Homeಕರ್ನಾಟಕಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ಇದೆ. ಚೆನ್ನೈ ಮತ್ತು ಅಹಮದಾಬಾದ್‌ನಂತಹ ಇತರ ನಗರಗಳಿಗೆ ಹೋಲಿಸಿದರೆ ಜನಸಂಖ್ಯೆಗೆ ಅನುಗುಣವಾಗಿ ಬೆಂಗಳೂರಿನಲ್ಲಿ ಲಭ್ಯವಿರುವ ಸಮುದಾಯ ಶೌಚಾಲಯಗಳ ಸಂಖ್ಯೆ ಕಡಿಮೆ ಎಂದು ಪುಣೆಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್ ((AIILSG) ವರದಿ ಬಹಿರಂಗಪಡಿಸಿದೆ.

2011 ರ ಜನಗಣತಿಯ ಪ್ರಕಾರ ಚೆನ್ನೈ, ಅಹಮದಾಬಾದ್ ಮತ್ತು ಬೆಂಗಳೂರಿನಲ್ಲಿ ಪ್ರತಿ ಚದರ ಕಿ.ಮೀ.ಗೆ ಪ್ರತಿ ಸಾವಿರ ಜನಸಂಖ್ಯೆಗೆ ಸಮುದಾಯ ಶೌಚಾಲಯಗಳ ಸಂಖ್ಯೆ ಕ್ರಮವಾಗಿ 1.7, 0.8 ಮತ್ತು 0.7 ಆಗಿದೆ ಎಂದು ವರದಿ ತಿಳಿಸಿದೆ. ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್‌ ವರದಿಯನ್ನು ಬಿಬಿಎಂಪಿ ಹೈಕೋರ್ಟ್‌ಗೆ ಸಲ್ಲಿಸಿದೆ.

ಬೆಂಗಳೂರು ನಗರದಲ್ಲಿ ಅಗತ್ಯ ಇರುವ ಸಾರ್ವಜನಿಕ ಶೌಚಾಲಯಗಳ ಬಗ್ಗೆ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನುಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್‌ ಸಂಸ್ಥೆ ಸಂಸ್ಥೆಗೆ ಬಿಬಿಎಂಪಿ ವಹಿಸಿತ್ತು.

ಇದನ್ನೂ ಓದಿ: ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಈ ವರದಿ ಪ್ರಕಾರ ಬೆಂಗಳೂರಿನಲ್ಲಿ ಒಂದು ಸಾವಿರ ಜನಸಂಖ್ಯೆಗೆ ಒಂದರಂತೆ ಸಾರ್ವಜನಿಕ ಶೌಚಾಲಯ ಇಲ್ಲ ಎಂಬುದು ತಿಳಿದು ಬರುತ್ತದೆ. ಚೆನ್ನೈ, ಹೈದರಾಬಾದ್, ಅಹಮದಾಬಾದ್‌ನಲ್ಲಿ ಪ್ರತಿ ಚದರ ಕಿಲೋ ಮೀಟರ್, ಪ್ರತಿ ವಾರ್ಡ್‌ಗಳಲ್ಲಿ ಇರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆ ಹೋಲಿಸಿದರೆ ಬೆಂಗಳೂರಿನಲ್ಲಿ ಕಡಿಮೆ ಸಂಖ್ಯೆಯ ಶೌಚಾಲಯಗಳಿವೆ’ ಎನ್ನಲಾಗಿದೆ.

ನಗರದಲ್ಲಿರುವ ಕೊಳಚೆ ಪ್ರದೇಶಗಳಿಗೆ ಹೆಚ್ಚಿನ ಸಮುದಾಯ ಶೌಚಾಲಯಗಳು ಅಗತ್ಯ ಇವೆ. ಶೌಚಾಲಯಗಳ ನಿರ್ವಹಣೆ ಕಳಪೆಯಾಗಿದ್ದರೂ, ತೆರೆದ ಮಲವಿಸರ್ಜನೆಯನ್ನು ಉತ್ತೇಜಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

’ಉದ್ಯೋಗ ನಗರಿ ಬೆಂಗಳೂರಿಗೆ ಆಗಾಗ ಬಂದು ಹೋಗುವ ಜನಸಂಖ್ಯೆ ಶೇಕಡಾ 15 ರ ದರದಲ್ಲಿ ಬೆಳೆಯುತ್ತಿದೆ. ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಾಣಿಜ್ಯ ಪ್ರದೇಶಗಳಲ್ಲಿ ಹೆಚ್ಚಿನ ಶೌಚಾಲಯಗಳ ಅಗತ್ಯವಿದೆ’ ಎಂದು ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಶೌಚಾಲಯ ಸಮಸ್ಯೆಗಳ ಕುರಿತು ಲಿಟ್ಜ್‌ಕಿಟ್‌ ಫೌಂಡೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ನಗರದಲ್ಲಿ ಅಗತ್ಯವಿರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆಯನ್ನು ತಿಳಿಸುವಂತೆ ನಿರ್ದೇಶನ ನೀಡಿದ್ದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠದ ಮುಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವರದಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: 7 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ವರದಿ ಅವಲೋಕಿಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ನೇತೃತ್ವದ ವಿಭಾಗೀಯ ಪೀಠ, ‘ವಾರ್ಡ್‌ವಾರು ಶೌಚಾಲಯಗಳ ಅಗತ್ಯದ ಬಗ್ಗೆ ವರದಿಯಲ್ಲಿ ಉಲ್ಲೇಖ ಇಲ್ಲದಿದ್ದರೂ, ಪ್ರಮುಖ ವಿಷಯಗಳನ್ನು ಎತ್ತಿ ಹಿಡಿದಿದೆ. ಅಗತ್ಯ ಇರುವ ಕಡೆಗಳಲ್ಲಿ ಶೌಚಾಲಯ ನಿ‌ರ್ಮಾಣ, ನಿರ್ವಹಣೆ ಗುಣಮಟ್ಟ ಸುಧಾರಣೆ ಬಗ್ಗೆ ತಕ್ಷಣ ಗಮನ ಹರಿಸಬೇಕು. ವರದಿಯಲ್ಲಿರುವ ಶಿಫಾರಸುಗಳ ಅನುಷ್ಠಾನ ಸಂಬಂಧ ಅನುಸರಣಾ ವರದಿಯನ್ನು ಆಗಸ್ಟ್ 13ರೊಳಗೆ ಸಲ್ಲಿಸಬೇಕು’ ಎಂದು ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಬೆಂಗಳೂರಿನಲ್ಲಿ 1,000 ಜನಸಂಖ್ಯೆಗೆ 0.06 ಸಾರ್ವಜನಿಕ ಶೌಚಾಲಯಗಳು ಹೊಂದಿದೆ ಎಂದು ಸೂಚಿಸುವ ವರದಿಯಲ್ಲಿ, ಶೇಕಡಾ 52 ರಷ್ಟು ಶೌಚಾಲಯಗಳನ್ನು ಫುಟ್‌ಪಾತ್‌ಗಳಲ್ಲಿ ನಿರ್ಮಿಸಲಾಗಿದೆ. 116 ಮಾರುಕಟ್ಟೆಗಳು, 43 ಬಸ್ ನಿಲ್ದಾಣಗಳು ಮತ್ತು 43 ವಾಣಿಜ್ಯ ಪ್ರದೇಶಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...