Homeಮುಖಪುಟರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

ರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

- Advertisement -
- Advertisement -

ಮುಖ್ಯಮಂತ್ರಿ ಪದವಿಗೆ ಏರಿದ ನಾಲ್ಕು ತಿಂಗಳಿನಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಉತ್ತರಾಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್‌ಗೆ ತಮ್ಮ ಸಿಎಂ ಸ್ಥಾನ ಕಳೆದುಕೊಳ್ಳುವ ಭಯ ಎದುರಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹೈಕಮಾಂಡ್‌ ಜೊತೆಗೆ ಬೀಡುಬಿಟ್ಟಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಚುನಾವಣೆ ಗೆಲ್ಲುವ ಅನಿವಾರ್ಯತೆ ಮತ್ತು ರಾಜ್ಯ ಬಿಜೆಪಿ ಘಟಕದಲ್ಲಿ ಉಂಟಾಗಿರುವ ಬಿರುಕು ಸರಿ ಪಡಿಸುವುದು ಅವರ ಮುಂದಿರುವ ಕಠಿಣ ಸವಾಲಾಗಿ ಪರಿಣಮಿಸಿದೆ. ಇವುಗಳ ಕಾರಣ ಎಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರುತ್ತದೋ ಎಂಬ ಆತಂಕ ತಿರತ್ ಸಿಂಗ್ ರಾವತ್ ಅವರಲ್ಲಿ ಮನೆ ಮಾಡಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್‌ ಅವರನ್ನು ಬಿಜೆಪಿ ನಾಯಕತ್ವ  ಬುಧವಾರ ದೆಹಲಿಗೆ ಕರೆಸಿಕೊಂಡಿದ್ದು, ಅಂದಿನಿಂದಲೂ ರಾಜ್ಯದ ಸ್ಥಿತಿಗತಿ ಮತ್ತು ಚುನಾವಣೆ ಬಗ್ಗೆ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ  ಜೊತೆಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮತದಾನ ನಂತರದ ಹಿಂಸಾಚಾರ: ಚುನಾವಣಾ ಆಯೋಗ, ಬಂಗಾಳ ಮತ್ತು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂನಿಂದ ನೋಟಿಸ್‌

ತಿರತ್ ಸಿಂಗ್ ರಾವತ್‌ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆಯೇ ಎಂಬುದು ಚುನಾವಣಾ ಆಯೋಗದ ನಿರ್ಧಾರವನ್ನು ಅವಲಂಬಿಸಿದೆ.

ಉತ್ತರಾಖಂಡ ರಾಜ್ಯದ ಅಂದಿನ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ವಿರುದ್ಧ ಬಿಜೆಪಿ ರಾಜ್ಯ ಘಟಕದಲ್ಲಿ ತೀವ್ರ ಅಸಮಾಧಾನ ಉಂಟಾಗಿದ್ದರಿಂದ ಬಿಜೆಪಿ ಹೈಕಮಾಂಡ್, ಉತ್ತರಾಖಂಡ ಚುನಾವಣೆಗೆ ಕೇವಲ ಒಂದು ವರ್ಷವಿರುವಾಗಲೇ ಮಾರ್ಚ್‌ನಲ್ಲಿ ತಿರತ್ ಸಿಂಗ್ ರಾವತ್ ಅವರಿಗೆ ಅಧಿಕಾರ ಹಸ್ತಾಂತರಿಸಿತ್ತು.

ಆದರೆ, ಮುಖ್ಯಮಂತ್ರಿ  ಸ್ಥಾನ ಉಳಿಸಿಕೊಳ್ಳಲು ಸಂಸದರಾಗಿರುವ ತಿರತ್ ಸಿಂಗ್ ರಾವತ್ ಅವರು ವಿಧಾನಸಭಾ ಸ್ಥಾನವನ್ನು ಗೆದ್ದು ಸೆಪ್ಟೆಂಬರ್ 10 ರೊಳಗೆ ಉತ್ತರಾಖಂಡ ಶಾಸಕಾಂಗ ಸಭೆಯ ಸದಸ್ಯರಾಗಬೇಕಾಗಿದೆ.

ಕೋವಿಡ್ ಬಿಕ್ಕಟ್ಟು ಮತ್ತು ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಚುನಾವಣೆಯ ದೊಡ್ಡ ವಿವಾದ ಹೊತ್ತಿರುವ ಚುನಾವನಾ ಆಯೋಗ ಇದನ್ನು ಹೇಗೆ ಪರಿಹರಿಸುತ್ತದೆಯೋ ನೋಡಬೇಕಾಗಿದೆ. ಚುನಾವಣೆಯ ಕುರಿತು ವಿವಿಧ ರಾಜ್ಯಗಳೊಂದಿಗೆ ಸಮಾಲೋಚಿಸುತ್ತಿದೆ ಎಂದು ಚುನಾವಣಾ ಆಯೋಗದ ಮೂಲಗಳನ್ನು ಎನ್‌ಡಿಟಿವಿ  ಉಲ್ಲೇಖಿಸಿದೆ. ಅನೇಕ ಉಪಚುನಾವಣೆಗಳು ಬಾಕಿ ಉಳಿದಿದ್ದು, ಕೋವಿಡ್ ಪರಿಸ್ಥಿತಿ ಪ್ರಮುಖವಾದ ಪರಿಗಣನೆಯಾಗಿದೆ, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಪದವಿ ವಹಿಸಿಕೊಂಡ ಮಾರ್ಚ್‌ನಿಂದಲೂ ತಿರತ್ ಸಿಂಗ್ ರಾವತ್‌  ಸರಣಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಬಿಜೆಪಿಯ ಉತ್ತರಾಖಂಡ ನಾಯಕರು ದೆಹಲಿ ನಾಯಕತ್ವಕ್ಕೆ ಅವರ ಹೇಳಿಕೆಗಳ ಬಗ್ಗೆ ಸಾರ್ವಜನಿಕರಲ್ಲಿ ಉಂಟಾಗಿರುವ ಆಕ್ರೋಶದ ಬಗ್ಗೆ ದೂರು ನೀಡಿದ್ದಾರೆ. ಜೊತೆಗೆ ಬಿಜೆಪಿಯ ಹಿಂದಿನ ನೀತಿ ನಿರ್ಧಾರಗಳನ್ನು ಟೀಕಿಸುವ ಮೂಲಕ ತಮ್ಮದೇ ಪಕ್ಷವನ್ನು ಮುಜುಗರಕ್ಕೀಡು ಮಾಡಿದ್ದಾರೆ.

ಅಧಿಕಾರ ವಹಿಸಿಕೊಂಡ ಕೂಡಲೇ, ರಾವತ್ ಅವರು ‘ರಿಪ್ಪಡ್‌ ಜೀನ್ಸ್ ಪ್ಯಾಂಟ್‌‌’  ಧರಿಸಿದ ಮಹಿಳೆಯರ ಬಗ್ಗೆ ಹೇಳಿಕೆ ನೀಡಿ, ವ್ಯಾಪಕ ಆಕ್ರೋಶವನ್ನು ಎದುರಿಸಿದ್ದರು. ಜೊತೆಗೆ 200 ವರ್ಷಗಳ ಕಾಲ ಭಾರತವನ್ನು ಬ್ರಿಟನ್ ಅಲ್ಲ, ಅಮೆರಿಕಾ ಆಳ್ವಿಕೆ ಮಾಡಿತ್ತು ಎಂದಿದ್ದರು.

ಇನ್ನು, ಕೊರೊನಾ ಉಲ್ಬಣದಲ್ಲಿದ್ದ ದಿನಗಳಲ್ಲಿ ಕುಂಭಮೇಳವನ್ನು ಆಯೋಜಿಸಿ, “ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿಲ್ಲ” ಎಂಬ ಅಭಿಪ್ರಾಯ ಹೊರ ಹಾಕಿದ್ದರು. ಈ ಎಲ್ಲಾ ವಿವಾದಗಳು ಮತ್ತು ಬಿಜೆಪಿ ರಾಜ್ಯ ಘಟಕದಲ್ಲಿನ ಭಾರಿ ಬಿರುಕು ಇವರ ಸ್ಥಾನಕ್ಕೆ ಕುತ್ತು ತರಬಹುದು ಎನ್ನಲಾಗಿದೆ.


ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...