Homeಮುಖಪುಟಪುಸ್ತಕ ಪ್ರೇಮಿ ಸೈಯದ್ ಇಸಾಕ್‌ಗೆ ರಾಜರತ್ನಂ ಪ್ರಶಸ್ತಿ, ಸುಧೀಂದ್ರ ಹಾಲ್ದೊಡ್ಡೇರಿಗೆ ವಿಜ್ಞಾನ ಸಾಹಿತ್ಯ ಪುರಸ್ಕಾರ

ಪುಸ್ತಕ ಪ್ರೇಮಿ ಸೈಯದ್ ಇಸಾಕ್‌ಗೆ ರಾಜರತ್ನಂ ಪ್ರಶಸ್ತಿ, ಸುಧೀಂದ್ರ ಹಾಲ್ದೊಡ್ಡೇರಿಗೆ ವಿಜ್ಞಾನ ಸಾಹಿತ್ಯ ಪುರಸ್ಕಾರ

- Advertisement -
- Advertisement -

ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದೆ. 10 ವರ್ಷಗಳಿಂದ ಕನ್ನಡಕ್ಕಾಗಿ ಸೇವೆ ಸಲ್ಲಿಸುತ್ತಿದ್ದ, ಕನ್ನಡಕ್ಕಾಗಿ ಗ್ರಂಥಾಲಯವನ್ನು ಕಟ್ಟಿದ್ದ ಪುಸ್ತಕ ಪ್ರೇಮಿ ಮೈಸೂರಿನ ರಾಜೀವ್‌ ನಗರದ ಸೈಯದ್ ಇಸಾಕ್ ಅವರಿಗೆ ಡಾ. ಜಿ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ಲಭಿಸಿದೆ.

ಇತ್ತೀಚೆಗೆ ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯ ಬೆಂಕಿಗಾಹುತಿಯಾಗಿತ್ತು. ಇವರ ಸೇವೆಯನ್ನು ಗಮನಿಸಿ, ಡಾ. ಜಿ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿ 50 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

ಇದರೊಂದಿಗೆ 75 ಸಾವಿರ ನಗದು ಬಹುಮಾನವಿರುವ ಡಾ. ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗೆ, ಹಿರಿಯ ಸಾಹಿತಿ, ಸಂಶೋಧಕ  ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಶುಕ್ರವಾರ (ಜುಲೈ 2)ರಂದು ನಿಧನರಾದ ಡಿಆರ್‌ಡಿಒ ಮಾಜಿ ವಿಜ್ಞಾನಿ, ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪುರಸ್ಕಾರ ಲಭಿಸಿದೆ. ಇದು 25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

ಪುಸ್ತಕ ಪ್ರಾಧಿಕಾರ ನೀಡುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಗೆ ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನ ಆಯ್ಕೆಯಾಗಿದೆ. ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ರೂ. 1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ.


ಇದನ್ನೂ ಓದಿ: ನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....