. ಜೂನ್ 11 ರಿಂದ ಜುಲೈ 11ರ ವರೆಗೆ ನಡೆಯುತ್ತಿರುವ ಯುರೋ ಕಪ್ 2020 ಫುಟ್ಬಾಲ್ ಟೂರ್ನಿ ಯುರೋಪಿನ ನಗರಗಳಲ್ಲಿ ಅಪಾರ ಜನಸಂದಣಿಗೆ ಕಾರಣವಾಗುತ್ತಿದೆ. ಸಾವಿರಾರು ಫುಟ್ಬಾಲ್ ಪ್ರಿಯರು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ. ಯುರೋಪಿನಲ್ಲಿ ವರ್ಷಗಳ ಕಾಲ ರೂಡಿಸಿಕೊಂಡು ಬಂದಿದ್ದ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಶಿಸ್ತು ಫುಟ್ಬಾಲ್ ಟೂರ್ನಿಯ ವೇಳೆ ಎಲ್ಲೂ ಕಾಣಿಸುತ್ತಿಲ್ಲ. ಈ ಜನಸಂದಣಿಯು ಬ್ರಿಟನ್, ರಷ್ಯಾ ದೇಶಗಳ ಅಡಳಿತ ವ್ಯವಸ್ಥೆಗೆ ತೀವ್ರ ತಲೆ ನೋವಾಗಿ ಪರಿಣಮಿಸಿದ್ದು ಕೊರೊನಾ ಮೂರನೇ ಅಲೆಯ ಸಾಧ್ಯತೆಯನ್ನು ಹುಟ್ಟು ಹಾಕಿದೆ.

ಬ್ರಿಟನ್ ರಾಜಧಾನಿ ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ ಬರ್ಗ್‌ ದೇಶಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ಗಳು ವೇಗವಾಗಿ ಹರಡುತ್ತಿರುವುದರಿಂದ ಅಲ್ಲಿನ ಸರ್ಕಾರಗಳು ಸಾಕಷ್ಟು ಅತಂಕಕ್ಕೆ ಒಳಗಾಗಿವೆ. ತಮ್ಮ ದೇಶದ ಬಹುತೇಕ ನಾಗರಿಕರಿಗೆ ವ್ಯಾಕ್ಸಿನ್ ನೀಡಿರುವ ಯುರೋಪಿಯನ್‌ ದೇಶಗಳಿಗೆ ಡೆಲ್ಟಾ ಪ್ಲಸ್‌ ರೂಪಾಂತರಿಯ ಮೇಲೆ ವ್ಯಾಕ್ಸಿನ್‌ಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂಬ ವೈದ್ಯಕೀಯ ವರದಿಗಳು ನಿದ್ದೆಗೆಡಿಸಿದ್ದು ಜನ ಸಂದಣಿಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿವೆ.

ನಾವು ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ರೂಪಾಂತರಿಯನ್ನು ಹರಡಲೇಬೇಕೆಂದು ಹೊರಟರೆ ಇದೇ ಸರಿಯಾದ ಉಪಾಯ ಎಂದು ಲಂಡನ್‌ನ ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹಾಲ್ಟ್‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅಂಟಾರ್ಟಿಕದಲ್ಲೂ ಏರಿದ ತಾಪಮಾನ: ಕರಗುತ್ತಿವೆ ನೀರ್ಗಲ್ಲುಗಳು

ಮುಖ್ಯವಾಗಿ ಮುಂದೆ ನಡೆಯಲಿರುವ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಒಂದು ಲಂಡನ್‌ನಲ್ಲಿಯೂ ಮತ್ತೊಂದು ರಷ್ಯಾದ ರಾಜಧಾನಿ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿಯೂ ನಡೆಯಲಿದೆ. ಈ ಪಂದ್ಯಗಳಿಗೆ ಅತಿಹೆಚ್ಚಿನ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಮತ್ತೊಂದೆಡೆ ಲಂಡನ್ ಮತ್ತು ಸೇಂಟ್‌ಪೀಟರ್ಸ್‌ಬರ್ಗ್‌ ಎರಡೂ ನಗರಗಳಲ್ಲಿ ದಿನನಿತ್ಯದ ಸೋಂಕಿನ ಪ್ರಮಾಣಗಳಲ್ಲಿ ಹೆಚ್ಚಳವಾಗಿದ್ದು ಡೆಲ್ಟಾ ರೂಪಾಂತರಿಯ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿದೆ. ಸೆಮಿಫೈನಲ್ ಪಂದ್ಯಗಳಿಗೆ 60,000 ಜನ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದ್ದು, ಮೈದಾನದ ಹೊರಗೆ ವ್ಯಾಪಾರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಸಾಮಾಜಿಕ ಅಂತರದ ಪಾಲನೆ ದುಸ್ತರವಾಗಲಿದೆ ಎಂದು ಬ್ರಿಟನ್ ಮಾಧ್ಯಮಗಳು ವರದಿ ಮಾಡಿವೆ.

ಮೊನ್ನೆ ಇಂಗ್ಲೆಂಡ್ ತಂಡವು ಫ್ರಿಕ್ವಾರ್ಟರ್‌ ಫೈನಲ್ ಪಂದ್ಯವನ್ನು ಗೆಲ್ಲುತ್ತಿದ್ದಂತೆ ಲಂಡನ್‌ನ ವೆಂಬ್ಲೆ ಫುಟ್ಬಾಲ್ ಮೈದಾನದಲ್ಲಿ ನೆರೆದಿದ್ದ 42,000 ಜನ ಪ್ರೇಕ್ಷಕರು ಮಾಸ್ಕ್‌ ಧರಿಸದೇ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಮೈದಾನದ ಹೊರಗೆ ಸಂಭ್ರಮಿಸಿದ ರೀತಿ ಬ್ರಿಟನ್ ಮತ್ತು ಅಂತರಾಷ್ಟ್ರೀಯ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಂಬ್ಲೆ ಮೈದಾನದ ಹೊರಗೆ ಸಾಗರೊಪಾದಿಯಲ್ಲಿ ನೆರೆದ ಜನ ಪ್ರವಾಹದ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವಿರೋಧಕ್ಕೆ ಗುರಿಯಾಗಿತ್ತು. ಇಂಗ್ಲೆಂಡ್ ತಂಡ ಅಂತಿಮ 8 ರ ಘಟ್ಟಕ್ಕೆ ಪ್ರವೇಶಿಸಿದ್ದು ಮುಂದಿನ ಪಂದ್ಯಗಳಲ್ಲಿ ಇನ್ನೂ ಹೆಚ್ಚಿನ ಪ್ರೇಕ್ಷಕರು ಮೈದಾನದಲ್ಲಿ ಸೇರಲಿದ್ದಾರೆ. ಜೊತೆಗೆ ಯುರೋಪ್‌ನಲ್ಲಿ ಬೇಸಿಗೆ ರಜೆ ಕೂಡ ಅರಂಭವಾಗಿರುವುದು ಜನ ದಟ್ಟಣೆಗೆ ಇನ್ನೊಂದು ಕಾರಣವಾಗಿದೆ.

ಫುಟ್ಬಾಲ್ ಪಂದ್ಯಗಳನ್ನು ಬ್ರಿಟನ್‌ ದೇಶದ ಆಚಗೆ ಸ್ಥಳಾಂತರಿಸಬೇಕು ಎಂದು ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹೆಟ್‌ ಆಗ್ರಹಿಸಿದ್ದಾರೆ. ಪಂದ್ಯಗಳನ್ನು ಕೊರೊನಾ ಅಪಾಯ ಕಡಿಮೆ ಇರುವ ದೇಶಗಳಿಗೆ ಸ್ಥಳಾಂತರಿಸುವುದು ಕಷ್ಟದ ಕೆಲಸವೇನಲ್ಲ ಎಂದು ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕರೂ ಆಗಿರುವ ಅಂಟೋನಿ ಫ್ಲಾಹೆಂಟ್ ಬ್ರಿಟನ್ ಸರ್ಕಾರ ಮತ್ತು ಫುಟ್ಬಾಲ್ ಟೂರ್ನಿಯನ್ನು ಆಯೋಜಿಸುರುವ UEFA ಸಂಸ್ಥೆಗೆ ಸೂಚನೆಯನ್ನೂ ನೀಡಿದ್ದಾರೆ.

ಕೊರೊನಾ ಸೋಂಕಿನ ಆತಂಕದ ನಡುವೆಯೂ ಪಂದ್ಯಗಳನ್ನು ಸುರಕ್ಷಿತ ವಾತಾವರಣದಲ್ಲಿ ನಡೆಸಲಾಗುತ್ತಿದೆ. ಎಲ್ಲಾ ಪಂದ್ಯಗಳು ನಿಗದಿತ ದಿನದಂದು ನಿಗದಿತ ಸ್ಥಳದಲ್ಲಿಯೇ ನಡೆಯಲಿವೆ. ಸಾಕಷ್ಟು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು UEFA ಸಂಸ್ಥೆ ಹೇಳಿದೆ.

ಕಳೆದ ಒಂದು ವಾರದಲ್ಲಿ ಯುರೋಪ್‌ನಾದ್ಯಂತ ಕೊರೋನಾ ಸೋಂಕಿತರ ಪ್ರಮಾಣದಲ್ಲಿ 10% ಹೆಚ್ಚಳವಾಗಿದೆ ಎಂದು ವಿಶ್ವಆರೋಗ್ಯ ಸಂಸ್ಥೆ (WHO) ಹೇಳಿದ್ದು, 11 ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುರೋ ಫುಟ್‌ಬಾಲ್ ಕಪ್ ಟೂರ್ನಿ ಕೊರೊನಾ ಸೋಂಕಿನ ಹೆಚ್ಚಳಕ್ಕೆ ಕಾರಣವಾಗುವ ಸಾಧ್ಯವಿದ್ದು ಆತಿಥೇಯ ನಗರಗಳು ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ಎಚ್ಚರಿಸಿದೆ.

ಹಂಗೇರಿ ರಾಜಧಾನಿ ಬುಡಾಪೆಸ್ಟ್‌ ನಗರದ ಕ್ರೀಡಾಂಗಣದಲ್ಲಿ ಕಿಕ್ಕಿರಿದು ನೆರೆದ ಫುಟ್ಬಾಲ್ ಅಭಿಮಾನಿಗಳು

ಡೆನ್ಮಾರ್ಕ್ ಮತ್ತು ಬೆಲ್ಜಿಯಮ್ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ 4000 ಜನರಲ್ಲಿ ಡೆಲ್ಟಾ ರೂಪಾಂತರಿ ವೈರಸ್‌ ಕಂಡುಬಂದಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೇ ಸ್ಕಾಟ್ಲೆಂಡ್‌ನಲ್ಲೂ ಇದೇ ಪರಿಸ್ಥಿತಿಯಿದ್ದು  ಫುಟ್ಬಾಲ್ ಪಂದ್ಯವನ್ನು ವೀಕ್ಷಿಸಲು ಲಂಡನ್‌ಗೆ ತೆರಳಿದ 2,000 ಜನರಲ್ಲಿ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ ಎಂದು ಸ್ಕಾಟ್ಲೆಂಡ್ ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಫಿನ್ಲೆಂಡ್‌ ದೇಶದ ಹೊರಗೆ ಪಂದ್ಯವನ್ನು ವೀಕ್ಷಿಸಲು ತೆರಳಿದ ದೇಶದ ನಾಗರಿಕರಲ್ಲಿ ಕೂಡ ಡೆಲ್ಟಾ ರೂಪಾಂತರಿ ವೈರಸ್ ಕಂಡು ಬಂದಿದ್ದು ಸರಿ ಸುಮಾರು 100 ಹೊಸ ಡೆಲ್ಟಾ ಪ್ರಕರಣಗಳು ವರದಿಯಾಗಿವೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಸಮುದಾಯಕ ಚಟುವಟಿಕೆಗಳಿಂದ ಕೊರೊನಾ ಸೋಂಕು ಹರಡಲು ಸಾಧ್ಯವಿಲ್ಲವೆಂದು ಹೇಳಲು ಆಗುವುದಿಲ್ಲ. ಆದರೆ ಫುಟ್ಬಾಲ್ ಒಂದರಿಂದಲೇ ಸೋಂಕು ಹರಡುತ್ತಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಸ್ಥಳೀಯ ಆಡಳಿತಗಳು ಮತ್ತು ಸರ್ಕಾರಗಳು ನಿರ್ಬಂಧಗಳನ್ನು ಸಡಿಲಿಸರುವುದರಿಂದ ಈ ಚಟುವಟಿಕೆಗಳು ನಡೆಯುತ್ತಿವೆ. ಕಠಿಣ ನಿಯಮಗಳನ್ನು ತೆರವುಗೊಳಿಸುವ ಮೊದಲೇ ಸರ್ಕಾರಗಳು ಸೋಂಕಿನ ನಿಯಂತ್ರಣಕ್ಕೆ ಸೂಕ್ತಕ್ರಮ ಕೈಗೊಳ್ಳಬೇಕಿತ್ತು ಎಂದು ಯುರೋಪಿಯನ್‌ ಫುಟ್ಬಾಲ್‌ ಸಂಘಟನೆ (UEFA)  ವೈದ್ಯಕೀಯ ಸಲಹೆಗಾರ ಡಾ. ಡೇನಿಯಲ್‌ ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ವ್ಯಾಕ್ಸೀನ್ ಪಡೆಯದ ನಾಗರಿಕರು ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ಬರ್ಗ್‌ ನಗರಗಳಿಗೆ ಪಂದ್ಯವನ್ನು ವೀಕ್ಷಿಸಲು ತೆರಳದೇ ಇರುವುದು ಉತ್ತಮ ಎಂದು ಡಾ. ಅಂಟೋನಿ ಫ್ಲಾಹಾಲ್ಟ್‌ ಯುರೋಪ್‌ನ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...