Homeಕರೋನಾ ತಲ್ಲಣಕೃಷಿಕರ ಮೂಲೋತ್ಪಾಟನೆಗೆ ಸರ್ಕಾರ ಸಂಚು ಹೂಡಿದೆ: ಚಂಸು ಪಾಟೀಲ

ಕೃಷಿಕರ ಮೂಲೋತ್ಪಾಟನೆಗೆ ಸರ್ಕಾರ ಸಂಚು ಹೂಡಿದೆ: ಚಂಸು ಪಾಟೀಲ

ಡಿಸೇಲ್, ಪೆಟ್ರೋಲ್ ದರಗಳ ನಿರಂತರ ಏರಿಕೆ ಕೃಷಿ ಮೇಲೂ ಪರಿಣಾಮ ಬೀರುತ್ತಿದ್ದು, ಕೃಷಿ ವೆಚ್ಚವನ್ನು ಮತ್ತಷ್ಟು ಹೆಚ್ಚಿಸುತ್ತಿವೆ. ಆದರೆ ಆದಾಯವೆಂಬುದು ಮರೀಚಿಕೆಯಾಗಿದೆ.

- Advertisement -
- Advertisement -

ಹಳ್ಳಕ್ಕೆ ಬಿದ್ದ ಗೂಳಿಗೆ ಆಳಿಗೊಂದು ಕಲ್ಲು ಎಂಬ ಗಾದೆ ಇದೆ‌. ಕೊರೊನಾ ಸಾಂಕ್ರಾಮಿಕ ರೋಗದ ಈ ಕಾಲಘಟ್ಟದಲ್ಲಿ ಇದು ರೈತರ ಪರಿಸ್ಥಿತಿ‌ಗೆ ಸರಿಯಾಗಿ ಅನ್ವಯಿಸುತ್ತದೆ. ಲಾಕ್‌ಡೌನ್ ಸಂದರ್ಭದಲ್ಲಿ ಬಹುತೇಕ ಉತ್ಪಾದನಾ ಚಟುವಟಿಕೆಗಳು ಸ್ತಬ್ಧ‌ಗೊಂಡಿದ್ದರೂ ಕೃಷಿ ಕ್ಷೇತ್ರ ಇದಕ್ಕೆ ಹೊರತಾಗಿದೆ. ಕೃಷಿಕರು ಎಂದಿನಂತೆ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಲಾಕ್‌ಡೌನ್ ಅವರ ಪಾಲಿಗೆ ಹೆಚ್ಚು ಅನಾನುಕೂಲತೆಗಳನ್ನು ತಂದೊಡ್ಡಿದೆ. ಈ ಸಂಕಷ್ಟದ ಸಮಯದಲ್ಲೂ ದೃತಿಗೆಡದೆ ತಮ್ಮ ಕಾಯಕದಲ್ಲಿ ತೊಡಗಿಕೊಂಡಿದ್ದರೂ ಕೃಷಿಕರು ಮತ್ತು ಕೃಷಿ ಕಾರ್ಮಿಕರು ಮತ್ತಷ್ಟು ಸಂಕಷ್ಟಕ್ಕೆ ಗುರಿಯಾಗುತ್ತಿರುವುದು ವಿಪರ್ಯಾಸ‌ವೇ ಸರಿ.

ಡಿಸೇಲ್, ಪೆಟ್ರೋಲ್ ದರಗಳ ನಿರಂತರ ಏರಿಕೆ ಕೃಷಿಯ ಮೇಲೂ ಪರಿಣಾಮ ಬೀರುತ್ತಿದೆ. ಕೃಷಿ ಕ್ಷೇತ್ರ ಯಾಂತ್ರೀಕರಣಗೊಳ್ಳುತ್ತಲೇ ಇದೆ. ಟ್ರ್ಯಾಕ್ಟರ್‌ಗಳ ಬಳಕೆ, ಒಕ್ಕಣೆ ಯಂತ್ರಗಳ ಬಳಕೆ ಅನಿವಾರ್ಯ‌ವಾಗಿವೆ. ಇಂಧನ ಬೆಲೆಗಳ ಏರಿಕೆ ಸಹಜವಾಗಿ ಕೃಷಿಯ ಖರ್ಚನ್ನೂ ಹೆಚ್ಚಿಸುತ್ತಿವೆ. ಬಹುಪಾಲು ಮಧ್ಯಮವರ್ಗದ ರೈತರು, ಸಣ್ಣ ಮತ್ತು ಅತಿ ಸಣ್ಣ ರೈತರು ಉಳುಮೆಗೆ ಬಾಡಿಗೆ ಟ್ರ್ಯಾಕ್ಟರ್‌ಗಳನ್ನು ಅವಲಂಬಿಸಿದ್ದರೆ, ದೊಡ್ಡ ಹಿಡುವಳಿ ಹೊಂದಿರುವ ರೈತರು ಸ್ವಂತ ಟ್ರ್ಯಾಕ್ಟರ್ ಹೊಂದಿರುತ್ತಾರೆ. ಶೇಂಗಾ, ಭತ್ತ, ಜೋಳ, ಗೋವಿನ ಜೋಳ, ಸೂರ್ಯಪಾನ ಮೊದಲಾದ ಪ್ರಮುಖ ಬೆಳೆಗಳ ಕೊಯ್ಲು ಮತ್ತು ಒಕ್ಕಣೆ ಈಗ ಯಂತ್ರಗಳಿಂದಲೇ ನಡೆಯುತ್ತಿದೆ. ಇಲ್ಲೂ ಸಣ್ಣ ಹಿಡುವಳಿಯ ರೈತರು ಬಾಡಿಗೆ ಯಂತ್ರಗಳನ್ನೇ ಅವಲಂಬಿಸಿರುತ್ತಾರೆ. ಹೀಗೆ ಕೃಷಿ ಚಟುವಟಿಕೆಗಾಗಿನ ಖರ್ಚಿನ ಪ್ರಮಾಣ ಒಂದು ಕಡೆ ಹೆಚ್ಚಾಗುತ್ತಲೇ ಸಾಗಿದೆ. ಆದರೆ, ಅದಕ್ಕೆ ಪೂರಕವಾಗಿ ಆದಾಯ ಹೆಚ್ಚದಿರುವುದು ಅವರನ್ನು ಸಾಲಗಾರರನ್ನಾಗಿ ಮಾಡುತ್ತಿದೆ. ಲಾಕ್‌ಡೌನ್ ಸಂದರ್ಭದಲ್ಲಂತೂ ರೈತರು ತಾವು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಸಿಗದೇ, ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದಾರೆ.

ಎರಡು ವರ್ಷಗಳ ಹಿಂದೆ ಒಮ್ಮೆ ಗೋವಿನಜೋಳದ ಬೆಲೆ ಕ್ವಿಂಟಾಲ್‌ಗೆ  2400 ರವರೆಗೆ ಏರಿತ್ತು ಮಾರನೇ ವರ್ಷವೇ ಅದು 1200 ಕ್ಕೆ ಬಂದಿತ್ತು. ಲಾಕ್‌ಡೌನ್‌ನಲ್ಲಿ ರೈಲುಸಂಚಾರ ಸ್ಥಗಿತಗೊಂಡು, ವ್ಯಾಗನ್‌ಗಳಲ್ಲಿ  ಸಾಗಾಣಿಕೆಯಾಗುತ್ತಿದ್ಧ ಗೋವಿನಜೋಳ ಸ್ಥಳೀಯ ಮಾರುಕಟ್ಟೆಗಳನ್ನು ತುಂಬಿ ಅಲ್ಲಿ ಮಾರಾಟವಾಗದೇ ಒಮ್ಮೆಲೆ ಬೆಲೆಕುಸಿತ ಉಂಟಾಗಿತ್ತು. ಇದ್ಯಾವುದನ್ನೂ ಊಹಿಸಿರದ ರೈತ ತಾನು ಬೆಳೆದ ಬೆಳೆಗೆ ನಿರೀಕ್ಷಿತ ಬೆಲೆ ಸಿಗದೇ ಹೋದಾಗ ಹತಾಶನಾಗುವುದೂ ಸಹಜ. ಯಾವ ಬೆಳೆ ಬೆಳೆದರೆ ಒಳ್ಳೆಯ ಬೆಲೆ ಸಿಕ್ಕೀತು ಎಂಬ ಗೊಂದಲದಲ್ಲಿ ಎಲ್ಲ ಬೆಳೆಗಳದೂ ಇದೇ ಸ್ಥಿತಿಯಾದಾಗ ಯಾವ ಬೆಳೆ ಬೆಳೆಯಬೇಕೆಂಬುದೇ ಅವನಿಗೆ ತೋಚದಂತಾಗುತ್ತದೆ. ಬೆಲೆಗಳ ಅಸ್ಥಿರತೆ ರೈತರ ಬದುಕನ್ನು ನರಕಸದೃಶವಾಗಿಸುತ್ತಿದೆ.  ದೆಹಲಿಯ ಗಡಿ ಭಾಗಗಳಲ್ಲಿ ಕಳೆದ ಏಳು ತಿಂಗಳಿನಿಂದ ಸತ್ಯಾಗ್ರಹ ನಿರತರಾಗಿರುವ ರೈತರು ಬೆಂಬಲಬೆಲೆಯನ್ನು ಕಾನೂನುಬದ್ದಗೊಳಿಸಬೇಕೆಂದು ಆಗ್ರಹಿಸುತ್ತಿರುವುದೂ ಇದೇ ಕಾರಣಕ್ಕಾಗಿ ಎಂಬುದು ಸ್ವಯಂವೇದ್ಯ.

ಲಾಕ್‌ಡೌನ್ ಮಧ್ಯೆಯೂ ಕೃಷಿ ಕ್ಷೇತ್ರ ಕ್ರಿಯಾಶೀಲವಾಗಿದೆ‌. ರೈತರು ವಿವಿಧ ಬೆಳೆಗಳನ್ನು ಬೆಳೆಯುತ್ತಲೇ ಇದ್ದಾರೆ. ಹೀಗೆ ಬೆಳೆದ ಬೆಳೆಗೆ ಅಗತ್ಯ ಮಾರುಕಟ್ಟೆ, ಸೂಕ್ತ ಬೆಲೆ ಸಿಗದೇ ರೈತರು
ಬೆಳೆ ಬೆಳೆಯದೇ ಇರಲಿಕ್ಕೂ ಆಗದೇ, ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ, ಇತ್ತ ದರಿ ಅತ್ತ ಪುಲಿ ಎಂಬಂತೆ ಏನು ಮಾಡಬೇಕೆಂಬುದು ತಿಳಿಯದೇ ನಿಟ್ಟುಸಿರು ಬಿಡುವಂತಾಗಿದೆ.

ಕಿಲೋಗೆ 25/30 ರೂ. ಮಾರುತಿದ್ದ ಕ್ಯಾಬೀಜ ಈ ಸಂದರ್ಭದಲ್ಲಿ ಹತ್ತರೊಳಗೇ ಮಾರಾಟವಾಗುತ್ತದೆ. ಎಲ್ಲ ತರಕಾರಿ ಬೆಳೆಗಳ ಸ್ಥಿತಿಯೂ ಹೀಗೆ ಇದೆ. ರೈತರಿಂದ ಅಗ್ಗದ ಬೆಲೆಗೆ ಕೊಳ್ಳುವ ವ್ಯಾಪಾರಸ್ಥರು ಅತ್ತ ಗ್ರಾಹಕರನ್ನೂ ಸುಲಿಗೆ ಮಾಡುತ್ತಿರುತ್ತಾರೆ. ಆದರೆ, ಅದನ್ನು ಕಷ್ಟಪಟ್ಟು ಬೆಳೆದ ರೈತ ಮಾತ್ರ ಅದಕ್ಕೆ ಹಾಕಿದ ಶ್ರಮ, ಸಮಯ, ಬಂಡವಾಳ ಎಲ್ಲವನ್ನೂ ಕಳೆದುಕೊಂಡು ಸಾಲಗಾರನಾಗುವ ಸ್ಥಿತಿ ನಿರ್ಮಾಣವಾಗಿದೆ. ಇದು ಇನ್ನೂ ಎಷ್ಟು ದಿನ? ರೈತ ಬೆಳೆದ ಬೆಳೆಗೆ ಖಚಿತ ಬೆಲೆ, ಖಚಿತ ಆದಾಯ ಸಿಗುವುದೇ? ಎಂಬುದು ಸಧ್ಯಕ್ಕೆ ಯಕ್ಷಪ್ರಶ್ನೆಯಾಗಿದೆ.

ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕೆಂಬ ಆಗ್ರಹ ಬಹುದಿನಗಳಿಂದಲೂ ಇದ್ದೇ ಇದೆ‌. ಆದರೆ, ಸರ್ಕಾರವೇ ಇತ್ತೀಚಿನ ವರ್ಷಗಳಲ್ಲಿ ಪ್ರತಿವರ್ಷ ಬೆಳೆಗಳಿಗೆ ಬೆಂಬಲಬೆಲೆ ಘೋಷಿಸುತಿತ್ತು. ವಾಸ್ತವದಲ್ಲಿ ಆ ಬೆಲೆ ರೈತರಿಗೆ ಸಿಕ್ಕಿದ್ದೇ ಇಲ್ಲ. ಶೇಂಗಾದ ಬೆಂಬಲ ಬೆಲೆ 5200 ಇದ್ದರೆ, ಎಪಿಎಂಸಿಗಳಲ್ಲಿ ಅದು ಮಾರೋದು 3000/ 5000 ರೂ. ಒಳಗೇ. ಗೋವಿನ ಜೋಳಕ್ಕೆ ಬೆಂಬಲಬೆಲೆ 1700 ಇದ್ದರೂ ಅದು ಮಾರುತ್ತಿರುವುದು 1000/1500ರೊಳಗೇ. ಹತ್ತಿಯ ಬೆಂಬಲ ಬೆಲೆ 6000 ಇದ್ದರೂ ಅದು ಮಾರುವುದು 3000/5500ರ ಒಳಗೇ. ಹೀಗೆ ಬೆಂಬಲ ಬೆಲೆಗೂ ವಾಸ್ತವ ಬೆಲೆಗೂ ಇಷ್ಟೊಂದು ವ್ಯತ್ಯಾಸ ಇರುವಾಗ ಈ ಬೆಂಬಲ ಬೆಲೆ ಘೋಷಿಸುವುದಾದರೂ ಯಾವ ಪುರುಷಾರ್ಥಕ್ಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ.  ಇದೇ ಕಾರಣಕ್ಕೆ ಸಂಯುಕ್ತ ಕಿಸಾನ್ ಮೋರ್ಚಾದ ನೇತೃತ್ವದಲ್ಲಿ ದೆಹಲಿಯ ಹೊರ ವಲಯದಲ್ಲಿ ರೈತರು ಐತಿಹಾಸಿಕ ದೀರ್ಘಕಾಲಿಕ ಹೋರಾಟ ಕೈಗೊಂಡಿದ್ದಾರೆ‌. ಸರ್ಕಾರ ಘೋಷಿಸುವ ಬೆಂಬಲಬೆಲೆಗಳನ್ನೇ ಕಾನೂನುಬದ್ದಗೊಳಿಸಿ ಎಂಬುದು ಅವರ ಹಕ್ಕೊತ್ತಾಯವಾಗಿದೆ. ವೈಜ್ಞಾನಿಕ ಬೆಲೆ ಅಲ್ಲದಿದ್ದರೂ ಬೆಂಬಲಬೆಲೆಗಳೆ ವಾಸ್ತವದಲ್ಲಿ ರೈತರ ಬೆಳೆಗಳಿಗೆ ಸಿಕ್ಕರೆ ಅದರಿಂದ ಅವರಿಗೆ ಎಷ್ಟೋ ಆಸರೆ ದೊರೆತಂತಾಗುತ್ತದೆ. ಆದರೆ, ಒಕ್ಕೂಟ ಸರ್ಕಾರ ಈ ಕುರಿತು ಸರಿಯಾಗಿ ಸ್ಪಂದಿಸದೇ ಇರುವುದು ಕೃಷಿಪ್ರಧಾನ ದೇಶವೊಂದರ ದೊಡ್ಡ ದುರಂತವೇ ಸರಿ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ಈ ಮಧ್ಯೆ ರಾಸಾಯನಿಕ ಗೊಬ್ಬರಗಳ ಬೆಲೆಗಳನ್ನೂ ಏರಿಸಿ ಮತ್ತೆ ಇಳಿಸಲಾಗಿದೆ. ಈ ತರದ ರೈತರ ಸಹನೆಯ ಪರೀಕ್ಷೆಗಳು ನಡದೇ ಇರುತ್ತವೆ. ಮೊದಲು ಸಹಾಯಧನದ ರೂಪದಲ್ಲಿ ವಿನಾಯ್ತಿಯಲ್ಲಿ ಸಿಗುತಿದ್ದ ಗೊಬ್ಬರಗಳನ್ನು ರೈತರು ಇಂದು ಪೂರ್ಣಬೆಲೆ ತೆತ್ತು ಕೊಳ್ಳುವ ಸ್ಥಿತಿ ಎದುರಾಗಿದೆ. ಒಂದು ವೇಳೆ ನಿರೀಕ್ಷಿತ ಮಳೆ ಬಾರದೆಯೋ, ಹವಾಮಾನ ವೈಪರೀತ್ಯದಿಂದಲೋ ಆ ಬೆಳೆ ಕೈಗೆ ಸಿಗದಿದ್ದರೆ ರೈತನ ಪರಿಸ್ಥಿತಿ ಏನಾದೀತು ಎಂಬ ಬಗ್ಗೆ ಚಿಂತಿಸಬೇಕಾಗಿದೆ.

ಬೆಂಬಲಬೆಲೆಯ ಹಾಗೆಯೇ ಬೆಳೆವಿಮೆ ಯೋಜನೆ ಇದೆ ಆದರೂ ಪ್ರತಿವರ್ಷ ಪ್ರಿಮಿಯಂ ಕಟ್ಟುತಿದ್ದರೂ.. ಯಾವುದೋ ವರ್ಷದ ವಿಮೆ ಬರುತ್ತದೆ. ಅದು ಬಂದಾಗ ಇದು ಯಾವ ವರ್ಷದ್ದು, ಯಾವ ಬೆಳೆಗೆ ಬಂದದ್ದು ಎಂಬುದು ರೈತನಿಗೆ ತಿಳಿಯದಷ್ಟು ಸಂಕೀರ್ಣ ಯೋಜನೆ ಇದಾಗಿದೆ. ಆದಕಾರಣ ಬೆಳೆವಿಮೆ ಯೋಜನೆ ಒಳ್ಳೆಯ ಯೋಜನೆ ಆದರೂ ಅದರ ಪ್ರಯೋಜನ ಪ್ರತಿವರ್ಷವೂ, ಪ್ರತಿಬೆಳೆಗೂ ರೈತನಿಗೆ ದೊರೆಯಬೇಕಾದರೆ ಅದಿನ್ನೂ ಹೆಚ್ಚು ಕ್ರಮಬದ್ದವೂ ಪಾರದರ್ಶಕವೂ ಆಗಬೇಕಿದೆ.

ಗೋಹತ್ಯೆ ನಿಷೇಧದಂತಹ ಕಾನೂನುಗಳ ಜಾರಿ ನಂತರ ರೈತರು ಪಶುಸಂಗೋಪಣೆಯಿಂದಲೇ ವಿಮುಖರಾಗುವಂಥ ಸ್ಥಿತಿ ನಿರ್ಮಾಣವಾಗಿದೆ. ಹೇಗೆಂದರೆ, ಈ ಮೊದಲು ರೈತರು ವಯಸಾದ ದನಕರುಗಳನ್ನು ಅವು ಇನ್ನೂ ಆರೋಗ್ಯಪೂರ್ಣವಾಗಿರುವಾಗಲೇ ಮಾರಾಟ ಮಾಡಿ ಅದೇ ಹಣಕ್ಕೆ ಮತ್ತೆ ಒಂದಿಷ್ಟು ಹಣ ಸೇರಿಸಿ ಹೊಸ ಎತ್ತು, ದನಕರು ಕೊಳ್ಳುತಿದ್ದರು. ಎತ್ತುಗಳನ್ನು ಉಳುಮೆಗೆ, ದನಕರುಗಳನ್ನು ಹೈನುಗಾರಿಕೆಗೆ ಸಾಕುತ್ತಿದ್ದರು. ಗೋಹತ್ಯೆ ನಿಷೇಧದ ನಂತರ ಅವರು ಬಂಜೆದನಗಳನ್ನೂ ಸಾಕಲೇಬೇಕಾದಂತಹ ಅನಿವಾರ್ಯ‌ತೆ ಸೃಷ್ಠಿಯಾಗಿದೆ. ವಯಸ್ಸಾದ ದನಗಳ ಮಾರಾಟ ಕ್ಲಿಷ್ಟದಾಯಕವಾಗಿ ಅವುಗಳ ಚಿಕಿತ್ಸೆ‌ಗೆ ತಗಲುವ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾಗಿದೆ. ಒಂದು ವೇಳೆ ಅವು ಮನೆಯಲ್ಲೆ ಅಸುನೀಗಿದರೆ ಅವುಗಳ ವಿಲೇವಾರಿ ಮಾಡುವುದೆ ಕಷ್ಟಕರವಾಗಿ ತಲೆಮೇಲೆ ಕೈಹೊತ್ತು ಕೂಡುವಂತಾಗಿದೆ.

ಲಾಕ್‌ಡೌನ್‌ ಸಂದರ್ಭದಲ್ಲಂತೂ ದನದ ಮಾರುಕಟ್ಟೆಗಳು ಬಂದ್ ಆಗಿ ತಮಗೆ ಬೇಕಾದ ಎತ್ತುಗಳನ್ನು ಸಮಯಕ್ಕೆ ಸರಿಯಾಗಿ ಕೊಳ್ಳುವುದೇ ದುಸ್ತರವಾಗಿದೆ. ಈ ಕಾರಣಕ್ಕೆ ಎತ್ತುಗಳ ಬೆಲೆಗಳೂ ಈಗ ಸಿಕ್ಕಾಪಟ್ಟೆ ದುಬಾರಿಯಾಗಿವೆ. ಮೊದಲೆಲ್ಲ ಮೂವತ್ತು ನಲವತ್ತು ಸಾವಿರ ರೂ.ಗಳಿಗೆ ಸಿಗುತ್ತಿದ್ದ ಜೋಡಿ ಎತ್ತುಗಳಿಗೆ ಈಗ ಎಪ್ಪತ್ತು ಎಂಭತ್ತು ಸಾವಿರ ರೂ. ತೆರುವ ಪರಿಸ್ಥಿತಿ ಎದುರಾಗಿದೆ. ಕೃಷಿಗೆ ಎತ್ತುಗಳು ಅನಿವಾರ್ಯ‌ವಾದ ಕಾರಣ ಸಾಲಸೋಲ ಮಾಡಿ ಎತ್ತು ಕೊಳ್ಳುವ ರೈತರು, ಬೀಜ, ಗೊಬ್ಬರ, ಔಷಧಿ ಎಂದು ಸಾಲ ಮಾಡಲೇಬೇಕಾಗುತ್ತದೆ. ಉತ್ತಮ ಬೆಳೆ ಬಂದರೆ ಉತ್ತಮ ಬೆಲೆ ಇಲ್ಲ, ಉತ್ತಮ ಬೆಲೆ ಇರುವ ಬೆಳೆ ಉತ್ತಮ ಇಳುವರಿ ಬರಲಿಲ್ಲ ಎಂದರೆ ರೈತನಿಗೆ ನಷ್ಟ ಕಟ್ಟಿಟ್ಟ ಬುತ್ತಿ.

ಹೀಗೆ ಹತ್ತು ಹಲವು ಸಮಸ್ಯೆ‌ಗಳ ಸುಳಿಯಲ್ಲಿ ಸಿಲುಕಿರುವ ರೈತ ಒಂದೆಡೆ ತನ್ನ ಬದುಕಿಗೆ ಭದ್ರತೆಯೆ ಇಲ್ಲದ ಕಾರಣಕ್ಕೆ ಹತಾಶನಾಗಿ ಆತ್ಮಹತ್ಯೆಗೆ ಶರಣಾಗುವ ಘಟನೆಗಳು ನಿತ್ಯ ನಿರಂತರ ಘಟಿಸುತ್ತಲೇ ಇವೆ. ಇನ್ನೊಂದೆಡೆ ದಿನದಿನಕ್ಕೂ ಕಗ್ಗಂಟಾಗುತ್ತಿರುವ ಕೃಷಿ ಬಿಕ್ಕಟ್ಟುಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರಗಳು ತೋರುತ್ತಿರುವ ನಿರಾಸಕ್ತಿ ಕೃಷಿ ಹಾಗೂ ಕೃಷಿಕರ ಮೂಲೋತ್ಪಾಟನೆಗೆ ಹೂಡಿರುವ ಸಂಚಿನಂತೆ ಭಾಸವಾಗುತ್ತಿದೆ.

  • ಚಂಸು ಪಾಟೀಲ
    ಕೂನಬೇವು
    ತಾ. ರಾಣೇಬೆನ್ನೂರು
    ಜಿ. ಹಾವೇರಿ

(ಕೃಷಿಕರಾದ ಚಂಸು ಪಾಟೀಲರವರು ಲೇಖಕರೂ ಹೌದು. ಬೇಸಾಯದ ಕತಿ ಎಂಬ ಪುಸ್ತಕ ಬರೆದಿರುವ ಇವರು ಸಮಾಜದ ಆಗುಹೋಗುಗಳಿಗೆ ಸದಾ ಪ್ರತಿಕ್ರಿಯಿಸುತ್ತಿರುತ್ತಾರೆ)


ಇದನ್ನೂ ಓದಿ; ಕೊರೊನಾ ತಂದೆಳೆದ ಕೃಷಿ ಸಂಕಷ್ಟಗಳು ಮತ್ತು ಪ್ರಭುತ್ವದ ಹೊಣೆಗಾರಿಕೆ: ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...