Homeಮುಖಪುಟಪುಸ್ತಕ ಪ್ರೇಮಿ ಸೈಯದ್ ಇಸಾಕ್‌ಗೆ ರಾಜರತ್ನಂ ಪ್ರಶಸ್ತಿ, ಸುಧೀಂದ್ರ ಹಾಲ್ದೊಡ್ಡೇರಿಗೆ ವಿಜ್ಞಾನ ಸಾಹಿತ್ಯ ಪುರಸ್ಕಾರ

ಪುಸ್ತಕ ಪ್ರೇಮಿ ಸೈಯದ್ ಇಸಾಕ್‌ಗೆ ರಾಜರತ್ನಂ ಪ್ರಶಸ್ತಿ, ಸುಧೀಂದ್ರ ಹಾಲ್ದೊಡ್ಡೇರಿಗೆ ವಿಜ್ಞಾನ ಸಾಹಿತ್ಯ ಪುರಸ್ಕಾರ

- Advertisement -
- Advertisement -

ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದೆ. 10 ವರ್ಷಗಳಿಂದ ಕನ್ನಡಕ್ಕಾಗಿ ಸೇವೆ ಸಲ್ಲಿಸುತ್ತಿದ್ದ, ಕನ್ನಡಕ್ಕಾಗಿ ಗ್ರಂಥಾಲಯವನ್ನು ಕಟ್ಟಿದ್ದ ಪುಸ್ತಕ ಪ್ರೇಮಿ ಮೈಸೂರಿನ ರಾಜೀವ್‌ ನಗರದ ಸೈಯದ್ ಇಸಾಕ್ ಅವರಿಗೆ ಡಾ. ಜಿ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ಲಭಿಸಿದೆ.

ಇತ್ತೀಚೆಗೆ ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯ ಬೆಂಕಿಗಾಹುತಿಯಾಗಿತ್ತು. ಇವರ ಸೇವೆಯನ್ನು ಗಮನಿಸಿ, ಡಾ. ಜಿ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿ 50 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

ಇದರೊಂದಿಗೆ 75 ಸಾವಿರ ನಗದು ಬಹುಮಾನವಿರುವ ಡಾ. ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗೆ, ಹಿರಿಯ ಸಾಹಿತಿ, ಸಂಶೋಧಕ  ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಶುಕ್ರವಾರ (ಜುಲೈ 2)ರಂದು ನಿಧನರಾದ ಡಿಆರ್‌ಡಿಒ ಮಾಜಿ ವಿಜ್ಞಾನಿ, ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪುರಸ್ಕಾರ ಲಭಿಸಿದೆ. ಇದು 25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

ಪುಸ್ತಕ ಪ್ರಾಧಿಕಾರ ನೀಡುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಗೆ ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನ ಆಯ್ಕೆಯಾಗಿದೆ. ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ರೂ. 1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ.


ಇದನ್ನೂ ಓದಿ: ನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...