Homeಕರ್ನಾಟಕಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು...

ಅಪ್ಪ ಎಂಬ ಆಕಾಶ ಮತ್ತು ಭೂಮಿ: ಸುಧೀಂದ್ರ ಹಾಲ್ದೊಡ್ಡೇರಿ ಬಗ್ಗೆ ಮಗಳ ಮನತುಂಬಿದ ಮಾತುಗಳು…

- Advertisement -
- Advertisement -

ಖ್ಯಾತ ವಿಜ್ಞಾನ ಬರಹಗಾರ, ಡಿಆರ್‌ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ನಿಧನರಾಗಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಅವರ ಮಗಳು, ಲೇಖಕಿ ಮೇಘನಾ ಸುಧೀಂದ್ರ ಅವರು ಅಪ್ಪಂದಿರ ದಿನದಂದು ತಮ್ಮ ಅಪ್ಪನ ಬಗ್ಗೆ ಬರೆದ ಬರಹವನ್ನು ಅವರ ನೆನಪಿನಲ್ಲಿ ಇಂದು ಪ್ರಕಟಿಸುತ್ತಿದ್ದೆವೆ.

’ಅಪ್ಪ ಎಂದಾಗಲ್ಲೆಲ್ಲ ನನಗೆ ಎರಡು ಇಂಸಿಡೆಂಟ್ ನೆನಪಾಗುತ್ತದೆ. ನನ್ನ ಪೂರ್ತಿ ಹೆಸರಿನ ಅರ್ಧ ಭಾಗ ಅಪ್ಪನೇ ತುಂಬಿಕೊಂಡಿದ್ದಾರೆ. ಅರ್ಧ ಜನ ನನ್ನನ್ನು “ಸುಧೀಂದ್ರನ ಮಗಳು” ಎಂದು ಗುರುತಿಸಿ ನನ್ನ ಹೆಸರನ್ನೇ ಮರೆಯುವಷ್ಟು ಅಪ್ಪನ್ನನ್ನು ಪ್ರೀತಿಸುವವರಿದ್ದಾರೆ’.
ಘಟನೆ 1
ಒಮ್ಮೆ ಅಪ್ಪ ಕೆಲಸದ ಮೇಲೆ ರಷ್ಯಾದ ಮಾಸ್ಕೋಗೆ ಹೋಗಿದ್ದರು. ಎಂದಿನಂತೆ ಅಪ್ಪನಿಗೆ ದಿನಾ ಫೋನ್ ಮಾಡಿ, “ಯಾವಾಗ ಬರ್ತ್ಯಾ ಅಪ್ಪ, ಯಾವಾಗ ಬರ್ತ್ಯಾ ಅಪ್ಪ” ಎಂದು ಕೇಳಿ ಕೇಳಿ ಸುಸ್ತು ಮಾಡಿದ್ದೆ. ಅಪ್ಪ “ಒಂದು ವಾರ ಬಿಟ್ಟು, 2 ವಾರ ಬಿಟ್ಟು” ಎಂದು ಅನ್ನುತ್ತಿದ್ದರು. ಇನ್ನು ಮಾಸ್ಕೋದಿಂದ ಹೊರಡುವ ದಿನ ಬಂತು, “ಏನು ಬೇಕು ಮಗಳೇ?” ಎಂದು ಕೇಳಿದ್ದರು, “ಸೂಟ್ ಕೇಸ್ ತುಂಬ ಚಾಕ್ಲೇಟ್ ಬೇಕಪ್ಪ” ಎಂದು ಅಂದಿದ್ದೆ. ಅದನ್ನೆಲ್ಲಾ ಹೇಳಿ ಮರೆತೂ ಹೋಗಿದ್ದೆ.

ಸರಿ ಅಪ್ಪ ಮನೆಗೆ ಬಂದರು, ನಾನು ಸ್ಕೂಲಿಗೆ ಹೋಗಿದ್ದೆ, ಸಂಜೆ ಬಂದರೆ ಒಂದು ರೂಮಿನಲ್ಲಿ ದೊಡ್ಡ ಸೂಟ್ ಕೇಸ್ ಇಟ್ಟಿದ್ದರು. ತೆಗೆದರೆ ನಿಜವಾಗಿಯೂ ಅದರ ಪೂರ್ತಿ ಚಾಕ್ಲೇಟ್ ಇತ್ತು. ಒಂದು 35 ಕೆಜಿಯ ಸೂಟ್ಕೇಸಿನ ತುಂಬಾ ಚಾಕ್ಲೇಟ್ ತಂದಿದ್ದರು ಅಪ್ಪ. ಅವರನ್ನ ಕಸ್ಟಮ್ಸಿನಲ್ಲಿ ಹಿಡಿದ್ದಿದ್ದರೂ ಸಹ. ವೈಟ್ ಪಾಸ್‌ಪೋರ್ಟ್ ಮತ್ತು ಮಗಳಿಗೆ ಚಾಕ್ಲೇಟ್ ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಸಬೂಬಿನೊಂದಿಗೆ ಬಿಟ್ಟಿದ್ದರಂತೆ. ಒಂದು ಸೂಟ್ಕೇಸಿನ ಬಟ್ಟೆಯನ್ನೆಲ್ಲಾ ಬಿಟ್ಟು, ಮಗಳಿಗೆ ಚಾಕ್ಲೇಟ್ ತಂದಿದ್ದರು ಅಪ್ಪ. ನಾನು ಸುಮ್ಮನೆ ಹೇಳುವ ಮಾತನ್ನ ನಿಜ ಮಾಡೋದು ಅಪ್ಪ ಮಾತ್ರ.

ಘಟನೆ 2
ನಾನು ಸೆಕೆಂಡ್ ಪಿಯೂಸಿಯಲ್ಲಿ ಓದೋದು ಬಿಟ್ಟು ಆರಾಮಾಗಿ ಸಂಗೀತ, ನಾಟಕ ಅಂದುಕೊಂಡಿದ್ದೆ. ಹೋಗಲಿ ಅದರಲ್ಲೂ ಏನು ಅಂತಹ ಸಾಧನೆ ಮಾಡಿರಲ್ಲಿಲ್ಲ. ಸುಮ್ಮನೆ ಕ್ಲಾಸ್ ಚಕ್ಕರ್ ಹಾಕೋಕೆ ಒಂದು ನೆಪ ಅಷ್ಟೆ. ಎಸ್ಸೆಸೆಲ್ಸಿಯಲ್ಲಿ ವಿಪರೀತ ಮಾರ್ಕ್ಸ್ ತೆಗೆದುಕೊಂಡ ಓವರ್ ಕಾನ್ಫೆಡೆನ್ಸ್ ನನ್ನಲ್ಲಿತ್ತು. “ಬರತ್ತೆ ಬಿಡು ಮಾರ್ಕ್ಸ್” ಅನ್ನೋ ಕೊಬ್ಬು. ಅಪ್ಪ ಒಂದೆರೆಡು ಬಾರಿ ಮೆತ್ತಗೆ ಹೇಳಿದ್ದರು, “ಹತ್ತನೇ ಕ್ಲಾಸಿನ ಹಾಗಲ್ಲ ಇದು, ಸರಿಯಾಗಿ ಓದು, ಇದು ನಿನ್ನ ಜೀವನದ ಟರ್ನಿಂಗ್ ಪಾಯಿಂಟ್” ಎಂದು. ನಾನು ಆರಾಮಾಗಿಯೇ ಇದ್ದೆ. ಎಕ್ಸಾಮು ಬರೆದೆ. ಅತೀ ಸಾಧಾರಣ ಮಾರ್ಕ್ಸು, ಅತೀ ಸಾಧಾರಣ ಸಿಇಟಿ ರ್ಯಾಂಕು ಬಂತು. ಅಪ್ಪನಿಗೆ ಇದ್ದ ಕನೆಕ್ಷನ್ಸು, ದುಡ್ಡು ಇವೆಲ್ಲವೂ ನನ್ನನ್ನ ಕಾಪಾಡುತ್ತದೆ ಎಂಬ ಕೆಟ್ಟ ಕಾನ್ಫಿಡೆನ್ಸು ನನ್ನಲ್ಲಿತ್ತು. ಅಪ್ಪ ರಿಸೆಲ್ಟ್ ನೋಡಿ ಒಂದೇ ಮಾತು ಹೇಳಿದರು, “ನಿನ್ನ ಯೋಗ್ಯತೆಗೆ ಎಲ್ಲಿ ಸೀಟು ಸಿಗತ್ತೋ ಅಲ್ಲಿ ಸೇರ್ಕೊಂಡು ಇಂಜಿನಿಯರಿಂಗ್ ಮುಗಿಸು, ಗುಡ್ ಲಕ್” ಅಂದರು. “ನೆನೆಪಿರಲಿ ನೀನು ಎಷ್ಟೇ ಮಾರ್ಕ್ಸ್ ತೆಗೆದರೂ ನನ್ನ ಮಗಳೇ ಅದೇನು ಬದಲಾಗಲ್ಲ” ಎಂದು ಸಾಂತ್ವನ ಹೇಳಿ ಹೋದರು.

ನಾನು ಊರಾಚೆ ಕಾಲೇಜಿಗೆ ಸೇರಿದೆ. ದಿನಾ ಬೆಳಗ್ಗೆ 6 ಘಂಟೆಗೆ ಹೊರಟರೆ ಸಂಜೆ 6 ಘಂಟೆಗೆ ಬರುತ್ತಿದ್ದೆ. 1 ವರ್ಷ ಆಟಾಡಿದ್ದಕ್ಕೆ 4 ವರ್ಷ ಒದ್ದಾಡಿದೆ. ಅಪ್ಪ ಸುಮ್ಮನೆ ಮುಗುಳ್ನಗುತ್ತಿದ್ದರು. ಇಂಜಿನಿಯರಿಂಗ್ ಮುಗಿಸಿದ ನಂತರ, “ನೀನು ಯಾರ ಶಿಫಾರಸ್ಸಿನಲ್ಲೋ, ಯಾರ ದುಡ್ಡಲ್ಲೋ ಓದಲ್ಲಿಲ್ಲ ನಿನ್ನ ಯೋಗ್ಯತೆಗೆ ತಕ್ಕ ಹಾಗೆ ಓದಿದೆ, ಯಾವತ್ತೂ ಅಷ್ಟೇ ನೀನು ಕಷ್ಟ ಪಟ್ಟು ನೀನು ದಕ್ಕಿಸಿಕೊಂಡಿದ್ದೇ ನಿನ್ನ ಬಳಿ ಶಾಶ್ವತವಾಗಿ ಉಳಿಯೋದು, ಅಪ್ಪ ಅಮ್ಮ ಫ್ರೀಯಾಗಿ ಕೊಟ್ಟಿದ್ದೂ ಉಳಿಯಲ್ಲ” ಎಂಬ ಅತಿ ದೊಡ್ಡ ಜೀವನದ ಪಾಠವನ್ನು ಹೇಳಿಕೊಟ್ಟರು.

ಇದಾದ ನಂತರ ನಾನು ಯಾವತ್ತೂ ಯಾವುದನ್ನೂ ಲೈಟಾಗಿ ತೆಗೆದುಕೊಳ್ಳಲ್ಲಿಲ್ಲ. ತಲೆ ಬಗ್ಗಿಸಿ ಕೆಲಸ ಮಾಡಿಕೊಂಡು ಹೋಗಿದ್ದೇನೆ. ಅದು ವಿದೇಶದಲ್ಲಿ ಮಾಸ್ಟರ್ಸ್ ಇರಬಹುದು, ಅಥವಾ ಕೆಲಸ ಇರಬಹುದು ಅಥವಾ ಪುಸ್ತಕ-ಲೇಖನ ಬರೆಯೋದಿರಬಹುದು.

ಪ್ರೀತಿ ಮಾಡುತ್ತಲೇ ಅಸಂಖ್ಯಾತ ಜೀವನ ಪಾಠ ಕಲಿಸುತ್ತಿರುವ ಅಪ್ಪನಿಗೆ ಅಪ್ಪನ ದಿನದ ಶುಭಾಶಯಗಳು. ನೀನೆ ನನಗೆ ಸ್ಪೂರ್ತಿ ಅಪ್ಪ. ನನ್ನ ಮೂರನೆಯ ಪುಸ್ತಕವನ್ನ( #AI ಕಥೆಗಳು) ನಿನಗೇ ಅರ್ಪಣೆ ಮಾಡಿದ್ದೇನೆ.

  • ಮೇಘನಾ ಸುಧೀಂದ್ರ

ಇದನ್ನೂ ಓದಿ: ಖ್ಯಾತ ವಿಜ್ಞಾನ ಬರಹಗಾರ, DRDO ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ (61) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...