Homeಮುಖಪುಟಹರಿಯಾಣದ ಮಾಜಿ ಮುಖ್ಯಮಂತ್ರಿ ತಿಹಾರ್‌ ಜೈಲಿನಿಂದ ಬಿಡುಗಡೆ

ಹರಿಯಾಣದ ಮಾಜಿ ಮುಖ್ಯಮಂತ್ರಿ ತಿಹಾರ್‌ ಜೈಲಿನಿಂದ ಬಿಡುಗಡೆ

- Advertisement -
- Advertisement -

ಹರಿಯಾಣ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರು ‘ಶಿಕ್ಷಕರ ನೇಮಕಾತಿ ಹಗರಣ’ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಒಳಗಾಗಿದ್ದರು. ಅವರನ್ನು ಶುಕ್ರವಾರ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 86 ವರ್ಷದ ಚೌಟಾಲಾ ಈಗಾಗಲೇ ಪೆರೋಲ್‌ ಮೇಲೆ ಹೊರಗಿದ್ದರು. ಶುಕ್ರವಾರ ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ತಿಹಾರ್‌ ಜೈಲಿಗೆ ತಲುಪಿದ್ದು, ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಅಗತ್ಯವಾದ ಔಪಚಾರಿಕತೆಯನ್ನು ಪೂರೈಸಿದ ನಂತರ, ಚೌಟಾಲಾ ಅವರನ್ನು ಬಿಡುಗಡೆ ಮಾಡಲಾಗಿದೆ” ಎಂದು ದೆಹಲಿ ಕಾರಾಗೃಹದ ಡೈರೆಕ್ಟರ್ ಜನರಲ್‌‌ ಸಂದೀಪ್ ಗೋಯೆಲ್‌ ಎಂದು ಹೇಳಿದ್ದಾರೆ.

ಕಳೆದ ತಿಂಗಳು ದೆಹಲಿ ಸರ್ಕಾರವು, ಹತ್ತು ವರ್ಷಗಳ ಜೈಲು ಶಿಕ್ಷೆಗೆ ಒಳಗಾಗಿದ್ದು ಒಂಬತ್ತುವರೆ ವರ್ಷಗಳ ಶಿಕ್ಷೆಯನ್ನು ಪೂರೈಸಿದರಿಗೆ ಕೊರೊನಾ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಆರು ತಿಂಗಳ ಶಿಕ್ಷೆಯನ್ನು ಕಡಿತ ಮಾಡಿತ್ತು.

ಇದನ್ನು ಓದಿ: ಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರಲ್ಲ: ಬಿಎಸ್‌ವೈ ವಿರುದ್ಧ ಯತ್ನಾಳ್ ಆರೋಪ

“ಚೌಟಾಲಾ ಈಗಾಗಲೇ ಒಂಬತ್ತು ವರ್ಷ ಮತ್ತು ಒಂಬತ್ತು ತಿಂಗಳ ಶಿಕ್ಷೆಯನ್ನು ಅನುಭವಿಸಿದ್ದು, ಅವರು ಜೈಲಿನಿಂದ ಹೊರಬರಲು ಅರ್ಹರಾಗಿದ್ದಾರೆ” ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.

ಶಿಕ್ಷಕರ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚೌಟಾಲಾ ಅವರನ್ನು 2013 ರಲ್ಲಿ ಜೈಲಿಗೆ ಹಾಕಲಾಗಿತ್ತು.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಅವರು ಮಾರ್ಚ್ 26, 2020 ರಿಂದ ತುರ್ತು ಪೆರೋಲ್‌‌ನಲ್ಲಿದ್ದರು. ಫೆಬ್ರವರಿ 21, 2021 ರಂದು ಅವರು ಶರಣಾಗಬೇಕು ಎಂದು ನಿರ್ಧರಿಸಲಾಗಿತ್ತಾದರೂ, ನಂತರ ಹೈಕೋರ್ಟ್‌ ಅವರ ಪೆರೋಲ್ ಅನ್ನು ವಿಸ್ತರಿಸಿತ್ತು.

2000 ರಲ್ಲಿ 3,206 ಕಿರಿಯ ಶಿಕ್ಷಕರನ್ನು ಅಕ್ರಮವಾಗಿ ನೇಮಕ ಮಾಡಿದ ಪ್ರಕರಣದಲ್ಲಿ ಓಂ ಪ್ರಕಾಶ್‌‌ ಚೌಟಾಲಾ, ಅವರ ಪುತ್ರ ಅಜಯ್ ಚೌತಲಾ ಮತ್ತು ಐಎಎಸ್ ಅಧಿಕಾರಿ ಸಂಜೀವ್ ಕುಮಾರ್ ಸೇರಿದಂತೆ 53 ಮಂದಿಯನ್ನು ಶಿಕ್ಷೆಗೊಳಪಡಿಸಲಾಗಿದೆ. ಇವರೆಲ್ಲರಿಗೂ ವಿಶೇಷ ಸಿಬಿಐ ನ್ಯಾಯಾಲಯವು 2013 ರ ಜನವರಿಯಲ್ಲಿ ವಿವಿಧ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಓಂ ಪ್ರಕಾಶ್‌ ಚೌಟಾಲ ಅವರು ಭಾರತದ ಮಾಜಿ ಉಪ ಪ್ರಧಾನಮಂತ್ರಿ ಚೌಧರಿ ದೇವಿಲಾಲ್‌ ಅವರ ಮಗನಾಗಿದ್ದು, ಇವರ ಮೊಮ್ಮಗ ದುಶ್ಯಂತ್‌ ಚೌಟಾಲಾ ಅವರು ಪ್ರಸ್ತುತ ಹರಿಯಾಣದ ಉಪ ಮುಖ್ಯಮಂತ್ರಿಯಾಗಿದ್ದಾರೆ.

ಇದನ್ನು ಓದಿ: ರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...