Homeಕರ್ನಾಟಕಖ್ಯಾತ ವಿಜ್ಞಾನ ಬರಹಗಾರ, DRDO ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ನಿಧನ

ಖ್ಯಾತ ವಿಜ್ಞಾನ ಬರಹಗಾರ, DRDO ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ನಿಧನ

- Advertisement -
- Advertisement -

ಖ್ಯಾತ ವಿಜ್ಞಾನ ಬರಹಗಾರ, DRDO ಮಾಜಿ ವಿಜ್ಞಾನಿ, ಹೆಚ್ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್ 61 ವರ್ಷದ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 (ಶುಕ್ರವಾರ) ಮಧ್ಯಾಹ್ನ ನಿಧನರಾಗಿದ್ದಾರೆ.

ತೀವ್ರ ಹೃದಯಾಘಾತಕ್ಕೀಡಾಗಿ ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೊಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು “ಸುಧೀಂದ್ರ ಹಾಲ್ದೊಡ್ಡೇರಿ ಅವರ ಆರೋಗ್ಯ ಸುಧಾರಣೆ ಪರಿಸ್ಥಿತಿ ಕಷ್ಟವಿದೆ. ಅವರ ಮೆದುಳು ನಿಷ್ಕ್ರಿಯ ಹಂತಕ್ಕೆ ತಲುಪಿದೆ ” ಎಂಬ ಮಾಹಿತಿ ನೀಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಸದ್ಯ ಕುಟುಂಬ ಸದಸ್ಯರು ಸುಧೀಂದ್ರ ಹಾಲ್ದೊಡ್ಡೇರಿ ಅವರ ದೇಹವನ್ನು ಬೆಂಗಳೂರಿನ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಸುಧೀಂದ್ರ ಅವರನ್ನು ತಜ್ಞ ವೈದ್ಯರ ತಂಡ ನೋಡಿಕೊಳ್ಳುತ್ತಿತ್ತು. ಆದರೆ, ತೀವ್ರ ಹೃದಯಾಘಾತವಾದ ಕಾರಣ ಅವರ ಸ್ಥಿತಿ ಗಂಭೀರಗೊಂಡು, ಬ್ರೈನ್​ ಡೆಡ್ ಆಗುವ ಹಂತ ತಲುಪಿತ್ತು. ಅವರಿಗೆ ಕೊರೊನಾ ಸೋಂಕು ತಗುಲಿರಲಿಲ್ಲ ಎಂದು ಆಸ್ಪತ್ರೆಯ ಮೂಲಗಳು ಸ್ಪಷ್ಟಪಡಿಸಿವೆ.

ಎಚ್‌ಎಎಲ್‌ನಲ್ಲಿ ಸುಮಾರು 22 ವರ್ಷಗಳ ಕಾಲ ಅವರು ಸೇವೆ ಸಲ್ಲಿಸಿದ್ದರು. ಜೈನ್ ಹಾಗೂ ಅಲೆಯನ್ಸ್‌ ವಿವಿಗಳಲ್ಲಿ ಏರೋಸ್ಪೇಸ್‌ ಎಂಜಿನಿಯರ್ ವಿಭಾಗದ ಪ್ರಾಧ್ಯಾಪಕರಾಗಿಯೂ ಸುಧೀಂದ್ರ ಹಾಲ್ಡೊಡ್ಡೇರಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಸರ್ಕಾರದಿಂದ ‘ಅತ್ಯುತ್ತಮ ವಿಜ್ಞಾನ ಸಂವಹನಕಾರ’ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು.

ಸುಧೀಂದ್ರ ಹಾಲ್ದೊಡ್ಡೇರಿ ಅವರು ವಿಜಯ ಕರ್ನಾಟಕ, ಕನ್ನಡ ಪ್ರಭ ಸೇರಿದಂತೆ ಅನೇಕ ಪತ್ರಿಕೆಗಳಿಗೆ ವಿಜ್ಞಾನ ಅಂಕಣಗಳನ್ನು ಬರೆಯುತ್ತಿದ್ದರು. ಕನ್ನಡದ ವಿಜ್ಞಾನಾಸಕ್ತರಿಗೆ ಮಾಹಿತಿ ನೀಡುವ, ವಿಜ್ಞಾನವನ್ನು ಸಾಮಾನ್ಯರಿಗೆ ತಲುಪಿಸುವ  ಕೆಲಸಕ್ಕೆ ತಮ್ಮ ವಿಶ್ರಾಂತ ಜೀವನವನ್ನು ಮುಡುಪಾಗಿ ಇಟ್ಟಿದ್ದರು.


ಇದನ್ನೂ ಓದಿ: ಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರಲ್ಲ: ಬಿಎಸ್‌ವೈ ವಿರುದ್ಧ ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...