Homeಕರೋನಾ ತಲ್ಲಣಕೃಷಿಕರ ಮೂಲೋತ್ಪಾಟನೆಗೆ ಸರ್ಕಾರ ಸಂಚು ಹೂಡಿದೆ: ಚಂಸು ಪಾಟೀಲ

ಕೃಷಿಕರ ಮೂಲೋತ್ಪಾಟನೆಗೆ ಸರ್ಕಾರ ಸಂಚು ಹೂಡಿದೆ: ಚಂಸು ಪಾಟೀಲ

ಡಿಸೇಲ್, ಪೆಟ್ರೋಲ್ ದರಗಳ ನಿರಂತರ ಏರಿಕೆ ಕೃಷಿ ಮೇಲೂ ಪರಿಣಾಮ ಬೀರುತ್ತಿದ್ದು, ಕೃಷಿ ವೆಚ್ಚವನ್ನು ಮತ್ತಷ್ಟು ಹೆಚ್ಚಿಸುತ್ತಿವೆ. ಆದರೆ ಆದಾಯವೆಂಬುದು ಮರೀಚಿಕೆಯಾಗಿದೆ.

- Advertisement -
- Advertisement -

ಹಳ್ಳಕ್ಕೆ ಬಿದ್ದ ಗೂಳಿಗೆ ಆಳಿಗೊಂದು ಕಲ್ಲು ಎಂಬ ಗಾದೆ ಇದೆ‌. ಕೊರೊನಾ ಸಾಂಕ್ರಾಮಿಕ ರೋಗದ ಈ ಕಾಲಘಟ್ಟದಲ್ಲಿ ಇದು ರೈತರ ಪರಿಸ್ಥಿತಿ‌ಗೆ ಸರಿಯಾಗಿ ಅನ್ವಯಿಸುತ್ತದೆ. ಲಾಕ್‌ಡೌನ್ ಸಂದರ್ಭದಲ್ಲಿ ಬಹುತೇಕ ಉತ್ಪಾದನಾ ಚಟುವಟಿಕೆಗಳು ಸ್ತಬ್ಧ‌ಗೊಂಡಿದ್ದರೂ ಕೃಷಿ ಕ್ಷೇತ್ರ ಇದಕ್ಕೆ ಹೊರತಾಗಿದೆ. ಕೃಷಿಕರು ಎಂದಿನಂತೆ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಲಾಕ್‌ಡೌನ್ ಅವರ ಪಾಲಿಗೆ ಹೆಚ್ಚು ಅನಾನುಕೂಲತೆಗಳನ್ನು ತಂದೊಡ್ಡಿದೆ. ಈ ಸಂಕಷ್ಟದ ಸಮಯದಲ್ಲೂ ದೃತಿಗೆಡದೆ ತಮ್ಮ ಕಾಯಕದಲ್ಲಿ ತೊಡಗಿಕೊಂಡಿದ್ದರೂ ಕೃಷಿಕರು ಮತ್ತು ಕೃಷಿ ಕಾರ್ಮಿಕರು ಮತ್ತಷ್ಟು ಸಂಕಷ್ಟಕ್ಕೆ ಗುರಿಯಾಗುತ್ತಿರುವುದು ವಿಪರ್ಯಾಸ‌ವೇ ಸರಿ.

ಡಿಸೇಲ್, ಪೆಟ್ರೋಲ್ ದರಗಳ ನಿರಂತರ ಏರಿಕೆ ಕೃಷಿಯ ಮೇಲೂ ಪರಿಣಾಮ ಬೀರುತ್ತಿದೆ. ಕೃಷಿ ಕ್ಷೇತ್ರ ಯಾಂತ್ರೀಕರಣಗೊಳ್ಳುತ್ತಲೇ ಇದೆ. ಟ್ರ್ಯಾಕ್ಟರ್‌ಗಳ ಬಳಕೆ, ಒಕ್ಕಣೆ ಯಂತ್ರಗಳ ಬಳಕೆ ಅನಿವಾರ್ಯ‌ವಾಗಿವೆ. ಇಂಧನ ಬೆಲೆಗಳ ಏರಿಕೆ ಸಹಜವಾಗಿ ಕೃಷಿಯ ಖರ್ಚನ್ನೂ ಹೆಚ್ಚಿಸುತ್ತಿವೆ. ಬಹುಪಾಲು ಮಧ್ಯಮವರ್ಗದ ರೈತರು, ಸಣ್ಣ ಮತ್ತು ಅತಿ ಸಣ್ಣ ರೈತರು ಉಳುಮೆಗೆ ಬಾಡಿಗೆ ಟ್ರ್ಯಾಕ್ಟರ್‌ಗಳನ್ನು ಅವಲಂಬಿಸಿದ್ದರೆ, ದೊಡ್ಡ ಹಿಡುವಳಿ ಹೊಂದಿರುವ ರೈತರು ಸ್ವಂತ ಟ್ರ್ಯಾಕ್ಟರ್ ಹೊಂದಿರುತ್ತಾರೆ. ಶೇಂಗಾ, ಭತ್ತ, ಜೋಳ, ಗೋವಿನ ಜೋಳ, ಸೂರ್ಯಪಾನ ಮೊದಲಾದ ಪ್ರಮುಖ ಬೆಳೆಗಳ ಕೊಯ್ಲು ಮತ್ತು ಒಕ್ಕಣೆ ಈಗ ಯಂತ್ರಗಳಿಂದಲೇ ನಡೆಯುತ್ತಿದೆ. ಇಲ್ಲೂ ಸಣ್ಣ ಹಿಡುವಳಿಯ ರೈತರು ಬಾಡಿಗೆ ಯಂತ್ರಗಳನ್ನೇ ಅವಲಂಬಿಸಿರುತ್ತಾರೆ. ಹೀಗೆ ಕೃಷಿ ಚಟುವಟಿಕೆಗಾಗಿನ ಖರ್ಚಿನ ಪ್ರಮಾಣ ಒಂದು ಕಡೆ ಹೆಚ್ಚಾಗುತ್ತಲೇ ಸಾಗಿದೆ. ಆದರೆ, ಅದಕ್ಕೆ ಪೂರಕವಾಗಿ ಆದಾಯ ಹೆಚ್ಚದಿರುವುದು ಅವರನ್ನು ಸಾಲಗಾರರನ್ನಾಗಿ ಮಾಡುತ್ತಿದೆ. ಲಾಕ್‌ಡೌನ್ ಸಂದರ್ಭದಲ್ಲಂತೂ ರೈತರು ತಾವು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಸಿಗದೇ, ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದಾರೆ.

ಎರಡು ವರ್ಷಗಳ ಹಿಂದೆ ಒಮ್ಮೆ ಗೋವಿನಜೋಳದ ಬೆಲೆ ಕ್ವಿಂಟಾಲ್‌ಗೆ  2400 ರವರೆಗೆ ಏರಿತ್ತು ಮಾರನೇ ವರ್ಷವೇ ಅದು 1200 ಕ್ಕೆ ಬಂದಿತ್ತು. ಲಾಕ್‌ಡೌನ್‌ನಲ್ಲಿ ರೈಲುಸಂಚಾರ ಸ್ಥಗಿತಗೊಂಡು, ವ್ಯಾಗನ್‌ಗಳಲ್ಲಿ  ಸಾಗಾಣಿಕೆಯಾಗುತ್ತಿದ್ಧ ಗೋವಿನಜೋಳ ಸ್ಥಳೀಯ ಮಾರುಕಟ್ಟೆಗಳನ್ನು ತುಂಬಿ ಅಲ್ಲಿ ಮಾರಾಟವಾಗದೇ ಒಮ್ಮೆಲೆ ಬೆಲೆಕುಸಿತ ಉಂಟಾಗಿತ್ತು. ಇದ್ಯಾವುದನ್ನೂ ಊಹಿಸಿರದ ರೈತ ತಾನು ಬೆಳೆದ ಬೆಳೆಗೆ ನಿರೀಕ್ಷಿತ ಬೆಲೆ ಸಿಗದೇ ಹೋದಾಗ ಹತಾಶನಾಗುವುದೂ ಸಹಜ. ಯಾವ ಬೆಳೆ ಬೆಳೆದರೆ ಒಳ್ಳೆಯ ಬೆಲೆ ಸಿಕ್ಕೀತು ಎಂಬ ಗೊಂದಲದಲ್ಲಿ ಎಲ್ಲ ಬೆಳೆಗಳದೂ ಇದೇ ಸ್ಥಿತಿಯಾದಾಗ ಯಾವ ಬೆಳೆ ಬೆಳೆಯಬೇಕೆಂಬುದೇ ಅವನಿಗೆ ತೋಚದಂತಾಗುತ್ತದೆ. ಬೆಲೆಗಳ ಅಸ್ಥಿರತೆ ರೈತರ ಬದುಕನ್ನು ನರಕಸದೃಶವಾಗಿಸುತ್ತಿದೆ.  ದೆಹಲಿಯ ಗಡಿ ಭಾಗಗಳಲ್ಲಿ ಕಳೆದ ಏಳು ತಿಂಗಳಿನಿಂದ ಸತ್ಯಾಗ್ರಹ ನಿರತರಾಗಿರುವ ರೈತರು ಬೆಂಬಲಬೆಲೆಯನ್ನು ಕಾನೂನುಬದ್ದಗೊಳಿಸಬೇಕೆಂದು ಆಗ್ರಹಿಸುತ್ತಿರುವುದೂ ಇದೇ ಕಾರಣಕ್ಕಾಗಿ ಎಂಬುದು ಸ್ವಯಂವೇದ್ಯ.

ಲಾಕ್‌ಡೌನ್ ಮಧ್ಯೆಯೂ ಕೃಷಿ ಕ್ಷೇತ್ರ ಕ್ರಿಯಾಶೀಲವಾಗಿದೆ‌. ರೈತರು ವಿವಿಧ ಬೆಳೆಗಳನ್ನು ಬೆಳೆಯುತ್ತಲೇ ಇದ್ದಾರೆ. ಹೀಗೆ ಬೆಳೆದ ಬೆಳೆಗೆ ಅಗತ್ಯ ಮಾರುಕಟ್ಟೆ, ಸೂಕ್ತ ಬೆಲೆ ಸಿಗದೇ ರೈತರು
ಬೆಳೆ ಬೆಳೆಯದೇ ಇರಲಿಕ್ಕೂ ಆಗದೇ, ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ, ಇತ್ತ ದರಿ ಅತ್ತ ಪುಲಿ ಎಂಬಂತೆ ಏನು ಮಾಡಬೇಕೆಂಬುದು ತಿಳಿಯದೇ ನಿಟ್ಟುಸಿರು ಬಿಡುವಂತಾಗಿದೆ.

ಕಿಲೋಗೆ 25/30 ರೂ. ಮಾರುತಿದ್ದ ಕ್ಯಾಬೀಜ ಈ ಸಂದರ್ಭದಲ್ಲಿ ಹತ್ತರೊಳಗೇ ಮಾರಾಟವಾಗುತ್ತದೆ. ಎಲ್ಲ ತರಕಾರಿ ಬೆಳೆಗಳ ಸ್ಥಿತಿಯೂ ಹೀಗೆ ಇದೆ. ರೈತರಿಂದ ಅಗ್ಗದ ಬೆಲೆಗೆ ಕೊಳ್ಳುವ ವ್ಯಾಪಾರಸ್ಥರು ಅತ್ತ ಗ್ರಾಹಕರನ್ನೂ ಸುಲಿಗೆ ಮಾಡುತ್ತಿರುತ್ತಾರೆ. ಆದರೆ, ಅದನ್ನು ಕಷ್ಟಪಟ್ಟು ಬೆಳೆದ ರೈತ ಮಾತ್ರ ಅದಕ್ಕೆ ಹಾಕಿದ ಶ್ರಮ, ಸಮಯ, ಬಂಡವಾಳ ಎಲ್ಲವನ್ನೂ ಕಳೆದುಕೊಂಡು ಸಾಲಗಾರನಾಗುವ ಸ್ಥಿತಿ ನಿರ್ಮಾಣವಾಗಿದೆ. ಇದು ಇನ್ನೂ ಎಷ್ಟು ದಿನ? ರೈತ ಬೆಳೆದ ಬೆಳೆಗೆ ಖಚಿತ ಬೆಲೆ, ಖಚಿತ ಆದಾಯ ಸಿಗುವುದೇ? ಎಂಬುದು ಸಧ್ಯಕ್ಕೆ ಯಕ್ಷಪ್ರಶ್ನೆಯಾಗಿದೆ.

ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕೆಂಬ ಆಗ್ರಹ ಬಹುದಿನಗಳಿಂದಲೂ ಇದ್ದೇ ಇದೆ‌. ಆದರೆ, ಸರ್ಕಾರವೇ ಇತ್ತೀಚಿನ ವರ್ಷಗಳಲ್ಲಿ ಪ್ರತಿವರ್ಷ ಬೆಳೆಗಳಿಗೆ ಬೆಂಬಲಬೆಲೆ ಘೋಷಿಸುತಿತ್ತು. ವಾಸ್ತವದಲ್ಲಿ ಆ ಬೆಲೆ ರೈತರಿಗೆ ಸಿಕ್ಕಿದ್ದೇ ಇಲ್ಲ. ಶೇಂಗಾದ ಬೆಂಬಲ ಬೆಲೆ 5200 ಇದ್ದರೆ, ಎಪಿಎಂಸಿಗಳಲ್ಲಿ ಅದು ಮಾರೋದು 3000/ 5000 ರೂ. ಒಳಗೇ. ಗೋವಿನ ಜೋಳಕ್ಕೆ ಬೆಂಬಲಬೆಲೆ 1700 ಇದ್ದರೂ ಅದು ಮಾರುತ್ತಿರುವುದು 1000/1500ರೊಳಗೇ. ಹತ್ತಿಯ ಬೆಂಬಲ ಬೆಲೆ 6000 ಇದ್ದರೂ ಅದು ಮಾರುವುದು 3000/5500ರ ಒಳಗೇ. ಹೀಗೆ ಬೆಂಬಲ ಬೆಲೆಗೂ ವಾಸ್ತವ ಬೆಲೆಗೂ ಇಷ್ಟೊಂದು ವ್ಯತ್ಯಾಸ ಇರುವಾಗ ಈ ಬೆಂಬಲ ಬೆಲೆ ಘೋಷಿಸುವುದಾದರೂ ಯಾವ ಪುರುಷಾರ್ಥಕ್ಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ.  ಇದೇ ಕಾರಣಕ್ಕೆ ಸಂಯುಕ್ತ ಕಿಸಾನ್ ಮೋರ್ಚಾದ ನೇತೃತ್ವದಲ್ಲಿ ದೆಹಲಿಯ ಹೊರ ವಲಯದಲ್ಲಿ ರೈತರು ಐತಿಹಾಸಿಕ ದೀರ್ಘಕಾಲಿಕ ಹೋರಾಟ ಕೈಗೊಂಡಿದ್ದಾರೆ‌. ಸರ್ಕಾರ ಘೋಷಿಸುವ ಬೆಂಬಲಬೆಲೆಗಳನ್ನೇ ಕಾನೂನುಬದ್ದಗೊಳಿಸಿ ಎಂಬುದು ಅವರ ಹಕ್ಕೊತ್ತಾಯವಾಗಿದೆ. ವೈಜ್ಞಾನಿಕ ಬೆಲೆ ಅಲ್ಲದಿದ್ದರೂ ಬೆಂಬಲಬೆಲೆಗಳೆ ವಾಸ್ತವದಲ್ಲಿ ರೈತರ ಬೆಳೆಗಳಿಗೆ ಸಿಕ್ಕರೆ ಅದರಿಂದ ಅವರಿಗೆ ಎಷ್ಟೋ ಆಸರೆ ದೊರೆತಂತಾಗುತ್ತದೆ. ಆದರೆ, ಒಕ್ಕೂಟ ಸರ್ಕಾರ ಈ ಕುರಿತು ಸರಿಯಾಗಿ ಸ್ಪಂದಿಸದೇ ಇರುವುದು ಕೃಷಿಪ್ರಧಾನ ದೇಶವೊಂದರ ದೊಡ್ಡ ದುರಂತವೇ ಸರಿ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ಈ ಮಧ್ಯೆ ರಾಸಾಯನಿಕ ಗೊಬ್ಬರಗಳ ಬೆಲೆಗಳನ್ನೂ ಏರಿಸಿ ಮತ್ತೆ ಇಳಿಸಲಾಗಿದೆ. ಈ ತರದ ರೈತರ ಸಹನೆಯ ಪರೀಕ್ಷೆಗಳು ನಡದೇ ಇರುತ್ತವೆ. ಮೊದಲು ಸಹಾಯಧನದ ರೂಪದಲ್ಲಿ ವಿನಾಯ್ತಿಯಲ್ಲಿ ಸಿಗುತಿದ್ದ ಗೊಬ್ಬರಗಳನ್ನು ರೈತರು ಇಂದು ಪೂರ್ಣಬೆಲೆ ತೆತ್ತು ಕೊಳ್ಳುವ ಸ್ಥಿತಿ ಎದುರಾಗಿದೆ. ಒಂದು ವೇಳೆ ನಿರೀಕ್ಷಿತ ಮಳೆ ಬಾರದೆಯೋ, ಹವಾಮಾನ ವೈಪರೀತ್ಯದಿಂದಲೋ ಆ ಬೆಳೆ ಕೈಗೆ ಸಿಗದಿದ್ದರೆ ರೈತನ ಪರಿಸ್ಥಿತಿ ಏನಾದೀತು ಎಂಬ ಬಗ್ಗೆ ಚಿಂತಿಸಬೇಕಾಗಿದೆ.

ಬೆಂಬಲಬೆಲೆಯ ಹಾಗೆಯೇ ಬೆಳೆವಿಮೆ ಯೋಜನೆ ಇದೆ ಆದರೂ ಪ್ರತಿವರ್ಷ ಪ್ರಿಮಿಯಂ ಕಟ್ಟುತಿದ್ದರೂ.. ಯಾವುದೋ ವರ್ಷದ ವಿಮೆ ಬರುತ್ತದೆ. ಅದು ಬಂದಾಗ ಇದು ಯಾವ ವರ್ಷದ್ದು, ಯಾವ ಬೆಳೆಗೆ ಬಂದದ್ದು ಎಂಬುದು ರೈತನಿಗೆ ತಿಳಿಯದಷ್ಟು ಸಂಕೀರ್ಣ ಯೋಜನೆ ಇದಾಗಿದೆ. ಆದಕಾರಣ ಬೆಳೆವಿಮೆ ಯೋಜನೆ ಒಳ್ಳೆಯ ಯೋಜನೆ ಆದರೂ ಅದರ ಪ್ರಯೋಜನ ಪ್ರತಿವರ್ಷವೂ, ಪ್ರತಿಬೆಳೆಗೂ ರೈತನಿಗೆ ದೊರೆಯಬೇಕಾದರೆ ಅದಿನ್ನೂ ಹೆಚ್ಚು ಕ್ರಮಬದ್ದವೂ ಪಾರದರ್ಶಕವೂ ಆಗಬೇಕಿದೆ.

ಗೋಹತ್ಯೆ ನಿಷೇಧದಂತಹ ಕಾನೂನುಗಳ ಜಾರಿ ನಂತರ ರೈತರು ಪಶುಸಂಗೋಪಣೆಯಿಂದಲೇ ವಿಮುಖರಾಗುವಂಥ ಸ್ಥಿತಿ ನಿರ್ಮಾಣವಾಗಿದೆ. ಹೇಗೆಂದರೆ, ಈ ಮೊದಲು ರೈತರು ವಯಸಾದ ದನಕರುಗಳನ್ನು ಅವು ಇನ್ನೂ ಆರೋಗ್ಯಪೂರ್ಣವಾಗಿರುವಾಗಲೇ ಮಾರಾಟ ಮಾಡಿ ಅದೇ ಹಣಕ್ಕೆ ಮತ್ತೆ ಒಂದಿಷ್ಟು ಹಣ ಸೇರಿಸಿ ಹೊಸ ಎತ್ತು, ದನಕರು ಕೊಳ್ಳುತಿದ್ದರು. ಎತ್ತುಗಳನ್ನು ಉಳುಮೆಗೆ, ದನಕರುಗಳನ್ನು ಹೈನುಗಾರಿಕೆಗೆ ಸಾಕುತ್ತಿದ್ದರು. ಗೋಹತ್ಯೆ ನಿಷೇಧದ ನಂತರ ಅವರು ಬಂಜೆದನಗಳನ್ನೂ ಸಾಕಲೇಬೇಕಾದಂತಹ ಅನಿವಾರ್ಯ‌ತೆ ಸೃಷ್ಠಿಯಾಗಿದೆ. ವಯಸ್ಸಾದ ದನಗಳ ಮಾರಾಟ ಕ್ಲಿಷ್ಟದಾಯಕವಾಗಿ ಅವುಗಳ ಚಿಕಿತ್ಸೆ‌ಗೆ ತಗಲುವ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾಗಿದೆ. ಒಂದು ವೇಳೆ ಅವು ಮನೆಯಲ್ಲೆ ಅಸುನೀಗಿದರೆ ಅವುಗಳ ವಿಲೇವಾರಿ ಮಾಡುವುದೆ ಕಷ್ಟಕರವಾಗಿ ತಲೆಮೇಲೆ ಕೈಹೊತ್ತು ಕೂಡುವಂತಾಗಿದೆ.

ಲಾಕ್‌ಡೌನ್‌ ಸಂದರ್ಭದಲ್ಲಂತೂ ದನದ ಮಾರುಕಟ್ಟೆಗಳು ಬಂದ್ ಆಗಿ ತಮಗೆ ಬೇಕಾದ ಎತ್ತುಗಳನ್ನು ಸಮಯಕ್ಕೆ ಸರಿಯಾಗಿ ಕೊಳ್ಳುವುದೇ ದುಸ್ತರವಾಗಿದೆ. ಈ ಕಾರಣಕ್ಕೆ ಎತ್ತುಗಳ ಬೆಲೆಗಳೂ ಈಗ ಸಿಕ್ಕಾಪಟ್ಟೆ ದುಬಾರಿಯಾಗಿವೆ. ಮೊದಲೆಲ್ಲ ಮೂವತ್ತು ನಲವತ್ತು ಸಾವಿರ ರೂ.ಗಳಿಗೆ ಸಿಗುತ್ತಿದ್ದ ಜೋಡಿ ಎತ್ತುಗಳಿಗೆ ಈಗ ಎಪ್ಪತ್ತು ಎಂಭತ್ತು ಸಾವಿರ ರೂ. ತೆರುವ ಪರಿಸ್ಥಿತಿ ಎದುರಾಗಿದೆ. ಕೃಷಿಗೆ ಎತ್ತುಗಳು ಅನಿವಾರ್ಯ‌ವಾದ ಕಾರಣ ಸಾಲಸೋಲ ಮಾಡಿ ಎತ್ತು ಕೊಳ್ಳುವ ರೈತರು, ಬೀಜ, ಗೊಬ್ಬರ, ಔಷಧಿ ಎಂದು ಸಾಲ ಮಾಡಲೇಬೇಕಾಗುತ್ತದೆ. ಉತ್ತಮ ಬೆಳೆ ಬಂದರೆ ಉತ್ತಮ ಬೆಲೆ ಇಲ್ಲ, ಉತ್ತಮ ಬೆಲೆ ಇರುವ ಬೆಳೆ ಉತ್ತಮ ಇಳುವರಿ ಬರಲಿಲ್ಲ ಎಂದರೆ ರೈತನಿಗೆ ನಷ್ಟ ಕಟ್ಟಿಟ್ಟ ಬುತ್ತಿ.

ಹೀಗೆ ಹತ್ತು ಹಲವು ಸಮಸ್ಯೆ‌ಗಳ ಸುಳಿಯಲ್ಲಿ ಸಿಲುಕಿರುವ ರೈತ ಒಂದೆಡೆ ತನ್ನ ಬದುಕಿಗೆ ಭದ್ರತೆಯೆ ಇಲ್ಲದ ಕಾರಣಕ್ಕೆ ಹತಾಶನಾಗಿ ಆತ್ಮಹತ್ಯೆಗೆ ಶರಣಾಗುವ ಘಟನೆಗಳು ನಿತ್ಯ ನಿರಂತರ ಘಟಿಸುತ್ತಲೇ ಇವೆ. ಇನ್ನೊಂದೆಡೆ ದಿನದಿನಕ್ಕೂ ಕಗ್ಗಂಟಾಗುತ್ತಿರುವ ಕೃಷಿ ಬಿಕ್ಕಟ್ಟುಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರಗಳು ತೋರುತ್ತಿರುವ ನಿರಾಸಕ್ತಿ ಕೃಷಿ ಹಾಗೂ ಕೃಷಿಕರ ಮೂಲೋತ್ಪಾಟನೆಗೆ ಹೂಡಿರುವ ಸಂಚಿನಂತೆ ಭಾಸವಾಗುತ್ತಿದೆ.

  • ಚಂಸು ಪಾಟೀಲ
    ಕೂನಬೇವು
    ತಾ. ರಾಣೇಬೆನ್ನೂರು
    ಜಿ. ಹಾವೇರಿ

(ಕೃಷಿಕರಾದ ಚಂಸು ಪಾಟೀಲರವರು ಲೇಖಕರೂ ಹೌದು. ಬೇಸಾಯದ ಕತಿ ಎಂಬ ಪುಸ್ತಕ ಬರೆದಿರುವ ಇವರು ಸಮಾಜದ ಆಗುಹೋಗುಗಳಿಗೆ ಸದಾ ಪ್ರತಿಕ್ರಿಯಿಸುತ್ತಿರುತ್ತಾರೆ)


ಇದನ್ನೂ ಓದಿ; ಕೊರೊನಾ ತಂದೆಳೆದ ಕೃಷಿ ಸಂಕಷ್ಟಗಳು ಮತ್ತು ಪ್ರಭುತ್ವದ ಹೊಣೆಗಾರಿಕೆ: ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...