Homeಕರೋನಾ ತಲ್ಲಣಕೊರೊನಾ ಪ್ರಕರಣಗಳು ಹೆಚ್ಚಿರುವ 6 ರಾಜ್ಯಗಳಲ್ಲಿ ಕೇಂದ್ರ ತಂಡ ನಿಯೋಜನೆ

ಕೊರೊನಾ ಪ್ರಕರಣಗಳು ಹೆಚ್ಚಿರುವ 6 ರಾಜ್ಯಗಳಲ್ಲಿ ಕೇಂದ್ರ ತಂಡ ನಿಯೋಜನೆ

- Advertisement -
- Advertisement -

ದೇಶದಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಕೇರಳ, ಅರುಣಾಚಲ ಪ್ರದೇಶ, ತ್ರಿಪುರ, ಒಡಿಶಾ, ಛತ್ತೀಸಗಢ ಮತ್ತು ಮಣಿಪುರ ರಾಜ್ಯಗಳಲ್ಲಿ ಒಕ್ಕೂಟ ಸರ್ಕಾರವು ವಿಶೇಷ ಕೊರೊನಾ ನಿಯಂತ್ರಣ ತಂಡಗಳನ್ನು ನಿಯೋಜಿಸಿದೆ.

ಈ ಆರು ರಾಜ್ಯಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳ ತುರ್ತು ನಿಯಂತ್ರಣ ಮತ್ತು ನಿಯಂತ್ರಣ ಕ್ರಮಗಳಿಗಾಗಿ ತಂಡಗಳನ್ನು ಕಳುಹಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತಲಾ ಇಬ್ಬರು ಸದಸ್ಯರಿರುವ ಈ ತಂಡವು ವೈದ್ಯ ಮತ್ತು ಸಾರ್ವಜನಿಕ ಆರೋಗ್ಯ ತಜ್ಞರನ್ನು ಒಳಗೊಂಡಿದೆ. ತಂಡಗಳನ್ನು ತಕ್ಷಣವೇ ಆರು ರಾಜ್ಯಗಳಿಗೆ ಕಳುಹಿಸಲಾಗಿದೆ. ಕೋವಿಡ್ ನಿರ್ವಹಣೆಯ ಕೈಗೊಳ್ಳುವ ಪ್ರಯತ್ನಗಳಲ್ಲಿ ತಂಡಗಳು ರಾಜ್ಯಗಳನ್ನು ಬೆಂಬಲಿಸಲಿವೆ ಮತ್ತು ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ತಿಳಿಸಿದೆ.

ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ: ಒಕ್ಕೂಟ ಸರ್ಕಾರಕ್ಕೆ 6 ವಾರಗಳ ಗಡುವು ನೀಡಿದ ಸುಪ್ರೀಂ

ಈ ತಂಡಗಳು ಕೋವಿಡ್ ಮಾರ್ಗಸೂಚಿಗಳು ಮತ್ತು ಅದರ ಜಾರಿಗೊಳಿಸುವಿಕೆ, ಆಸ್ಪತ್ರೆಯಲ್ಲಿ ಹಾಸಿಗೆಗಳ ಲಭ್ಯತೆ, ಆಂಬ್ಯುಲೆನ್ಸ್‌ಗಳು, ವೆಂಟಿಲೇಟರ್‌ಗಳು ಮತ್ತು ವೈದ್ಯಕೀಯ ಆಮ್ಲಜನಕವನ್ನು ಒಳಗೊಂಡಂತೆ ಸಾಕಷ್ಟು ಲಾಜಿಸ್ಟಿಕ್ಸ್, ಜೊತೆಗೆ ಕೋವಿಡ್ ವ್ಯಾಕ್ಸಿನೇಷನ್ ಪ್ರಗತಿಯನ್ನು ಖಚಿತಪಡಿಸುತ್ತವೆ. ರಾಜ್ಯಗಳು ಕೊರೊನಾ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಾಗ, ಕೇಂದ್ರದ ತಂಡ ಸಾರ್ವಜನಿಕ ಆರೋಗ್ಯ ಚಟುವಟಿಕೆಗಳ ಕುರಿತು ಪರಿಹಾರ ಕ್ರಮಗಳನ್ನು ಸಹ ಸೂಚಿಸುತ್ತವೆ ಎಂದು ತಿಳಿಸಲಾಗಿದೆ.

ಮಣಿಪುರಕ್ಕೆ ತೆರಳುವ ತಂಡದ ನೇತೃತ್ವವನ್ನು ಹೆಚ್ಚುವರಿ ಡಿಡಿಜಿ ಮತ್ತು ಇಎಂಆರ್ ನಿರ್ದೇಶಕ ಡಾ. ಎಲ್ ಸ್ವಾಸ್ತಿಚರನ್  ವಹಿಸಲಿದ್ದಾರೆ. ಅರುಣಾಚಲ ಪ್ರದೇಶಕ್ಕೆ ತಂಡದ ನೇತೃತ್ವವನ್ನು (ಎಐಐಹೆಚ್ & ಪಿಹೆಚ್) All India Institute of Hygiene & Public Health ಪ್ರೊಫೆಸರ್ ಡಾ.ಸಂಜಯ್ ಸಾಧುಖಾನ್ ವಹಿಸಿಕೊಳ್ಳಲಿದ್ದಾರೆ. ತ್ರಿಪುರದಲ್ಲಿ ಎಐಐಹೆಚ್ ಮತ್ತು ಪಿಎಚ್‌ನ ಡಾ. ಆರ್.ಎನ್. ಸಿನ್ಹಾ ತಂಡವನ್ನು ಮುನ್ನಡೆಸಲಿದ್ದಾರೆ.

ಕೇರಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಪ್ರಾದೇಶಿಕ ಕಚೇರಿಗಳಲ್ಲಿ ಸಾರ್ವಜನಿಕ ಆರೋಗ್ಯ ತಜ್ಞ ಡಾ. ರುಚಿ ಜೈನ್ ತಂಡವನ್ನು ಮುನ್ನಡೆಸಲಿದ್ದಾರೆ. ಎಐಐಹೆಚ್ ಮತ್ತು ಪಿಎಚ್‌ನ ಸಾರ್ವಜನಿಕ ಆರೋಗ್ಯ ತಜ್ಞ ಡಾ. ಎ ಡಾನ್ ಒಡಿಶಾ ತಂಡವನ್ನು ಮುನ್ನಡೆಸಲಿದ್ದು, ಛತ್ತೀಸ್‌ಗಢ ತಂಡದ ನೇತೃತ್ವವನ್ನು ರಾಯ್‌ಪುರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ಸಹಾಯಕ ಪ್ರಾಧ್ಯಾಪಕ ಡಾ. ದಿಬಾಕರ್ ಸಾಹು ವಹಿಸಲಿದ್ದಾರೆ.

ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಭಾಯಿಸುವಾಗ ಈ ಕೊರೊನಾ ನಿಯಂತ್ರಣ ತಂಡಗಳು ಉದ್ದೇಶಿತ ಕೋವಿಡ್ ಪ್ರತಿಕ್ರಿಯೆ ಮತ್ತು ನಿರ್ವಹಣೆಗೆ ರಾಜ್ಯಗಳ ಪ್ರಯತ್ನಗಳಲ್ಲಿ ರಾಜ್ಯಗಳನ್ನು ಬೆಂಬಲಿಸಲಿವೆ  ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


ಇದನ್ನೂ ಓದಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರವೇಶ ಬೇಕೆಂದರೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ: ನೈರುತ್ಯ ರೈಲ್ವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...